ನಿಂತಿದ್ದ ನಾಯಿನ್ನ ಸರೋವರಕ್ಕೆ ಎಸೆದ ಪಾಪಿ: ವಿಡಿಯೋ ವೈರಲ್, FIR ದಾಖಲು

ಭೋಪಾಲ್: ವ್ಯಕ್ತಿಯೊಬ್ಬ ಸರೋವರಕ್ಕೆ ನಾಯಿಯನ್ನು ಎಸೆಯುವ ವಿಡಿಯೋ, ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಈ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡ ಬಳಕೆದಾರರು, ಭೋಪಾಲ್‌ನ ಭಡಾ ತಾಲಾಬ್ ತೀರದಲ್ಲಿ ವಿಡಿಯೋ ಚಿತ್ರೀಕರಿಸಲಾಗಿದೆ ಎಂದು ಹೇಳಿದ್ದಾರೆ. ಸಲ್ಮಾನ್ ಎಂಬ ವ್ಯಕ್ತಿ ಈ ಕೃತ್ಯ ಎಸಗಿದ್ದು, ಭಾನುವಾರ ವಿಡಿಯೋ ವೈರಲ್ ಆದ ನಂತರ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ವೈರಲ್ ಆಗಿರುವ ವಿಡಿಯೋದಲ್ಲಿ ಈ ವ್ಯಕ್ತಿ ತನ್ನ ಹತ್ತಿರ ತಿರುಗಾಡುತ್ತಿರುವ ಎರಡು ನಾಯಿಗಳಲ್ಲಿ ಒಂದನ್ನು ಎತ್ತಿಕೊಂಡು ಅದನ್ನು ಸರೋವರಕ್ಕೆ ಎಸೆದಿದ್ದಾನೆ. ಭೋಪಾಲ್ ಉಪ […]

ನಿಂತಿದ್ದ ನಾಯಿನ್ನ ಸರೋವರಕ್ಕೆ ಎಸೆದ ಪಾಪಿ: ವಿಡಿಯೋ ವೈರಲ್, FIR ದಾಖಲು
ಸಾಧು ಶ್ರೀನಾಥ್​

Updated on: Sep 14, 2020 | 2:45 PM

ಭೋಪಾಲ್: ವ್ಯಕ್ತಿಯೊಬ್ಬ ಸರೋವರಕ್ಕೆ ನಾಯಿಯನ್ನು ಎಸೆಯುವ ವಿಡಿಯೋ, ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಈ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡ ಬಳಕೆದಾರರು, ಭೋಪಾಲ್‌ನ ಭಡಾ ತಾಲಾಬ್ ತೀರದಲ್ಲಿ ವಿಡಿಯೋ ಚಿತ್ರೀಕರಿಸಲಾಗಿದೆ ಎಂದು ಹೇಳಿದ್ದಾರೆ.

ಸಲ್ಮಾನ್ ಎಂಬ ವ್ಯಕ್ತಿ ಈ ಕೃತ್ಯ ಎಸಗಿದ್ದು, ಭಾನುವಾರ ವಿಡಿಯೋ ವೈರಲ್ ಆದ ನಂತರ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ವೈರಲ್ ಆಗಿರುವ ವಿಡಿಯೋದಲ್ಲಿ ಈ ವ್ಯಕ್ತಿ ತನ್ನ ಹತ್ತಿರ ತಿರುಗಾಡುತ್ತಿರುವ ಎರಡು ನಾಯಿಗಳಲ್ಲಿ ಒಂದನ್ನು ಎತ್ತಿಕೊಂಡು ಅದನ್ನು ಸರೋವರಕ್ಕೆ ಎಸೆದಿದ್ದಾನೆ.

ಭೋಪಾಲ್ ಉಪ ಪೊಲೀಸ್ ಇನ್ಸ್‌ಪೆಕ್ಟರ್ ಜನರಲ್ ಇರ್ಷಾದ್ ವಾಲಿ ವಿಡಿಯೋವನ್ನು ಗಮನಿಸಿದ್ದು, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ರಾಮ್ಸನೇಹಿ ಮಿಶ್ರಾ ಅವರು ಭಾರತೀಯ ದಂಡ ಸಂಹಿತೆ ಸೆಕ್ಷನ್ 429 (ಯಾವುದೇ ಪ್ರಾಣಿಗಳನ್ನು ಕೊಲ್ಲುವ ಅಥವಾ ದುರ್ಬಲಗೊಳಿಸುವ ಮೂಲಕ ಕಿಡಿಗೇಡಿತನ) ಅಡಿ ಪ್ರಕರಣ ದಾಖಲಿಸಲಾಗಿದೆ ಎಂದು ಹೇಳಿದರು.

ಮೇಲ್ ಸರೋವರದ ಬೋಟ್ ಕ್ಲಬ್ ರಸ್ತೆಯಲ್ಲಿ ಈ ವಿಡಿಯೋವನ್ನು ಚಿತ್ರೀಕರಿಸಲಾಗಿದೆ ಎಂದು ತೋರುತ್ತದೆ ಎಂದು ಮಿಶ್ರಾ ಹೇಳಿದ್ದಾರೆ. ನೆಟ್ಟಿಗರು ಈ ಘಟನೆಯ ಬಗ್ಗೆ ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದು, ಭಾರತೀಯ ದಂಡ ಸಂಹಿತೆಯ ಸೆಕ್ಷನ್ 429 ಅಡಿ ಸಲ್ಮಾನ್ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ.

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us