AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video Viral: ಚುನಾವಣೆ ಗೆಲ್ಲಲು ಫಕೀರ್​​ನಿಂದ ಚಪ್ಪಲಿ ಆಶೀರ್ವಾದ ಪಡೆದ ಕಾಂಗ್ರೆಸ್​​ ಅಭ್ಯರ್ಥಿ

ಮಧ್ಯಪ್ರದೇಶದ (Madhya Pradesh) ರತ್ಲಂ ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್​​​ ಅಭ್ಯರ್ಥಿಯೊಬ್ಬರು "ಅಬ್ಬಾ" ಎಂದು ಕರೆಯಲ್ಪಡುವ ಫಕೀರ್ ಬಾಬಾರಿಂದ ಚಪ್ಪಲಿ ಆಶೀರ್ವಾದ ಪಡೆದಿದ್ದಾರೆ. ಇದೀಗ ಈ ಬಗ್ಗೆ ಒಂದು ವಿಡಿಯೋ ಎಲ್ಲ ಕಡೆ ವೈರಲ್​​​ ಆಗಿದೆ. ಇದೊಂದು ಸಾಂಕೇತಿಕ ಆಶೀರ್ವಾದ, ಇದನ್ನು "ಜೂಟೆ ಖಾನಾ" (ಚಪ್ಪಲಿಯಿಂದ ಹೊಡೆಯುವುದು) ಎಂದು ಕರೆಯುತ್ತಾರೆ. ಇಲ್ಲಿ ಪ್ರತಿಯೊಬ್ಬರು ಈ ಬಾಬಾಗೆ ಚಪ್ಪಲಿಯನ್ನು ನೀಡಿ ಆಶೀರ್ವಾದ ಪಡೆಯುತ್ತಾರೆ. ಇದು ಸಾಮಾನ್ಯ ಆಚರಣೆ ಎಂದು ಹೇಳುತ್ತಾರೆ. ಸಾಮಾಜಿಕ ಜಾಲತಾಣದಲ್ಲೂ ಈ ವಿಡಿಯೋ ವೈರಲ್​​ ಆಗಿದೆ. ಮಧ್ಯಪ್ರದೇಶದಲ್ಲಿ ಈಗಾಗಲೇ ಚುನಾವಣೆ ನಡೆದಿದ್ದು, ಚುನಾವಣೆಗೂ ಮುನ್ನ ಈ ಘಟನೆ ನಡೆದಿದೆ ಎಂದು ಹೇಳಲಾಗಿದೆ.

Video Viral: ಚುನಾವಣೆ ಗೆಲ್ಲಲು ಫಕೀರ್​​ನಿಂದ ಚಪ್ಪಲಿ ಆಶೀರ್ವಾದ ಪಡೆದ ಕಾಂಗ್ರೆಸ್​​ ಅಭ್ಯರ್ಥಿ
ವೈರಲ್​​ ವಿಡಿಯೋ
ಅಕ್ಷಯ್​ ಪಲ್ಲಮಜಲು​​
|

Updated on: Nov 18, 2023 | 1:15 PM

Share

ರತ್ಲಂ, ನ.18: ಮಧ್ಯಪ್ರದೇಶದ (Madhya Pradesh) ರತ್ಲಂ ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್​​​ ಅಭ್ಯರ್ಥಿಯೊಬ್ಬರು “ಅಬ್ಬಾ” ಎಂದು ಕರೆಯಲ್ಪಡುವ ಫಕೀರ್ ಬಾಬಾರಿಂದ ಚಪ್ಪಲಿ ಆಶೀರ್ವಾದ ಪಡೆದಿದ್ದಾರೆ. ಇದೀಗ ಈ ಬಗ್ಗೆ ಒಂದು ವಿಡಿಯೋ ಎಲ್ಲ ಕಡೆ ವೈರಲ್​​​ ಆಗಿದೆ. ಇದೊಂದು ಸಾಂಕೇತಿಕ ಆಶೀರ್ವಾದ, ಇದನ್ನು “ಜೂಟೆ ಖಾನಾ” (ಚಪ್ಪಲಿಯಿಂದ ಹೊಡೆಯುವುದು) ಎಂದು ಕರೆಯುತ್ತಾರೆ. ಇಲ್ಲಿ ಪ್ರತಿಯೊಬ್ಬರು ಈ ಬಾಬಾಗೆ ಚಪ್ಪಲಿಯನ್ನು ನೀಡಿ ಆಶೀರ್ವಾದ ಪಡೆಯುತ್ತಾರೆ. ಇದು ಸಾಮಾನ್ಯ ಆಚರಣೆ ಎಂದು ಹೇಳುತ್ತಾರೆ. ಸಾಮಾಜಿಕ ಜಾಲತಾಣದಲ್ಲೂ ಈ ವಿಡಿಯೋ ವೈರಲ್​​ ಆಗಿದೆ. ಮಧ್ಯಪ್ರದೇಶದಲ್ಲಿ ಈಗಾಗಲೇ ಚುನಾವಣೆ ನಡೆದಿದ್ದು, ಚುನಾವಣೆಗೂ ಮುನ್ನ ಈ ಘಟನೆ ನಡೆದಿದೆ ಎಂದು ಹೇಳಲಾಗಿದೆ. ಚಪ್ಪಲಿಯಲ್ಲಿ ಆಶೀರ್ವಾದ ಪಡೆದ ಕಾಂಗ್ರೆಸ್​​ ಅಭ್ಯರ್ಥಿಯನ್ನು ಪರಸ್ ಸಕ್ಲೇಚಾ ಎಂದು ಹೇಳಲಾಗಿದೆ. ಇವರು ಚುನಾವಣೆಯಲ್ಲಿ ಗೆಲ್ಲಲು ಈ ಫಕೀರನಿಂದ ಚಪ್ಪಲಿ ಆಶೀರ್ವಾದ ಪಡೆದಿದ್ದಾರೆ ಎಂದು ಹೇಳಲಾಗಿದೆ.

