AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಐಸ್​​​ ಕ್ರೀಂ ಜತೆಗೆ ತನ್ನ ವೀರ್ಯ ಬೆರೆಸಿದ ಮಾರಾಟಗಾರ, ವಿಡಿಯೋ ವೈರಲ್

ಬೀದಿ ಬದಿ ಮಾರಾಟ ಮಾಡುವ ಐಸ್​​​ ಕ್ರೀಂ ತಿನ್ನುವ ಮುನ್ನ ಎಚ್ಚರ ಇರಲಿ. ಹೌದು ಹೈದರಾಬಾದಿನಲ್ಲಿ ಐಸ್​​​ ಕ್ರೀಂ ಮಾರಾಟಗಾರನೊಬ್ಬ ಹಸ್ತಮೈಥುನ ಮಾಡಿ ವೀರ್ಯವನ್ನು ಐಸ್​​​ ಕ್ರೀಂಗೆ ಮಿಶ್ರಣ ಮಾಡಿ ಮಾರಾಟ ಮಾಡುತ್ತಿದ್ದ ಎಂಬ ವಿಚಾರ ಬೆಳಕಿಗೆ ಬಂದಿದೆ. ಇದೀಗ ಆತನನ್ನು ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಒಂದು ವಿಡಿಯೋ ಕೂಡ ವೈರಲ್​​​ ಆಗಿದೆ.

Follow us
ಅಕ್ಷಯ್​ ಪಲ್ಲಮಜಲು​​
|

Updated on:Mar 20, 2024 | 1:03 PM

ಹೈದರಾಬಾದ್​​ನಲ್ಲಿ ಐಸ್​​​ ಕ್ರೀಂ ಮಾರಾಟಗಾರನೊಬ್ಬ ಹಸ್ತಮೈಥುನ ಮಾಡಿ ವೀರ್ಯವನ್ನು ಐಸ್​​​ ಕ್ರೀಂಗೆ ಮಿಶ್ರಣ ಮಾಡಿ ಮಾರಾಟ ಮಾಡುತ್ತಿದ್ದ ಎಂಬ ವಿಚಾರ ಬೆಳಕಿಗೆ ಬಂದಿದೆ. ಈ ಬಗ್ಗೆ ಒಂದು ವಿಡಿಯೋ ಕೂಡ ವೈರಲ್​​​ ಆಗಿದೆ. ಈ ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಆತನನ್ನು ಬಂಧಿಸಿದ್ದಾರೆ. ಮಾ.19ರಂದು ಘಟನೆಯ ವಿಡಿಯೋ ವೈರಲ್​​​ ಆಗಿದ್ದು, ಅರೋಪಿಯನ್ನು ರಾಜಸ್ಥಾನದ ಕಲುರಾಮ್​​​ ಕುರ್ಬಿಯಾ ಎಂದು ಗುರುತಿಸಲಾಗಿದೆ. ಐಸ್​​​ ಕ್ರೀಮ್​​ಗೆ ವೀರ್ಯವನ್ನು ಬೆರೆಸುವಾಗ ಸಿಕ್ಕಿಬಿದ್ದಿದ್ದಾನೆ ಎಂದು ಪೊಲೀಸರು ಹೇಳಿದ್ದಾರೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಅನೇಕರನ್ನು ಬಂಧಿಸಿದ್ದಾರೆ. ರಾಜ್ಯದಲ್ಲಿ ಐಸ್​​​ ಕ್ರೀಮ್​​​ಗೆ ಕಲಬೆರಕೆ ಉತ್ಪನ್ನಗಳನ್ನು ಬೆರೆಸುತ್ತಿರುವ ಘಟನೆಗಳು ಹೆಚ್ಚಾಗಿ ಬೆಳಕಿಗೆ ಬರುತ್ತಿದೆ ಎಂದು ಹೇಳಿದ್ದಾರೆ. ಹೈದರಾಬಾದಿನ ವಾರಂಗಲ್​​​​, ನೆಕ್ಕೊಂಡ ಪ್ರದೇಶದ ಅಂಬೇಡ್ಕರ್​​ನಗರದಲ್ಲಿ ಈ ಘಟನೆ ನಡೆದಿದೆ ಎಂದು ಪೊಲೀಸರು ಹೇಳಿದ್ದಾರೆ.

