AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಸ್ತೆ ದಾಟುತ್ತಿದ್ದಾಗ ಬಸ್ಸಿನಡಿಗೆ ಬಿದ್ದ ವೃದ್ಧ; ಬಸ್ಸು ಹರಿದರೂ ಪ್ರಾಣಾಪಾಯದಿಂದ ಪಾರಾಗಿ ಎದ್ದು ಬಂದ ವಿಡಿಯೊ ವೈರಲ್

ಬಸ್ಸೊಂದು ವೃದ್ಧರೊಬ್ಬರಿಗೆ ಡಿಕ್ಕಿ ಹೊಡೆದು ಅವರ ಮೇಲೆ ಚಲಿಸಿರುವ ಘಟನೆ ಮುಂಬೈನ ಪೊವೈ ಪ್ರದೇಶದಲ್ಲಿ ನಡೆದಿದೆ. ಇದೀಗ ಈ ಭಯಾನಕ ವಿಡಿಯೊ ಎಲ್ಲ ಕಡೆ ವೈರಲ್ ಆಗುತ್ತಿದೆ.

ರಸ್ತೆ ದಾಟುತ್ತಿದ್ದಾಗ ಬಸ್ಸಿನಡಿಗೆ ಬಿದ್ದ ವೃದ್ಧ; ಬಸ್ಸು ಹರಿದರೂ ಪ್ರಾಣಾಪಾಯದಿಂದ ಪಾರಾಗಿ ಎದ್ದು ಬಂದ ವಿಡಿಯೊ ವೈರಲ್
The old man who punched the bus, the terrible scene was found on CCTV Image Credit source: ANI
ಅಕ್ಷಯ್​ ಪಲ್ಲಮಜಲು​​
|

Updated on:Dec 15, 2022 | 1:48 PM

Share

ಮುಂಬೈ: ಬಸ್ಸೊಂದು ವೃದ್ಧರೊಬ್ಬರಿಗೆ ಡಿಕ್ಕಿ ಹೊಡೆದು ಅವರ ಮೇಲೆ ಚಲಿಸಿರುವ ಘಟನೆ ಮುಂಬೈನ ಪೊವೈ ಪ್ರದೇಶದಲ್ಲಿ ನಡೆದಿದೆ. ಆದರೆ ಅವರಿಗೆ ಯಾವುದೇ ಅಪಾಯವಾಗಿಲ್ಲ ಎಂದು ಮೂಲಗಳು ತಿಳಿಸಿದೆ. ಈ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು. ಇದೀಗ ಈ ವಿಡಿಯೊ ವೈರಲ್ ಆಗಿದೆ.

ಪೊವೈನಲ್ಲಿ ಬಸ್ ವ್ಯಕ್ತಿಯೊಬ್ಬರಿಗೆ ಡಿಕ್ಕಿ ಹೊಡೆದು ಅವರನ್ನು ಕೆಳಗೆ ಹಾಕಿ ಬಸ್ ಮುಂದೆ ಚಲಿಸಿದೆ. ಇದನ್ನು ನೋಡಿದ ಸಾರ್ವಜನಿಕರು ಗಾಬರಿಗೊಂಡಿದ್ದಾರೆ. ಇದೀಗ ಈ ಘಟನೆಯು ಸಿಸಿಟಿವಿ ದೃಶ್ಯಾವಳಿಗಳಲ್ಲಿ ಸೆರೆಹಿಡಿಯಲ್ಪಟ್ಟಿದೆ. ಕುರ್ತಾ-ಪೈಜಾಮಾ ಧರಿಸಿದ್ದ ವ್ಯಕ್ತಿ ರಸ್ತೆ ದಾಟುತ್ತಿರುವಾಗ ವಿದ್ಯಾರ್ಥಿಗಳಿದ್ದ ಬಸ್ ಹಿಂದಿನಿಂದ ಬಂದು ಡಿಕ್ಕಿ ಹೊಡೆದಿದೆ.

