AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಸ್ತೆ ದಾಟುತ್ತಿದ್ದಾಗ ಬಸ್ಸಿನಡಿಗೆ ಬಿದ್ದ ವೃದ್ಧ; ಬಸ್ಸು ಹರಿದರೂ ಪ್ರಾಣಾಪಾಯದಿಂದ ಪಾರಾಗಿ ಎದ್ದು ಬಂದ ವಿಡಿಯೊ ವೈರಲ್

ಬಸ್ಸೊಂದು ವೃದ್ಧರೊಬ್ಬರಿಗೆ ಡಿಕ್ಕಿ ಹೊಡೆದು ಅವರ ಮೇಲೆ ಚಲಿಸಿರುವ ಘಟನೆ ಮುಂಬೈನ ಪೊವೈ ಪ್ರದೇಶದಲ್ಲಿ ನಡೆದಿದೆ. ಇದೀಗ ಈ ಭಯಾನಕ ವಿಡಿಯೊ ಎಲ್ಲ ಕಡೆ ವೈರಲ್ ಆಗುತ್ತಿದೆ.

ರಸ್ತೆ ದಾಟುತ್ತಿದ್ದಾಗ ಬಸ್ಸಿನಡಿಗೆ ಬಿದ್ದ ವೃದ್ಧ; ಬಸ್ಸು ಹರಿದರೂ ಪ್ರಾಣಾಪಾಯದಿಂದ ಪಾರಾಗಿ ಎದ್ದು ಬಂದ ವಿಡಿಯೊ ವೈರಲ್
The old man who punched the bus, the terrible scene was found on CCTV Image Credit source: ANI
ಅಕ್ಷಯ್​ ಪಲ್ಲಮಜಲು​​
|

Updated on:Dec 15, 2022 | 1:48 PM

Share

ಮುಂಬೈ: ಬಸ್ಸೊಂದು ವೃದ್ಧರೊಬ್ಬರಿಗೆ ಡಿಕ್ಕಿ ಹೊಡೆದು ಅವರ ಮೇಲೆ ಚಲಿಸಿರುವ ಘಟನೆ ಮುಂಬೈನ ಪೊವೈ ಪ್ರದೇಶದಲ್ಲಿ ನಡೆದಿದೆ. ಆದರೆ ಅವರಿಗೆ ಯಾವುದೇ ಅಪಾಯವಾಗಿಲ್ಲ ಎಂದು ಮೂಲಗಳು ತಿಳಿಸಿದೆ. ಈ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು. ಇದೀಗ ಈ ವಿಡಿಯೊ ವೈರಲ್ ಆಗಿದೆ.

ಪೊವೈನಲ್ಲಿ ಬಸ್ ವ್ಯಕ್ತಿಯೊಬ್ಬರಿಗೆ ಡಿಕ್ಕಿ ಹೊಡೆದು ಅವರನ್ನು ಕೆಳಗೆ ಹಾಕಿ ಬಸ್ ಮುಂದೆ ಚಲಿಸಿದೆ. ಇದನ್ನು ನೋಡಿದ ಸಾರ್ವಜನಿಕರು ಗಾಬರಿಗೊಂಡಿದ್ದಾರೆ. ಇದೀಗ ಈ ಘಟನೆಯು ಸಿಸಿಟಿವಿ ದೃಶ್ಯಾವಳಿಗಳಲ್ಲಿ ಸೆರೆಹಿಡಿಯಲ್ಪಟ್ಟಿದೆ. ಕುರ್ತಾ-ಪೈಜಾಮಾ ಧರಿಸಿದ್ದ ವ್ಯಕ್ತಿ ರಸ್ತೆ ದಾಟುತ್ತಿರುವಾಗ ವಿದ್ಯಾರ್ಥಿಗಳಿದ್ದ ಬಸ್ ಹಿಂದಿನಿಂದ ಬಂದು ಡಿಕ್ಕಿ ಹೊಡೆದಿದೆ.

