AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video Viral: ಬಾವಿಗೆ ಬಿದ್ದ ಪುಟ್ಟ ಆನೆಯನ್ನು ರಕ್ಷಿಸಿದ ಅರಣ್ಯ ಸಿಬ್ಬಂದಿಗಳು

ಆನೆಯೊಂದು ಬಾವಿ ಬಿದ್ದ ಘಟನೆ ಆಂಧ್ರಪ್ರದೇಶದ ಚಿತ್ತೂರಿನಲ್ಲಿ ನಡೆದಿದೆ. ಸೋಮವಾರದಂದು ರಾತ್ರಿ ಆನೆಯು ಬಾವಿಗೆ ಬಿದ್ದಿದೆ. ಮಂಗಳವಾರ ಅರಣ್ಯ ಇಲಾಖೆ ಅಧಿಕಾರಿಗಳು ಮತ್ತು ಅಗ್ನಿಶಾಮಕ ದಳದ ಅಧಿಕಾರಿಗಳು ಆನೆಯನ್ನು ರಕ್ಷಿಸಿದ್ದಾರೆ.

Video Viral: ಬಾವಿಗೆ ಬಿದ್ದ ಪುಟ್ಟ ಆನೆಯನ್ನು ರಕ್ಷಿಸಿದ ಅರಣ್ಯ ಸಿಬ್ಬಂದಿಗಳು
Video Viral Forest guards rescued a baby elephant that fell into a well
TV9 Web
| Edited By: |

Updated on:Nov 15, 2022 | 4:45 PM

Share

ಚಿತ್ತೂರಿ: ಆನೆಯೊಂದು ಬಾವಿ ಬಿದ್ದ ಘಟನೆ ಆಂಧ್ರಪ್ರದೇಶದ ಚಿತ್ತೂರಿನಲ್ಲಿ ನಡೆದಿದೆ. ಸೋಮವಾರದಂದು ರಾತ್ರಿ ಆನೆಯು ಬಾವಿಗೆ ಬಿದ್ದಿದೆ. ಮಂಗಳವಾರ ಅರಣ್ಯ ಇಲಾಖೆ ಅಧಿಕಾರಿಗಳು ಮತ್ತು ಅಗ್ನಿಶಾಮಕ ದಳದ ಅಧಿಕಾರಿಗಳು ಆನೆಯನ್ನು ರಕ್ಷಿಸಿದ್ದಾರೆ. ಸುದ್ದಿ ಸಂಸ್ಥೆ ಎಎನ್‌ಐ ಹಂಚಿಕೊಂಡಿರುವ ವೀಡಿಯೊದಲ್ಲಿ ಜೆಸಿಬಿ ಯಂತ್ರದಿಂದ ಬಾವಿಯ ಗೋಡೆಯ ಒಂದು ಭಾಗವನ್ನು ಧ್ವಂಸಗೊಳಿಸಿ ಆನೆಗೆ ಹೊರಬರಲು ಇಳಿಜಾರು ರೀತಿಯ ಹಾದಿಯನ್ನು ಮಾಡಿಕೊಟ್ಟಿದ್ದಾರೆ. ಈ ಬಾವಿ ತುಂಬಾ ಆಳವಾಗಿಲ್ಲ ಎಂದು ಅಧಿಕಾರಿಗಳು ಹೇಳಿದ್ದಾರೆ.

ಬಾವಿಯೊಳಗೆ ಸಿಕ್ಕಿಬಿದ್ದ ಆನೆಯನ್ನು ರಕ್ಷಿಸುವಲ್ಲಿ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ. ಈ ಪುಟ್ಟ ಆನೆಯು ಆತಂಕದಿಂದ ಬಾವಿಯೊಳಗೆ ತಿರುಗಾಡುತ್ತಾ ಗೋಡೆಯ ಮೇಲೆ ಏರಲು ಪ್ರಯತ್ನಿಸುತ್ತಿರುವುದನ್ನು ವಿಡಿಯೋದಲ್ಲಿ ಕಾಣಬಹುದು. ದಾರಿ ಮಾಡಿಕೊಡಲು ಬಾವಿ ಗೋಡೆಯ ಒಂದು ಭಾಗವನ್ನು ಕೆಡವಿದಾಗ ಇದು ಆನೆಯ ಮರಿ ಎಂದು ಹೇಳಲಾಗಿದೆ. ನಂತರ ಆನೆ ಅಧಿಕಾರಿಗಳು ಮಾಡಿಕೊಟ್ಟ ದಾರಿಯಲ್ಲಿ ಹೊರಗೆ ಬರುತ್ತದೆ. ಅಪಾಯದಿಂದ ಪಾರದ ಆನೆಯು  ಕಾಡಿನತ್ತ ತೆರಳುತ್ತಿದ್ದಂತೆ ಸ್ಥಳೀಯರು ಮೊಬೈಲ್‌ ಕ್ಯಾಮೆರಾದಲ್ಲಿ ಈ ದೃಶ್ಯವನ್ನು ಸೆರೆ ಹಿಡಿದಿದ್ದಾರೆ.

ಇದೇ ರೀತಿಯ ಉತ್ತರ ಪ್ರದೇಶದ ಘಟನೆಯ ಬಗ್ಗೆ ಪ್ರಾಣಿ ರಕ್ಷಣಾ ಎನ್‌ಜಿಒ ಸದಸ್ಯರು ಹಂಚಿಕೊಂಡಿದ್ದಾರೆ. ಭಾನುವಾರ ಉತ್ತರ ಪ್ರದೇಶದ ಆಗ್ರಾದ ಹಳ್ಳಿಯೊಂದರಲ್ಲಿ 40 ಅಡಿ ತೆರೆದ ಬೋರ್‌ವೆಲ್‌ನಿಂದ ಗಂಡು ನರಿಯನ್ನು ರಕ್ಷಿಸಿದ್ದಾರೆ. ಅದನ್ನು ನಂತರದಲ್ಲಿ ವೈದ್ಯಕೀಯ ಪರೀಕ್ಷೆಯನ್ನು ನಡೆಸಿ ಅದನ್ನು ಪ್ರಾಣಿಯನ್ನು ಅದರ ನೈಸರ್ಗಿಕ ಆವಾಸಸ್ಥಾನಕ್ಕೆ ಬಿಡಲಾಗಿದೆ. ಅದೇ ದಿನ, ಎನ್‌ಜಿಒ ಎರಡು ದೊಡ್ಡ ಹಾವುಗಳನ್ನು ರಕ್ಷಿಸಿತು- ಏಳು ಅಡಿ ಭಾರತೀಯ ರಾಕ್ ಹೆಬ್ಬಾವು (ಆಗ್ರಾದಲ್ಲಿ ಕಂಡು ಬಂದ ಹಾವು) ಮತ್ತು ಆರು ಅಡಿ ಹೆಬ್ಬಾವನ್ನು ಏರ್ ಫೋರ್ಸ್ ಸ್ಟೇಷನ್‌ನಲ್ಲಿರುವ ಸಿವಿಲ್ ಏರ್‌ಪೋರ್ಟ್ ಆವರಣದಲ್ಲಿ ರಕ್ಷಿಸಲಾಗಿದೆ.

Published On - 4:43 pm, Tue, 15 November 22

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