ಐಸ್​​​ ಕ್ರೀಂ ಜತೆಗೆ ತನ್ನ ವೀರ್ಯ ಬೆರೆಸಿದ ಮಾರಾಟಗಾರ, ವಿಡಿಯೋ ವೈರಲ್

ಬೀದಿ ಬದಿ ಮಾರಾಟ ಮಾಡುವ ಐಸ್​​​ ಕ್ರೀಂ ತಿನ್ನುವ ಮುನ್ನ ಎಚ್ಚರ ಇರಲಿ. ಹೌದು ಹೈದರಾಬಾದಿನಲ್ಲಿ ಐಸ್​​​ ಕ್ರೀಂ ಮಾರಾಟಗಾರನೊಬ್ಬ ಹಸ್ತಮೈಥುನ ಮಾಡಿ ವೀರ್ಯವನ್ನು ಐಸ್​​​ ಕ್ರೀಂಗೆ ಮಿಶ್ರಣ ಮಾಡಿ ಮಾರಾಟ ಮಾಡುತ್ತಿದ್ದ ಎಂಬ ವಿಚಾರ ಬೆಳಕಿಗೆ ಬಂದಿದೆ. ಇದೀಗ ಆತನನ್ನು ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಒಂದು ವಿಡಿಯೋ ಕೂಡ ವೈರಲ್​​​ ಆಗಿದೆ.

Follow us
|

Updated on:Mar 20, 2024 | 1:03 PM

ಹೈದರಾಬಾದ್​​ನಲ್ಲಿ ಐಸ್​​​ ಕ್ರೀಂ ಮಾರಾಟಗಾರನೊಬ್ಬ ಹಸ್ತಮೈಥುನ ಮಾಡಿ ವೀರ್ಯವನ್ನು ಐಸ್​​​ ಕ್ರೀಂಗೆ ಮಿಶ್ರಣ ಮಾಡಿ ಮಾರಾಟ ಮಾಡುತ್ತಿದ್ದ ಎಂಬ ವಿಚಾರ ಬೆಳಕಿಗೆ ಬಂದಿದೆ. ಈ ಬಗ್ಗೆ ಒಂದು ವಿಡಿಯೋ ಕೂಡ ವೈರಲ್​​​ ಆಗಿದೆ. ಈ ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಆತನನ್ನು ಬಂಧಿಸಿದ್ದಾರೆ. ಮಾ.19ರಂದು ಘಟನೆಯ ವಿಡಿಯೋ ವೈರಲ್​​​ ಆಗಿದ್ದು, ಅರೋಪಿಯನ್ನು ರಾಜಸ್ಥಾನದ ಕಲುರಾಮ್​​​ ಕುರ್ಬಿಯಾ ಎಂದು ಗುರುತಿಸಲಾಗಿದೆ. ಐಸ್​​​ ಕ್ರೀಮ್​​ಗೆ ವೀರ್ಯವನ್ನು ಬೆರೆಸುವಾಗ ಸಿಕ್ಕಿಬಿದ್ದಿದ್ದಾನೆ ಎಂದು ಪೊಲೀಸರು ಹೇಳಿದ್ದಾರೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಅನೇಕರನ್ನು ಬಂಧಿಸಿದ್ದಾರೆ. ರಾಜ್ಯದಲ್ಲಿ ಐಸ್​​​ ಕ್ರೀಮ್​​​ಗೆ ಕಲಬೆರಕೆ ಉತ್ಪನ್ನಗಳನ್ನು ಬೆರೆಸುತ್ತಿರುವ ಘಟನೆಗಳು ಹೆಚ್ಚಾಗಿ ಬೆಳಕಿಗೆ ಬರುತ್ತಿದೆ ಎಂದು ಹೇಳಿದ್ದಾರೆ. ಹೈದರಾಬಾದಿನ ವಾರಂಗಲ್​​​​, ನೆಕ್ಕೊಂಡ ಪ್ರದೇಶದ ಅಂಬೇಡ್ಕರ್​​ನಗರದಲ್ಲಿ ಈ ಘಟನೆ ನಡೆದಿದೆ ಎಂದು ಪೊಲೀಸರು ಹೇಳಿದ್ದಾರೆ.

