ವಿಡಿಯೋ: ಹತ್ತಕ್ಕೂ ಹೆಚ್ಚು ಬೀದಿ ನಾಯಿಗಳಿಂದ ದಾಳಿ, ಚಪ್ಪಲಿಯನ್ನು ಬೀಸುತ್ತಾ ತಪ್ಪಿಸಿಕೊಂಡ ಮಹಿಳೆ

ಬೆಳಗ್ಗೆ ವಾಕಿಂಗ್​ಗೆ ತೆರಳಿದ್ದ ಮಹಿಳೆ ಮೇಲೆ ಹತ್ತಕ್ಕೂ ಹೆಚ್ಚು ಬೀದಿ ನಾಯಿಗಳು ದಾಳಿ ನಡೆಸಿದ್ದು, ಮಹಿಳೆ ಅದರಿಂದ ತಪ್ಪಿಸಿಕೊಂಡಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.

ವಿಡಿಯೋ: ಹತ್ತಕ್ಕೂ ಹೆಚ್ಚು ಬೀದಿ ನಾಯಿಗಳಿಂದ ದಾಳಿ, ಚಪ್ಪಲಿಯನ್ನು ಬೀಸುತ್ತಾ ತಪ್ಪಿಸಿಕೊಂಡ ಮಹಿಳೆ
ನಾಯಿ ದಾಳಿ
Follow us
|

Updated on: Jun 23, 2024 | 10:12 AM

ಮಹಿಳೆಯೊಬ್ಬರ ಮೇಲೆ ಹತ್ತಕ್ಕೂ ಹೆಚ್ಚು ಬೀದಿ ನಾಯಿ(Stray Dog)ಗಳು ದಾಳಿ ನಡೆಸಿದ್ದು, ಅವರು ಭಯಗೊಂಡಿದ್ದರೂ ಕೂಡ ಚಪ್ಪಲಿ ಬೀಸುತ್ತಾ ದಾಳಿಯಿಂದ ತಪ್ಪಿಸಿಕೊಂಡಿರುವ ವಿಡಿಯೋ ವೈರಲ್ ಆಗಿದೆ. ಹೈದರಾಬಾದ್​ನ ಮಣಿಕೊಂಡದ ಚಿತ್ರಪುರಿ ಹಿಲ್ಸ್​ನಲ್ಲಿ ಬೆಳಗಿನ ಜಾವ ವಾಕಿಂಗ್ ಮಾಡುತ್ತಿದ್ದ ವೇಳೆ ಮಹಿಳೆಯೊಬ್ಬರ ಮೇಲೆ 10ಕ್ಕೂ ಹೆಚ್ಚು ಬೀದಿ ನಾಯಿಗಳು ದಾಳಿ ನಡೆಸಿದ್ದವು.

ಬೆಳಗ್ಗೆ 6 ಗಂಟೆ ಸುಮಾರಿಗೆ ಈ ದಾಳಿ ನಡೆದಿದ್ದು, ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಮಹಿಳೆ ತನ್ನ ಕೈಗಳಿಂದ ಚಪ್ಪಲಿಯನ್ನು ಬಲವಾಗಿ ನಾಯಿಗಳತ್ತ ಬೀಸುತ್ತಿರುವುದು ವಿಡಿಯೋದಲ್ಲಿ ಕಾಣಬಹುದು. ಇದೊಂದು ಅಗ್ನಿ ಪರೀಕ್ಷೆಯಂತಿತ್ತು, ಒಂದು ಕ್ಷಣ ಮೈಮರೆತರೂ ನಾಯಿಗಳು ಕಚ್ಚುತ್ತಿದ್ದವು.

ಅವರು ಒಮ್ಮೆ ನೆಲದ ಮೇಲೆ ಬೀಳುತ್ತಾರೆ, ಬಳಿಕ ಮತ್ತೆ ನಾಯಿಗಳು ಕಚ್ಚದಂತೆ ತಡೆದು ಮತ್ತೆ ಎದ್ದುನಿಂತು ಚಪ್ಪಲಿ ಬೀಸಲು ಶುರು ಮಾಡುತ್ತಾರೆ. ಹೇಗೋ ಮಾಡಿ ನಾಯಿಗಳ ದಾಳಿಯನ್ನು ತಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಇನ್ನೂ ನಾಯಿಗಳು ಓಡಿಸಿಕೊಂಡು ಬರುವಾಗ ಮಧ್ಯೆ ಬೈಕೊಂದು ಬರುತ್ತದೆ ಆಕೆ ಬೈಕ್ ಸಮೀಪ ಹೋದಾಗ ನಾಯಿಗಳು ವಾಪಸ್ ಹೋಗುತ್ತವೆ.

