AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿಕ್ಷಣದಲ್ಲಿ ದೊಡ್ಡ ಬದಲಾವಣೆಗಾಗಿ ಗುಜರಾತ್‌ನ ವಿದ್ಯಾ ಸಮೀಕ್ಷಾ ಕೇಂದ್ರವನ್ನು ಅಧ್ಯಯನ ಮಾಡುವಂತೆ ರಾಜ್ಯಗಳಿಗೆ ಮೋದಿ ಸೂಚನೆ

ಗುಜರಾತ್ ಎಲ್ಲಾ ಕ್ಷೇತ್ರಗಳಲ್ಲಿ ಯಶಸ್ಸು ಮತ್ತು ಅಭಿವೃದ್ಧಿಯನ್ನು ಕಂಡಿರುವುದು ಹೆಮ್ಮೆ ತಂದಿದೆ. ನಿನ್ನೆ ಗಾಂಧಿನಗರದ ವಿದ್ಯಾ ಸಮೀಕ್ಷಾ ಕೇಂದ್ರದಲ್ಲಿ ನಾನು ಇದನ್ನು ಅನುಭವಿಸಿದೆ. ನಮ್ಮ ಸರ್ಕಾರಿ ಪ್ರಾಥಮಿಕ ಶಾಲೆಗೆ ಇಂತಹ ಬೃಹತ್ ತಂತ್ರಜ್ಞಾನವನ್ನು ಬಳಸಿರುವುದು ಅಚ್ಚರಿಯುಂಟುಮಾಡಿದೆ ಎಂದು ಮೋದಿ ಹೇಳಿದ್ದಾರೆ.

ಶಿಕ್ಷಣದಲ್ಲಿ ದೊಡ್ಡ ಬದಲಾವಣೆಗಾಗಿ ಗುಜರಾತ್‌ನ ವಿದ್ಯಾ ಸಮೀಕ್ಷಾ ಕೇಂದ್ರವನ್ನು ಅಧ್ಯಯನ ಮಾಡುವಂತೆ ರಾಜ್ಯಗಳಿಗೆ ಮೋದಿ ಸೂಚನೆ
ನರೇಂದ್ರ ಮೋದಿ
Follow us
TV9 Web
| Updated By: ರಶ್ಮಿ ಕಲ್ಲಕಟ್ಟ

