AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಹಾರ: ₹500 ವಿಷಯದಲ್ಲಿ ಜಡೆ ಎಳೆದು ಜಗಳವಾಡಿದ ಆರೋಗ್ಯ ಕಾರ್ಯಕರ್ತೆಯರು

ಘಟನೆ ಕುರಿತು ಮಾಹಿತಿ ಪಡೆದ ಆಸ್ಪತ್ರೆಯ ಹಿರಿಯ ಅಧಿಕಾರಿಗಳು ಈ ಬಗ್ಗೆ ತನಿಖೆ ಆರಂಭಿಸಿದ್ದಾರೆ. ಈ ಸಿಬ್ಬಂದಿ ವಿರುದ್ಧ ಇನ್ನೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಬಿಹಾರ: ₹500 ವಿಷಯದಲ್ಲಿ ಜಡೆ ಎಳೆದು ಜಗಳವಾಡಿದ ಆರೋಗ್ಯ ಕಾರ್ಯಕರ್ತೆಯರು
ಬಿಹಾರದಲ್ಲಿ ಆರೋಗ್ಯ ಕಾರ್ಯಕರ್ತೆಯರ ಜಗಳ
TV9 Web
| Edited By: ರಶ್ಮಿ ಕಲ್ಲಕಟ್ಟ|

Updated on: Jan 24, 2022 | 3:36 PM

Share

ಪಟನಾ: ಬಿಹಾರದ (Bihar)ಜಮುಯಿ ಜಿಲ್ಲೆಯ ಇಬ್ಬರು ಆರೋಗ್ಯ ಕಾರ್ಯಕರ್ತೆಯರು ಪರಸ್ಪರ ಹೊಡೆದಾಡಿಕೊಂಡ ವಿಡಿಯೊ ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡಿದ ನಂತರ ತನಿಖೆ ಆರಂಭಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಘಟನೆಯ ದೃಶ್ಯಾವಳಿಗಳು ಜಮುಯಿಯ ಲಕ್ಷ್ಮಿಪುರ ಬ್ಲಾಕ್‌ನಲ್ಲಿರುವ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಇಬ್ಬರು ಆರೋಗ್ಯ ಕಾರ್ಯಕರ್ತೆಯರು ಪರಸ್ಪರ ಕೂದಲನ್ನು ಹಿಡಿದು ಎಳೆದಾಡುವುದು ವಿಡಿಯೊದಲ್ಲಿದೆ. ಒಬ್ಬ ವ್ಯಕ್ತಿ ಮಧ್ಯಪ್ರವೇಶಿಸಿ ಅವರನ್ನು ತಡೆಯಲು ಪ್ರಯತ್ನಿಸುತ್ತಾನೆ. ಆದರೂ ಇಬ್ಬರೂ ಕೈಯಿಂದ ಹಾಗೂ ಚಪ್ಪಲಿಯಿಂದ ಹೊಡೆದುಕೊಂಡು ಜಗಳ ಮುಂದುವರಿಸುತ್ತಿರುವುದು ವಿಡಿಯೊದಲ್ಲಿದೆ. ಭಾನುವಾರ ಆಶಾ ಕಾರ್ಯಕರ್ತೆ ರಿಂತು ಕುಮಾರಿ ಅವರು ನವಜಾತ ಶಿಶುವನ್ನು ಆಕ್ಸಿಲಿಯರಿ ನರ್ಸ್ ಮಿಡ್‌ವೈಫ್ (ANM) ರಂಜನಾ ಕುಮಾರಿ ಅವರ ಬಳಿ ಬಿಸಿಜಿ ಲಸಿಕೆಗಾಗಿ (ಶಿಶುಗಳಲ್ಲಿ ಕ್ಷಯರೋಗವನ್ನು ತಡೆಗಟ್ಟಲು ಬಳಸಲಾಗುತ್ತದೆ) ಕೊಂಡೊಯ್ದ ವೇಳೆ ಈ ಜಗಳ ನಡೆದಿದೆ. ಆದರೆ, ಎಎನ್‌ಎಂ ಕಾರ್ಯಕರ್ತೆ ಲಸಿಕೆ ಹಾಕಲು ₹ 500 ಬೇಡಿಕೆ ಇಟ್ಟಿದ್ದಾರೆ ಎಂಬ ಆರೋಪ ಕೇಳಿಬಂದಿದ್ದು, ಈ ಹಿನ್ನೆಲೆಯಲ್ಲಿ ಹೆರಿಗೆ ವಾರ್ಡ್‌ ಬಳಿ ಇಬ್ಬರು ಆರೋಗ್ಯ ಸಿಬ್ಬಂದಿ ನಡುವೆ ವಾಗ್ವಾದ ನಡೆದು ಅದು ಜಗಳದ ಹಂತಕ್ಕೆ ತಲುಪಿದೆ.

ಘಟನೆ ಕುರಿತು ಮಾಹಿತಿ ಪಡೆದ ಆಸ್ಪತ್ರೆಯ ಹಿರಿಯ ಅಧಿಕಾರಿಗಳು ಈ ಬಗ್ಗೆ ತನಿಖೆ ಆರಂಭಿಸಿದ್ದಾರೆ. ಈ ಸಿಬ್ಬಂದಿ ವಿರುದ್ಧ ಇನ್ನೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ತಿಂಗಳ ಆರಂಭದಲ್ಲಿ, ಜಮುಯಿಯಲ್ಲಿ ಆಸ್ಪತ್ರೆಯ ಸಿಬ್ಬಂದಿಯೊಬ್ಬರು ಸಹಾಯಕ ನರ್ಸ್ ಮತ್ತು ಮಿಡ್ ವೈಫ್ ಗೈರುಹಾಜರಾದುದಕ್ಕಾಗಿ ಜಗಳ ಮಾಡಿ ಹಲ್ಲೆ ನಡೆಸಿದ ವಿಡಿಯೊ ವೈರಲ್ ಆಗಿತ್ತು.

ಎಎನ್‌ಎಂಗಳು ಗ್ರಾಮೀಣ ಪ್ರದೇಶಗಳಲ್ಲಿನ ಆರೋಗ್ಯ ವ್ಯವಸ್ಥೆಯ ಮುಂಚೂಣಿ ಕಾರ್ಯಕರ್ತೆಯರಾಗಿದ್ದು ವೈದ್ಯಕೀಯ ಸೇವೆಗಳನ್ನು ಅತ್ಯಂತ ದೂರದ ಮೂಲೆಗಳಿಗೆ ಕೊಂಡೊಯ್ಯುವಲ್ಲಿ ನಿರ್ಣಾಯಕ ಪಾತ್ರವನ್ನು ವಹಿಸುತ್ತಾರೆ.

ಇದನ್ನೂ ಓದಿ: ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಕ್ಕೆ ಪ್ರಧಾನಿ ಮೋದಿ, ಕೇಂದ್ರ ಸಚಿವರಿಂದ ಶುಭ ಹಾರೈಕೆ

Follow Us
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?