AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video Viral: 7 ಮಕ್ಕಳೊಂದಿಗೆ ಸ್ಕೂಟರ್ ಸವಾರಿ ಮಾಡಿದ ವ್ಯಕ್ತಿಗೆ, ಟ್ವಿಟರ್​​ನಲ್ಲಿ ಹಿಗ್ಗಾಮುಗ್ಗಾ ಜಾಡಿಸಿದ ನೆಟ್ಟಿಗರು

ಇಲ್ಲೊಬ್ಬ ವ್ಯಕ್ತಿ ರಸ್ತೆ ಸುರಕ್ಷತಾ ನಿಯಮ ಉಲ್ಲಂಘನೆ ಮಾಡಿರುವ ವೀಡಿಯೊ ಎಲ್ಲ ಕಡೆ ವೈರಲ್​​ ಆಗುತ್ತಿದೆ. ಸಾಮಾಜಿಕ ಜಾಲತಾಣದಲ್ಲಿ ಈ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿದೆ. ಒಂದು ಸ್ಕೂಟರ್​​​​ನಲ್ಲಿ 7 ಜನರು ಕೂರಿಸಿಕೊಂಡು ಹೋಗಿರುವುದು, ರಸ್ತೆ ಸುರಕ್ಷತಾ ನಿಯಮವನ್ನು ಉಲ್ಲಂಘನೆ ಮಾಡಿದ್ದಾರೆ

Video Viral: 7 ಮಕ್ಕಳೊಂದಿಗೆ ಸ್ಕೂಟರ್ ಸವಾರಿ ಮಾಡಿದ ವ್ಯಕ್ತಿಗೆ, ಟ್ವಿಟರ್​​ನಲ್ಲಿ ಹಿಗ್ಗಾಮುಗ್ಗಾ ಜಾಡಿಸಿದ ನೆಟ್ಟಿಗರು
ವೈರಲ್​ ವೀಡಿಯೊ
ಅಕ್ಷಯ್​ ಪಲ್ಲಮಜಲು​​
|

Updated on:Jun 26, 2023 | 5:10 PM

Share

ಕಾನೂನುಗಳನ್ನು ಮಾಡುವುದು ನಮ್ಮ ರಕ್ಷಣೆಗೆ ಹೊರತು, ಅದು ನಮಗೆ ಹಿಂಸೆ ನೀಡಲು ಅಲ್ಲ. ಅಂತಹಃ ಕೆಟ್ಟ ಕಾನೂನುಗಳನ್ನು ನಾವು ಒಪ್ಪುವುದಿಲ್ಲ. ಆದರೆ ಅದು ನಮಗೆ ರಕ್ಷಣೆ ನೀಡುತ್ತದೆ. ನಮಗೆ ಅದು ಒಳ್ಳೆಯದ್ದನ್ನು ಮಾಡುತ್ತದೆ ಎಂದಾಗ ಅದನ್ನು ನಾವು ಪಾಲಿಸುವುದು ನಮ್ಮ ಕರ್ತವ್ಯ, ಜತೆಗೆ ಇದು ಪ್ರಜಾಪ್ರಭುತ್ವ ರಾಷ್ಟ್ರ ಎಲ್ಲರೂ ಈ ದೇಶದ ಕಾನೂನುಗಳನ್ನು ಪಾಲಿಸಲೇಬೇಕು. ಆದರೆ ಇಲ್ಲೊಬ್ಬ ವ್ಯಕ್ತಿ ರಸ್ತೆ ಸುರಕ್ಷತಾ ನಿಯಮ ಉಲ್ಲಂಘನೆ ಮಾಡಿರುವ ವೀಡಿಯೊ ಎಲ್ಲ ಕಡೆ ವೈರಲ್​​ ಆಗುತ್ತಿದೆ. ಸಾಮಾಜಿಕ ಜಾಲತಾಣದಲ್ಲಿ ಈ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿದೆ. ಒಂದು ಸ್ಕೂಟರ್​​​​ನಲ್ಲಿ 7 ಜನರು ಕೂರಿಸಿಕೊಂಡು ಹೋಗಿರುವುದು, ರಸ್ತೆ ಸುರಕ್ಷತಾ ನಿಯಮವನ್ನು ಉಲ್ಲಂಘನೆ ಮಾಡಿದ್ದಾರೆ ಎಂದು ಹೇಳಲಾಗಿದೆ. ಮುಂಬೈನಲ್ಲಿ ರಸ್ತೆ ಸುರಕ್ಷತಾ ನಿಯಮಗಳ ಉಲ್ಲಂಘನೆ ಮಾಡಿ ವ್ಯಕ್ತಿಯೊಬ್ಬರು ಏಳು ಮಕ್ಕಳನ್ನು ತನ್ನ ಸ್ಕೂಟರ್‌ನಲ್ಲಿ ಸಾಗಿಸುತ್ತಿರುವುದು ಕ್ಯಾಮರಾದಲ್ಲಿ ಸೆರೆಯಾಗಿದೆ. ಈ ಬಗ್ಗೆ ವೀಡಿಯೊವನ್ನು ಟ್ವಿಟರ್​​ನಲ್ಲಿ ಹಂಚಿಕೊಳ್ಳಲಾಗಿದೆ. ಈ ವೀಡಿಯೊದಲ್ಲಿ ವ್ಯಕ್ತಿಯೊಬ್ಬರು ತನ್ನ ಸ್ಕೂಟರ್‌ನಲ್ಲಿ ಇಬ್ಬರು ಮಕ್ಕಳನ್ನು ಸ್ಕೂಟರ್​​ನ ಮುಂಭಾಗದಲ್ಲಿ ಇತರ ಮೂವರು ಮಕ್ಕಳು ಸೀಟಿನಲ್ಲಿ ಕುಳಿತಿದ್ದಾರೆ ಮತ್ತು ಇಬ್ಬರು ಹಿಂದೆ ನಿಂತಿದ್ದಾರೆ.

