Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಸ್ಕೂಟಿಯನ್ನು ಅಟ್ಟಿಸಿಕೊಂಡು ಬಂದ ನಾಯಿಗಳು, ಭಯದಲ್ಲಿ ಕಾರಿಗೆ ಡಿಕ್ಕಿ ಹೊಡೆದು ನೆಲಕ್ಕೆ ಬಿದ್ದ ಮಹಿಳೆಯರು

ಎಲ್ಲೆಡೆ ಬೀದಿನಾಯಿಗಳ ಹಾವಳಿ ಹೆಚ್ಚಾಗುತ್ತಿದೆ, ಕೆಲವು ಕಡೆ ರಸ್ತೆಯಲ್ಲಿ ಓಡಾಡುತ್ತಿರುವ ಒಂಟಿ ಮಕ್ಕಳ ಮೇಲೆ ದಾಳಿ ನಡೆಸಿ ಅವರ ಸಾವಿಗೆ ಕಾರಣವಾಗಿದೆ.

Video: ಸ್ಕೂಟಿಯನ್ನು ಅಟ್ಟಿಸಿಕೊಂಡು ಬಂದ ನಾಯಿಗಳು, ಭಯದಲ್ಲಿ ಕಾರಿಗೆ ಡಿಕ್ಕಿ ಹೊಡೆದು ನೆಲಕ್ಕೆ ಬಿದ್ದ ಮಹಿಳೆಯರು
ಸ್ಕೂಟಿ ಅಪಘಾತImage Credit source: Times Now
Follow us
ನಯನಾ ರಾಜೀವ್
|

Updated on: Apr 04, 2023 | 10:45 AM

ಎಲ್ಲೆಡೆ ಬೀದಿನಾಯಿಗಳ ಹಾವಳಿ ಹೆಚ್ಚಾಗುತ್ತಿದೆ, ಕೆಲವು ಕಡೆ ರಸ್ತೆಯಲ್ಲಿ ಓಡಾಡುತ್ತಿರುವ ಒಂಟಿ ಮಕ್ಕಳ ಮೇಲೆ ದಾಳಿ ನಡೆಸಿ ಅವರ ಸಾವಿಗೆ ಕಾರಣವಾಗಿದೆ. ಒಡಿಶಾದಲ್ಲಿ ಬೀದಿನಾಯಿಗಳಿಂದಾಗಿ ಮಕ್ಕಳೊಂದಿಗೆ ಸ್ಕೂಟಿಯಲ್ಲಿ ತೆರಳುತ್ತಿದ್ದ ಇಬ್ಬರು ಮಹಿಳೆಯರು ಅಪಘಾತಕ್ಕೀಡಾಗಿದ್ದು, ಘಟನೆಯ ವಿಡಿಯೋ ಸಿಸಿಟಿವಿಯಲ್ಲಿ ಸೆರೆಯಾಗಿದೆ ಇಬ್ಬರು ಮಹಿಳೆಯರು ಹಾಗೂ ಓರ್ವ ಬಾಲಕ ಸ್ಕೂಟಿಯಲ್ಲಿ ತೆರಳುತ್ತಿರುವ ಸಮಯದಲ್ಲಿ ಐದಾರು ನಾಯಿಗಳ ಅಟ್ಟಿಸಿಕೊಂಡು ಬಂದಿವೆ, ಮಹಿಳೆ ಗಾಬರಿಯಿಂದ ಸ್ಕೂಟಿ ಚಲಾಯಿಸಿದ್ದು ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮಹಿಳೆಯರು ಹಾಗೂ ಬಾಲಕ ಮೂವರೂ ರಸ್ತೆಗೆ ಬಿದ್ದಿದ್ದಾರೆ.

ಇದೀಗ ಈ ವಿಡಿಯೋ ಎಲ್ಲೆಡೆ ವೈರಲ್ ಆಗುತ್ತಿದೆ. ಮಾಧ್ಯಮದ ಪ್ರಕಾರ, ಮಹಿಳೆ ಮತ್ತು ಮಗುವಿಗೆ ಗಾಯಗಳಾಗಿವೆ. ಬೇರೆ ಯಾವುದೇ ವಾಹನಗಳು ರಸ್ತೆಯಲ್ಲಿ ಬರುವುದು ಮತ್ತು ಹೋಗುವುದು ಕಾಣಿಸದ ಕಾರಣ ನಿರ್ಜನ ಪ್ರದೇಶದಲ್ಲಿ ಘಟನೆ ನಡೆದಂತೆ ತೋರುತ್ತದೆ. ಕಳೆದ ವರ್ಷ ಲಕ್ನೋನಲ್ಲಿ ಇಂತಹ ಘಟನೆಯೊಂದು ನಡೆದಿತ್ತು, ಬೀದಿ ನಾಯಿಯು ವೃದ್ಧೆಯೊಬ್ಬರ ಮೇಲೆ ದಾಳಿ ಮಾಡಿತ್ತು, ಇದರಿಂದಾಗಿ ಅವರು ಸಾವನ್ನಪ್ಪಿದ್ದರು. ಅಗಾಜಿಯಾಬಾದ್‌ನಿಂದಲೂ ಅಂತಹ ಒಂದು ಪ್ರಕರಣ ಬೆಳಕಿಗೆ ಬಂದಿತು, ಅಲ್ಲಿ ಬೀದಿ ನಾಯಿಯು ಮಗುವಿನ ಮೇಲೆ ದಾಳಿ ನಡೆಸಿತ್ತು.

