AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಋಷಿಕೇಶದ ವಸತಿ ಪ್ರದೇಶಕ್ಕೆ ನುಗ್ಗಿದ ಗಜರಾಜ, ಆತಂಕದಲ್ಲಿ ಜನ

ಉತ್ತರಖಂಡದ ಋಷಿಕೇಶದಲ್ಲಿ ಮಂಗಳವಾರ ರಾತ್ರಿ ಕಾಡಾನೆಯೊಂದು ಬೀದಿಯಲ್ಲಿ ಓಡಾಡುತ್ತಿದ್ದ ವೀಡಿಯೋ ಎಲ್ಲ ಕಡೆ ವೈರಲ್​ ಆಗಿದೆ. ಈ ಘಟನೆಯಿಂದ ಅಲ್ಲಿನ ಜನರಲ್ಲಿ ಆತಂಕ ಸೃಷ್ಟಿಯಾಗಿದೆ. ಆನೆಯು ಜನವಸತಿ ಪ್ರದೇಶದ ಕಿರಿದಾದ ಓಣಿಗಳಲ್ಲಿ ಅಲೆದಾಡಿದ್ದು, ವಿಡಿಯೋ ಒಂದು ವೈರಲ್​​ ಆಗಿದೆ.

ಋಷಿಕೇಶದ ವಸತಿ ಪ್ರದೇಶಕ್ಕೆ ನುಗ್ಗಿದ ಗಜರಾಜ, ಆತಂಕದಲ್ಲಿ ಜನ
ವೈರಲ್​​ ವಿಡಿಯೋ
TV9 Web
| Edited By: |

Updated on: Aug 23, 2023 | 11:04 AM

Share

ಋಷಿಕೇಶ, ಆ.23: ಉತ್ತರಖಂಡದ ಋಷಿಕೇಶದಲ್ಲಿ ಮಂಗಳವಾರ ರಾತ್ರಿ ಕಾಡಾನೆಯೊಂದು ಬೀದಿಯಲ್ಲಿ ಓಡಾಡುತ್ತಿದ್ದ ವೀಡಿಯೋ ಎಲ್ಲ ಕಡೆ ವೈರಲ್​ ಆಗಿದೆ. ಈ ಘಟನೆಯಿಂದ ಅಲ್ಲಿನ ಜನರಲ್ಲಿ ಆತಂಕ ಸೃಷ್ಟಿಯಾಗಿದೆ. ಆನೆಯು ಜನವಸತಿ ಪ್ರದೇಶದ ಕಿರಿದಾದ ಓಣಿಗಳಲ್ಲಿ ಅಲೆದಾಡಿದ್ದು, ವಿಡಿಯೋ ಒಂದು ವೈರಲ್​​ ಆಗಿದೆ. ಇನ್ನು ಗಜರಾಜನಿಗೆ ಆ ಜನವಸತಿ ಪ್ರದೇಶದ ಕಿರಿದಾದ ಓಣಿಯಿಂದ ಹೊರಗೆ ಹೇಗೆ ಬರುವುದು ಎಂದು ತಿಳಿಯದೇ ಸಿಕ್ಕ ಸಿಕ್ಕಲ್ಲಿ ಅಡ್ಡಾದಿಡ್ಡಿ ಓಡಾಡುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ಗಜರಾಜ ಯಾರಿಗೂ ತೊಂದರೆಯನ್ನು ಮಾಡಿಲ್ಲ ಎಂದು ಹೇಳಲಾಗಿದೆ. ಇನ್ನು ಅಲ್ಲಿನ ಜನ ಆನೆ ಅಡ್ಡಾದಿಡ್ಡಿ ಓಡಾಡುತ್ತಿರುವುದು ವಿಡಿಯೋ ಮಾಡಿದ್ದಾರೆ. ಈ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಕಾಡು ಪ್ರಾಣಿಗಳು ನಗರಪ್ರದೇಶಗಳತ್ತ ಬರುಲು ಕಾರಣ ನಾವೇ, ಜನಸಂಖ್ಯೆ ಹೆಚ್ಚಾದಂತೆ, ಕಾಡುಗಳನ್ನು ನಾಶ ಮಾಡಿ, ನಮ್ಮ ಸ್ವಾರ್ಥಕ್ಕಾಗಿ ಮನೆ, ಕಟ್ಟಡಗಳನ್ನು ನಿರ್ಮಾಣ ಮಾಡುತ್ತಿದ್ದೇವೆ, ಈ ಕಾರಣದಿಂದಲ್ಲೇ ಕಾಡು ಪ್ರಾಣಿಗಳು ನಾಡಿನತ್ತ ಬರುತ್ತಿದೆ. ಅವುಗಳ ಆವಾಸಸ್ಥಾನಗಳನ್ನು ಮನುಷ್ಯರು ನಾಶ ಮಾಡುತ್ತಿದ್ದಾರೆ.

