AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಲೇಜಿನ ಹಾಸ್ಟೆಲ್​ನಲ್ಲಿ ಕಿರಿಯ ವಿದ್ಯಾರ್ಥಿಗಳನ್ನು ದೊಣ್ಣೆಯಿಂದ ಥಳಿಸಿದ ಸೀನಿಯರ್ಸ್, ವಿಡಿಯೋ ವೈರಲ್

ಆಂಧ್ರಪ್ರದೇಶದ ನರಸರಾವ್‌ಪೇಟೆಯ ಖಾಸಗಿ ಕಾಲೇಜೊಂದರಲ್ಲಿ ಕೆಲವು ಹಿರಿಯ ವಿದ್ಯಾರ್ಥಿಗಳು ಜೂನಿಯರ್‌ಗಳ ಮೇಲೆ ಹಲ್ಲೆ ನಡೆಸಿ ಥಳಿಸುವ ಹಳೆ ವಿಡಿಯೋ ವೈರಲ್ ಆಗಿದ್ದು ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.

ಕಾಲೇಜಿನ ಹಾಸ್ಟೆಲ್​ನಲ್ಲಿ ಕಿರಿಯ ವಿದ್ಯಾರ್ಥಿಗಳನ್ನು ದೊಣ್ಣೆಯಿಂದ ಥಳಿಸಿದ ಸೀನಿಯರ್ಸ್, ವಿಡಿಯೋ ವೈರಲ್
ವಿದ್ಯಾರ್ಥಿಗಳುImage Credit source: India Today
ನಯನಾ ರಾಜೀವ್
|

Updated on: Jul 25, 2024 | 1:37 PM

Share

ಆಂಧ್ರಪ್ರದೇಶದ ಕಾಲೇಜು ಹಾಸ್ಟೆಲ್​ವೊಂದರಲ್ಲಿ ಹಿರಿಯ ವಿದ್ಯಾರ್ಥಿಗಳು ಕಿರಿಯ ವಿದ್ಯಾರ್ಥಿಗಳನ್ನು ದೊಣ್ಣೆಯಿಂದ ಮನಬಂದಂತೆ ಥಳಿಸಿರುವ ವಿಡಿಯೋ ವೈರಲ್ ಆಗಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ. ಫೆಬ್ರವರಿಯಲ್ಲಿ ನರಸರಾವ್‌ಪೇಟೆಯ ಶ್ರೀ ಸುಬ್ಬರಾಯ ಮತ್ತು ನಾರಾಯಣ ಕಾಲೇಜಿನ ಹಾಸ್ಟೆಲ್‌ನಲ್ಲಿ ವಿಡಿಯೋ ತೆಗೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಎನ್‌ಸಿಸಿ (ನ್ಯಾಷನಲ್ ಕೆಡೆಟ್ ಕಾರ್ಪ್ಸ್) ತರಬೇತಿ ನೆಪದಲ್ಲಿ ಜೂನಿಯರ್‌ಗಳನ್ನು ಹಾಸ್ಟೆಲ್‌ಗೆ ಕರೆದೊಯ್ದು ಮನಬಂದಂತೆ ಥಳಿಸಿದ್ದಾರೆ. ವ್ಯಕ್ತಿಯೊಬ್ಬ ವಿದ್ಯಾರ್ಥಿಯನ್ನು ಒಬ್ಬೊಬ್ಬರಾಗಿ ಕೋಣೆಗೆ ಕರೆತರುತ್ತಿರುವುದನ್ನು ವಿಡಿಯೋ ತೋರಿಸುತ್ತದೆ. ನಂತರ ಹಿರಿಯರ ಗುಂಪೊಂದು ವಿದ್ಯಾರ್ಥಿಗಳನ್ನು ದೊಣ್ಣೆಗಳಿಂದ ಥಳಿಸಿದ್ದಾರೆ.

ವಿಡಿಯೋ ಬೆಳಕಿಗೆ ಬಂದ ನಂತರ, ರ್ಯಾಗಿಂಗ್ ಘಟನೆಯ ಬಗ್ಗೆ ತನಿಖೆ ನಡೆಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ. ರ್ಯಾಗಿಂಗ್ ನಿಷೇಧ ಕಾಯ್ದೆಯ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣವನ್ನೂ ದಾಖಲಿಸಲಾಗಿದೆ.

ಈ ವರ್ಷ ಫೆಬ್ರವರಿ 2 ರಂದು ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಒನ್ ಟೌನ್ ಪೊಲೀಸ್ ಠಾಣೆಯ ಸಿಐ ಚಿಂತಲ ಕೃಷ್ಣಾ ರೆಡ್ಡಿ ಪ್ರಕಾರ, ಘಟನೆಯಲ್ಲಿ ಭಾಗಿಯಾದ ವಿದ್ಯಾರ್ಥಿಗಳು ಪಾಸ್ ಆಗಿದ್ದಾರೆ. ಈ ಸಂಬಂಧ ವಿದ್ಯಾರ್ಥಿಗಳ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದು, ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ರೆಡ್ಡಿ ತಿಳಿಸಿದ್ದಾರೆ.

ರ್ಯಾಗಿಂಗ್ ಶಿಕ್ಷಾರ್ಹ ಅಪರಾಧ ಎಂದು ಹೇಳಿದ ಇನ್ಸ್‌ಪೆಕ್ಟರ್, ವಿದ್ಯಾರ್ಥಿಗಳು ಇಂತಹ ಘಟನೆಗಳ ಬಗ್ಗೆ ಯಾವುದೇ ವಿಳಂಬ ಮಾಡದೆ ಆಡಳಿತ ಮಂಡಳಿ ಮತ್ತು ಪೊಲೀಸರಿಗೆ ತಿಳಿಸುವಂತೆ ಒತ್ತಾಯಿಸಿದರು.

ಆಂಧ್ರಪ್ರದೇಶದ ಕಾನೂನು ಮತ್ತು ಸುವ್ಯವಸ್ಥೆ ಪರಿಸ್ಥಿತಿಯ ಬಗ್ಗೆ ಚಂದ್ರಬಾಬು ನಾಯ್ಡು ನೇತೃತ್ವದ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ವೈಎಸ್ಆರ್ ಕಾಂಗ್ರೆಸ್ ಪಕ್ಷವು ಈ ವೀಡಿಯೊವನ್ನು ಸಹ ಹಂಚಿಕೊಂಡಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಹೊಸ ವರ್ಷದ ಕೊಡುಗೆ: ನೀವು ಬೆಳಗ್ಗೆ ಹಲ್ಲು ಉಜ್ಜೋ ಮುಂಚೆಯೇ ಬಾರ್ ಓಪನ್!
ಹೊಸ ವರ್ಷದ ಕೊಡುಗೆ: ನೀವು ಬೆಳಗ್ಗೆ ಹಲ್ಲು ಉಜ್ಜೋ ಮುಂಚೆಯೇ ಬಾರ್ ಓಪನ್!
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