AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಪ್ರತಿಭಟನಾನಿರತ ರೈತರ ಮೇಲೆ ಎರಡು ವಾಹನಗಳು ಹರಿದ ವಿಡಿಯೋ ಬಿಡುಗಡೆ ಮಾಡಿದ ಕಾಂಗ್ರೆಸ್​; ಪ್ರಧಾನಿ ಮೋದಿ ವಿರುದ್ಧ ಟೀಕೆ

Lakhimpur Kheri Violence: ಘಟನೆ ನಡೆದಾಗ ನಾನು ಆ ಸ್ಥಳದಲ್ಲಿ ಇರಲಿಲ್ಲ ಎಂದು ಆಶೀಶ್​ ಮಿಶ್ರಾ ಹೇಳಿದ್ದಾರೆ. ಆದರೆ ನಾವು ಕಾರಿನಲ್ಲಿ ಆಶೀಶ್​ ಮಿಶ್ರಾರನ್ನು ನೋಡಿದ್ದೇವೆ ಎಂದು ರೈತರು ಹೇಳುತ್ತಿದ್ದಾರೆ.

Video: ಪ್ರತಿಭಟನಾನಿರತ ರೈತರ ಮೇಲೆ ಎರಡು ವಾಹನಗಳು ಹರಿದ ವಿಡಿಯೋ ಬಿಡುಗಡೆ ಮಾಡಿದ ಕಾಂಗ್ರೆಸ್​; ಪ್ರಧಾನಿ ಮೋದಿ ವಿರುದ್ಧ ಟೀಕೆ
ಪೊಲೀಸ್​ ವಾಹನಕ್ಕೂ ಬೆಂಕಿ
TV9 Web
| Updated By: Lakshmi Hegde|

Updated on:Oct 05, 2021 | 9:23 AM

Share

ಉತ್ತರ ಪ್ರದೇಶದ ಲಖಿಂಪುರ ಖೇರಿಯಲ್ಲಿ ಪ್ರತಿಭಟನಾ ನಿರತರ ಮೇಲೆ ಎರಡು ವಾಹನಗಳು ಹರಿದು ಇಬ್ಬರು ಮೃತಪಟ್ಟಿದ್ದು, ಅದಾದ ಬಳಿಕ ದೊಡ್ಡ ಹಿಂಸಾಚಾರವೇ ನಡೆದಿದೆ. ಅಲ್ಲೀಗ ಒಟ್ಟು ನಾಲ್ವರು ಸತ್ತಿದ್ದಾರೆ. ಸದ್ಯ ಲಖಿಂಪುರ ಖೇರಿಯಲ್ಲಿ ಸೆಕ್ಷನ್​ 144 (Section 144) ಹೇರಲಾಗಿದ್ದು, ಯಾವುದೇ ರಾಜಕೀಯ ಲೀಡರ್​ಗಳೂ ಅಲ್ಲಿಗೆ ಹೋಗುವಂತಿಲ್ಲ ಎಂದು ಹೇಳಿದ್ದಾರೆ. ಈ ಮಧ್ಯೆ ಇಂದು ಕಾಂಗ್ರೆಸ್​ ಒಂದು ಟ್ವೀಟ್​ ಮಾಡಿದ್ದು, ರೈತರ ಮೇಲೆ ವಾಹನ ನಡೆದ ವಿಡಿಯೋವನ್ನು ಪೋಸ್ಟ್​ ಮಾಡಿದೆ. ಹಾಗೇ ಪ್ರಧಾನಿ ನರೇಂದ್ರ ಮೋದಿ (PM Narendra Modi) ಸರ್ಕಾರದ ಮೌನದಿಂದಾಗಿ ಬೇರೆಯವರೆಲ್ಲ ಹೀಗೆ ರೈತರ ಮೇಲೆ ದಾಳಿ ನಡೆಸುವಂತಾಗಿದೆ ಎಂದು ಕ್ಯಾಪ್ಷನ್​ ಕೂಡ ಬರೆಯಲಾಗಿದೆ.  

