AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಐಸ್​​​ ಕ್ರೀಂ ಜತೆಗೆ ತನ್ನ ವೀರ್ಯ ಬೆರೆಸಿದ ಮಾರಾಟಗಾರ, ವಿಡಿಯೋ ವೈರಲ್

ಬೀದಿ ಬದಿ ಮಾರಾಟ ಮಾಡುವ ಐಸ್​​​ ಕ್ರೀಂ ತಿನ್ನುವ ಮುನ್ನ ಎಚ್ಚರ ಇರಲಿ. ಹೌದು ಹೈದರಾಬಾದಿನಲ್ಲಿ ಐಸ್​​​ ಕ್ರೀಂ ಮಾರಾಟಗಾರನೊಬ್ಬ ಹಸ್ತಮೈಥುನ ಮಾಡಿ ವೀರ್ಯವನ್ನು ಐಸ್​​​ ಕ್ರೀಂಗೆ ಮಿಶ್ರಣ ಮಾಡಿ ಮಾರಾಟ ಮಾಡುತ್ತಿದ್ದ ಎಂಬ ವಿಚಾರ ಬೆಳಕಿಗೆ ಬಂದಿದೆ. ಇದೀಗ ಆತನನ್ನು ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಒಂದು ವಿಡಿಯೋ ಕೂಡ ವೈರಲ್​​​ ಆಗಿದೆ.

ಅಕ್ಷಯ್​ ಪಲ್ಲಮಜಲು​​
|

Updated on:Mar 20, 2024 | 1:03 PM

Share

ಹೈದರಾಬಾದ್​​ನಲ್ಲಿ ಐಸ್​​​ ಕ್ರೀಂ ಮಾರಾಟಗಾರನೊಬ್ಬ ಹಸ್ತಮೈಥುನ ಮಾಡಿ ವೀರ್ಯವನ್ನು ಐಸ್​​​ ಕ್ರೀಂಗೆ ಮಿಶ್ರಣ ಮಾಡಿ ಮಾರಾಟ ಮಾಡುತ್ತಿದ್ದ ಎಂಬ ವಿಚಾರ ಬೆಳಕಿಗೆ ಬಂದಿದೆ. ಈ ಬಗ್ಗೆ ಒಂದು ವಿಡಿಯೋ ಕೂಡ ವೈರಲ್​​​ ಆಗಿದೆ. ಈ ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಆತನನ್ನು ಬಂಧಿಸಿದ್ದಾರೆ. ಮಾ.19ರಂದು ಘಟನೆಯ ವಿಡಿಯೋ ವೈರಲ್​​​ ಆಗಿದ್ದು, ಅರೋಪಿಯನ್ನು ರಾಜಸ್ಥಾನದ ಕಲುರಾಮ್​​​ ಕುರ್ಬಿಯಾ ಎಂದು ಗುರುತಿಸಲಾಗಿದೆ. ಐಸ್​​​ ಕ್ರೀಮ್​​ಗೆ ವೀರ್ಯವನ್ನು ಬೆರೆಸುವಾಗ ಸಿಕ್ಕಿಬಿದ್ದಿದ್ದಾನೆ ಎಂದು ಪೊಲೀಸರು ಹೇಳಿದ್ದಾರೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಅನೇಕರನ್ನು ಬಂಧಿಸಿದ್ದಾರೆ. ರಾಜ್ಯದಲ್ಲಿ ಐಸ್​​​ ಕ್ರೀಮ್​​​ಗೆ ಕಲಬೆರಕೆ ಉತ್ಪನ್ನಗಳನ್ನು ಬೆರೆಸುತ್ತಿರುವ ಘಟನೆಗಳು ಹೆಚ್ಚಾಗಿ ಬೆಳಕಿಗೆ ಬರುತ್ತಿದೆ ಎಂದು ಹೇಳಿದ್ದಾರೆ. ಹೈದರಾಬಾದಿನ ವಾರಂಗಲ್​​​​, ನೆಕ್ಕೊಂಡ ಪ್ರದೇಶದ ಅಂಬೇಡ್ಕರ್​​ನಗರದಲ್ಲಿ ಈ ಘಟನೆ ನಡೆದಿದೆ ಎಂದು ಪೊಲೀಸರು ಹೇಳಿದ್ದಾರೆ.

