AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Hyderabad: ರೋಗಿ ಇಲ್ಲದಿದ್ರೂ ಎಮರ್ಜೆನ್ಸಿ ಸೈರನ್ ಹಾಕಿ, ಜ್ಯೂಸ್​ ಅಂಗಡಿ ಮುಂದೆ ನಿಂತ ಆ್ಯಂಬುಲೆನ್ಸ್​ ಚಾಲಕ, ಪೊಲೀಸರಿಂದ ತರಾಟೆ

ಆ್ಯಂಬುಲೆನ್ಸ್(Ambulance) ಚಾಲಕನೊಬ್ಬ ಉಪಾಹಾರಕ್ಕೆ ತೆರಳಲು ಸೈರನ್ ದುರ್ಬಳಕೆ ಮಾಡಿಕೊಂಡಿರುವ ಘಟನೆ ಹೈದರಾಬಾದ್​ನಲ್ಲಿ ನಡೆದಿದ್ದು,  ವಿಡಿಯೋ  ಎಲ್ಲೆಡೆ ವೈರಲ್ ಆಗಿದೆ.

Hyderabad: ರೋಗಿ ಇಲ್ಲದಿದ್ರೂ ಎಮರ್ಜೆನ್ಸಿ ಸೈರನ್ ಹಾಕಿ, ಜ್ಯೂಸ್​ ಅಂಗಡಿ ಮುಂದೆ ನಿಂತ ಆ್ಯಂಬುಲೆನ್ಸ್​ ಚಾಲಕ, ಪೊಲೀಸರಿಂದ ತರಾಟೆ
ಆ್ಯಂಬುಲೆನ್ಸ್​ ಚಾಲಕ
ನಯನಾ ರಾಜೀವ್
|

Updated on: Jul 12, 2023 | 8:37 AM

Share

ಆ್ಯಂಬುಲೆನ್ಸ್(Ambulance) ಚಾಲಕನೊಬ್ಬ ಉಪಾಹಾರಕ್ಕೆ ತೆರಳಲು ಸೈರನ್ ದುರ್ಬಳಕೆ ಮಾಡಿಕೊಂಡಿರುವ ಘಟನೆ ಹೈದರಾಬಾದ್​ನಲ್ಲಿ ನಡೆದಿದ್ದು,  ವಿಡಿಯೋ  ಎಲ್ಲೆಡೆ ವೈರಲ್ ಆಗಿದೆ. ಸೈರನ್ ಹಾಕಿಕೊಂಡು ಬರುತ್ತಿದ್ದ ಆ್ಯಂಬುಲೆನ್ಸ್​ನ್ನು ನೋಡಿದ ಪೊಲೀಸರು ಎಮರ್ಜೆನ್ಸಿ ಎಂದು ಟ್ರಾಫಿಕ್ ಕ್ಲಿಯರ್ ಮಾಡಿಸಿದ್ದರು. ಆದರೆ ಆತ ಆಸ್ಪತ್ರೆಗೆ ಹೋಗುವ ಬದಲು ಹೋಟೆಲ್ ಬಳಿ ಗಾಡಿಯನ್ನು ನಿಲ್ಲಿಸಿದ್ದ.

ಟ್ರಾಫಿಕ್ ಕ್ಲಿಯರೆನ್ಸ್ ಪಡೆಯಲು ಮಾತ್ರ ಚಾಲಕ ಎಮರ್ಜೆನ್ಸಿ ಸೈರನ್ ಹಾಕಿದ್ದ ಎಂದು ತಿಳಿದುಬಂದಿದೆ. ಅಲ್ಲದೇ ಸಂಚಾರ ನಿಯಮ ಉಲ್ಲಂಘನೆಯನ್ನು ಮರೆಮಾಚಲು ಯತ್ನಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಯಾವುದೇ ಎಮರ್ಜೆನ್ಸಿ ಇರಲಿಲ್ಲ ಮತ್ತು ಆಂಬ್ಯುಲೆನ್ಸ್‌ನಲ್ಲಿ ರೋಗಿಯಿಲ್ಲ ಎಂದು ಅವರು ಹೇಳಿದರು. ವಾಹನದಲ್ಲಿ ಇಬ್ಬರು ನರ್ಸ್‌ಗಳು ಇದ್ದರು ಎಂಬುದು ತಿಳಿದುಬಂದಿದೆ.