Updated on: Apr 19, 2022 | 2:32 PM

ದೆಹಲಿ: ಗಾಂಧಿನಗರದಲ್ಲಿರುವ ವಿದ್ಯಾ ಸಮೀಕ್ಷಾ ಕೇಂದ್ರವು (Vidya Samiksha Kendra) ದೇಶಾದ್ಯಂತ ಶಿಕ್ಷಣ ಕ್ಷೇತ್ರದಲ್ಲಿ ಗಣನೀಯ ಬದಲಾವಣೆಗಳನ್ನು ತರಬಹುದು ಎಂದು ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಮಂಗಳವಾರ ಹೇಳಿದ್ದಾರೆ. ಗುಜರಾತ್‌ನ (Gujarat) ಬನಸ್ಕಾಂತ ಜಿಲ್ಲೆಯ ದಿಯೋದರ್‌ನಲ್ಲಿರುವ ಬನಾಸ್ ಡೈರಿ ಸಂಕುಲದಲ್ಲಿ ಬಹು ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿದ ಪ್ರಧಾನಿ, ವಿದ್ಯಾ ಸಮೀಕ್ಷಾ ಕೇಂದ್ರದಂತಹ ಆಧುನಿಕ ವ್ಯವಸ್ಥೆಯಿಂದ ದೇಶದ ಮಕ್ಕಳು ಪ್ರಯೋಜನ ಪಡೆಯುವ ಮೂಲಕ ಭಾರತಕ್ಕೆ ಉಜ್ವಲ ಭವಿಷ್ಯವನ್ನು ಖಾತ್ರಿಪಡಿಸುತ್ತಾರೆ ಎಂದರು. “ಗುಜರಾತ್ ಎಲ್ಲಾ ಕ್ಷೇತ್ರಗಳಲ್ಲಿ ಯಶಸ್ಸು ಮತ್ತು ಅಭಿವೃದ್ಧಿಯನ್ನು ಕಂಡಿರುವುದು ಹೆಮ್ಮೆ ತಂದಿದೆ. ನಿನ್ನೆ ಗಾಂಧಿನಗರದ ವಿದ್ಯಾ ಸಮೀಕ್ಷಾ ಕೇಂದ್ರದಲ್ಲಿ ನಾನು ಇದನ್ನು ಅನುಭವಿಸಿದೆ. ನಮ್ಮ ಸರ್ಕಾರಿ ಪ್ರಾಥಮಿಕ ಶಾಲೆಗೆ ಇಂತಹ ಬೃಹತ್ ತಂತ್ರಜ್ಞಾನವನ್ನು ಬಳಸಿರುವುದು ಅಚ್ಚರಿಯುಂಟುಮಾಡಿದೆ. ಈ ಕ್ಷೇತ್ರದೊಂದಿಗೆ ನನಗೆ ಮೊದಲಿನಿಂದಲೂ ಒಡನಾಟವಿದೆ, ಆದರೆ ನಿನ್ನೆ ನಾನು ವಿಶೇಷವಾಗಿ ಗಾಂಧಿನಗರಕ್ಕೆ ಇದನ್ನು ನೋಡಲು ಹೋಗಿದ್ದೆ ”ಎಂದು ಅವರು ಹೇಳಿದರು. ವಿದ್ಯಾ ಸಮೀಕ್ಷಾ ಕೇಂದ್ರವು ದೇಶಾದ್ಯಂತ ಶಿಕ್ಷಣ ಕ್ಷೇತ್ರದಲ್ಲಿ ದೊಡ್ಡ ಬದಲಾವಣೆಗಳನ್ನು ತರಬಲ್ಲದು ಎಂದು ಪ್ರಧಾನಿ ಒತ್ತಿ ಹೇಳಿದರು. “ವಿದ್ಯಾ ಸಮೀಕ್ಷಾ ಕೇಂದ್ರವನ್ನು ಅಧ್ಯಯನ ಮಾಡಲು ನಾನು ಭಾರತ ಸರ್ಕಾರದ ಸಂಬಂಧಿಸಿದ ಸಚಿವಾಲಯಗಳು ಮತ್ತು ಅಧಿಕಾರಿಗಳನ್ನು ಕೇಳುತ್ತೇನೆ. ವಿವಿಧ ರಾಜ್ಯಗಳ ಸಂಬಂಧಪಟ್ಟ ಇಲಾಖೆಗಳು ಸಹ ಗಾಂಧಿ ನಗರಕ್ಕೆ ಬಂದು ಉಪಕ್ರಮವನ್ನು ಅಧ್ಯಯನ ಮಾಡಬೇಕು” ಎಂದು ಪ್ರಧಾನಿ ಮೋದಿ ಹೇಳಿದರು.

ತಮ್ಮ ತವರು ರಾಜ್ಯ ಗುಜರಾತ್‌ಗೆ ಮೂರು ದಿನಗಳ ಭೇಟಿಗಾಗಿ ಸೋಮವಾರ ಅಹಮದಾಬಾದ್‌ಗೆ ಆಗಮಿಸಿದ ಪ್ರಧಾನಿ, ಬನಾಸ್ ಡೈರಿಯನ್ನು ಶ್ಲಾಘಿಸಿದರು ಮತ್ತು ಸ್ಥಳೀಯ ರೈತರ ಆದಾಯವನ್ನು ಹೆಚ್ಚಿಸಲು ಇತರ ಸಂಪನ್ಮೂಲಗಳನ್ನು ಬಳಸಬಹುದು ಎಂದು ಇದು ಸಾಬೀತುಪಡಿಸಿದೆ ಎಂದು ಹೇಳಿದರು.

“ಬಹುಶಃ ನನ್ನ ಜೀವನದಲ್ಲಿ ಮೊದಲ ಬಾರಿಗೆ, ಎರಡು ಲಕ್ಷಕ್ಕೂ ಹೆಚ್ಚು ತಾಯಂದಿರು ಮತ್ತು ಸಹೋದರಿಯರು ನನ್ನನ್ನು ಮತ್ತು ನಮ್ಮೆಲ್ಲರನ್ನು ಇಲ್ಲಿ ಆಶೀರ್ವದಿಸುತ್ತಿದ್ದಾರೆ. ತಾಯಂದಿರು ಮತ್ತು ಸಹೋದರಿಯರನ್ನು ಸಬಲೀಕರಣಗೊಳಿಸುವಾಗ ಗ್ರಾಮದ ಆರ್ಥಿಕತೆಯನ್ನು ಹೇಗೆ ಬಲಪಡಿಸುವುದು ಮತ್ತು ಸ್ವಾವಲಂಬಿ ಭಾರತವನ್ನು ಹೆಚ್ಚಿಸುವ ಸಹಕಾರಿ ಆಂದೋಲನಕ್ಕೆ ಈ ಡೈರಿ ಭಾರತಕ್ಕೆ ಉದಾಹರಣೆಯಾಗಿದೆ. ಅದನ್ನೆಲ್ಲ ಇಲ್ಲಿ ನೇರವಾಗಿ ಅನುಭವಿಸಬಹುದು” ಎಂದು ಪ್ರಧಾನಿ ಮೋದಿ ಹೇಳಿದರು.

