AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಸ್ಕೂಟಿಯನ್ನು ಅಟ್ಟಿಸಿಕೊಂಡು ಬಂದ ನಾಯಿಗಳು, ಭಯದಲ್ಲಿ ಕಾರಿಗೆ ಡಿಕ್ಕಿ ಹೊಡೆದು ನೆಲಕ್ಕೆ ಬಿದ್ದ ಮಹಿಳೆಯರು

ಎಲ್ಲೆಡೆ ಬೀದಿನಾಯಿಗಳ ಹಾವಳಿ ಹೆಚ್ಚಾಗುತ್ತಿದೆ, ಕೆಲವು ಕಡೆ ರಸ್ತೆಯಲ್ಲಿ ಓಡಾಡುತ್ತಿರುವ ಒಂಟಿ ಮಕ್ಕಳ ಮೇಲೆ ದಾಳಿ ನಡೆಸಿ ಅವರ ಸಾವಿಗೆ ಕಾರಣವಾಗಿದೆ.

Video: ಸ್ಕೂಟಿಯನ್ನು ಅಟ್ಟಿಸಿಕೊಂಡು ಬಂದ ನಾಯಿಗಳು, ಭಯದಲ್ಲಿ ಕಾರಿಗೆ ಡಿಕ್ಕಿ ಹೊಡೆದು ನೆಲಕ್ಕೆ ಬಿದ್ದ ಮಹಿಳೆಯರು
ಸ್ಕೂಟಿ ಅಪಘಾತImage Credit source: Times Now
ನಯನಾ ರಾಜೀವ್
|

Updated on: Apr 04, 2023 | 10:45 AM

Share

ಎಲ್ಲೆಡೆ ಬೀದಿನಾಯಿಗಳ ಹಾವಳಿ ಹೆಚ್ಚಾಗುತ್ತಿದೆ, ಕೆಲವು ಕಡೆ ರಸ್ತೆಯಲ್ಲಿ ಓಡಾಡುತ್ತಿರುವ ಒಂಟಿ ಮಕ್ಕಳ ಮೇಲೆ ದಾಳಿ ನಡೆಸಿ ಅವರ ಸಾವಿಗೆ ಕಾರಣವಾಗಿದೆ. ಒಡಿಶಾದಲ್ಲಿ ಬೀದಿನಾಯಿಗಳಿಂದಾಗಿ ಮಕ್ಕಳೊಂದಿಗೆ ಸ್ಕೂಟಿಯಲ್ಲಿ ತೆರಳುತ್ತಿದ್ದ ಇಬ್ಬರು ಮಹಿಳೆಯರು ಅಪಘಾತಕ್ಕೀಡಾಗಿದ್ದು, ಘಟನೆಯ ವಿಡಿಯೋ ಸಿಸಿಟಿವಿಯಲ್ಲಿ ಸೆರೆಯಾಗಿದೆ ಇಬ್ಬರು ಮಹಿಳೆಯರು ಹಾಗೂ ಓರ್ವ ಬಾಲಕ ಸ್ಕೂಟಿಯಲ್ಲಿ ತೆರಳುತ್ತಿರುವ ಸಮಯದಲ್ಲಿ ಐದಾರು ನಾಯಿಗಳ ಅಟ್ಟಿಸಿಕೊಂಡು ಬಂದಿವೆ, ಮಹಿಳೆ ಗಾಬರಿಯಿಂದ ಸ್ಕೂಟಿ ಚಲಾಯಿಸಿದ್ದು ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮಹಿಳೆಯರು ಹಾಗೂ ಬಾಲಕ ಮೂವರೂ ರಸ್ತೆಗೆ ಬಿದ್ದಿದ್ದಾರೆ.

