AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video Viral: ಬಾವಿಗೆ ಬಿದ್ದ ಪುಟ್ಟ ಆನೆಯನ್ನು ರಕ್ಷಿಸಿದ ಅರಣ್ಯ ಸಿಬ್ಬಂದಿಗಳು

ಆನೆಯೊಂದು ಬಾವಿ ಬಿದ್ದ ಘಟನೆ ಆಂಧ್ರಪ್ರದೇಶದ ಚಿತ್ತೂರಿನಲ್ಲಿ ನಡೆದಿದೆ. ಸೋಮವಾರದಂದು ರಾತ್ರಿ ಆನೆಯು ಬಾವಿಗೆ ಬಿದ್ದಿದೆ. ಮಂಗಳವಾರ ಅರಣ್ಯ ಇಲಾಖೆ ಅಧಿಕಾರಿಗಳು ಮತ್ತು ಅಗ್ನಿಶಾಮಕ ದಳದ ಅಧಿಕಾರಿಗಳು ಆನೆಯನ್ನು ರಕ್ಷಿಸಿದ್ದಾರೆ.

Video Viral: ಬಾವಿಗೆ ಬಿದ್ದ ಪುಟ್ಟ ಆನೆಯನ್ನು ರಕ್ಷಿಸಿದ ಅರಣ್ಯ ಸಿಬ್ಬಂದಿಗಳು
Video Viral Forest guards rescued a baby elephant that fell into a well
TV9 Web
| Updated By: ಅಕ್ಷಯ್​ ಪಲ್ಲಮಜಲು​​|

Updated on:Nov 15, 2022 | 4:45 PM

Share

ಚಿತ್ತೂರಿ: ಆನೆಯೊಂದು ಬಾವಿ ಬಿದ್ದ ಘಟನೆ ಆಂಧ್ರಪ್ರದೇಶದ ಚಿತ್ತೂರಿನಲ್ಲಿ ನಡೆದಿದೆ. ಸೋಮವಾರದಂದು ರಾತ್ರಿ ಆನೆಯು ಬಾವಿಗೆ ಬಿದ್ದಿದೆ. ಮಂಗಳವಾರ ಅರಣ್ಯ ಇಲಾಖೆ ಅಧಿಕಾರಿಗಳು ಮತ್ತು ಅಗ್ನಿಶಾಮಕ ದಳದ ಅಧಿಕಾರಿಗಳು ಆನೆಯನ್ನು ರಕ್ಷಿಸಿದ್ದಾರೆ. ಸುದ್ದಿ ಸಂಸ್ಥೆ ಎಎನ್‌ಐ ಹಂಚಿಕೊಂಡಿರುವ ವೀಡಿಯೊದಲ್ಲಿ ಜೆಸಿಬಿ ಯಂತ್ರದಿಂದ ಬಾವಿಯ ಗೋಡೆಯ ಒಂದು ಭಾಗವನ್ನು ಧ್ವಂಸಗೊಳಿಸಿ ಆನೆಗೆ ಹೊರಬರಲು ಇಳಿಜಾರು ರೀತಿಯ ಹಾದಿಯನ್ನು ಮಾಡಿಕೊಟ್ಟಿದ್ದಾರೆ. ಈ ಬಾವಿ ತುಂಬಾ ಆಳವಾಗಿಲ್ಲ ಎಂದು ಅಧಿಕಾರಿಗಳು ಹೇಳಿದ್ದಾರೆ.

ಬಾವಿಯೊಳಗೆ ಸಿಕ್ಕಿಬಿದ್ದ ಆನೆಯನ್ನು ರಕ್ಷಿಸುವಲ್ಲಿ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ. ಈ ಪುಟ್ಟ ಆನೆಯು ಆತಂಕದಿಂದ ಬಾವಿಯೊಳಗೆ ತಿರುಗಾಡುತ್ತಾ ಗೋಡೆಯ ಮೇಲೆ ಏರಲು ಪ್ರಯತ್ನಿಸುತ್ತಿರುವುದನ್ನು ವಿಡಿಯೋದಲ್ಲಿ ಕಾಣಬಹುದು. ದಾರಿ ಮಾಡಿಕೊಡಲು ಬಾವಿ ಗೋಡೆಯ ಒಂದು ಭಾಗವನ್ನು ಕೆಡವಿದಾಗ ಇದು ಆನೆಯ ಮರಿ ಎಂದು ಹೇಳಲಾಗಿದೆ. ನಂತರ ಆನೆ ಅಧಿಕಾರಿಗಳು ಮಾಡಿಕೊಟ್ಟ ದಾರಿಯಲ್ಲಿ ಹೊರಗೆ ಬರುತ್ತದೆ. ಅಪಾಯದಿಂದ ಪಾರದ ಆನೆಯು  ಕಾಡಿನತ್ತ ತೆರಳುತ್ತಿದ್ದಂತೆ ಸ್ಥಳೀಯರು ಮೊಬೈಲ್‌ ಕ್ಯಾಮೆರಾದಲ್ಲಿ ಈ ದೃಶ್ಯವನ್ನು ಸೆರೆ ಹಿಡಿದಿದ್ದಾರೆ.

ಇದೇ ರೀತಿಯ ಉತ್ತರ ಪ್ರದೇಶದ ಘಟನೆಯ ಬಗ್ಗೆ ಪ್ರಾಣಿ ರಕ್ಷಣಾ ಎನ್‌ಜಿಒ ಸದಸ್ಯರು ಹಂಚಿಕೊಂಡಿದ್ದಾರೆ. ಭಾನುವಾರ ಉತ್ತರ ಪ್ರದೇಶದ ಆಗ್ರಾದ ಹಳ್ಳಿಯೊಂದರಲ್ಲಿ 40 ಅಡಿ ತೆರೆದ ಬೋರ್‌ವೆಲ್‌ನಿಂದ ಗಂಡು ನರಿಯನ್ನು ರಕ್ಷಿಸಿದ್ದಾರೆ. ಅದನ್ನು ನಂತರದಲ್ಲಿ ವೈದ್ಯಕೀಯ ಪರೀಕ್ಷೆಯನ್ನು ನಡೆಸಿ ಅದನ್ನು ಪ್ರಾಣಿಯನ್ನು ಅದರ ನೈಸರ್ಗಿಕ ಆವಾಸಸ್ಥಾನಕ್ಕೆ ಬಿಡಲಾಗಿದೆ. ಅದೇ ದಿನ, ಎನ್‌ಜಿಒ ಎರಡು ದೊಡ್ಡ ಹಾವುಗಳನ್ನು ರಕ್ಷಿಸಿತು- ಏಳು ಅಡಿ ಭಾರತೀಯ ರಾಕ್ ಹೆಬ್ಬಾವು (ಆಗ್ರಾದಲ್ಲಿ ಕಂಡು ಬಂದ ಹಾವು) ಮತ್ತು ಆರು ಅಡಿ ಹೆಬ್ಬಾವನ್ನು ಏರ್ ಫೋರ್ಸ್ ಸ್ಟೇಷನ್‌ನಲ್ಲಿರುವ ಸಿವಿಲ್ ಏರ್‌ಪೋರ್ಟ್ ಆವರಣದಲ್ಲಿ ರಕ್ಷಿಸಲಾಗಿದೆ.

Published On - 4:43 pm, Tue, 15 November 22

ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ರಹಸ್ಯ ಇಲ್ಲಿದೆ ನೋಡಿ
ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ರಹಸ್ಯ ಇಲ್ಲಿದೆ ನೋಡಿ