AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video Viral: ಕೊಳೆಯಾಗಿದ್ದ ಶಾಲಾ ಶೌಚಾಲಯವನ್ನು ಬರಿಗೈಯಲ್ಲಿ ಸ್ವಚ್ಛ ಮಾಡಿದ ಸಂಸದ ಜನಾರ್ದನ್ ಮಿಶ್ರಾ

ರೇವಾದ ಬಿಜೆಪಿ ಸಂಸದ ಜನಾರ್ದನ್ ಮಿಶ್ರಾ ಅವರು ತಮ್ಮ ಸ್ವಚ್ಛತಾ ಅಭಿಯಾನಕ್ಕಾಗಿ ಮತ್ತೊಮ್ಮೆ ಸುದ್ದಿಯಲ್ಲಿದ್ದಾರೆ. ರೇವಾ ಸಂಸದನ ವಿಡಿಯೋವೊಂದು ಅಂತರ್ಜಾಲ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿದೆ.

Video Viral: ಕೊಳೆಯಾಗಿದ್ದ ಶಾಲಾ ಶೌಚಾಲಯವನ್ನು ಬರಿಗೈಯಲ್ಲಿ ಸ್ವಚ್ಛ ಮಾಡಿದ ಸಂಸದ ಜನಾರ್ದನ್ ಮಿಶ್ರಾ
Janardan Mishra
TV9 Web
| Edited By: |

Updated on:Sep 23, 2022 | 6:25 PM

Share

ಮಧ್ಯಪ್ರದೇಶ: ತಮ್ಮ ವಿಭಿನ್ನ ಶೈಲಿಗೆ ಹೆಸರುವಾಸಿಯಾಗಿರುವ ರೇವಾದ ಬಿಜೆಪಿ ಸಂಸದ ಜನಾರ್ದನ್ ಮಿಶ್ರಾ ಅವರು ತಮ್ಮ ಸ್ವಚ್ಛತಾ ಅಭಿಯಾನಕ್ಕಾಗಿ ಮತ್ತೊಮ್ಮೆ ಸುದ್ದಿಯಲ್ಲಿದ್ದಾರೆ. ರೇವಾ ಸಂಸದನ ವಿಡಿಯೋವೊಂದು ಅಂತರ್ಜಾಲ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿದೆ. ರೇವಾ ಸಂಸದ ಜನಾರ್ದನ್ ಮಿಶ್ರಾ ಅವರು ಪಕ್ಷದ ವತಿಯಿಂದ ನಡೆಸುತ್ತಿರುವ ಸೇವಾ ಪಖವಾಡದ ಅಡಿಯಲ್ಲಿ ಬಾಲಕಿಯರ ಶಾಲೆಯ ಖತ್ಖಾರಿಯಲ್ಲಿ ಯುವ ಮೋರ್ಚಾ ಆಯೋಜಿಸಿದ್ದ ಮರ ನೆಡುವ ಕಾರ್ಯಕ್ರಮದಲ್ಲಿ ಭಾಗವಹಿಸಲು ತೆರಳಿದ್ದರು.

ಗಿಡ ನೆಡುವ ಕಾರ್ಯಕ್ರಮದ ನಂತರ ಶಾಲೆಯ ಶೌಚಾಲಯ ತುಂಬಾ ಕೊಳಕಾಗಿದೆ, ಅದನ್ನು ಬಳಸಲು ತುಂಬಾ ಕಷ್ಟವಾಗಿದೆ ಎಂದು ತಿಳಿದಾಗ, ಅವರು ಬ್ರಷ್‌ಗೆ ಕಾಯದೆ ಬಕೆಟ್‌ನಲ್ಲಿ ನೀರು ತೆಗೆದುಕೊಂಡು ಶೌಚಾಲಯವನ್ನು ಕೈಯಿಂದ ಉಜ್ಜಿದರು. ಈ ಕಾರ್ಯದಲ್ಲಿ ಯಾರ ಸಹಾಯವನ್ನೂ ಪಡೆಯದೆ ಸಂಪೂರ್ಣ ಶ್ರದ್ಧೆಯಿಂದ ಒಬ್ಬರೇ ಈ ಕೆಲಸವನ್ನು ಮಾಡಿದ್ದಾರೆ. ಇದನ್ನು ನೋಡಿ ಎಲ್ಲರೂ ಬೆಚ್ಚಿಬಿದ್ದರು. ಸ್ವಚ್ಛ ಭಾರತ ಸಂದೇಶ ನೀಡಿದ ಸಂಸದರು ಸ್ವಚ್ಛತೆ ಕಾಪಾಡುವಂತೆ ಸಲಹೆ ನೀಡಿದರು. ಈ ರೀತಿ ಕ್ಲೀನ್ ಮಾಡುತ್ತಿರುವ ವಿಡಿಯೋ ಇದೀಗ ಅಂತರ್ಜಾಲ ಮಾಧ್ಯಮಗಳಲ್ಲಿ ಸಖತ್ ವೈರಲ್ ಆಗುತ್ತಿದೆ. ಅವರು ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ, ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಮತ್ತು ಇತರರನ್ನು ಟ್ಯಾಗ್ ಮಾಡಿದ್ದಾರೆ. ಕ್ಲೀನ್ ಮಾಡುವ ವಿಡಿಯೋವನ್ನು ತಮ್ಮ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿ ಸುದ್ದಿಯಾಗಿದ್ದಾರೆ.