ಈ ವಿಡಿಯೋ ವೈರಲ್​​​ ಆಗುತ್ತಿದ್ದಂತೆ, ಇದಕ್ಕೆ ಪ್ರತಿಕ್ರಿಯಿಸಿದ ಪರಸ್ ಸಕ್ಲೇಚಾ, ಈ ಫಕೀರ ಅತ್ಯಂತ ಗೌರವಾನ್ವಿತ, ಅವರು ಮೋವ್ ರಸ್ತೆಯಲ್ಲಿರುವ ದರ್ಗಾದಲ್ಲಿ ವಾಸಿವಾಗಿರುತ್ತಾರೆ. ಯಾವುದೇ ಒಂದು ಕಾರ್ಯ ಯಶಸ್ವಿಯಾಗಬೇಕಾದರೆ, ಈ ಫಕೀರನಿಗೆ ಲುಂಗಿ ಮತ್ತು ಚಪ್ಪಲಿಗಳಂತಹ ಕಾಣಿಕೆಗಳನ್ನು ನೀಡುತ್ತಾರೆ. ಈ ಕಾಣಿಕೆಯಲ್ಲಿ ಅವರಿಗೆ ಯಾವುದು ಬೇಕು ಅದನ್ನು ಸ್ವೀಕರಿಸಿ, ಉಳಿದದ್ದನ್ನು ಹಿಂದಕ್ಕೆ ನೀಡುತ್ತಾರೆ ಎಂದು ಹೇಳಿದ್ದಾರೆ.

ಎಕ್ಸ್​​​ನಲ್ಲಿ (ಈ ಹಿಂದಿನ ಟ್ವಿಟರ್​) ಹಂಚಿಕೊಂಡ ವಿಡಿಯೋ ಇಲ್ಲಿದೆ:

ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದಂತೆ ಪರಸ್ ಸಕ್ಲೇಚಾ ಅವರು ಈ ಫಕೀರನ ಬಳಿಗೆ ಒಂದು ಜತೆ ಚಪ್ಪಲಿಯನ್ನು ತೆಗೆದುಕೊಂಡು ಹೋಗಿ ಆಶೀರ್ವಾದ ಪಡೆದಿದ್ದಾರೆ. ಈ ವಿಚಾರದ ಬಗ್ಗೆ ಸಕ್ಲೇಚಾ ಅವರನ್ನು ಮಾತನಾಡಿಸಿದಾಗ, ಬಾಬಾ ನಾನು ತೆಗೆದುಕೊಂಡ ಹೋಗಿದ್ದ ಚಪ್ಪಲಿಯನ್ನು ಸ್ವೀಕಾರಿಸಿ, ಅದರಲ್ಲಿ ಹೊಡೆದು ನನ್ನ ಮೇಲಿದ್ದ ದುಷ್ಟ ನೆರಳುಗಳನ್ನು ದೂರು ಮಾಡಿದ್ದಾರೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಆದಿವಾಸಿ ಯುವಕನ ಮೇಲೆ ಮೂತ್ರ ವಿಸರ್ಜಿಸಿದ್ದ ವ್ಯಕ್ತಿಯ ಬಂಧನ

ಸಕ್ಲೇಚಾ ಮಧ್ಯಪ್ರದೇಶದ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುತ್ತಿದ್ದು, ಅವರು ಬಿಜೆಪಿಯ ಹಾಲಿ ಶಾಸಕ, ಚೇತನ್ ಕಶ್ಯಪ್ ವಿರುದ್ಧ ಕಣಕ್ಕೆ ಇಳಿದಿದ್ದಾರೆ. ಸಕ್ಲೇಚಾ ಈ ಹಿಂದೆ 2008ರಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ರತ್ಲಾಮ್ ಕ್ಷೇತ್ರದಿಂದ ಗೆದ್ದಿದ್ದರು. ನಂತರ 2013ರಲ್ಲಿ ಮತ್ತೆ ಸ್ವರ್ಧಿಸಿ ಸೋತರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Akshay Pallamajalu
Akshay Pallamajalu

ನನ್ನ ಹೆಸರು ಅಕ್ಷಯ್ ಕುಮಾರ್ ಪಲ್ಲಮಜಲು, ನನ್ನ ಊರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕು, ಡಿಜಿಟಲ್​ ವಿಭಾಗದಲ್ಲಿ 3 ವರ್ಷಗಳ ಅನುಭವ, ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದು, ಟಿವಿ9ನಲ್ಲೂ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದೇನೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಲೇಖನಗಳನ್ನು ಬರೆಯುತ್ತೇನೆ.

Read More
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