ಇನ್ನು ಆಹಾರ ಇಲಾಖೆ ನಿರೀಕ್ಷಕ ಕೃಷ್ಣ ಮೂರ್ತಿಯವರು ಈ ಐಸ್​​​ ಕ್ರೀಮ್​​​ ಮಾದರಿಯನ್ನು ಸಂಗ್ರಹ ಮಾಡಿದ್ದಾರೆ. ಸಾರ್ವಜನಿಕ ಪ್ರದೇಶದಲ್ಲಿ ಐಸ್​​ ಕ್ರೀಮ್​​​ಗೆ ಕಲಬೆರೆಕೆ ಮಾಡುವ​​​​​ ಮಾರಾಟಗಾರರ ವಿರುದ್ಧ ಐಪಿಸಿ ಸೆಕ್ಷನ್​​​ 294ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗುವುದು ಎಂದು ಆಹಾರ ಇಲಾಖೆ ನಿರೀಕ್ಷಕ ಕೃಷ್ಣ ಮೂರ್ತಿ ಹೇಳಿದ್ದಾರೆ.

ಇದನ್ನೂ ಓದಿ: ಮೋದಿ ತಲೆಗೆ ಗುಂಡು ಹಾರಿಸಬೇಕು: ಆರ್​ಜೆಡಿ ನಾಯಕನ ವಿವಾದಾತ್ಮಕ ಹೇಳಿಕೆ

ಈ ಐಸ್​​​ ಕ್ರೀಮ್​​​​ ಗಾಡಿಯಲ್ಲಿ ಫ್ರೂಟ್​​​ ಸಲಾಡ್​​​ಗಳನ್ನು ಕೂಡ ಮಾರಾಟ ಮಾಡಲಾಗಿದೆ. ಅದನ್ನು ಮಾಲಿನ್ಯದ ಕಾರಣದಿಂದ ಅಲ್ಲಿಂದ ವಿಲೇವಾರಿ ಮಾಡಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ. ಮಾಲಿನ್ಯವನ್ನು ಕಾಪಾಡಲು ಹಾಗೂ ಆರೋಗ್ಯಯುತವಾದ ಆಹಾರಗಳನ್ನು ನೀಡಲು ಬೀದಿ ಬದಿಯ ವ್ಯಾಪರಿಗಳಿಗೆ ಪೊಲೀಸರು ಎಚ್ಚರಿಕೆ ನೀಡಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 11:07 am, Wed, 20 March 24