ಇದನ್ನೂ ಓದಿ:‘ಮುಸ್ಲಿಮರು ನಿಮ್ಮ ಗುಲಾಮರಲ್ಲ’ ಎಂದ ಕಾಂಗ್ರೆಸ್ ನಾಯಕ ಅಜೀಜ್ ಖುರೇಷಿ

ಇನ್ನು ಅವುಗಳಿಗೆ ಕಾಡಿನಲ್ಲಿ ಆಹಾರ ಸಿಗದ ಕಾರಣ ನಾಡಿನತ್ತು ಆಹಾರಕ್ಕಾಗಿ ಬರುತ್ತಿದೆ. ಸಿಕ್ಕ ಸಿಕ್ಕಲ್ಲಿ ನುಗ್ಗುತ್ತಿದೆ. ಈ ಬಗ್ಗೆ ಅರಣ್ಯ ಅಧಿಕಾರಿಗಳು ಹೆಚ್ಚಿನ ಗಮನವಹಿಸಿ ಜನರ ರಕ್ಷಣೆಗೆ ಬರಬೇಕಿದೆ. ಈ ಹಿಂದೆ ಕುಡಿಯುವ ನೀರಿಗಾಗಿ ಏಳು ಆನೆಗಳ ಹಿಂಡು ಆಂಧ್ರಪ್ರದೇಶದ ಪಾರ್ವತಿಪುರಂ ಜಿಲ್ಲೆಯ ಪೂಜಾರಿಗುಡ ಗ್ರಾಮಕ್ಕೆ ನುಗ್ಗಿತ್ತು.