“ಡೈರಿ ವಿಸ್ತರಣೆಗೆ ಬನಾಸ್ ಡೈರಿ ಸಂಕುಲ್, ಚೀಸ್ ಮತ್ತು ವೇ ಪ್ಲಾಂಟ್ ಪ್ರಮುಖವಾಗಿವೆ ಆದರೆ ಸ್ಥಳೀಯ ರೈತರ ಆದಾಯವನ್ನು ಹೆಚ್ಚಿಸಲು ಇತರ ಸಂಪನ್ಮೂಲಗಳನ್ನು ಬಳಸಬಹುದು ಎಂದು ಇದು ಸಾಬೀತುಪಡಿಸಿದೆ” ಎಂದು ಅವರು ಹೇಳಿದರು.

ಬನಾಸ್ ಡೈರಿಯ ಗೋಬರ್ ಗ್ಯಾಸ್ ಸ್ಥಾವರಗಳು ಸರ್ಕಾರದ ‘ಕಚ್​​ರೇ ಸೇ ಕಂಚನ್ (ಕಸದಿಂದ ರಸ)’ ಅಭಿಯಾನಕ್ಕೆ ಸಹಾಯ ಮಾಡುತ್ತವೆ ಎಂದು ಪ್ರಧಾನಿ ಮೋದಿ ಹೇಳಿದರು. ಇಂದು ಇಲ್ಲಿ ಬಯೋ-ಸಿಎನ್‌ಜಿ ಸ್ಥಾವರವನ್ನು ಲೋಕಾರ್ಪಣೆ ಮಾಡಲಾಗಿದ್ದು, ನಾಲ್ಕು ಗೋಬರ್ ಗ್ಯಾಸ್ ಪ್ಲಾಂಟ್‌ಗಳಿಗೆ ಶಂಕುಸ್ಥಾಪನೆ ಮಾಡಲಾಗಿದೆ. ಬನಾಸ್ ಡೈರಿ ದೇಶಾದ್ಯಂತ ಇಂತಹ ಹಲವು ಸ್ಥಾವರಗಳನ್ನು ಸ್ಥಾಪಿಸಲಿದೆ. ಇದು ಸರ್ಕಾರದ ‘ಕಚ್​​ರೇ ಸೆ ಕಂಚನ್’ ಅಭಿಯಾನಕ್ಕೆ ಸಹಾಯ ಮಾಡಲಿದೆ ಎಂದು ಪ್ರಧಾನಿ ಮೋದಿ ಹೇಳಿದರು. ಗೋಬರ್ಧನ್ ಮೂಲಕ ಹಲವು ಗುರಿಗಳನ್ನು ಏಕಕಾಲದಲ್ಲಿ ಸಾಧಿಸಲಾಗುತ್ತಿದೆ. ಇದು ಹಳ್ಳಿಗಳಲ್ಲಿ ಸ್ವಚ್ಛತೆಗೆ ಶಕ್ತಿ ನೀಡುತ್ತಿದೆ ಮತ್ತು ಎರಡನೆಯದಾಗಿ ರೈತರು ಹಸುವಿನ ಸಗಣಿ ಮಾರಿ ಹಣ ಪಡೆಯಬಹುದಾಗಿದೆ ಎಂದು ಮೋದಿ ಹೇಳಿದ್ದಾರೆ.

ಇದನ್ನೂ ಓದಿಪ್ರಧಾನಿ ಮೋದಿ, ಗೃಹ ಸಚಿವ ಅಮಿತ್ ಶಾ ಬಗ್ಗೆ ಅಪಹಾಸ್ಯ-ನಿಂದನೆ; ವಿಡಿಯೋ ವೈರಲ್ ಆಗುತ್ತಿದ್ದಂತೆ ವ್ಯಕ್ತಿಯನ್ನು ಅರೆಸ್ಟ್ ಮಾಡಿದ ಪೊಲೀಸ್​