ಇನ್ನು ಆಹಾರ ಇಲಾಖೆ ನಿರೀಕ್ಷಕ ಕೃಷ್ಣ ಮೂರ್ತಿಯವರು ಈ ಐಸ್​​​ ಕ್ರೀಮ್​​​ ಮಾದರಿಯನ್ನು ಸಂಗ್ರಹ ಮಾಡಿದ್ದಾರೆ. ಸಾರ್ವಜನಿಕ ಪ್ರದೇಶದಲ್ಲಿ ಐಸ್​​ ಕ್ರೀಮ್​​​ಗೆ ಕಲಬೆರೆಕೆ ಮಾಡುವ​​​​​ ಮಾರಾಟಗಾರರ ವಿರುದ್ಧ ಐಪಿಸಿ ಸೆಕ್ಷನ್​​​ 294ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗುವುದು ಎಂದು ಆಹಾರ ಇಲಾಖೆ ನಿರೀಕ್ಷಕ ಕೃಷ್ಣ ಮೂರ್ತಿ ಹೇಳಿದ್ದಾರೆ.

ಇದನ್ನೂ ಓದಿ: ಮೋದಿ ತಲೆಗೆ ಗುಂಡು ಹಾರಿಸಬೇಕು: ಆರ್​ಜೆಡಿ ನಾಯಕನ ವಿವಾದಾತ್ಮಕ ಹೇಳಿಕೆ

ಈ ಐಸ್​​​ ಕ್ರೀಮ್​​​​ ಗಾಡಿಯಲ್ಲಿ ಫ್ರೂಟ್​​​ ಸಲಾಡ್​​​ಗಳನ್ನು ಕೂಡ ಮಾರಾಟ ಮಾಡಲಾಗಿದೆ. ಅದನ್ನು ಮಾಲಿನ್ಯದ ಕಾರಣದಿಂದ ಅಲ್ಲಿಂದ ವಿಲೇವಾರಿ ಮಾಡಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ. ಮಾಲಿನ್ಯವನ್ನು ಕಾಪಾಡಲು ಹಾಗೂ ಆರೋಗ್ಯಯುತವಾದ ಆಹಾರಗಳನ್ನು ನೀಡಲು ಬೀದಿ ಬದಿಯ ವ್ಯಾಪರಿಗಳಿಗೆ ಪೊಲೀಸರು ಎಚ್ಚರಿಕೆ ನೀಡಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 11:07 am, Wed, 20 March 24