ಈ ವೀಡಿಯೊ ಹಂಚಿಕೊಂಡಿರುವುದ ಜತೆಗೆ ಈ ಬಗ್ಗೆ ಹೀಗೆ ಬರೆದುಕೊಂಡಿದ್ದಾರೆ. ಇದು ಬೇಜವಾಬ್ದಾರಿತನ ಮತ್ತು ಹುಚ್ಚುತನ, ಏಳು ಮಕ್ಕಳೊಂದಿಗೆ ಸ್ಕೂಟರ್‌ನಲ್ಲಿ ಸವಾರಿ ಮಾಡುತ್ತಿರುವ ಈ ವ್ಯಕ್ತಿಗೆ ಬುದ್ದಿ ಇಲ್ಲವೆ. ಆ ಏಳು ಪುಟ್ಟ ಮಕ್ಕಳ ಪ್ರಾಣಕ್ಕೆ ಅಪಾಯ ತಂದಿರುವ ಅವರನ್ನು ಕೂಡಲೇ ಬಂಧಿಸಬೇಕು. ಈ ಮಕ್ಕಳ ಪೋಷಕರ ಮೇಲೂ ಕಾನೂನು ಕ್ರಮ ಜರುಗಿಸಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ವೈರಲ್ ವೀಡಿಯೊಗೆ ಟ್ವಿಟರ್​​​​ನಲ್ಲಿ ಪ್ರತಿಕ್ರಿಯಿಸಿದ ಮುಂಬೈ ಟ್ರಾಫಿಕ್ ಪೊಲೀಸರು ಮಕ್ಕಳು ಮತ್ತು ಇತರರ ಜೀವಕ್ಕೆ ಅಪಾಯವನ್ನುಂಟು ಮಾಡಿದ್ದಕ್ಕಾಗಿ ಈ ವ್ಯಕ್ತಿಯನ್ನು ಬಂಧಿಸಿದ್ದಾರೆ. ಆತನ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 308 (ಅಪರಾಧೀಯ ನರಹತ್ಯೆ ಮಾಡುವ ಪ್ರಯತ್ನ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಇದನ್ನೂ ಓದಿ: Video Viral: ಕೈ ಹಿಡಿದು ಎಳೆದ ರೋಡ್ ರೋಮಿಯೋಗೆ ಬಿತ್ತು ಗೂಸಾ, ಈ ಯುವತಿಯರ ಧೈರ್ಯಕ್ಕೆ ಮೆಚ್ಚಲೇಬೇಕು ಎಂದ ನೆಟ್ಟಿಗರು

