AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video Viral: ಸ್ನೇಹಿತೆಯನ್ನು ಹುಲಿಯಿಂದ ಕಾಪಾಡಿದ ಹಸುಗಳ ಹಿಂಡು, ಘಟನೆ ಸಿಸಿಟಿವಿಯಲ್ಲಿ ಸೆರೆ

ಹಸುವಿನ ಮೇಲೆ ಹುಲಿ ದಾಳಿ ಮಾಡುತ್ತಿರುವುದು ಕಂಡು ಅಲ್ಲಯೇ ಇದ್ದ ಹಸುಗಳ ಹಿಂಡು ಹುಲಿಯ ಬಳಿ ಬಂದಿದೆ. ಇದನ್ನೂ ಕಂಡು ತಾನು ಹಿಡಿದಿರುವ ಹಸುವನ್ನು ಬಿಟ್ಟು ಓಡಿ ಹೋಗಲು ಮುಂದಾಗಿದೆ.

Video Viral: ಸ್ನೇಹಿತೆಯನ್ನು ಹುಲಿಯಿಂದ ಕಾಪಾಡಿದ ಹಸುಗಳ ಹಿಂಡು, ಘಟನೆ ಸಿಸಿಟಿವಿಯಲ್ಲಿ ಸೆರೆ
ವೈರಲ್​​ ವೀಡಿಯೊ
ಅಕ್ಷಯ್​ ಪಲ್ಲಮಜಲು​​
|

Updated on: Jun 20, 2023 | 12:16 PM

Share

ಭೋಪಾಲ್: ಮಧ್ಯಪ್ರದೇಶ(Madhya Pradesh) ಬುಲ್ ಫಾರ್ಮ್‌ನಲ್ಲಿರುವ ಸಿಸಿಟಿವಿ ಕ್ಯಾಮೆರದಲ್ಲಿ ಎಲ್ಲರನ್ನೂ ಬೆರಗುಗೊಳಿಸುವ ದೃಶ್ಯವೊಂದು ಕಂಡು ಬಂದಿದೆ, ಹಸುಗಳ ಹಿಂಡೊಂದು ಹುಲಿಯನ್ನು ಹೆದರಿಸುತ್ತಿರುವ ದೃಶ್ಯ ಎಲ್ಲರನ್ನೂ ಒಂದು ಬಾರಿ ಅಚ್ಚರಿಗೊಳಿಸಿದೆ. ಭೋಪಾಲ್‌ನ ಕೆರ್ವಾದಲ್ಲಿನ ಜಮೀನಿನಲ್ಲಿ ಭಾನುವಾರ ತಡರಾತ್ರಿ ಈ ದೃಶ್ಯಗಳನ್ನು ಸೆರೆಹಿಡಿಯಲಾಗಿದೆ. ಹಸುವಿನ ಮೇಲೆ ಹುಲಿ ದಾಳಿ ಮಾಡುತ್ತಿರುವುದು ಕಂಡು ಅಲ್ಲಯೇ ಇದ್ದ ಹಸುಗಳ ಹಿಂಡು ಹುಲಿಯ ಬಳಿ ಬಂದಿದೆ. ಇದನ್ನೂ ಕಂಡು ತಾನು ಹಿಡಿದಿರುವ ಹಸುವನ್ನು ಬಿಟ್ಟು ಓಡಿ ಹೋಗಲು ಮುಂದಾಗಿದೆ. ನಂತರ ಹುಲಿ ಸುಮಾರು ಮೂರು ಗಂಟೆಗಳ ಕಾಲ ಅಲ್ಲಿ ಕಾದು ಕುಳಿತಿತ್ತು. ಆದರೆ ಹಸುವಿನ ಹಿಂಡು ಗಾಯಗೊಂಡ ಹಸುವಿನ ಸುತ್ತಲೂ ಕಾವಲು ನಿಂತ ಕಾರಣ ಹುಲಿಗೆ ಮತ್ತೆ ದಾಳಿ ಮಾಡಲು ಸಾಧ್ಯವಾಗಿಲ್ಲ.

ಗಾಯಗೊಂಡಿರುವ ಹಸು ಚಿಕಿತ್ಸೆ ಪಡೆಯುತ್ತಿದ್ದು, ಅದರ ಸ್ಥಿತಿ ಚಿಂತಾಜನಕವಾಗಿದೆ ಎಂದು ವರದಿಯಾಗಿದೆ. 76 ಎಕರೆ ಜಮೀನಿನಲ್ಲಿ 50 ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ.

ಇದನ್ನೂ ಓದಿ:Video Viral : ಆಸ್ತಿಯ ವ್ಯಾಮೋಹ, ಸಾವನ್ನಪ್ಪಿದ ವೃದ್ಧೆ ಕೈಯಿಂದ ಆಸ್ತಿ ಪತ್ರಕ್ಕೆ ಹೆಬ್ಬೆಟ್ಟು ಹಾಕಿಸಿಕೊಂಡ ಸಂಬಂಧಿಕರು

ಕಳೆದ ಆರು ತಿಂಗಳ ಅವಧಿಯಲ್ಲಿ ಬುಲ್ ಫಾರ್ಮ್‌ಗೆ ಹುಲಿ ನುಗ್ಗಿದ ಐದನೇ ಘಟನೆ ಇದಾಗಿದೆ. ಜಮೀನಿನ ಹಿಂದೆ ಇರುವ 14 ಅಡಿ ಎತ್ತರದ ಬೇಲಿ ಹಾಳಾಗಿರುವುದರಿಂದ ಈ ಪ್ರದೇಶದಲ್ಲಿ ಹುಲಿಗಳ ಓಡಾಟ ಹೆಚ್ಚಾಗಿದೆ ಮತ್ತು ತುರ್ತು ದುರಸ್ತಿ ಅಗತ್ಯವಿದೆ ಎಂದು ತಿಳಿದುಬಂದಿದೆ. ಈ ಬಗ್ಗೆ ಅಧಿಕಾರಿಗಳ ಗಮನಕ್ಕೂ ತರಲಾಗಿದೆ ಎಂದು ಹೇಳಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!