ವಿಡಿಯೋ ಭಯ ಹುಟ್ಟಿಸುವಂತೆ ಇದೆ. ಪ್ರತಿಭಟನಾ ಮೆರವಣಿಗೆ ನಡೆಸುತ್ತಿದ್ದ ರೈತರತ್ತ ಒಂದು ಜೀಪು ಮತ್ತು ಒಂದು ಕಾರು ವೇಗವಾಗಿ ನುಗ್ಗಿ ಬಂದಿದ್ದನ್ನು ವಿಡಿಯೋದಲ್ಲಿ ನೋಡಬಹುದು. ಇದು ಕೇಂದ್ರ ಸಚಿವ ಅಜಯ್​ ಮಿಶ್ರಾರ ಪುತ್ರ ಆಶೀಶ್​ ಮಿಶ್ರಾ ಕಾರು ಎಂದೂ ಹೇಳಲಾಗಿದ್ದು, ಈಗಾಗಲೇ ಅವರ ವಿರುದ್ಧ ಕೊಲೆ ಪ್ರಕರಣ ದಾಖಲಾಗಿದೆ. ವಾಹನಗಳು ರೈತರತ್ತ ಹರಿದ ಬೆನ್ನಲ್ಲೇ ಆಶೀಶ್​ ಮಿಶ್ರಾ ಬೆಂಗಾವಲು ಪಡೆಯ ಮೇಲೆ ರೈತರು ಮುಗಿಬಿದ್ದಿದ್ದರು.

ಘಟನೆ ನಡೆದಾಗ ನಾನು ಆ ಸ್ಥಳದಲ್ಲಿ ಇರಲಿಲ್ಲ ಎಂದು ಆಶೀಶ್​ ಮಿಶ್ರಾ ಹೇಳಿದ್ದಾರೆ. ಆದರೆ ನಾವು ಕಾರಿನಲ್ಲಿ ಆಶೀಶ್​ ಮಿಶ್ರಾರನ್ನು ನೋಡಿದ್ದೇವೆ ಎಂದು ರೈತರು ಹೇಳುತ್ತಿದ್ದಾರೆ. ಇದೀಗ ಘಟನೆಯ ತನಿಖೆಯನ್ನು ಉತ್ತರಪ್ರದೇಶ ಹೈಕೋರ್ಟ್​ ನ್ಯಾಯಾಧೀಶರೊಬ್ಬರು ನಡೆಸಲಿದ್ದಾರೆ. ಈ ಮಧ್ಯೆ ಮೃತ ರೈತರ ಕುಟುಂಬಕ್ಕೆ ಸರ್ಕಾರ ತಲಾ 45 ಲಕ್ಷ ರೂ.ಪರಿಹಾರ ನೀಡುವುದಾಗಿ ಘೋಷಿಸಿದೆ. ಲಖಿಂಪುರ ಖೇರಿಯಲ್ಲೀಗ ಇಂಟರ್​ನೆಟ್​ ಸ್ಥಗಿತಗೊಳಿಸಲಾಗಿದೆ.  ಅಲ್ಲಿಗೆ ಭೇಟಿ ನೀಡಲು ಪ್ರಯತ್ನಿಸಿದ ಪ್ರಿಯಾಂಕಾ ಗಾಂಧಿ, ಸಮಾಜವಾದಿ ಪಕ್ಷದ ನಾಯಕ ಅಖಿಲೇಶ್​ ಯಾದವ್​ ಇತರರನ್ನು ಗೃಹಬಂಧನದಲ್ಲಿ ಇರಿಸಲಾಗಿದೆ.

ಇದನ್ನೂ ಓದಿ: ಆರ್ಯನ್​ ಖಾನ್​ ಡ್ರಗ್ಸ್​ ಕೇಸ್​ನಲ್ಲಿ ಸಿಕ್ಕಿಬಿದ್ದಾಗ ಸೆಲ್ಫಿ ತೆಗೆದುಕೊಂಡು ಅಭಿಮಾನ ಮೆರೆದ ಈ ವ್ಯಕ್ತಿ ಯಾರು?

Viral News: ಆಟೋರಿಕ್ಷಾದಲ್ಲಿದ್ದ ಪ್ರಯಾಣಿಕನ ಕೈಯಿಂದ 1 ಲಕ್ಷ ರೂ. ಕಿತ್ತೆಸೆದ ಮಂಗ! ನೋಟುಗಳೆಲ್ಲಾ ರಸ್ತೆ ಪಾಲು

Published On - 9:19 am, Tue, 5 October 21

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು