AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video Viral: ಅಮಿತ್ ಶಾ ಪಾದರಕ್ಷೆ ತರುತ್ತಿರುವ ವೀಡಿಯೊ ವೈರಲ್, ತೆಲಂಗಾಣಕ್ಕೆ ಇದು ಹೆಮ್ಮೆ ಎಂದ ಟಿಆರ್‌ಎಸ್

ತೆಲಂಗಾಣ ಬಿಜೆಪಿ ಮುಖ್ಯಸ್ಥ ಬಂಡಿ ಸಂಜಯ್ ಕುಮಾರ್ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ದೇವಸ್ಥಾನಕ್ಕೆ ಭೇಟಿ ನೀಡಿದಾಗ ಅವರ ಚಪ್ಪಲಿಯನ್ನು ತರುತ್ತಿರುವ ವೈರಲ್ ವಿಡಿಯೋ ಕುರಿತು ಟಿಆರ್‌ಎಸ್ ಬಿಜೆಪಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದೆ.

Video Viral:  ಅಮಿತ್ ಶಾ ಪಾದರಕ್ಷೆ ತರುತ್ತಿರುವ ವೀಡಿಯೊ ವೈರಲ್, ತೆಲಂಗಾಣಕ್ಕೆ ಇದು ಹೆಮ್ಮೆ ಎಂದ ಟಿಆರ್‌ಎಸ್
TV9 Web
| Edited By: |

Updated on:Aug 22, 2022 | 2:38 PM

Share

ಹೈದರಾಬಾದ್: ತೆಲಂಗಾಣ ಬಿಜೆಪಿ ಮುಖ್ಯಸ್ಥ ಬಂಡಿ ಸಂಜಯ್ ಕುಮಾರ್ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ದೇವಸ್ಥಾನಕ್ಕೆ ಭೇಟಿ ನೀಡಿದಾಗ ಅವರ ಚಪ್ಪಲಿಯನ್ನು ತರುತ್ತಿರುವ ವೈರಲ್ ವಿಡಿಯೋ ಕುರಿತು ಟಿಆರ್‌ಎಸ್ ಬಿಜೆಪಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದೆ. ತೆಲಂಗಾಣ ಸಚಿವ ಹಾಗೂ ಮುಖ್ಯಮಂತ್ರಿ ಕೆ ಚಂದ್ರಶೇಖರ ರಾವ್ ಅವರ ಪುತ್ರ ಕೆಟಿ ರಾಮರಾವ್ ಟ್ವಿಟ್ ಮೂಲಕ ಟಿಆರ್‌ಎಸ್ ತೀವ್ರದಾಳಿ ನಡೆಯುತ್ತಿದೆ. ತೆಲಂಗಾಣಗೆ ಇದು ಹೆಮ್ಮೆಗೆ ಎನ್ನುವ ರೀತಿಯಲ್ಲಿ ಅವರು ವೀಡಿಯೊವನ್ನು ಟ್ವೀಟ್ ಮಾಡಿದ್ದಾರೆ ಮತ್ತು ರಾಜ್ಯದ ಜನರು ಗುಜರಾತ್ ಗುಲಾಮರನ್ನು ನೋಡುತ್ತಿದ್ದಾರೆ. ತೆಲಂಗಾಣದ ಸ್ವಾಭಿಮಾನವನ್ನು ಅವಹೇಳನ ಮಾಡಬಾರದು ಎಂದು ಟ್ವಿಟ್ ಮಾಡಿದ್ದಾರೆ #TelanganaPride ಎಂಬ ಹ್ಯಾಶ್‌ಟ್ಯಾಗ್ ಬಳಸಿದ್ದಾರೆ.

ಟಿಆರ್‌ಎಸ್‌ನ ಸಾಮಾಜಿಕ ಮಾಧ್ಯಮ ಸಂಚಾಲಕ ವೈ ಸತೀಶ್ ರೆಡ್ಡಿ, ರಾಜ್ಯ ಬಿಜೆಪಿ ಮುಖ್ಯಸ್ಥರ ಕಾರ್ಯವು ಗುಲಾಮಗಿರಿ ಅತ್ಯುತ್ತಮವಾಗಿದೆ ಎಂದು ಹೇಳಿದ್ದಾರೆ.

ಸಿಕಂದರಾಬಾದ್‌ನ ಉಜ್ಜೈನಿ ಮಹಾಕಾಳಿ ಮಠ ದೇವಸ್ಥಾನದ ಹೊರಗೆ ಚಿತ್ರೀಕರಿಸಿದ ವಿಡಿಯೋ ಕುರಿತು ಟಿಆರ್‌ಎಸ್ ಟ್ವಿಟ್ ಮಾಡುವ ಮೂಲಕ ಬಿಜೆಪಿ ವಿರುದ್ಧ ಅಕ್ರೋಶ ವ್ಯಕ್ತಪಡಿಸಿದೆ.

ನಲ್ಗೊಂಡ ಜಿಲ್ಲೆಯ ಮುನುಗೋಡು ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆ ನಡೆಯಲಿರುವ ಹಿನ್ನೆಲೆಯಲ್ಲಿ ಶಾ ಅವರ ತೆಲಂಗಾಣ ಪ್ರವಾಸ ಬಂದಿದ್ದಾರೆ.

ಮಾಜಿ ಕಾಂಗ್ರೆಸ್ ನಾಯಕ ರಾಜಗೋಪಾಲ್ ರೆಡ್ಡಿ ಅವರನ್ನು ಪಕ್ಷಕ್ಕೆ ಸ್ವಾಗತಿಸಿದ ಶಾ, ರಾಜಗೋಪಾಲ್ ರೆಡ್ಡಿ ಬಿಜೆಪಿಗೆ ಸೇರ್ಪಡೆಯಾಗುವುದು ಕೆಸಿಆರ್ ಸರ್ಕಾರದ ಬೇರುಸಹಿತ ಕಿತ್ತುಹಾಕುವ ಪ್ರಾರಂಭವಾಗಿದೆ. ಕೆಸಿಆರ್ ಸರ್ಕಾರ ತೆಲಂಗಾಣ ಜನರ ನಂಬಿಕೆಗೆ ದ್ರೋಹ ಮಾಡಿದೆ. ಮಜ್ಲಿಸ್ ಭಯದಿಂದ ವಿಮೋಚನಾ ದಿನ, ಅವರು ಸೆಪ್ಟೆಂಬರ್‌ನಲ್ಲಿ ತೆಲಂಗಾಣ ವಿಮೋಚನಾ ದಿನವನ್ನು ಆಚರಿಸುವುದಾಗಿ ಭರವಸೆ ನೀಡಿದರು, ಆದರೆ, ಕೆಸಿಆರ್ ಸರ್ಕಾರ ಅವರ ಭರವಸೆಯನ್ನು ಈಡೇರಿಸಲಿಲ್ಲ.

ರಾಜ್ಯದ ರೈತರಿಗೆ ಪ್ರಧಾನಮಂತ್ರಿ ಫಸಲ್ ಬೀಮಾ ಯೋಜನೆಯನ್ನು ಕೆಸಿಆರ್ ನಿರಾಕರಿಸುತ್ತಿದ್ದಾರೆ, ರೈತರನ್ನು ವಿಮೆಯಿಂದ ದೂರವಿಡುವ ಪಾಪ ಮಾಡಿದ್ದಾರೆ, ಕೆಸಿಆರ್ ಸರ್ಕಾರ ರೈತರ ವಿರೋಧಿಯಾಗಿದೆ,” ಎಂದು ಟೀಕಿಸಿದರು.

ಕೆಸಿಆರ್ ವಂಶಾಡಳಿತ ರಾಜಕಾರಣ ಮಾಡುತ್ತಿದ್ದಾರೆ ಎಂದು ಆರೋಪಿಸಿದ ಅವರು, ತಮ್ಮ ಸರಕಾರ ರಚನೆಯಾದರೆ ದಲಿತ ಸಮುದಾಯದವರನ್ನು ಮುಖ್ಯಮಂತ್ರಿ ಮಾಡುವುದಾಗಿ ಭರವಸೆ ನೀಡಿದ್ದರು, ಇಲ್ಲಿಯವರೆಗೆ ಮಾಡಿಲ್ಲ, ಮತ್ತೊಮ್ಮೆ ಅವರನ್ನು ಆರಿಸಿದರೆ ಕೆಸಿಆರ್ ಬದಲಿಗೆ ಕೆಟಿಆರ್ ಬರುತ್ತಾರೆ. ದಲಿತ ಬರುವುದಿಲ್ಲ.

ತೆಲಂಗಾಣ ಬದಲಾವಣೆಗಾಗಿ ಹಂಬಲಿಸುತ್ತಿದೆ ಎಂದು ಶಾ ಹೇಳಿದರು. ಪ್ರಧಾನಿ ನರೇಂದ್ರ ಮೋದಿ ಅವರ ಮಾರ್ಗದರ್ಶನದಲ್ಲಿ ಬಡವರ ಪರ ಮತ್ತು ಅಭಿವೃದ್ಧಿ ಪರ ಬಿಜೆಪಿ ಸರ್ಕಾರವನ್ನು ಆಯ್ಕೆ ಮಾಡಲು ಜನರು ಸಜ್ಜಾಗಿದ್ದಾರೆ ಎಂದು ಅವರು ಟ್ವೀಟ್ ಮಾಡಿದ್ದಾರೆ.

ರಾಜವಂಶದ ರಾಜಕೀಯ ದಾಳಿಯನ್ನು ಎದುರಿಸಿದ ಸಚಿವರು, ಈಗ ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿಯ ಕಾರ್ಯದರ್ಶಿಯಾಗಿರುವ ಶಾ ಅವರ ಪುತ್ರ ಜಯ್ ಶಾ ವಿರುದ್ಧ ವಾಗ್ದಾಳಿ ನಡೆಸಿದರು.

Published On - 1:48 pm, Mon, 22 August 22

Follow Us
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