ಇಲ್ಲಿ ನಿಯಮದ ಉಲ್ಲಂಘನೆ ಆಗಿರುವುದು ನಿಜ, ಇದು ಸರಿಯಾದ ಸವಾರಿ ಅಲ್ಲ. ಇಂತಹ ಕೃತ್ಯ ಮಕ್ಕಳಿಗೂ, ಸಾರ್ವಜನಿಕರ ಪ್ರಾಣಕ್ಕೂ ಅಪಾಯ ಎಂದು ಹೇಳಿದ್ದಾರೆ. ಆರೋಪಿ ಸವಾರನ ವಿರುದ್ಧ ನರಹತ್ಯೆ ಮಾಡಲು ಯತ್ನಿಸಿದ ಗಂಭೀರ ಅಪರಾಧ u/sec 308 IPC ಅಡಿಯಲ್ಲಿ ದೂರು ದಾಖಲಿಸಲಾಗಿದೆ.

ಈ ವೀಡಿಯೊ ಸಾಮಾಜಿಕ ಜಾಲತಾಣ ಬಳಕೆದಾರರನ್ನು ಬೆಚ್ಚಿಬೀಳಿಸಿದೆ ಮತ್ತು ಜೀವಕ್ಕೆ ಅಪಾಯವನ್ನುಂಟು ಮಾಡುವ ಕೃತ್ಯವಾಗಿದೆ, ಇದಕ್ಕೆ ಸಾಮಾಜಿಕ ಜಾಲತಾಣ ಬಳಕೆದಾರರೂ, ಆತನಿಗೆ ಕಠಿಣ ಶಿಕ್ಷೆ ನೀಡುವಂತೆ ಒತ್ತಾಯಿಸಿದ್ದಾರೆ. ಒಬ್ಬ ಬಳಕೆದಾರ ಇದು ತುಂಬಾ ಅಪಾಯಕ್ಕೆ ಗುರಿ ಮಾಡುವ ಕೃತ್ಯ, ಮಕ್ಕಳ ಜೀವದ ಜತೆಗೆ ಚೆಲ್ಲಾಟವಾಡುತ್ತಿದ್ದಾರೆ. ಒಂದು ವೇಳೆ ಇವರ ಭಾರಕ್ಕೆ ಸ್ಕೂಟರ್​​ ಬ್ಯಾನೆಸ್ಸ್​ ತಪ್ಪಿ ಬೇರೆ ವಾಹನಕ್ಕೆ ಡಿಕ್ಕಿ ಹೊಡೆದಿದ್ದಾರೆ ಎಂದು ಕಥೆ ಎಂದು ಕಮೆಂಟ್​ ಮಾಡಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 5:08 pm, Mon, 26 June 23

Follow Us
ಅಕ್ಷಯ್​ ಪಲ್ಲಮಜಲು​​
ಅಕ್ಷಯ್​ ಪಲ್ಲಮಜಲು​​

ಅಕ್ಷಯ್ ಕುಮಾರ್ ಪಲ್ಲಮಜಲು ಅವರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕಿನವರು. ಡಿಜಿಟಲ್ ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇದೆ. ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದಾರೆ, ಪ್ರಸ್ತುತ ಟಿವಿ9 ಕನ್ನಡದಲ್ಲಿ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದಾರೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಸುದ್ದಿ ಮತ್ತು ಬ್ರೇಕಿಂಗ್​ ಸುದ್ದಿಗಳನ್ನು ಬರೆಯುತ್ತಾರೆ.