ಈ ಬಗ್ಗೆ ಒಂದು ವಿಡಿಯೋ ಕೂಡ ವೈರಲ್​​ ಆಗಿತ್ತು. ಆಂಧ್ರಪ್ರದೇಶದ ಪಾರ್ವತಿಪುರಂ ಜಿಲ್ಲೆಯ ಪೂಜಾರಿಗುಡ ಗ್ರಾಮದಲ್ಲಿ ಜನರು ಸಂಗ್ರಹಿಸಿದ್ದ ನೀರನ್ನು ಕುಡಿಯುತ್ತಿರುವ ದೃಶ್ಯ ಕಂಡುಬಂದಿತ್ತು. ಇನ್ನು ಕೇಂದ್ರ ಪರಿಸರ ಸಚಿವ ಭೂಪೇಂದರ್ ಯಾದವ್ ಅವರು ಮಾರ್ಚ್‌ನಲ್ಲಿ ಮಾನವ-ವನ್ಯಜೀವಿ ಸಂಘರ್ಷವನ್ನು (HWC) ಪರಿಹರಿಸಲು 14 ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಸಿಜೆ ರಾಯ್ ಕೇಸ್​​ ಸಂಬಂಧ ಎಸ್​ಐಟಿ ರಚನೆ: ಯಾರ ನೇತೃತ್ವದಲ್ಲಿ ತನಿಖೆ?
ಸಿಜೆ ರಾಯ್ ಕೇಸ್​​ ಸಂಬಂಧ ಎಸ್​ಐಟಿ ರಚನೆ: ಯಾರ ನೇತೃತ್ವದಲ್ಲಿ ತನಿಖೆ?
ರೈಬಾಕಿನಾಗೆ ಚೊಚ್ಚಲ ಆಸ್ಟ್ರೇಲಿಯನ್ ಓಪನ್ ಕಿರೀಟ
ರೈಬಾಕಿನಾಗೆ ಚೊಚ್ಚಲ ಆಸ್ಟ್ರೇಲಿಯನ್ ಓಪನ್ ಕಿರೀಟ
ರಾಯ್ ಮೇಲೆ ನಟಿಯರ ಹನಿ ಟ್ರ್ಯಾಪ್ ಗಾಳ: ತಪ್ಪಿಸಿಕೊಂಡಿದ್ದು ಹೇಗೆ?
ರಾಯ್ ಮೇಲೆ ನಟಿಯರ ಹನಿ ಟ್ರ್ಯಾಪ್ ಗಾಳ: ತಪ್ಪಿಸಿಕೊಂಡಿದ್ದು ಹೇಗೆ?
ಪುರಸಭೆ ಮುಖ್ಯಾಧಿಕಾರಿಗೆ ಚಳಿಬಿಡಿಸಿದ ಸಂಸದ ಸುನೀಲ್​​ ಬೋಸ್: ವಿಡಿಯೋ ವೈರಲ್
ಪುರಸಭೆ ಮುಖ್ಯಾಧಿಕಾರಿಗೆ ಚಳಿಬಿಡಿಸಿದ ಸಂಸದ ಸುನೀಲ್​​ ಬೋಸ್: ವಿಡಿಯೋ ವೈರಲ್
ವಿದೇಶದಲ್ಲಿ ಹವಾಲಾ ಮೂಲಕ ಪಕ್ಷಗಳಿಗೆ ಹಣ ಸಂದಾಯ ಮಾಡಿದ್ದರಾ ರಾಯ್?
ವಿದೇಶದಲ್ಲಿ ಹವಾಲಾ ಮೂಲಕ ಪಕ್ಷಗಳಿಗೆ ಹಣ ಸಂದಾಯ ಮಾಡಿದ್ದರಾ ರಾಯ್?
ಸಿಜೆ ರಾಯ್ ಹೃದಯ ಸೀಳಿದ ಬುಲೆಟ್ ಹೊರ ತೆಗೆದ ಡಾಕ್ಟರ್ ಹೇಳಿದ್ದೇನು ನೋಡಿ
ಸಿಜೆ ರಾಯ್ ಹೃದಯ ಸೀಳಿದ ಬುಲೆಟ್ ಹೊರ ತೆಗೆದ ಡಾಕ್ಟರ್ ಹೇಳಿದ್ದೇನು ನೋಡಿ
ಹೆಚ್ಚಿತು ಯಶ್ ತಾಯಿ ನಿವೇಶನ ವ್ಯಾಜ್ಯ ಪ್ರಕರಣ; ಜೋರಾದ ವಾಗ್ವಾದ
ಹೆಚ್ಚಿತು ಯಶ್ ತಾಯಿ ನಿವೇಶನ ವ್ಯಾಜ್ಯ ಪ್ರಕರಣ; ಜೋರಾದ ವಾಗ್ವಾದ
ಅನುಶ್ರೀ ಮೇಲೆ ಮಿಮಿಕ್ರಿ; ನೀವು ಹೊಟ್ಟೆ ಹುಣ್ಣಾಗುವಂತೆ ನಗೋದು ಖಚಿತ
ಅನುಶ್ರೀ ಮೇಲೆ ಮಿಮಿಕ್ರಿ; ನೀವು ಹೊಟ್ಟೆ ಹುಣ್ಣಾಗುವಂತೆ ನಗೋದು ಖಚಿತ
ಕಾನ್ಫಿಡೆಂಟ್ ಗ್ರೂಪ್ ಸಿಜೆ ರಾಯ್ ಸಾವಿನ ಬಗ್ಗೆ ಎಂಡಿ ದೂರಲ್ಲಿ ಅಚ್ಚರಿಯ ಅಂಶ
ಕಾನ್ಫಿಡೆಂಟ್ ಗ್ರೂಪ್ ಸಿಜೆ ರಾಯ್ ಸಾವಿನ ಬಗ್ಗೆ ಎಂಡಿ ದೂರಲ್ಲಿ ಅಚ್ಚರಿಯ ಅಂಶ
ನಾನು ತಂದೆ ಆಗ್ತಿರೋದು ಇನ್​​​ಸ್ಟಾಗ್ರಾಮ್​​​ಗೂ ಗೊತ್ತಾಗಿದೆ: ಧನಂಜಯ್
ನಾನು ತಂದೆ ಆಗ್ತಿರೋದು ಇನ್​​​ಸ್ಟಾಗ್ರಾಮ್​​​ಗೂ ಗೊತ್ತಾಗಿದೆ: ಧನಂಜಯ್