ಮತ್ತಷ್ಟು ಓದಿ: ರಾಜಸ್ಥಾನ: ಸರ್ಕಾರಿ ಆಸ್ಪತ್ರೆಯಲ್ಲಿ ತಾಯಿ ಪಕ್ಕ ಮಲಗಿದ್ದ ಮಗುವನ್ನು ಎಳೆದೊಯ್ದು ಕೊಂದ ಬೀದಿ ನಾಯಿ

ಇದರಿಂದ ಮಗುವಿನ ಮುಖದ ಮೇಲೆ ಗಂಭೀರ ಗಾಯಗಳಾಗಿತ್ತು, ವೈದ್ಯರು ಅವರ ಮುಖಕ್ಕೆ 150 ಹೊಲಿಗೆ ಹಾಕಿದ್ದರು. ಶಿವಮೊಗ್ಗ ಜಿಲ್ಲಾ ಆಸ್ಪತ್ರೆಯಲ್ಲಿ ನಾಯಿಯೊಂದು ನವಜಾತ ಶಿಶುವನ್ನು ಎಳೆದುಕೊಂಡು ಹೋಗುತ್ತಿರುವುದು ಕಂಡುಬಂದಿದೆ. ನಂತರ ನವಜಾತ ಶಿಶು ಶವವಾಗಿ ಪತ್ತೆಯಾಗಿತ್ತು.