ಈ ಹಿಂದೆಯೂ ಇಂತಹ ವಿಡಿಯೋಗಳು ವೈರಲ್ ಆಗಿವೆ. ಈ ಹಿಂದೆಯೂ ಈ ರೀತಿ ಟಾಯ್ಲೆಟ್ ಶುಚಿಗೊಳಿಸಿದ್ದು ಸುದ್ದಿಯಾಗಿತ್ತು. ಖಜುಹಾ ಗ್ರಾಮದ ಕೊಳಕು ಶಾಲೆಯ ಶೌಚಾಲಯಗಳನ್ನು ತಮ್ಮ ಕೈಗಳಿಂದ ಸ್ವಚ್ಛಗೊಳಿಸಿದ್ದು ಎಲ್ಲ ಕಡೆ ವೈರಲ್ ಆಗುತ್ತಿದೆ. ಕರೋನಾ ಸಮಯದಲ್ಲೂ ಮೌಗಂಜ್ ಜಿಲ್ಲೆಯ ಸೆಮರಿಯಾ ಪಂಚಾಯತ್‌ನ ಕುಂಜ್ ಬಿಹಾರಿ ಅವರು ಕ್ವಾರಂಟೈನ್ ಕೇಂದ್ರವನ್ನು ಪರಿಶೀಲಿಸುವಾಗ ಕೊಳಕು ಶೌಚಾಲಯಗಳನ್ನು ಸ್ವಚ್ಛಗೊಳಿಸುವ ಮೂಲಕ ವೈರಲ್ ಆಗಿತ್ತು.

Published On - 6:25 pm, Fri, 23 September 22

Follow Us
Web contact
Web contact

TV9 Kannada

Read More
ಐಪಿಎಲ್‌ನಲ್ಲಿ ಇತಿಹಾಸ ನಿರ್ಮಿಸಿದ ಸಾಯಿ ಸುದರ್ಶನ್
ಐಪಿಎಲ್‌ನಲ್ಲಿ ಇತಿಹಾಸ ನಿರ್ಮಿಸಿದ ಸಾಯಿ ಸುದರ್ಶನ್
ಓಡಿಹೋಗುತ್ತಾಳೆಂದು ಹೆಂಡತಿಯನ್ನು ಕಟ್ಟಿಹಾಕಿದ ಗಂಡ!
ಓಡಿಹೋಗುತ್ತಾಳೆಂದು ಹೆಂಡತಿಯನ್ನು ಕಟ್ಟಿಹಾಕಿದ ಗಂಡ!
ಬುಡಸಮೇತ ರಸ್ತೆ ಮೇಲೆ ಉರುಳಿಬಿದ್ದ ಬೃಹತ್​ ಮರ: ಶಂಕರಮಠ ರಸ್ತೆ ಬಂದ್!
ಬುಡಸಮೇತ ರಸ್ತೆ ಮೇಲೆ ಉರುಳಿಬಿದ್ದ ಬೃಹತ್​ ಮರ: ಶಂಕರಮಠ ರಸ್ತೆ ಬಂದ್!
ಶುಭ್​ಮನ್ ಗಿಲ್ ಸುನಾಮಿಗೆ ಸೃಷ್ಟಿಯಾದ ದಾಖಲೆಗಳಿವು
ಶುಭ್​ಮನ್ ಗಿಲ್ ಸುನಾಮಿಗೆ ಸೃಷ್ಟಿಯಾದ ದಾಖಲೆಗಳಿವು
ಬೆಂಗಳೂರಿನಲ್ಲಿ ಆಲಿಕಲ್ಲು ಮಳೆ ಆರ್ಭಟ: ಹತ್ತಾರು ಅವಾಂತರ; ಮರಗಳು ಧರೆಗೆ!
ಬೆಂಗಳೂರಿನಲ್ಲಿ ಆಲಿಕಲ್ಲು ಮಳೆ ಆರ್ಭಟ: ಹತ್ತಾರು ಅವಾಂತರ; ಮರಗಳು ಧರೆಗೆ!
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