ಮತ್ತಷ್ಟು ಓದಿ: ಕಲಬುರಗಿ: ಮಿಸ್ಬಾನಗರದಲ್ಲಿ ಐದು ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ!

ಘಟನೆಯ ಕುರಿತು ಸ್ಥಳೀಯ ಅಧಿಕಾರಿಗಳು ಎಚ್ಚೆತ್ತುಕೊಂಡಿದ್ದು, ಈ ಪ್ರದೇಶದಲ್ಲಿ ಬೀದಿ ನಾಯಿಗಳ ಸಮಸ್ಯೆಯನ್ನು ಪರಿಹರಿಸಲು ಹೆಚ್ಚಿನ ಕ್ರಮಗಳನ್ನು ಕೈಗೊಳ್ಳುವಂತೆ ಸ್ಥಳೀಯರು ಒತ್ತಾಯಿಸಿದ್ದಾರೆ. ಮುಂಜಾನೆ ಹೊರಗಡೆ ತೆರಳುವ ನಿವಾಸಿಗಳ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಅಧಿಕಾರಿಗಳು ತಕ್ಷಣವೇ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು.

ತಮ್ಮ ಪತ್ನಿ ದಾಳಿಯಿಂದ ಬುದುಕುಳಿದಿರುವುದೇ ಸಮಾಧಾನ ಎಂದು ಅವರ ಪತಿ ಹೇಳಿದ್ದಾರೆ.ಕಾಲೋನಿ ಆವರಣದಲ್ಲಿ ಬೀದಿ ನಾಯಿಗಳಿಗೆ ಆಹಾರವನ್ನು ನೀಡುವುದನ್ನು ನಿಲ್ಲಿಸುವಂತೆ ನಿವಾಸಿಗಳನ್ನು ಒತ್ತಾಯಿಸಿದರು.