ಕಳೆದ ತಿಂಗಳು, ದೆಹಲಿಯ ವಸಂತ್ ಕುಂಜ್‌ನಲ್ಲಿ ಇಬ್ಬರು ಅಪ್ರಾಪ್ತ ಸಹೋದರರನ್ನು ಬೀದಿ ನಾಯಿಗಳು ಕೊಂದು ಹಾಕಿದ್ದವು. ಅಂಕಿಅಂಶಗಳ ಪ್ರಕಾರ, ಕಳೆದ ವರ್ಷ ಕೇರಳದಲ್ಲಿ 20 ಕ್ಕೂ ಹೆಚ್ಚು ಜನರು ರೇಬಿಸ್‌ಗೆ ಬಲಿಯಾಗಿದ್ದಾರೆ. ವಾಸ್ತವವಾಗಿ, ಜನರ ಮೇಲೆ ದಾಳಿ ಮಾಡಿದ್ದಕ್ಕಾಗಿ ನಾಯಿಗಳನ್ನು ಹೊಡೆದು ಸಾಯಿಸಲಾಯಿತು ಮತ್ತು ಸಾರ್ವಜನಿಕವಾಗಿ ಪ್ರದರ್ಶಿಸಲಾಯಿತು. ರಾಜ್ಯದ ಕೆಲವು ಪ್ರದೇಶಗಳಲ್ಲಿ ಹತ್ತಕ್ಕೂ ಹೆಚ್ಚು ಬೀದಿನಾಯಿಗಳು ವಿಷ ಸೇವಿಸಿ ಸತ್ತಿರುವುದು ಕಂಡುಬಂದಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಮಾ 22ರಂದು ಶಾಲಾ-ಕಾಲೇಜು​ ರಜೆ ಬಗ್ಗೆ ಸ್ಪಷ್ಟನೆ ಕೊಟ್ಟ ಶಿಕ್ಷಣ ಸಚಿವ
ಮಾ 22ರಂದು ಶಾಲಾ-ಕಾಲೇಜು​ ರಜೆ ಬಗ್ಗೆ ಸ್ಪಷ್ಟನೆ ಕೊಟ್ಟ ಶಿಕ್ಷಣ ಸಚಿವ
ಲಕ್ನೋ ರಸ್ತೆ ಮಧ್ಯೆ ಕುಳಿತು 20 ನಿಮಿಷ ತಲೆ ಅಲ್ಲಾಡಿಸಿದ ಮಹಿಳೆ!
ಲಕ್ನೋ ರಸ್ತೆ ಮಧ್ಯೆ ಕುಳಿತು 20 ನಿಮಿಷ ತಲೆ ಅಲ್ಲಾಡಿಸಿದ ಮಹಿಳೆ!
ಕರ್ನಾಟಕ ಬಂದ್​: ಫಿಲಂ ಚೇಂಬರ್ ತೆಗೆದುಕೊಂಡ ನಿರ್ಣಯಗಳು ಹೀಗಿವೆ
ಕರ್ನಾಟಕ ಬಂದ್​: ಫಿಲಂ ಚೇಂಬರ್ ತೆಗೆದುಕೊಂಡ ನಿರ್ಣಯಗಳು ಹೀಗಿವೆ
ವಿಧಾನಸಭೆಯಲ್ಲಿ ಮೊಬೈಲ್ ಬಳಸಿದ್ದಕ್ಕೆ ಕೋಪಗೊಂಡ ಬಿಹಾರ ಸಿಎಂ ನಿತೀಶ್ ಕುಮಾರ್
ವಿಧಾನಸಭೆಯಲ್ಲಿ ಮೊಬೈಲ್ ಬಳಸಿದ್ದಕ್ಕೆ ಕೋಪಗೊಂಡ ಬಿಹಾರ ಸಿಎಂ ನಿತೀಶ್ ಕುಮಾರ್
ಗೊತ್ತಿರದ ವಿಷಯದ ಬಗ್ಗೆ ಮಾತಾಡುವ ಜಾಯಮಾನ ನನ್ನದಲ್ಲ: ಪಾಟೀಲ್
ಗೊತ್ತಿರದ ವಿಷಯದ ಬಗ್ಗೆ ಮಾತಾಡುವ ಜಾಯಮಾನ ನನ್ನದಲ್ಲ: ಪಾಟೀಲ್
ಹರಪನಹಳ್ಳಿಯಲ್ಲಿ ಆಲಿಕಲ್ಲು ಸಹಿತ ಮಳೆ: ವರ್ಷದ ಮೊದಲ ಮಳೆಗೆ ಜನರು ಖುಷ್
ಹರಪನಹಳ್ಳಿಯಲ್ಲಿ ಆಲಿಕಲ್ಲು ಸಹಿತ ಮಳೆ: ವರ್ಷದ ಮೊದಲ ಮಳೆಗೆ ಜನರು ಖುಷ್
ಯತ್ನಾಳ್​ರನ್ನು ದೇಶದ್ರೋಹಿ ಎಂದು ಜರಿದ ಕಾಂಗ್ರೆಸ್ ಶಾಸಕ ರಿಜ್ವಾನ್ ಅರ್ಷದ್
ಯತ್ನಾಳ್​ರನ್ನು ದೇಶದ್ರೋಹಿ ಎಂದು ಜರಿದ ಕಾಂಗ್ರೆಸ್ ಶಾಸಕ ರಿಜ್ವಾನ್ ಅರ್ಷದ್
ಹನಿಟ್ರ್ಯಾಪ್​ ಕೇಸ್: ಡಿಕೆಶಿ ವಿರುದ್ಧ ಹೊಸ ಬಾಂಬ್ ಸಿಡಿಸಿದ ಬಿಜೆಪಿ ಶಾಸಕ
ಹನಿಟ್ರ್ಯಾಪ್​ ಕೇಸ್: ಡಿಕೆಶಿ ವಿರುದ್ಧ ಹೊಸ ಬಾಂಬ್ ಸಿಡಿಸಿದ ಬಿಜೆಪಿ ಶಾಸಕ
ಸದನದಲ್ಲಿ ರೋಷಾವೇಶದಿಂದ ಕೂಗಾಡಿದ ಶಾಸಕ ಮುನಿರತ್ನ ನಾಯ್ಡು
ಸದನದಲ್ಲಿ ರೋಷಾವೇಶದಿಂದ ಕೂಗಾಡಿದ ಶಾಸಕ ಮುನಿರತ್ನ ನಾಯ್ಡು
ರಾಜಣ್ಣಗೆ ಮಾತ್ರವಲ್ಲ ಪುತ್ರನಿಗೂ ಹನಿಟ್ರ್ಯಾಪ್​​​​​ ಬಲೆಗೆ ಬೀಳಿಸುವ ಸಂಚು!
ರಾಜಣ್ಣಗೆ ಮಾತ್ರವಲ್ಲ ಪುತ್ರನಿಗೂ ಹನಿಟ್ರ್ಯಾಪ್​​​​​ ಬಲೆಗೆ ಬೀಳಿಸುವ ಸಂಚು!