Daily Devotional: ಸನಾತನ ಧರ್ಮದಲ್ಲಿ 108ರ ಮಹತ್ವ ತಿಳಿದುಕೊಳ್ಳಿ
Daily Devotional: ಸನಾತನ ಧರ್ಮದಲ್ಲಿ 108ರ ಮಹತ್ವ ತಿಳಿದುಕೊಳ್ಳಿ
Daily Horoscope: ವೈವಾಹಿಕ ಜೀವನವು ಸುಖಮಯವಾಗಿ ಸಾಗಲಿದೆ
Daily Horoscope: ವೈವಾಹಿಕ ಜೀವನವು ಸುಖಮಯವಾಗಿ ಸಾಗಲಿದೆ
‘ದರ್ಶನ್ ರಿಲೀಸ್​ ಆಗ್ತಾರಾ?’: ದೇವರಿಗೆ ಪ್ರಶ್ನೆ ಕೇಳಿ ಉತ್ತರ ಪಡೆದ ಪೂಜಾರಿ
‘ದರ್ಶನ್ ರಿಲೀಸ್​ ಆಗ್ತಾರಾ?’: ದೇವರಿಗೆ ಪ್ರಶ್ನೆ ಕೇಳಿ ಉತ್ತರ ಪಡೆದ ಪೂಜಾರಿ
ಸಿದ್ದರಾಮಯ್ಯ ಮೇಲಿನ ವೈರತ್ವ ಮಗನ ಮೇಲೆ ಸಾಧಿಸುವುದು ಸರಿಯಲ್ಲ:ಭೈರತಿ ಸುರೇಶ್
ಸಿದ್ದರಾಮಯ್ಯ ಮೇಲಿನ ವೈರತ್ವ ಮಗನ ಮೇಲೆ ಸಾಧಿಸುವುದು ಸರಿಯಲ್ಲ:ಭೈರತಿ ಸುರೇಶ್
ಶೇ 60 ರಷ್ಟು ಕನ್ನಡ ಕಡ್ಡಾಯ; ಸರ್ಕಾರದಿಂದ  ಸೂಕ್ತ ಕ್ರಮ: ನಾರಾಯಣಗೌಡ, ಕರವೇ
ಶೇ 60 ರಷ್ಟು ಕನ್ನಡ ಕಡ್ಡಾಯ; ಸರ್ಕಾರದಿಂದ  ಸೂಕ್ತ ಕ್ರಮ: ನಾರಾಯಣಗೌಡ, ಕರವೇ
ಪ್ರಜ್ವಲ್​ ಮಾತಾಡಿಸಲು ಜೈಲಿಗೆ ಬಂದ ಭವಾನಿ ಮಾಧ್ಯಮಗಳಿಗೆ ಮುಖ ತೋರಿಸಲಿಲ್ಲ!
ಪ್ರಜ್ವಲ್​ ಮಾತಾಡಿಸಲು ಜೈಲಿಗೆ ಬಂದ ಭವಾನಿ ಮಾಧ್ಯಮಗಳಿಗೆ ಮುಖ ತೋರಿಸಲಿಲ್ಲ!
ಸ್ಟಿಕ್ ಹಿಡಿದು ಕುಂಟುತ್ತ ಪ್ರಜ್ವಲ್​ ನೋಡಲು ಬಂದ ಭವಾನಿ ರೇವಣ್ಣ
ಸ್ಟಿಕ್ ಹಿಡಿದು ಕುಂಟುತ್ತ ಪ್ರಜ್ವಲ್​ ನೋಡಲು ಬಂದ ಭವಾನಿ ರೇವಣ್ಣ
ರಾಹುಲ್ ಎಂದಿಗೂ ಹಿಂದೂ ವಿರೋಧಿಯಲ್ಲ; ಪ್ರಿಯಾಂಕಾ ಗಾಂಧಿ ಸ್ಪಷ್ಟನೆ
ರಾಹುಲ್ ಎಂದಿಗೂ ಹಿಂದೂ ವಿರೋಧಿಯಲ್ಲ; ಪ್ರಿಯಾಂಕಾ ಗಾಂಧಿ ಸ್ಪಷ್ಟನೆ
ಪಕ್ಷದ ಶಿಸ್ತು ಮೀರುವವರಿಗೆ ಶೋಕಾಸ್ ನೋಟೀಸ್ ನೀಡಲಾಗುವುದು: ಡಿಕೆ ಶಿವಕುಮಾರ್
ಪಕ್ಷದ ಶಿಸ್ತು ಮೀರುವವರಿಗೆ ಶೋಕಾಸ್ ನೋಟೀಸ್ ನೀಡಲಾಗುವುದು: ಡಿಕೆ ಶಿವಕುಮಾರ್
ಧೂಮಪಾನ ಕ್ಯಾನ್ಸರ್ ಗೆ ಮೂಲ ಅಂತ ಗೊತ್ತಿದ್ದರೂ ಸಿಗರೇಟು ಸೇದುತ್ತೇವೆ: ಸಿಎಂ
ಧೂಮಪಾನ ಕ್ಯಾನ್ಸರ್ ಗೆ ಮೂಲ ಅಂತ ಗೊತ್ತಿದ್ದರೂ ಸಿಗರೇಟು ಸೇದುತ್ತೇವೆ: ಸಿಎಂ