ಇಂತಹ ಘಟನೆಗಳು ಸಂಭವಿಸುವ ಅಪಾಯವನ್ನು ಕಡಿಮೆ ಮಾಡಲು ಗೇಟ್‌ನ ಹೊರಗೆ ಯಾವುದೇ ಆಹಾರ ನೀಡಬೇಕೆಂದು ಅವರು ಸಲಹೆ ನೀಡಿದರು. ದೊಡ್ಡವರಿಗೆ ನಾಯಿಗಳ ದಾಳಿಯಿಂದ ತಪ್ಪಿಸಿಕೊಳ್ಳುವುದು ಕಷ್ಟ ಇನ್ನು ಮಕ್ಕಳ ಮೇಲೆ ದಾಳಿ ನಡೆದರೆ ಹೇಗೆ ತಪ್ಪಿಸಿಕೊಂಡಾರು ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ತಾಜಾ ಸುದ್ದಿ
ಭಾರೀ ಮಳೆಯಿಂದ ಟ್ರಾಫಿಕ್ ಮಧ್ಯೆ 8 ಅಡಿ ಉದ್ದದ ಮೊಸಳೆ ಪ್ರತ್ಯಕ್ಷ!
ಭಾರೀ ಮಳೆಯಿಂದ ಟ್ರಾಫಿಕ್ ಮಧ್ಯೆ 8 ಅಡಿ ಉದ್ದದ ಮೊಸಳೆ ಪ್ರತ್ಯಕ್ಷ!
ಸಿದ್ದರಾಮಯ್ಯ ಮೇಲಿನ ವೈರತ್ವ ಮಗನ ಮೇಲೆ ಸಾಧಿಸುವುದು ಸರಿಯಲ್ಲ:ಭೈರತಿ ಸುರೇಶ್
ಸಿದ್ದರಾಮಯ್ಯ ಮೇಲಿನ ವೈರತ್ವ ಮಗನ ಮೇಲೆ ಸಾಧಿಸುವುದು ಸರಿಯಲ್ಲ:ಭೈರತಿ ಸುರೇಶ್
ಶೇ 60 ರಷ್ಟು ಕನ್ನಡ ಕಡ್ಡಾಯ; ಸರ್ಕಾರದಿಂದ  ಸೂಕ್ತ ಕ್ರಮ: ನಾರಾಯಣಗೌಡ, ಕರವೇ
ಶೇ 60 ರಷ್ಟು ಕನ್ನಡ ಕಡ್ಡಾಯ; ಸರ್ಕಾರದಿಂದ  ಸೂಕ್ತ ಕ್ರಮ: ನಾರಾಯಣಗೌಡ, ಕರವೇ
ಪ್ರಜ್ವಲ್​ ಮಾತಾಡಿಸಲು ಜೈಲಿಗೆ ಬಂದ ಭವಾನಿ ಮಾಧ್ಯಮಗಳಿಗೆ ಮುಖ ತೋರಿಸಲಿಲ್ಲ!
ಪ್ರಜ್ವಲ್​ ಮಾತಾಡಿಸಲು ಜೈಲಿಗೆ ಬಂದ ಭವಾನಿ ಮಾಧ್ಯಮಗಳಿಗೆ ಮುಖ ತೋರಿಸಲಿಲ್ಲ!
ಸ್ಟಿಕ್ ಹಿಡಿದು ಕುಂಟುತ್ತ ಪ್ರಜ್ವಲ್​ ನೋಡಲು ಬಂದ ಭವಾನಿ ರೇವಣ್ಣ
ಸ್ಟಿಕ್ ಹಿಡಿದು ಕುಂಟುತ್ತ ಪ್ರಜ್ವಲ್​ ನೋಡಲು ಬಂದ ಭವಾನಿ ರೇವಣ್ಣ
ರಾಹುಲ್ ಎಂದಿಗೂ ಹಿಂದೂ ವಿರೋಧಿಯಲ್ಲ; ಪ್ರಿಯಾಂಕಾ ಗಾಂಧಿ ಸ್ಪಷ್ಟನೆ
ರಾಹುಲ್ ಎಂದಿಗೂ ಹಿಂದೂ ವಿರೋಧಿಯಲ್ಲ; ಪ್ರಿಯಾಂಕಾ ಗಾಂಧಿ ಸ್ಪಷ್ಟನೆ
ಪಕ್ಷದ ಶಿಸ್ತು ಮೀರುವವರಿಗೆ ಶೋಕಾಸ್ ನೋಟೀಸ್ ನೀಡಲಾಗುವುದು: ಡಿಕೆ ಶಿವಕುಮಾರ್
ಪಕ್ಷದ ಶಿಸ್ತು ಮೀರುವವರಿಗೆ ಶೋಕಾಸ್ ನೋಟೀಸ್ ನೀಡಲಾಗುವುದು: ಡಿಕೆ ಶಿವಕುಮಾರ್
ಧೂಮಪಾನ ಕ್ಯಾನ್ಸರ್ ಗೆ ಮೂಲ ಅಂತ ಗೊತ್ತಿದ್ದರೂ ಸಿಗರೇಟು ಸೇದುತ್ತೇವೆ: ಸಿಎಂ
ಧೂಮಪಾನ ಕ್ಯಾನ್ಸರ್ ಗೆ ಮೂಲ ಅಂತ ಗೊತ್ತಿದ್ದರೂ ಸಿಗರೇಟು ಸೇದುತ್ತೇವೆ: ಸಿಎಂ
ದರ್ಶನ್ ನೋಡಲು ಪರಪ್ಪನ ಅಗ್ರಹಾರ ಜೈಲಿಗೆ ಬಂದು ಕಣ್ಣೀರು ಹಾಕಿದ ತಾಯಿ ಮೀನಾ
ದರ್ಶನ್ ನೋಡಲು ಪರಪ್ಪನ ಅಗ್ರಹಾರ ಜೈಲಿಗೆ ಬಂದು ಕಣ್ಣೀರು ಹಾಕಿದ ತಾಯಿ ಮೀನಾ
ವರದಕ್ಷಿಣೆಗಾಗಿ ಹೆಂಡತಿ ಕತೆಯನ್ನು ಮುಗಿಸಿದನೇ ಪೊಲೀಸ್ ಕಾನ್​ಸ್ಟೇಬಲ್?
ವರದಕ್ಷಿಣೆಗಾಗಿ ಹೆಂಡತಿ ಕತೆಯನ್ನು ಮುಗಿಸಿದನೇ ಪೊಲೀಸ್ ಕಾನ್​ಸ್ಟೇಬಲ್?