ಇದನ್ನು ಓದಿ:ಮುಂಬೈ ಬಳಿ 10ನೇ ತರಗತಿ ವಿದ್ಯಾರ್ಥಿಗಳು ಪಿಕ್ನಿಕ್ ಮುಗಿಸಿ ಬರುತ್ತಿದ್ದಾಗ ಬಸ್ ಪಲ್ಟಿ; ಇಬ್ಬರು ಮಕ್ಕಳು ಸಾವು

ವೃದ್ಧ ವ್ಯಕ್ತಿ ರಸ್ತೆ ದಾಟುತ್ತಿದ್ದಾಗ ಎದುರಿನಿಂದ ಬರುವ ವಾಹನಗಳಿಗೆ ದಾರಿ ಮಾಡಿಕೊಡಲು ಕಿರಿದಾದ ಮಾರ್ಗದಲ್ಲಿ ಬಸ್‌ ನಿಂತಿತ್ತು. ಆದರೆ ಈ ವಿಡಿಯೊದಲ್ಲಿ ವೃದ್ಧಗೆ ಬಸ್ ಡಿಕ್ಕಿ ಹೊಡೆದು ಕೆಳಗೆ ಬೀಳುತ್ತಾರೆ, ನಂತರ ಅವರನ್ನು ಬಸ್ಸಿನ ಕೆಳಗೆ ಹಾಕಿಕೊಂಡಿ ಹೋಗುವುದು ಕಾಣಬಹುದು. ಆ ವೃದ್ಧ ಎದ್ದೇಳಲು ಪ್ರಯತ್ನಿಸುತ್ತಾರೆ. ಬಸ್ ಬಳಿ ಬರುತ್ತಾರೆ.

ಫ್ಯಾಷನಬಲ್ ಪೊವೈ ಪ್ರದೇಶದ ಲೇಕ್‌ಸೈಡ್ ಸಂಕೀರ್ಣದ ಸಮೀಪವಿರುವ ಎವರೆಸ್ಟ್ ಹೈಟ್ಸ್ ಕಟ್ಟಡದ ಹೊರಗೆ ಮಂಗಳವಾರ ಈ ಘಟನೆ ನಡೆದಿದೆ. ಇದೀಗ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿರುವ ವಿಡಿಯೋವನ್ನು @mypowai Twitter ಹ್ಯಾಂಡಲ್ ಮೂಲಕ ಹಂಚಿಕೊಂಡಿದ್ದಾರೆ.

ಡಿವೈಡರ್ ಇಲ್ಲದ ಕಿರಿದಾದ ದಾರಿಯಲ್ಲಿ ಜನರು ಓಡಾಡುತ್ತಿರುವುದನ್ನು ಕಾಣಬಹುದು ಈ ರಸ್ತೆಯಲ್ಲಿ ವಾಹನಗಳು ನಿಧಾನವಾಗಿ ಚಲಿಸುತ್ತಿತ್ತು ಮತ್ತು ಹಲವಾರು ಪಾದಚಾರಿಗಳು ಸುತ್ತಲೂ ನಡೆದುಕೊಂಡು ಹೋಗುವುದನ್ನು ಕಾಣಬಹುದು. ಆಘಾತಕ್ಕೊಳಗಾದ ಪಾದಚಾರಿಯನ್ನು ಕಂಡು ಭದ್ರತಾ ಸಿಬ್ಬಂದಿಗಳು ಬಸ್ ಚಾಲಕನನ್ನು ಕೂಗಿದ್ದಾರೆ, ಆತ ಬಸ್​ ನಿಲ್ಲಿಸಿ, ಬಸ್ಸಿನಿಂದ ಕೆಳಗೆ ಇಳಿದು ಅಲ್ಲಿ ಕೆಲವೊಂದು ವಾದ-ವಿವಾದಗಳು ನಡೆಯುತ್ತದೆ. ಆದರೆ ಈ ಘಟನೆಯ ಬಗ್ಗೆ ಯಾವುದೇ ದೂರು ದಾಖಲು ಆಗಿಲ್ಲ ಎಂದು ಹೇಳಿದ್ದಾರೆ.

ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 1:34 pm, Thu, 15 December 22

‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
ಅಶ್ವಗಂಧ ಹಾಗೂ ಸಾಂಪ್ರದಾಯಿಕ ಔಷಧಿಗಳ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?
ಅಶ್ವಗಂಧ ಹಾಗೂ ಸಾಂಪ್ರದಾಯಿಕ ಔಷಧಿಗಳ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?