ಇನ್ನು ಆಹಾರ ಇಲಾಖೆ ನಿರೀಕ್ಷಕ ಕೃಷ್ಣ ಮೂರ್ತಿಯವರು ಈ ಐಸ್​​​ ಕ್ರೀಮ್​​​ ಮಾದರಿಯನ್ನು ಸಂಗ್ರಹ ಮಾಡಿದ್ದಾರೆ. ಸಾರ್ವಜನಿಕ ಪ್ರದೇಶದಲ್ಲಿ ಐಸ್​​ ಕ್ರೀಮ್​​​ಗೆ ಕಲಬೆರೆಕೆ ಮಾಡುವ​​​​​ ಮಾರಾಟಗಾರರ ವಿರುದ್ಧ ಐಪಿಸಿ ಸೆಕ್ಷನ್​​​ 294ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗುವುದು ಎಂದು ಆಹಾರ ಇಲಾಖೆ ನಿರೀಕ್ಷಕ ಕೃಷ್ಣ ಮೂರ್ತಿ ಹೇಳಿದ್ದಾರೆ.

ಇದನ್ನೂ ಓದಿ: ಮೋದಿ ತಲೆಗೆ ಗುಂಡು ಹಾರಿಸಬೇಕು: ಆರ್​ಜೆಡಿ ನಾಯಕನ ವಿವಾದಾತ್ಮಕ ಹೇಳಿಕೆ

ಈ ಐಸ್​​​ ಕ್ರೀಮ್​​​​ ಗಾಡಿಯಲ್ಲಿ ಫ್ರೂಟ್​​​ ಸಲಾಡ್​​​ಗಳನ್ನು ಕೂಡ ಮಾರಾಟ ಮಾಡಲಾಗಿದೆ. ಅದನ್ನು ಮಾಲಿನ್ಯದ ಕಾರಣದಿಂದ ಅಲ್ಲಿಂದ ವಿಲೇವಾರಿ ಮಾಡಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ. ಮಾಲಿನ್ಯವನ್ನು ಕಾಪಾಡಲು ಹಾಗೂ ಆರೋಗ್ಯಯುತವಾದ ಆಹಾರಗಳನ್ನು ನೀಡಲು ಬೀದಿ ಬದಿಯ ವ್ಯಾಪರಿಗಳಿಗೆ ಪೊಲೀಸರು ಎಚ್ಚರಿಕೆ ನೀಡಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 11:07 am, Wed, 20 March 24

