AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜಸ್ಥಾನದ ಸಚಿವ ಧರಿವಾಲ್‌ಗೆ ಹಣ ವಾಪಸ್ ನೀಡುತ್ತಿರುವ ಮಹಿಳೆ; ವಿಡಿಯೊ ವೈರಲ್

ಆ  ಮಹಿಳೆಗೆ ಹಣದ ಆಮಿಷ ಒಡ್ಡಿ ಅವರ ಮತ ಖರೀದಿಸಲು ಯತ್ನಿಸಿದ್ದಾರೆ. ಹಣವನ್ನು ತಿರಸ್ಕರಿಸಿದ್ದಕ್ಕಾಗಿ ಮಾತ್ರವಲ್ಲದೆ ಕಳಂಕಿತ ಸಚಿವರು ಮತ್ತು ಅವರ ಪರಿವಾರದವರಿಗೆ ತೀಕ್ಷ್ಣವಾದ ಉತ್ತರವನ್ನು ನೀಡಿದ್ದಕ್ಕಾಗಿ ನಾನು ಅವರನ್ನು ಶ್ಲಾಘಿಸಲು ಬಯಸುತ್ತೇನೆ ಎಂದು ಪ್ರಧಾನಿ ಹೇಳಿದರು.

ರಾಜಸ್ಥಾನದ ಸಚಿವ ಧರಿವಾಲ್‌ಗೆ ಹಣ ವಾಪಸ್ ನೀಡುತ್ತಿರುವ ಮಹಿಳೆ; ವಿಡಿಯೊ ವೈರಲ್
ವೈರಲ್ ವಿಡಿಯೊ ಚಿತ್ರ
ರಶ್ಮಿ ಕಲ್ಲಕಟ್ಟ
|

Updated on:Nov 22, 2023 | 12:53 PM

Share

ಕೋಟಾ ನವೆಂಬರ್ 22: ರಾಜಸ್ಥಾನದ (Rajasthan) ಸಚಿವ ಶಾಂತಿ ಧರಿವಾಲ್‌ಗೆ (Shanti Dhariwal)ಮಹಿಳೆಯೊಬ್ಬರು ಹಣವನ್ನು “ಹಿಂತಿರುಗಿಸಲು” ಪ್ರಯತ್ನಿಸುತ್ತಿರುವ ಎರಡು ವಿಡಿಯೊ ತುಣುಕುಗಳು ವೈರಲ್ ಆಗಿದೆ. ಮಂಗಳವಾರ ಚುನಾವಣಾ ರ‍್ಯಾಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ (Narendra Modi), ಈ ಹಣವನ್ನು ಮತ ಖರೀದಿಸಲು ಉದ್ದೇಶಿಸಲಾಗಿದೆ ಎಂದು ಆರೋಪಿಸಿದ್ದಾರೆ.

ಒಂದು ವಿಡಿಯೊದಲ್ಲಿ , ಮಹಿಳೆ “ಭಯ್ಯಾ” ಅವರು 25,000 ರೂಪಾಯಿಗಳನ್ನು ನೀಡಲಾಯಿತು ಎಂದು ಹೇಳುತ್ತಿರುವುದು ಕೇಳುತ್ತದೆ, ಈ ಸಮಯದಲ್ಲಿ ಸಚಿವರ ಆಪ್ತರೊಬ್ಬರು ಮಧ್ಯಪ್ರವೇಶಿಸಿ, ಈ ಸಮಯದಲ್ಲಿ ಈ ವಿಷಯವನ್ನು ಏಕೆ ಎತ್ತುತ್ತಿದ್ದೀರಿ ಎಂದು ಕೇಳಿದರು. ಮಂಗಳವಾರ ಕೋಟಾದಲ್ಲಿ ನಡೆದ ಚುನಾವಣಾ ರ್ಯಾಲಿಯಲ್ಲಿ ಮೋದಿ ವಿಡಿಯೋವನ್ನು ಉಲ್ಲೇಖಿಸಿ, “ಕಳಂಕಿತ ಸಚಿವರು ನಿನ್ನೆಯಿಂದ ಇಡೀ ರಾಷ್ಟ್ರವು ನೋಡುತ್ತಿರುವ ಮತ್ತೊಂದು ಕೃತ್ಯವನ್ನು ಮಾಡಿದ್ದಾರೆ” ಎಂದು ಹೇಳಿದರು.

