AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video Viral: ಸ್ನೇಹಿತೆಯನ್ನು ಹುಲಿಯಿಂದ ಕಾಪಾಡಿದ ಹಸುಗಳ ಹಿಂಡು, ಘಟನೆ ಸಿಸಿಟಿವಿಯಲ್ಲಿ ಸೆರೆ

ಹಸುವಿನ ಮೇಲೆ ಹುಲಿ ದಾಳಿ ಮಾಡುತ್ತಿರುವುದು ಕಂಡು ಅಲ್ಲಯೇ ಇದ್ದ ಹಸುಗಳ ಹಿಂಡು ಹುಲಿಯ ಬಳಿ ಬಂದಿದೆ. ಇದನ್ನೂ ಕಂಡು ತಾನು ಹಿಡಿದಿರುವ ಹಸುವನ್ನು ಬಿಟ್ಟು ಓಡಿ ಹೋಗಲು ಮುಂದಾಗಿದೆ.

Video Viral: ಸ್ನೇಹಿತೆಯನ್ನು ಹುಲಿಯಿಂದ ಕಾಪಾಡಿದ ಹಸುಗಳ ಹಿಂಡು, ಘಟನೆ ಸಿಸಿಟಿವಿಯಲ್ಲಿ ಸೆರೆ
ವೈರಲ್​​ ವೀಡಿಯೊ
ಅಕ್ಷಯ್​ ಪಲ್ಲಮಜಲು​​
|

Updated on: Jun 20, 2023 | 12:16 PM

Share

ಭೋಪಾಲ್: ಮಧ್ಯಪ್ರದೇಶ(Madhya Pradesh) ಬುಲ್ ಫಾರ್ಮ್‌ನಲ್ಲಿರುವ ಸಿಸಿಟಿವಿ ಕ್ಯಾಮೆರದಲ್ಲಿ ಎಲ್ಲರನ್ನೂ ಬೆರಗುಗೊಳಿಸುವ ದೃಶ್ಯವೊಂದು ಕಂಡು ಬಂದಿದೆ, ಹಸುಗಳ ಹಿಂಡೊಂದು ಹುಲಿಯನ್ನು ಹೆದರಿಸುತ್ತಿರುವ ದೃಶ್ಯ ಎಲ್ಲರನ್ನೂ ಒಂದು ಬಾರಿ ಅಚ್ಚರಿಗೊಳಿಸಿದೆ. ಭೋಪಾಲ್‌ನ ಕೆರ್ವಾದಲ್ಲಿನ ಜಮೀನಿನಲ್ಲಿ ಭಾನುವಾರ ತಡರಾತ್ರಿ ಈ ದೃಶ್ಯಗಳನ್ನು ಸೆರೆಹಿಡಿಯಲಾಗಿದೆ. ಹಸುವಿನ ಮೇಲೆ ಹುಲಿ ದಾಳಿ ಮಾಡುತ್ತಿರುವುದು ಕಂಡು ಅಲ್ಲಯೇ ಇದ್ದ ಹಸುಗಳ ಹಿಂಡು ಹುಲಿಯ ಬಳಿ ಬಂದಿದೆ. ಇದನ್ನೂ ಕಂಡು ತಾನು ಹಿಡಿದಿರುವ ಹಸುವನ್ನು ಬಿಟ್ಟು ಓಡಿ ಹೋಗಲು ಮುಂದಾಗಿದೆ. ನಂತರ ಹುಲಿ ಸುಮಾರು ಮೂರು ಗಂಟೆಗಳ ಕಾಲ ಅಲ್ಲಿ ಕಾದು ಕುಳಿತಿತ್ತು. ಆದರೆ ಹಸುವಿನ ಹಿಂಡು ಗಾಯಗೊಂಡ ಹಸುವಿನ ಸುತ್ತಲೂ ಕಾವಲು ನಿಂತ ಕಾರಣ ಹುಲಿಗೆ ಮತ್ತೆ ದಾಳಿ ಮಾಡಲು ಸಾಧ್ಯವಾಗಿಲ್ಲ.

ಗಾಯಗೊಂಡಿರುವ ಹಸು ಚಿಕಿತ್ಸೆ ಪಡೆಯುತ್ತಿದ್ದು, ಅದರ ಸ್ಥಿತಿ ಚಿಂತಾಜನಕವಾಗಿದೆ ಎಂದು ವರದಿಯಾಗಿದೆ. 76 ಎಕರೆ ಜಮೀನಿನಲ್ಲಿ 50 ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ.

ಇದನ್ನೂ ಓದಿ:Video Viral : ಆಸ್ತಿಯ ವ್ಯಾಮೋಹ, ಸಾವನ್ನಪ್ಪಿದ ವೃದ್ಧೆ ಕೈಯಿಂದ ಆಸ್ತಿ ಪತ್ರಕ್ಕೆ ಹೆಬ್ಬೆಟ್ಟು ಹಾಕಿಸಿಕೊಂಡ ಸಂಬಂಧಿಕರು

ಕಳೆದ ಆರು ತಿಂಗಳ ಅವಧಿಯಲ್ಲಿ ಬುಲ್ ಫಾರ್ಮ್‌ಗೆ ಹುಲಿ ನುಗ್ಗಿದ ಐದನೇ ಘಟನೆ ಇದಾಗಿದೆ. ಜಮೀನಿನ ಹಿಂದೆ ಇರುವ 14 ಅಡಿ ಎತ್ತರದ ಬೇಲಿ ಹಾಳಾಗಿರುವುದರಿಂದ ಈ ಪ್ರದೇಶದಲ್ಲಿ ಹುಲಿಗಳ ಓಡಾಟ ಹೆಚ್ಚಾಗಿದೆ ಮತ್ತು ತುರ್ತು ದುರಸ್ತಿ ಅಗತ್ಯವಿದೆ ಎಂದು ತಿಳಿದುಬಂದಿದೆ. ಈ ಬಗ್ಗೆ ಅಧಿಕಾರಿಗಳ ಗಮನಕ್ಕೂ ತರಲಾಗಿದೆ ಎಂದು ಹೇಳಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Akshay Pallamajalu
Akshay Pallamajalu

ನನ್ನ ಹೆಸರು ಅಕ್ಷಯ್ ಕುಮಾರ್ ಪಲ್ಲಮಜಲು, ನನ್ನ ಊರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕು, ಡಿಜಿಟಲ್​ ವಿಭಾಗದಲ್ಲಿ 3 ವರ್ಷಗಳ ಅನುಭವ, ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದು, ಟಿವಿ9ನಲ್ಲೂ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದೇನೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಲೇಖನಗಳನ್ನು ಬರೆಯುತ್ತೇನೆ.

Read More
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