ಇದೀಗ ಈ ವಿಡಿಯೋ ಎಲ್ಲೆಡೆ ವೈರಲ್ ಆಗುತ್ತಿದೆ. ಮಾಧ್ಯಮದ ಪ್ರಕಾರ, ಮಹಿಳೆ ಮತ್ತು ಮಗುವಿಗೆ ಗಾಯಗಳಾಗಿವೆ. ಬೇರೆ ಯಾವುದೇ ವಾಹನಗಳು ರಸ್ತೆಯಲ್ಲಿ ಬರುವುದು ಮತ್ತು ಹೋಗುವುದು ಕಾಣಿಸದ ಕಾರಣ ನಿರ್ಜನ ಪ್ರದೇಶದಲ್ಲಿ ಘಟನೆ ನಡೆದಂತೆ ತೋರುತ್ತದೆ. ಕಳೆದ ವರ್ಷ ಲಕ್ನೋನಲ್ಲಿ ಇಂತಹ ಘಟನೆಯೊಂದು ನಡೆದಿತ್ತು, ಬೀದಿ ನಾಯಿಯು ವೃದ್ಧೆಯೊಬ್ಬರ ಮೇಲೆ ದಾಳಿ ಮಾಡಿತ್ತು, ಇದರಿಂದಾಗಿ ಅವರು ಸಾವನ್ನಪ್ಪಿದ್ದರು. ಅಗಾಜಿಯಾಬಾದ್‌ನಿಂದಲೂ ಅಂತಹ ಒಂದು ಪ್ರಕರಣ ಬೆಳಕಿಗೆ ಬಂದಿತು, ಅಲ್ಲಿ ಬೀದಿ ನಾಯಿಯು ಮಗುವಿನ ಮೇಲೆ ದಾಳಿ ನಡೆಸಿತ್ತು.

ಮತ್ತಷ್ಟು ಓದಿ: ರಾಜಸ್ಥಾನ: ಸರ್ಕಾರಿ ಆಸ್ಪತ್ರೆಯಲ್ಲಿ ತಾಯಿ ಪಕ್ಕ ಮಲಗಿದ್ದ ಮಗುವನ್ನು ಎಳೆದೊಯ್ದು ಕೊಂದ ಬೀದಿ ನಾಯಿ

ಇದರಿಂದ ಮಗುವಿನ ಮುಖದ ಮೇಲೆ ಗಂಭೀರ ಗಾಯಗಳಾಗಿತ್ತು, ವೈದ್ಯರು ಅವರ ಮುಖಕ್ಕೆ 150 ಹೊಲಿಗೆ ಹಾಕಿದ್ದರು. ಶಿವಮೊಗ್ಗ ಜಿಲ್ಲಾ ಆಸ್ಪತ್ರೆಯಲ್ಲಿ ನಾಯಿಯೊಂದು ನವಜಾತ ಶಿಶುವನ್ನು ಎಳೆದುಕೊಂಡು ಹೋಗುತ್ತಿರುವುದು ಕಂಡುಬಂದಿದೆ. ನಂತರ ನವಜಾತ ಶಿಶು ಶವವಾಗಿ ಪತ್ತೆಯಾಗಿತ್ತು.

ಕಳೆದ ತಿಂಗಳು, ದೆಹಲಿಯ ವಸಂತ್ ಕುಂಜ್‌ನಲ್ಲಿ ಇಬ್ಬರು ಅಪ್ರಾಪ್ತ ಸಹೋದರರನ್ನು ಬೀದಿ ನಾಯಿಗಳು ಕೊಂದು ಹಾಕಿದ್ದವು. ಅಂಕಿಅಂಶಗಳ ಪ್ರಕಾರ, ಕಳೆದ ವರ್ಷ ಕೇರಳದಲ್ಲಿ 20 ಕ್ಕೂ ಹೆಚ್ಚು ಜನರು ರೇಬಿಸ್‌ಗೆ ಬಲಿಯಾಗಿದ್ದಾರೆ. ವಾಸ್ತವವಾಗಿ, ಜನರ ಮೇಲೆ ದಾಳಿ ಮಾಡಿದ್ದಕ್ಕಾಗಿ ನಾಯಿಗಳನ್ನು ಹೊಡೆದು ಸಾಯಿಸಲಾಯಿತು ಮತ್ತು ಸಾರ್ವಜನಿಕವಾಗಿ ಪ್ರದರ್ಶಿಸಲಾಯಿತು. ರಾಜ್ಯದ ಕೆಲವು ಪ್ರದೇಶಗಳಲ್ಲಿ ಹತ್ತಕ್ಕೂ ಹೆಚ್ಚು ಬೀದಿನಾಯಿಗಳು ವಿಷ ಸೇವಿಸಿ ಸತ್ತಿರುವುದು ಕಂಡುಬಂದಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್