AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉತ್ತರ ಪ್ರದೇಶ: ಬೀದಿಯಲ್ಲಿ ಮಹಿಳೆಯರಿಗೆ ಹಿಗ್ಗಾಮುಗ್ಗ ಥಳಿಸಿದ ಪೊಲೀಸ್, ವಿಡಿಯೊ ವೈರಲ್

ಇತ್ತೀಚೆಗೆ ಈ ಪ್ರದೇಶದಲ್ಲಿ ಬಿಆರ್ ಅಂಬೇಡ್ಕರ್ ಪ್ರತಿಮೆ ಧ್ವಂಸಗೊಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಭಟನೆ ನಡೆಸುತ್ತಿದ್ದ ಮಹಿಳೆಯರ ವಿರುದ್ಧ ಪೊಲೀಸರು ಈ ರೀತಿ ವರ್ತಿಸಿದ್ದಾರೆ.

ಉತ್ತರ ಪ್ರದೇಶ: ಬೀದಿಯಲ್ಲಿ ಮಹಿಳೆಯರಿಗೆ ಹಿಗ್ಗಾಮುಗ್ಗ ಥಳಿಸಿದ ಪೊಲೀಸ್, ವಿಡಿಯೊ ವೈರಲ್
ಮಹಿಳೆಯರ ಮೇಲೆ ಲಾಠಿ ಪ್ರಹಾರ
TV9 Web
| Edited By: ರಶ್ಮಿ ಕಲ್ಲಕಟ್ಟ|

Updated on:Nov 07, 2022 | 1:56 PM

Share

ಅಂಬೇಡ್ಕರ್ ನಗರ: ಉತ್ತರ ಪ್ರದೇಶದ (Uttar Pradesh) ಪೊಲೀಸರು ಮಹಿಳೆಯರ ಮೇಲೆ ಲಾಠಿ ಪ್ರಹಾರ (lathicharge) ಮಾಡುತ್ತಾ ಬೈಯುತ್ತಿರುವ ವಿಡಿಯೊವೊಂದು ವೈರಲ್ ಆಗಿದ್ದು, ಪೊಲೀಸರ ಅತಿರೇಕದ ವರ್ತನೆಯನ್ನು ಜನರು ಖಂಡಿಸಿದ್ದಾರೆ. ಮಹಿಳೆಯರು ನಮ್ಮ ವಾಹನಗಳ ಮೇಲೆ ಕಲ್ಲು ಎಸೆಯಲು ಪ್ರಾರಂಭಿಸಿದ ನಂತರ ನಾವು ಬಲಪ್ರಯೋಗ ಮಾಡಿದೆವು ಎಂದು ಪೊಲೀಸರು ಹೇಳಿದ್ದಾರೆ.  ಇದೀಗ ವೈರಲ್ ಆಗಿರುವ ವಿಡಿಯೊ ಉತ್ತರ ಪ್ರದೇಶದ ಅಂಬೇಡ್ಕರ್ ನಗರ ಜಿಲ್ಲೆಯ ಜಲಾಲ್‌ಪುರದ್ದು. ಇತ್ತೀಚೆಗೆ ಈ ಪ್ರದೇಶದಲ್ಲಿ ಬಿಆರ್ ಅಂಬೇಡ್ಕರ್ ಪ್ರತಿಮೆ ಧ್ವಂಸಗೊಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಭಟನೆ ನಡೆಸುತ್ತಿದ್ದ ಮಹಿಳೆಯರ ವಿರುದ್ಧ ಪೊಲೀಸರು ಈ ರೀತಿ ವರ್ತಿಸಿದ್ದಾರೆ. ಪ್ರತಿಮೆ ಇರುವ ಭೂಮಿಯ ವಿವಾದಕ್ಕೆ ಸಂಬಂಧಿಸಿದಂತೆ ಪ್ರತಿಭಟನೆ ನಡೆಯುತ್ತಿದೆ. ಭಾನುವಾರ ಘಟನಾ ಸ್ಥಳದಲ್ಲಿ ಮಹಿಳೆಯರ ಗುಂಪು ಪ್ರತಿಭಟನೆ ನಡೆಸುತ್ತಿದ್ದ ವೇಳೆ ಪೊಲೀಸರು ಅವರನ್ನು ಚದುರಿಸಲು ಆಗಮಿಸಿದ್ದರು. ಪೊಲೀಸರ ಪ್ರಕಾರ, ಕೆಲವು ಪ್ರತಿಭಟನಾಕಾರರು ಹಿರಿಯ ಅಧಿಕಾರಿ ಸೇರಿದಂತೆ ಪೊಲೀಸರ ಮೇಲೆ ಕಲ್ಲು ಎಸೆಯಲು ಪ್ರಾರಂಭಿಸಿದರು.

ಮತ್ತೊಂದು ವಿಡಿಯೊದಲ್ಲಿ ಕೆಲವು ಮಹಿಳೆಯರು ಮಹಿಳಾ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿ ಕೂದಲನ್ನು ಎಳೆದಾಡುತ್ತಿರುವುದು ಕಂಡುಬಂದಿದೆ. ಈ ಹೊತ್ತಲ್ಲೇ ಕೆಲವು ಪ್ರತಿಭಟನಾಕಾರರು ಪೊಲೀಸ್ ಕಾರಿನ ಮೇಲೆ ದಾಳಿ ಮಾಡಿ ಧ್ವಂಸಗೊಳಿಸಿದರು ಎಂದು ಅಂಬೇಡ್ಕರ್ ನಗರ ಹಿರಿಯ ಪೊಲೀಸ್ ಅಧಿಕಾರಿ ಅಜಿತ್ ಕುಮಾರ್ ಸಿನ್ಹಾ ಹೇಳಿದರು.

ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರಲು ಪೊಲೀಸರು ಸಣ್ಣ ಬಲ ಪ್ರಯೋಗಿಸಬೇಕಾಯಿತು ಎಂದು ಅವರು ಹೇಳಿದರು.

Published On - 1:55 pm, Mon, 7 November 22

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