AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಸ್ತೆ ದಾಟುತ್ತಿದ್ದಾಗ ಬಸ್ಸಿನಡಿಗೆ ಬಿದ್ದ ವೃದ್ಧ; ಬಸ್ಸು ಹರಿದರೂ ಪ್ರಾಣಾಪಾಯದಿಂದ ಪಾರಾಗಿ ಎದ್ದು ಬಂದ ವಿಡಿಯೊ ವೈರಲ್

ಬಸ್ಸೊಂದು ವೃದ್ಧರೊಬ್ಬರಿಗೆ ಡಿಕ್ಕಿ ಹೊಡೆದು ಅವರ ಮೇಲೆ ಚಲಿಸಿರುವ ಘಟನೆ ಮುಂಬೈನ ಪೊವೈ ಪ್ರದೇಶದಲ್ಲಿ ನಡೆದಿದೆ. ಇದೀಗ ಈ ಭಯಾನಕ ವಿಡಿಯೊ ಎಲ್ಲ ಕಡೆ ವೈರಲ್ ಆಗುತ್ತಿದೆ.

ರಸ್ತೆ ದಾಟುತ್ತಿದ್ದಾಗ ಬಸ್ಸಿನಡಿಗೆ ಬಿದ್ದ ವೃದ್ಧ; ಬಸ್ಸು ಹರಿದರೂ ಪ್ರಾಣಾಪಾಯದಿಂದ ಪಾರಾಗಿ ಎದ್ದು ಬಂದ ವಿಡಿಯೊ ವೈರಲ್
The old man who punched the bus, the terrible scene was found on CCTV Image Credit source: ANI
ಅಕ್ಷಯ್​ ಪಲ್ಲಮಜಲು​​
|

Updated on:Dec 15, 2022 | 1:48 PM

Share

ಮುಂಬೈ: ಬಸ್ಸೊಂದು ವೃದ್ಧರೊಬ್ಬರಿಗೆ ಡಿಕ್ಕಿ ಹೊಡೆದು ಅವರ ಮೇಲೆ ಚಲಿಸಿರುವ ಘಟನೆ ಮುಂಬೈನ ಪೊವೈ ಪ್ರದೇಶದಲ್ಲಿ ನಡೆದಿದೆ. ಆದರೆ ಅವರಿಗೆ ಯಾವುದೇ ಅಪಾಯವಾಗಿಲ್ಲ ಎಂದು ಮೂಲಗಳು ತಿಳಿಸಿದೆ. ಈ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು. ಇದೀಗ ಈ ವಿಡಿಯೊ ವೈರಲ್ ಆಗಿದೆ.

ಪೊವೈನಲ್ಲಿ ಬಸ್ ವ್ಯಕ್ತಿಯೊಬ್ಬರಿಗೆ ಡಿಕ್ಕಿ ಹೊಡೆದು ಅವರನ್ನು ಕೆಳಗೆ ಹಾಕಿ ಬಸ್ ಮುಂದೆ ಚಲಿಸಿದೆ. ಇದನ್ನು ನೋಡಿದ ಸಾರ್ವಜನಿಕರು ಗಾಬರಿಗೊಂಡಿದ್ದಾರೆ. ಇದೀಗ ಈ ಘಟನೆಯು ಸಿಸಿಟಿವಿ ದೃಶ್ಯಾವಳಿಗಳಲ್ಲಿ ಸೆರೆಹಿಡಿಯಲ್ಪಟ್ಟಿದೆ. ಕುರ್ತಾ-ಪೈಜಾಮಾ ಧರಿಸಿದ್ದ ವ್ಯಕ್ತಿ ರಸ್ತೆ ದಾಟುತ್ತಿರುವಾಗ ವಿದ್ಯಾರ್ಥಿಗಳಿದ್ದ ಬಸ್ ಹಿಂದಿನಿಂದ ಬಂದು ಡಿಕ್ಕಿ ಹೊಡೆದಿದೆ.