Read More
ವಿಜಯ್ ಬೆನ್ನಲ್ಲೇ ಕೊಲ್ಲೂರು ಮೂಕಾಂಬಿಕೆ ದೇಗುಲಕ್ಕೆ ಅನಂತ್ ಅಂಬಾನಿ ಭೇಟಿ
ವಿಜಯ್ ಬೆನ್ನಲ್ಲೇ ಕೊಲ್ಲೂರು ಮೂಕಾಂಬಿಕೆ ದೇಗುಲಕ್ಕೆ ಅನಂತ್ ಅಂಬಾನಿ ಭೇಟಿ
‘ಕಾಕ್ರೂಚ್’ಗಳ ಪ್ರತಿಭಟನೆಗೆ ನಟ ಪ್ರಕಾಶ್ ರೈ ಸಾಥ್: ವಿಡಿಯೋ
‘ಕಾಕ್ರೂಚ್’ಗಳ ಪ್ರತಿಭಟನೆಗೆ ನಟ ಪ್ರಕಾಶ್ ರೈ ಸಾಥ್: ವಿಡಿಯೋ
ರಸ್ತೆ ಬದಿ ಅಂಗಡಿಯಲ್ಲಿ 1 ಟೀ ಕುಡಿದು 2 ಸಾವಿರ ರೂ. ಕೊಟ್ಟ DCM ಪರಮೇಶ್ವರ್
ರಸ್ತೆ ಬದಿ ಅಂಗಡಿಯಲ್ಲಿ 1 ಟೀ ಕುಡಿದು 2 ಸಾವಿರ ರೂ. ಕೊಟ್ಟ DCM ಪರಮೇಶ್ವರ್
ಗೃಹಲಕ್ಷ್ಮೀ, ಗೃಹಜ್ಯೋತಿಗೆ ಹೊಸ ಅರ್ಜಿಗೆ ಏನೇನು ದಾಖಲೆ ಬೇಕು?
ಗೃಹಲಕ್ಷ್ಮೀ, ಗೃಹಜ್ಯೋತಿಗೆ ಹೊಸ ಅರ್ಜಿಗೆ ಏನೇನು ದಾಖಲೆ ಬೇಕು?
ಸಹೋದರನಿಗೆ ಕೆಪಿಸಿಸಿ ಆಧ್ಯಕ್ಷ ಸ್ಥಾನ ತಪ್ಪಿದಕ್ಕೆ ಸಾಹುಕಾರ್ ಹೇಳಿದ್ದೇನು?
ಸಹೋದರನಿಗೆ ಕೆಪಿಸಿಸಿ ಆಧ್ಯಕ್ಷ ಸ್ಥಾನ ತಪ್ಪಿದಕ್ಕೆ ಸಾಹುಕಾರ್ ಹೇಳಿದ್ದೇನು?
ಕುಮಾರಸ್ವಾಮಿಯ ವಿಡಿಯೋ ರಿಲೀಸ್ ಮಾಡಿದ ಕಾಂಗ್ರೆಸ್ ಶಾಸಕ, ವಿಡಿಯೋನಲ್ಲೇನಿದೆ?
ಕುಮಾರಸ್ವಾಮಿಯ ವಿಡಿಯೋ ರಿಲೀಸ್ ಮಾಡಿದ ಕಾಂಗ್ರೆಸ್ ಶಾಸಕ, ವಿಡಿಯೋನಲ್ಲೇನಿದೆ?
ಕಿರುಕುಳ ತಾಳಲಾರದೇ ಅಧಿಕಾರಿಯ ಮುಖಕ್ಕೆ ರಾಜೀನಾಮೆ ಬಿಸಾಕಿದ ಲೇಡಿ ಸಿಬ್ಬಂದಿ
ಕಿರುಕುಳ ತಾಳಲಾರದೇ ಅಧಿಕಾರಿಯ ಮುಖಕ್ಕೆ ರಾಜೀನಾಮೆ ಬಿಸಾಕಿದ ಲೇಡಿ ಸಿಬ್ಬಂದಿ
ಬೆಂಗಳೂರಿನಲ್ಲಿ ಒಂದೇ ಒಂದು ಮಳೆಗೆ ತುಂಬಿ ಹರಿಯುತ್ತಿರೋ ಹಳ್ಳ ಕೊಳ್ಳಗಳು!
ಬೆಂಗಳೂರಿನಲ್ಲಿ ಒಂದೇ ಒಂದು ಮಳೆಗೆ ತುಂಬಿ ಹರಿಯುತ್ತಿರೋ ಹಳ್ಳ ಕೊಳ್ಳಗಳು!
ಮಂಡ್ಯದಲ್ಲಿ ಮುನಿಸು ಮರೆತ ಮೈತ್ರಿ ನಾಯಕರು
ಮಂಡ್ಯದಲ್ಲಿ ಮುನಿಸು ಮರೆತ ಮೈತ್ರಿ ನಾಯಕರು
ರಾಯಚೂರಿನಲ್ಲಿ ವರುಣನ ಆರ್ಭಟ: ಜಲಾವೃತಗೊಂಡ ರಸ್ತೆಗಳು!
ರಾಯಚೂರಿನಲ್ಲಿ ವರುಣನ ಆರ್ಭಟ: ಜಲಾವೃತಗೊಂಡ ರಸ್ತೆಗಳು!