ಇದನ್ನು ಓದಿ:ಮುಂಬೈ ಬಳಿ 10ನೇ ತರಗತಿ ವಿದ್ಯಾರ್ಥಿಗಳು ಪಿಕ್ನಿಕ್ ಮುಗಿಸಿ ಬರುತ್ತಿದ್ದಾಗ ಬಸ್ ಪಲ್ಟಿ; ಇಬ್ಬರು ಮಕ್ಕಳು ಸಾವು

ವೃದ್ಧ ವ್ಯಕ್ತಿ ರಸ್ತೆ ದಾಟುತ್ತಿದ್ದಾಗ ಎದುರಿನಿಂದ ಬರುವ ವಾಹನಗಳಿಗೆ ದಾರಿ ಮಾಡಿಕೊಡಲು ಕಿರಿದಾದ ಮಾರ್ಗದಲ್ಲಿ ಬಸ್‌ ನಿಂತಿತ್ತು. ಆದರೆ ಈ ವಿಡಿಯೊದಲ್ಲಿ ವೃದ್ಧಗೆ ಬಸ್ ಡಿಕ್ಕಿ ಹೊಡೆದು ಕೆಳಗೆ ಬೀಳುತ್ತಾರೆ, ನಂತರ ಅವರನ್ನು ಬಸ್ಸಿನ ಕೆಳಗೆ ಹಾಕಿಕೊಂಡಿ ಹೋಗುವುದು ಕಾಣಬಹುದು. ಆ ವೃದ್ಧ ಎದ್ದೇಳಲು ಪ್ರಯತ್ನಿಸುತ್ತಾರೆ. ಬಸ್ ಬಳಿ ಬರುತ್ತಾರೆ.

ಫ್ಯಾಷನಬಲ್ ಪೊವೈ ಪ್ರದೇಶದ ಲೇಕ್‌ಸೈಡ್ ಸಂಕೀರ್ಣದ ಸಮೀಪವಿರುವ ಎವರೆಸ್ಟ್ ಹೈಟ್ಸ್ ಕಟ್ಟಡದ ಹೊರಗೆ ಮಂಗಳವಾರ ಈ ಘಟನೆ ನಡೆದಿದೆ. ಇದೀಗ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿರುವ ವಿಡಿಯೋವನ್ನು @mypowai Twitter ಹ್ಯಾಂಡಲ್ ಮೂಲಕ ಹಂಚಿಕೊಂಡಿದ್ದಾರೆ.

ಡಿವೈಡರ್ ಇಲ್ಲದ ಕಿರಿದಾದ ದಾರಿಯಲ್ಲಿ ಜನರು ಓಡಾಡುತ್ತಿರುವುದನ್ನು ಕಾಣಬಹುದು ಈ ರಸ್ತೆಯಲ್ಲಿ ವಾಹನಗಳು ನಿಧಾನವಾಗಿ ಚಲಿಸುತ್ತಿತ್ತು ಮತ್ತು ಹಲವಾರು ಪಾದಚಾರಿಗಳು ಸುತ್ತಲೂ ನಡೆದುಕೊಂಡು ಹೋಗುವುದನ್ನು ಕಾಣಬಹುದು. ಆಘಾತಕ್ಕೊಳಗಾದ ಪಾದಚಾರಿಯನ್ನು ಕಂಡು ಭದ್ರತಾ ಸಿಬ್ಬಂದಿಗಳು ಬಸ್ ಚಾಲಕನನ್ನು ಕೂಗಿದ್ದಾರೆ, ಆತ ಬಸ್​ ನಿಲ್ಲಿಸಿ, ಬಸ್ಸಿನಿಂದ ಕೆಳಗೆ ಇಳಿದು ಅಲ್ಲಿ ಕೆಲವೊಂದು ವಾದ-ವಿವಾದಗಳು ನಡೆಯುತ್ತದೆ. ಆದರೆ ಈ ಘಟನೆಯ ಬಗ್ಗೆ ಯಾವುದೇ ದೂರು ದಾಖಲು ಆಗಿಲ್ಲ ಎಂದು ಹೇಳಿದ್ದಾರೆ.

ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 1:34 pm, Thu, 15 December 22