Follow Us
ಕರ್ನಾಟಕ ಎಸ್‌ಐಆರ್ ಅವಧಿ ಆಗಸ್ಟ್ 8ರ ಬದಲು ಆಗಸ್ಟ್ 17ರ ತನಕ ವಿಸ್ತರಣೆ
ಕರ್ನಾಟಕ ಎಸ್‌ಐಆರ್ ಅವಧಿ ಆಗಸ್ಟ್ 8ರ ಬದಲು ಆಗಸ್ಟ್ 17ರ ತನಕ ವಿಸ್ತರಣೆ
ವೃಷಭ ರಾಶಿ ರೋಹಿಣಿ ನಕ್ಷತ್ರದಲ್ಲಿ ಚಂದ್ರನ ಸಂಚಾರ: 12 ರಾಶಿಗಳ ದಿನ ಭವಿಷ್ಯ
ವೃಷಭ ರಾಶಿ ರೋಹಿಣಿ ನಕ್ಷತ್ರದಲ್ಲಿ ಚಂದ್ರನ ಸಂಚಾರ: 12 ರಾಶಿಗಳ ದಿನ ಭವಿಷ್ಯ
ಬಿಗ್​​ಬಾಸ್​ ಸ್ಪರ್ಧಿಗಳಿಗೆ ಅಗ್ನಿಪರೀಕ್ಷೆ: ಮಾಜಿ ​​ಸ್ಪರ್ಧಿಗಳ ಕೆಲಸವೇನು?
ಬಿಗ್​​ಬಾಸ್​ ಸ್ಪರ್ಧಿಗಳಿಗೆ ಅಗ್ನಿಪರೀಕ್ಷೆ: ಮಾಜಿ ​​ಸ್ಪರ್ಧಿಗಳ ಕೆಲಸವೇನು?
‘ಬಾಸ್’ ಸಿನಿಮಾ ನೋಡಿದ ದರ್ಶನ್ ಅಭಿಮಾನಿಗಳು ಹೀಗೆಂದರಂತೆ
‘ಬಾಸ್’ ಸಿನಿಮಾ ನೋಡಿದ ದರ್ಶನ್ ಅಭಿಮಾನಿಗಳು ಹೀಗೆಂದರಂತೆ
ಕೈ ಮುಖಂಡನ ಮೇಲೆ ಗುಂಡಿನ ದಾಳಿ ನಡೆಸಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ಕೈ ಮುಖಂಡನ ಮೇಲೆ ಗುಂಡಿನ ದಾಳಿ ನಡೆಸಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆ
5 ಸ್ಟಾರ್ ಹೋಟೆಲ್​​ಗಳಲ್ಲಿ ಕೊಳೆತ ತರಕಾರಿ, ಮಾಂಸ ಪತ್ತೆ: ಕಠಿಣ ಕ್ರಮ
5 ಸ್ಟಾರ್ ಹೋಟೆಲ್​​ಗಳಲ್ಲಿ ಕೊಳೆತ ತರಕಾರಿ, ಮಾಂಸ ಪತ್ತೆ: ಕಠಿಣ ಕ್ರಮ
ಕಬಿನಿ ನದಿ ಪಾತ್ರದಲ್ಲಿರುವ ಸಾರ್ವಜನಿಕರು ಎಚ್ಚರಿಕೆಯಿಂದ ಇರಲು ಸೂಚನೆ
ಕಬಿನಿ ನದಿ ಪಾತ್ರದಲ್ಲಿರುವ ಸಾರ್ವಜನಿಕರು ಎಚ್ಚರಿಕೆಯಿಂದ ಇರಲು ಸೂಚನೆ
ರಸ್ತೆ ಮಧ್ಯೆ ದೊಡ್ಡ ಕಂದಕ; ಇದು 'ನರಕದ ಹಾದಿ' ಎಂದು ನೆಟ್ಟಿಗರ ಆಕ್ರೋಶ
ರಸ್ತೆ ಮಧ್ಯೆ ದೊಡ್ಡ ಕಂದಕ; ಇದು 'ನರಕದ ಹಾದಿ' ಎಂದು ನೆಟ್ಟಿಗರ ಆಕ್ರೋಶ
ದುಬಾರೆ ದುರಂತಕ್ಕೆ 2.5 ತಿಂಗಳು: ಇಂದಿಗೂ ಜಾರಿಯಾಗದ ಎಸ್‌ಒಪಿ
ದುಬಾರೆ ದುರಂತಕ್ಕೆ 2.5 ತಿಂಗಳು: ಇಂದಿಗೂ ಜಾರಿಯಾಗದ ಎಸ್‌ಒಪಿ
ಸಂಪುಟ ವಿಸ್ತರಣೆ ಬೆನ್ನಲ್ಲೇ ಇದೀಗ ಖಾತೆ ಕ್ಯಾತೆ, ದಿಲ್ಲಿಯತ್ತ ಡಿಕೆಶಿ
ಸಂಪುಟ ವಿಸ್ತರಣೆ ಬೆನ್ನಲ್ಲೇ ಇದೀಗ ಖಾತೆ ಕ್ಯಾತೆ, ದಿಲ್ಲಿಯತ್ತ ಡಿಕೆಶಿ