ಆ್ಯಂಬುಲೆನ್ಸ್​ ಜನನಿಬಿಡ ಬಶೀರ್‌ಬಾಗ್ ಜಂಕ್ಷನ್ ಮೂಲಕ ಹಾದು ಹೋಗುತ್ತಿದ್ದಾಗ ಈ ಘಟನೆ ಸಂಭವಿಸಿದೆ. ಚಾಲಕನ ಸೈರಲ್ ಹಾಕುತ್ತಿದ್ದಂತೆ ಟ್ರಾಫಿಕ್ ಪೊಲೀಸರು ಬೇರೆ ವಾಹನಗಳನ್ನು ತಡೆದು ಆಂಬ್ಯುಲೆನ್ಸ್​ಗೆ ದಾರಿ ಮಾಡಿಕೊಟ್ಟಿದ್ದರು. ಆದರೆ ಟ್ರಾಫಿಕ್ ಸಿಗ್ನಲ್​ನಿಂದ 100 ಮೀಟರ್ ದೂರ ಹೋಗುತ್ತಿದ್ದಂತೆ ಹೋಟೆಲ್ ಬಳಿ ಗಾಡಿ ನಿಲ್ಲಿಸಿದ್ದು ಕಂಡುಬಂತು, ನಂತರ ಪೊಲೀಸರು ಚಾಲಕನ್ನು ವಿಚಾರಣೆಗೆ ಒಳಪಡಿಸಿದಾಗ ಸತ್ಯ ಹೊರಬಿದ್ದಿದೆ.

ವಿಡಿಯೋದಲ್ಲಿ ಚಾಲಕನ ಕೈಯಲ್ಲಿ ಜ್ಯೂಸ್ ಬಾಟಲಿಯಿದ್ದು, ಇಬ್ಬರು ನರ್ಸ್​ಗೆ ಆರೋಗ್ಯ ಸರಿ ಇಲ್ಲ ಎಂದು ಹೇಳುವುದನ್ನು ಕಾಣಬಹುದು.

ಮತ್ತಷ್ಟು ಓದಿ: ಸೆಲ್ಫಿಗಾಗಿ ರಸ್ತೆಯಲ್ಲೇ ಪ್ರವಾಸಿಗರ ಹುಚ್ಚಾಟ,​​​ ಆ್ಯಂಬುಲೆನ್ಸ್​​ನಲ್ಲಿದ್ದ ರೋಗಿ ಪರದಾಟ

ಕಾಲಹರಣ ಮಾಡಲು ಸೈರಲ್ ದುರುಪಯೋಗ ಪಡಿಸಿಕೊಳ್ಳುತ್ತೀರಾ, ರೋಗಿ ಎಲ್ಲಿ, ತಿಂಡಿ ತಿನ್ನಲು ಆ್ಯಂಬುಲೆನ್ಸ್​ ಸೈರಲ್ ದುರ್ಬಳಕೆ ಮಾಡಿಕೊಂಡಿದ್ದೀರಾ ಎಂದು ಪೊಲೀಸರು ಪ್ರಶ್ನಿಸಿದ್ದಾರೆ. ಈ ಕುರಿತು ಆಸ್ಪತ್ರೆಗೆ ಸೂಚನೆ ನೀಡುತ್ತೇವೆ, ಮತ್ತೆ ಇದೇ ರೀತಿಯ ಗಂಭೀರ ಆರೋಪಗಳು ಕೇಳಿಬಂದರೆ ಕ್ರಿಮಿನಲ್ ಮೊಕದ್ದಮೆ ದಾಖಲಿಸುತ್ತೇವೆ ಎಂದು ಡಿಜಿಪಿ ಅಂಜನಿ ಕುಮಾರ್ ತಿಳಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