Follow Us
14 ವರ್ಷದ ಬಾಲಕಿಗೆ ಹೆರಿಗೆ: ಮನೆಯಲ್ಲೇ ಮಗುವಿಗೆ ಜನ್ಮ ನೀಡಿದ ಅಪ್ರಾಪ್ತೆ
14 ವರ್ಷದ ಬಾಲಕಿಗೆ ಹೆರಿಗೆ: ಮನೆಯಲ್ಲೇ ಮಗುವಿಗೆ ಜನ್ಮ ನೀಡಿದ ಅಪ್ರಾಪ್ತೆ
ಶಾಶ್ವತ ವಾಸಸ್ಥಳ ಪ್ರಮಾಣಪತ್ರ ನೀಡುವುದರಲ್ಲಿ ತಪ್ಪೇನಿದೆ? ಜಿ ಪರಮೇಶ್ವರ್​
ಶಾಶ್ವತ ವಾಸಸ್ಥಳ ಪ್ರಮಾಣಪತ್ರ ನೀಡುವುದರಲ್ಲಿ ತಪ್ಪೇನಿದೆ? ಜಿ ಪರಮೇಶ್ವರ್​
ಖಾಸಗಿ ಕಂಪನಿ ಯಡವಟ್ಟಿಂದ ಪೈಪ್​ಲೈನ್ ಡ್ಯಾಮೇಜ್: ಕಾವೇರಿ ನೀರು ಕಲುಷಿತ
ಖಾಸಗಿ ಕಂಪನಿ ಯಡವಟ್ಟಿಂದ ಪೈಪ್​ಲೈನ್ ಡ್ಯಾಮೇಜ್: ಕಾವೇರಿ ನೀರು ಕಲುಷಿತ
ಶಿವಮೊಗ್ಗ: ನಕಲಿ ಚಿನ್ನ ಅಡವಿಟ್ಟು ಬ್ಯಾಂಕ್​ಗಳಿಗೇ ಲಕ್ಷಾಂತರ ರೂ. ವಂಚನೆ
ಶಿವಮೊಗ್ಗ: ನಕಲಿ ಚಿನ್ನ ಅಡವಿಟ್ಟು ಬ್ಯಾಂಕ್​ಗಳಿಗೇ ಲಕ್ಷಾಂತರ ರೂ. ವಂಚನೆ
ಟೊಮ್ಯಾಟೋ ಬೆಲೆ ಕುಸಿತ, ಬೆಂಬಲ ಬೆಲೆ ನೀಡುವಂತೆ ಆಗ್ರಹಿಸಿ ಪ್ರತಿಭಟನೆ
ಟೊಮ್ಯಾಟೋ ಬೆಲೆ ಕುಸಿತ, ಬೆಂಬಲ ಬೆಲೆ ನೀಡುವಂತೆ ಆಗ್ರಹಿಸಿ ಪ್ರತಿಭಟನೆ
ತಾಯಿ, ಅಜ್ಜಿ, ಮಾವನನ್ನು ಕೊಂದು ತಾನೂ ಆತ್ಮಹತ್ಯೆ ಮಾಡಿಕೊಂಡ ಮಗ!
ತಾಯಿ, ಅಜ್ಜಿ, ಮಾವನನ್ನು ಕೊಂದು ತಾನೂ ಆತ್ಮಹತ್ಯೆ ಮಾಡಿಕೊಂಡ ಮಗ!
ಕ್ವಾಟ್ಲೆ ಕಿಚನ್​​ಗೆ ಬಂದ ‘ಧುರಂಧರ್’ ಹಮ್ಜಾ ಅಲಿ: ವಿಡಿಯೋ
ಕ್ವಾಟ್ಲೆ ಕಿಚನ್​​ಗೆ ಬಂದ ‘ಧುರಂಧರ್’ ಹಮ್ಜಾ ಅಲಿ: ವಿಡಿಯೋ
ಕೆಪಿಎಸ್​ಸಿ ಚೀಫ್ ಶಿವಶಂಕರಪ್ಪ ಪುತ್ರಿ ವಿರುದ್ಧ FIR ದಾಖಲು!
ಕೆಪಿಎಸ್​ಸಿ ಚೀಫ್ ಶಿವಶಂಕರಪ್ಪ ಪುತ್ರಿ ವಿರುದ್ಧ FIR ದಾಖಲು!
ಕೊಲ್ಲೂರು ಮೂಕಾಂಬಿಕಾ ದೇಗುಲಕ್ಕೆ ಕೇರಳ ಸಿಎಂ ಸತೀಶನ್ ಭೇಟಿ
ಕೊಲ್ಲೂರು ಮೂಕಾಂಬಿಕಾ ದೇಗುಲಕ್ಕೆ ಕೇರಳ ಸಿಎಂ ಸತೀಶನ್ ಭೇಟಿ
ಇಂದು ಶನಿದೇವ, ಹನುಮಂತನನ್ನು ಆರಾಧಿಸಿದರೆ ಶುಭ
ಇಂದು ಶನಿದೇವ, ಹನುಮಂತನನ್ನು ಆರಾಧಿಸಿದರೆ ಶುಭ