ಸೋನು ನಿಗಂ ಮೇಲೆ ನಿಷೇಧ ಹೇರಿ: ರೂಪೇಶ್ ರಾಜಣ್ಣ ಒತ್ತಾಯ
ಸೋನು ನಿಗಂ ಮೇಲೆ ನಿಷೇಧ ಹೇರಿ: ರೂಪೇಶ್ ರಾಜಣ್ಣ ಒತ್ತಾಯ
ಸೀಟ್​​ ಸಿಗದಿದ್ದಕ್ಕೆ ಬಸ್​ ಮುಂದೆ ಮಲಗಿದ ವೃದ್ಧ: ಮುಂದೇನಾಯ್ತು?
ಸೀಟ್​​ ಸಿಗದಿದ್ದಕ್ಕೆ ಬಸ್​ ಮುಂದೆ ಮಲಗಿದ ವೃದ್ಧ: ಮುಂದೇನಾಯ್ತು?
ತಮ್ಮ ಬೀಗ ಬೈರತಿ ಸುರೇಶ್​ಗೂ ಖಡ್ಗ ನೀಡಿ ಗೌರವಿಸಿದ ವಿಶ್ವನಾಥ್
ತಮ್ಮ ಬೀಗ ಬೈರತಿ ಸುರೇಶ್​ಗೂ ಖಡ್ಗ ನೀಡಿ ಗೌರವಿಸಿದ ವಿಶ್ವನಾಥ್
ಅಶ್ರಫ್ ಕೊಲೆ ಪ್ರಕರಣಕ್ಕೆ ನ್ಯಾಯ ಕೇಳಿದ ಮುಸ್ಲಿಂ ಮುಖಂಡರು
ಅಶ್ರಫ್ ಕೊಲೆ ಪ್ರಕರಣಕ್ಕೆ ನ್ಯಾಯ ಕೇಳಿದ ಮುಸ್ಲಿಂ ಮುಖಂಡರು
ಕನ್ನಡ ಚಿತ್ರರಂಗದಿಂದ ಸೋನು ನಿಗಂಗೆ ನಿಷೇಧ: ಉಮೇಶ್ ಬಣಕಾರ್ ಹೇಳಿದ್ದೇನು?
ಕನ್ನಡ ಚಿತ್ರರಂಗದಿಂದ ಸೋನು ನಿಗಂಗೆ ನಿಷೇಧ: ಉಮೇಶ್ ಬಣಕಾರ್ ಹೇಳಿದ್ದೇನು?
ಪ್ರವಾದಿ ಮೊಹಮ್ಮದ್ ವಿಷಯದಲ್ಲಿ ಯತ್ನಾಳ್ ಮಾತಾಡಿದ್ದು ತಪ್ಪು: ಎಂಬಿ ಪಾಟೀಲ್
ಪ್ರವಾದಿ ಮೊಹಮ್ಮದ್ ವಿಷಯದಲ್ಲಿ ಯತ್ನಾಳ್ ಮಾತಾಡಿದ್ದು ತಪ್ಪು: ಎಂಬಿ ಪಾಟೀಲ್
ಐಪಿಎಲ್ ಧಡೂತಿ ಲೀಗ್​ ಆಗಿ ಬದಲಾದ್ರೆ ಹೇಗಿರುತ್ತೆ? ಇಲ್ಲಿದೆ ವಿಡಿಯೋ
ಐಪಿಎಲ್ ಧಡೂತಿ ಲೀಗ್​ ಆಗಿ ಬದಲಾದ್ರೆ ಹೇಗಿರುತ್ತೆ? ಇಲ್ಲಿದೆ ವಿಡಿಯೋ
ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ: ಚಿಕ್ಕಮಗಳೂರಿನಲ್ಲಿ ಬಿಗಿ ಬಂದೋಬಸ್ತ್
ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ: ಚಿಕ್ಕಮಗಳೂರಿನಲ್ಲಿ ಬಿಗಿ ಬಂದೋಬಸ್ತ್
ಬನಸಗೌಡ ಯತ್ನಾಳ್ ಮಾಧ್ಯಮದವರ ಕೈಗೆ ಸಿಗುತ್ತಿಲ್ಲವಂತಲ್ಲ? ಜಮೀರ್ ಅಹ್ಮದ್
ಬನಸಗೌಡ ಯತ್ನಾಳ್ ಮಾಧ್ಯಮದವರ ಕೈಗೆ ಸಿಗುತ್ತಿಲ್ಲವಂತಲ್ಲ? ಜಮೀರ್ ಅಹ್ಮದ್
ಮೇ 6ರವರೆಗೆ ನಿಷೇಧಾಜ್ಞೆ ಜಾರಿಯಲ್ಲಿಟ್ಟಿರುವ ದಕ್ಷಿಣ ಕನ್ನಡ ಜಿಲ್ಲಾಡಳಿತ
ಮೇ 6ರವರೆಗೆ ನಿಷೇಧಾಜ್ಞೆ ಜಾರಿಯಲ್ಲಿಟ್ಟಿರುವ ದಕ್ಷಿಣ ಕನ್ನಡ ಜಿಲ್ಲಾಡಳಿತ