ನಾನು ಪುನಃ ಜೈಲಿಗೆ ಹೋಗುವುದನ್ನು ನೋಡಲು ಬಹಳ ಜನ ಕಾಯುತ್ತಿದ್ದರು: ಕುಲಕರ್ಣಿ
ನಾನು ಪುನಃ ಜೈಲಿಗೆ ಹೋಗುವುದನ್ನು ನೋಡಲು ಬಹಳ ಜನ ಕಾಯುತ್ತಿದ್ದರು: ಕುಲಕರ್ಣಿ
ಮೃತಪ್ರೇಮಿಯನ್ನು ಮಾತಾಡುವ ನೆಪದಲ್ಲಿ ತೋಟದ ಮನೆಗೆ ಕರೆಸಲಾಗಿತ್ತು
ಮೃತಪ್ರೇಮಿಯನ್ನು ಮಾತಾಡುವ ನೆಪದಲ್ಲಿ ತೋಟದ ಮನೆಗೆ ಕರೆಸಲಾಗಿತ್ತು
ಆಟಗಾರರೊಂದಿಗೆ ತಮ್ಮ ಮಕ್ಕಳ ಫೋಟೋಗಾಗಿ ನಮ್ಮ ಮಕ್ಕಳ ಬಲಿ ಪಡೆದರು: ಲಕ್ಷ್ಮಣ
ಆಟಗಾರರೊಂದಿಗೆ ತಮ್ಮ ಮಕ್ಕಳ ಫೋಟೋಗಾಗಿ ನಮ್ಮ ಮಕ್ಕಳ ಬಲಿ ಪಡೆದರು: ಲಕ್ಷ್ಮಣ
‘ಆಡಿಯೋ ಮೂಲಕ ನನ್ನ ನಾಶ ಮಾಡಿದರು’; ಜೈಲಿನಿಂದ ಹೊರ ಬಂದ ಮನು ರಿಯಾಕ್ಷನ್
‘ಆಡಿಯೋ ಮೂಲಕ ನನ್ನ ನಾಶ ಮಾಡಿದರು’; ಜೈಲಿನಿಂದ ಹೊರ ಬಂದ ಮನು ರಿಯಾಕ್ಷನ್
ಪರಿಹಾರಕ್ಕಾಗಿ ವಿಶೇಷ ಪ್ರಕರಣವೆಂದು ಸರ್ಕಾರ ಪರಿಗಣಿಸಲಿ: ಕುಮಾರಸ್ವಾಮಿ
ಪರಿಹಾರಕ್ಕಾಗಿ ವಿಶೇಷ ಪ್ರಕರಣವೆಂದು ಸರ್ಕಾರ ಪರಿಗಣಿಸಲಿ: ಕುಮಾರಸ್ವಾಮಿ
‘ಸರಿಗಮಪ’ ಫಿನಾಲೆಯಲ್ಲಿ ಹೇಗಿತ್ತು ಬಾಳು ಬೆಳಗುಂದಿ ಪರ್ಫಾರ್ಮೆನ್ಸ್?
‘ಸರಿಗಮಪ’ ಫಿನಾಲೆಯಲ್ಲಿ ಹೇಗಿತ್ತು ಬಾಳು ಬೆಳಗುಂದಿ ಪರ್ಫಾರ್ಮೆನ್ಸ್?
ಕಾಲ್ತುಳಿತ ಸಂಭವಿಸಿದಾಗ ಬಚಾವಾಗೋದು ಹೇಗೆ, ಏನು ಮಾಡಬೇಕು? ಇಲ್ಲಿದೆ ಟಿಪ್ಸ್
ಕಾಲ್ತುಳಿತ ಸಂಭವಿಸಿದಾಗ ಬಚಾವಾಗೋದು ಹೇಗೆ, ಏನು ಮಾಡಬೇಕು? ಇಲ್ಲಿದೆ ಟಿಪ್ಸ್
ಪ್ರಿಯಕರನೊಂದಿಗೆ ಬದುಕಿಕೋ ಎಂದು ಪತ್ನಿಯನ್ನು ಕಳಿಸಿದ್ದ ಪತಿ
ಪ್ರಿಯಕರನೊಂದಿಗೆ ಬದುಕಿಕೋ ಎಂದು ಪತ್ನಿಯನ್ನು ಕಳಿಸಿದ್ದ ಪತಿ
ಅಪಘಾತದ ನಂತರ ರಸ್ತೆಬದಿ ಹೋಟೆಲ್​​ಗೆ ನುಗ್ಗಿದ ಒಂದು ಟಿಪ್ಪರ್
ಅಪಘಾತದ ನಂತರ ರಸ್ತೆಬದಿ ಹೋಟೆಲ್​​ಗೆ ನುಗ್ಗಿದ ಒಂದು ಟಿಪ್ಪರ್
Daily Devotional: ಕಷ್ಟಕಾಲದಲ್ಲಿ ಮಾಡಿದ ಸಹಾಯದ ಮಹತ್ವ ತಿಳಿಯಿರಿ
Daily Devotional: ಕಷ್ಟಕಾಲದಲ್ಲಿ ಮಾಡಿದ ಸಹಾಯದ ಮಹತ್ವ ತಿಳಿಯಿರಿ