ಇದನ್ನು ಓದಿ:ಮುಂಬೈ ಬಳಿ 10ನೇ ತರಗತಿ ವಿದ್ಯಾರ್ಥಿಗಳು ಪಿಕ್ನಿಕ್ ಮುಗಿಸಿ ಬರುತ್ತಿದ್ದಾಗ ಬಸ್ ಪಲ್ಟಿ; ಇಬ್ಬರು ಮಕ್ಕಳು ಸಾವು

ವೃದ್ಧ ವ್ಯಕ್ತಿ ರಸ್ತೆ ದಾಟುತ್ತಿದ್ದಾಗ ಎದುರಿನಿಂದ ಬರುವ ವಾಹನಗಳಿಗೆ ದಾರಿ ಮಾಡಿಕೊಡಲು ಕಿರಿದಾದ ಮಾರ್ಗದಲ್ಲಿ ಬಸ್‌ ನಿಂತಿತ್ತು. ಆದರೆ ಈ ವಿಡಿಯೊದಲ್ಲಿ ವೃದ್ಧಗೆ ಬಸ್ ಡಿಕ್ಕಿ ಹೊಡೆದು ಕೆಳಗೆ ಬೀಳುತ್ತಾರೆ, ನಂತರ ಅವರನ್ನು ಬಸ್ಸಿನ ಕೆಳಗೆ ಹಾಕಿಕೊಂಡಿ ಹೋಗುವುದು ಕಾಣಬಹುದು. ಆ ವೃದ್ಧ ಎದ್ದೇಳಲು ಪ್ರಯತ್ನಿಸುತ್ತಾರೆ. ಬಸ್ ಬಳಿ ಬರುತ್ತಾರೆ.

ಫ್ಯಾಷನಬಲ್ ಪೊವೈ ಪ್ರದೇಶದ ಲೇಕ್‌ಸೈಡ್ ಸಂಕೀರ್ಣದ ಸಮೀಪವಿರುವ ಎವರೆಸ್ಟ್ ಹೈಟ್ಸ್ ಕಟ್ಟಡದ ಹೊರಗೆ ಮಂಗಳವಾರ ಈ ಘಟನೆ ನಡೆದಿದೆ. ಇದೀಗ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿರುವ ವಿಡಿಯೋವನ್ನು @mypowai Twitter ಹ್ಯಾಂಡಲ್ ಮೂಲಕ ಹಂಚಿಕೊಂಡಿದ್ದಾರೆ.

ಡಿವೈಡರ್ ಇಲ್ಲದ ಕಿರಿದಾದ ದಾರಿಯಲ್ಲಿ ಜನರು ಓಡಾಡುತ್ತಿರುವುದನ್ನು ಕಾಣಬಹುದು ಈ ರಸ್ತೆಯಲ್ಲಿ ವಾಹನಗಳು ನಿಧಾನವಾಗಿ ಚಲಿಸುತ್ತಿತ್ತು ಮತ್ತು ಹಲವಾರು ಪಾದಚಾರಿಗಳು ಸುತ್ತಲೂ ನಡೆದುಕೊಂಡು ಹೋಗುವುದನ್ನು ಕಾಣಬಹುದು. ಆಘಾತಕ್ಕೊಳಗಾದ ಪಾದಚಾರಿಯನ್ನು ಕಂಡು ಭದ್ರತಾ ಸಿಬ್ಬಂದಿಗಳು ಬಸ್ ಚಾಲಕನನ್ನು ಕೂಗಿದ್ದಾರೆ, ಆತ ಬಸ್​ ನಿಲ್ಲಿಸಿ, ಬಸ್ಸಿನಿಂದ ಕೆಳಗೆ ಇಳಿದು ಅಲ್ಲಿ ಕೆಲವೊಂದು ವಾದ-ವಿವಾದಗಳು ನಡೆಯುತ್ತದೆ. ಆದರೆ ಈ ಘಟನೆಯ ಬಗ್ಗೆ ಯಾವುದೇ ದೂರು ದಾಖಲು ಆಗಿಲ್ಲ ಎಂದು ಹೇಳಿದ್ದಾರೆ.

ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 1:34 pm, Thu, 15 December 22

Follow Us
Akshay Pallamajalu
Akshay Pallamajalu

ನನ್ನ ಹೆಸರು ಅಕ್ಷಯ್ ಕುಮಾರ್ ಪಲ್ಲಮಜಲು, ನನ್ನ ಊರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕು, ಡಿಜಿಟಲ್​ ವಿಭಾಗದಲ್ಲಿ 3 ವರ್ಷಗಳ ಅನುಭವ, ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದು, ಟಿವಿ9ನಲ್ಲೂ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದೇನೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಲೇಖನಗಳನ್ನು ಬರೆಯುತ್ತೇನೆ.

Read More
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