ಆ  ಮಹಿಳೆಗೆ ಹಣದ ಆಮಿಷ ಒಡ್ಡಿ ಅವರ ಮತ ಖರೀದಿಸಲು ಯತ್ನಿಸಿದ್ದಾರೆ. ಹಣವನ್ನು ತಿರಸ್ಕರಿಸಿದ್ದಕ್ಕಾಗಿ ಮಾತ್ರವಲ್ಲದೆ ಕಳಂಕಿತ ಸಚಿವರು ಮತ್ತು ಅವರ ಪರಿವಾರದವರಿಗೆ ತೀಕ್ಷ್ಣವಾದ ಉತ್ತರವನ್ನು ನೀಡಿದ್ದಕ್ಕಾಗಿ ನಾನು ಅವರನ್ನು ಶ್ಲಾಘಿಸಲು ಬಯಸುತ್ತೇನೆ ಎಂದು ಪ್ರಧಾನಿ ಹೇಳಿದರು.

ಇದನ್ನೂ ಓದಿ: ರಾಜಸ್ಥಾನ: ಟ್ರಕ್​ಗೆ ಕಾರು ಡಿಕ್ಕಿ, ಐವರು ಪೊಲೀಸ್​ ಅಧಿಕಾರಿಗಳ ದುರ್ಮರಣ

ಮಂಗಳವಾರ ಮಧ್ಯಾಹ್ನ ಮಹಿಳೆಯ ಮತ್ತೊಂದು ವಿಡಿಯೊ ಸಾಮಾಜಿಕ ಮಾಧ್ಯಮದಲ್ಲಿ ಹೊರಹೊಮ್ಮಿತು, ಅದರಲ್ಲಿ ಹಣವು ಮತಕ್ಕಾಗಿ ಉದ್ದೇಶಿಸಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.“ಈ ಹಣವು ದೇವಸ್ಥಾನಕ್ಕೆ ವಿಗ್ರಹಗಳನ್ನು ಖರೀದಿಸಲು ಉದ್ದೇಶಿಸಲಾಗಿತ್ತು. ಅವರು ನಮಗೆ 25,000 ರೂ.ಗಳನ್ನು ನೀಡಿದರು. ಆ 25,000 ರೂ. ಮತಕ್ಕಾಗಿ ಕೊಟ್ಟ ಹಣ ಅಲ್ಲ ಎಂದು ಹೇಳಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 12:52 pm, Wed, 22 November 23

Follow Us
Rashmi Kallakatta
Rashmi Kallakatta

ಊರು ಕಾಸರಗೋಡು. ಓದಿದ್ದು ಇಂಜಿನಿಯರಿಂಗ್, ಪಬ್ಲಿಕ್ ಅಡ್ಮಿನಿಸ್ಟ್ರೇಷನ್ ಮತ್ತು ಇಂಗ್ಲಿಷ್ ಸ್ನಾತಕೋತ್ತರ ಪದವಿ. ಕನ್ನಡಪ್ರಭ, ಪ್ರಜಾವಾಣಿ ಡಿಜಿಟಲ್ ಮತ್ತು ಪ್ರಿಂಟ್ ವಿಭಾಗದಲ್ಲಿ ಕೆಲಸದ ಅನುಭವ. ಬ್ಲಾಗರ್, ಸಾಹಿತ್ಯ ಪ್ರೇಮಿ. ಇಲ್ಲಿವರೆಗೆ 2 ಪುಸ್ತಕಗಳು ಪ್ರಕಟವಾಗಿವೆ. ಕಲೆ,ಸಾಹಿತ್ಯ,ತಂತ್ರಜ್ಞಾನ,ಸಂದರ್ಶನ, ಫ್ಯಾಕ್ಟ್ ಚೆಕಿಂಗ್ ಆಸಕ್ತಿಕರ ವಿಷಯಗಳು. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷ ಅನುಭವ

Read More
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!