AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿಕ್ಷಣದಲ್ಲಿ ದೊಡ್ಡ ಬದಲಾವಣೆಗಾಗಿ ಗುಜರಾತ್‌ನ ವಿದ್ಯಾ ಸಮೀಕ್ಷಾ ಕೇಂದ್ರವನ್ನು ಅಧ್ಯಯನ ಮಾಡುವಂತೆ ರಾಜ್ಯಗಳಿಗೆ ಮೋದಿ ಸೂಚನೆ

ಗುಜರಾತ್ ಎಲ್ಲಾ ಕ್ಷೇತ್ರಗಳಲ್ಲಿ ಯಶಸ್ಸು ಮತ್ತು ಅಭಿವೃದ್ಧಿಯನ್ನು ಕಂಡಿರುವುದು ಹೆಮ್ಮೆ ತಂದಿದೆ. ನಿನ್ನೆ ಗಾಂಧಿನಗರದ ವಿದ್ಯಾ ಸಮೀಕ್ಷಾ ಕೇಂದ್ರದಲ್ಲಿ ನಾನು ಇದನ್ನು ಅನುಭವಿಸಿದೆ. ನಮ್ಮ ಸರ್ಕಾರಿ ಪ್ರಾಥಮಿಕ ಶಾಲೆಗೆ ಇಂತಹ ಬೃಹತ್ ತಂತ್ರಜ್ಞಾನವನ್ನು ಬಳಸಿರುವುದು ಅಚ್ಚರಿಯುಂಟುಮಾಡಿದೆ ಎಂದು ಮೋದಿ ಹೇಳಿದ್ದಾರೆ.

ಶಿಕ್ಷಣದಲ್ಲಿ ದೊಡ್ಡ ಬದಲಾವಣೆಗಾಗಿ ಗುಜರಾತ್‌ನ ವಿದ್ಯಾ ಸಮೀಕ್ಷಾ ಕೇಂದ್ರವನ್ನು ಅಧ್ಯಯನ ಮಾಡುವಂತೆ ರಾಜ್ಯಗಳಿಗೆ ಮೋದಿ ಸೂಚನೆ
ನರೇಂದ್ರ ಮೋದಿ
TV9 Web
| Updated By: ರಶ್ಮಿ ಕಲ್ಲಕಟ್ಟ|

Updated on: Apr 19, 2022 | 2:32 PM

Share

ದೆಹಲಿ: ಗಾಂಧಿನಗರದಲ್ಲಿರುವ ವಿದ್ಯಾ ಸಮೀಕ್ಷಾ ಕೇಂದ್ರವು (Vidya Samiksha Kendra) ದೇಶಾದ್ಯಂತ ಶಿಕ್ಷಣ ಕ್ಷೇತ್ರದಲ್ಲಿ ಗಣನೀಯ ಬದಲಾವಣೆಗಳನ್ನು ತರಬಹುದು ಎಂದು ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಮಂಗಳವಾರ ಹೇಳಿದ್ದಾರೆ. ಗುಜರಾತ್‌ನ (Gujarat) ಬನಸ್ಕಾಂತ ಜಿಲ್ಲೆಯ ದಿಯೋದರ್‌ನಲ್ಲಿರುವ ಬನಾಸ್ ಡೈರಿ ಸಂಕುಲದಲ್ಲಿ ಬಹು ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿದ ಪ್ರಧಾನಿ, ವಿದ್ಯಾ ಸಮೀಕ್ಷಾ ಕೇಂದ್ರದಂತಹ ಆಧುನಿಕ ವ್ಯವಸ್ಥೆಯಿಂದ ದೇಶದ ಮಕ್ಕಳು ಪ್ರಯೋಜನ ಪಡೆಯುವ ಮೂಲಕ ಭಾರತಕ್ಕೆ ಉಜ್ವಲ ಭವಿಷ್ಯವನ್ನು ಖಾತ್ರಿಪಡಿಸುತ್ತಾರೆ ಎಂದರು. “ಗುಜರಾತ್ ಎಲ್ಲಾ ಕ್ಷೇತ್ರಗಳಲ್ಲಿ ಯಶಸ್ಸು ಮತ್ತು ಅಭಿವೃದ್ಧಿಯನ್ನು ಕಂಡಿರುವುದು ಹೆಮ್ಮೆ ತಂದಿದೆ. ನಿನ್ನೆ ಗಾಂಧಿನಗರದ ವಿದ್ಯಾ ಸಮೀಕ್ಷಾ ಕೇಂದ್ರದಲ್ಲಿ ನಾನು ಇದನ್ನು ಅನುಭವಿಸಿದೆ. ನಮ್ಮ ಸರ್ಕಾರಿ ಪ್ರಾಥಮಿಕ ಶಾಲೆಗೆ ಇಂತಹ ಬೃಹತ್ ತಂತ್ರಜ್ಞಾನವನ್ನು ಬಳಸಿರುವುದು ಅಚ್ಚರಿಯುಂಟುಮಾಡಿದೆ. ಈ ಕ್ಷೇತ್ರದೊಂದಿಗೆ ನನಗೆ ಮೊದಲಿನಿಂದಲೂ ಒಡನಾಟವಿದೆ, ಆದರೆ ನಿನ್ನೆ ನಾನು ವಿಶೇಷವಾಗಿ ಗಾಂಧಿನಗರಕ್ಕೆ ಇದನ್ನು ನೋಡಲು ಹೋಗಿದ್ದೆ ”ಎಂದು ಅವರು ಹೇಳಿದರು. ವಿದ್ಯಾ ಸಮೀಕ್ಷಾ ಕೇಂದ್ರವು ದೇಶಾದ್ಯಂತ ಶಿಕ್ಷಣ ಕ್ಷೇತ್ರದಲ್ಲಿ ದೊಡ್ಡ ಬದಲಾವಣೆಗಳನ್ನು ತರಬಲ್ಲದು ಎಂದು ಪ್ರಧಾನಿ ಒತ್ತಿ ಹೇಳಿದರು. “ವಿದ್ಯಾ ಸಮೀಕ್ಷಾ ಕೇಂದ್ರವನ್ನು ಅಧ್ಯಯನ ಮಾಡಲು ನಾನು ಭಾರತ ಸರ್ಕಾರದ ಸಂಬಂಧಿಸಿದ ಸಚಿವಾಲಯಗಳು ಮತ್ತು ಅಧಿಕಾರಿಗಳನ್ನು ಕೇಳುತ್ತೇನೆ. ವಿವಿಧ ರಾಜ್ಯಗಳ ಸಂಬಂಧಪಟ್ಟ ಇಲಾಖೆಗಳು ಸಹ ಗಾಂಧಿ ನಗರಕ್ಕೆ ಬಂದು ಉಪಕ್ರಮವನ್ನು ಅಧ್ಯಯನ ಮಾಡಬೇಕು” ಎಂದು ಪ್ರಧಾನಿ ಮೋದಿ ಹೇಳಿದರು.

ತಮ್ಮ ತವರು ರಾಜ್ಯ ಗುಜರಾತ್‌ಗೆ ಮೂರು ದಿನಗಳ ಭೇಟಿಗಾಗಿ ಸೋಮವಾರ ಅಹಮದಾಬಾದ್‌ಗೆ ಆಗಮಿಸಿದ ಪ್ರಧಾನಿ, ಬನಾಸ್ ಡೈರಿಯನ್ನು ಶ್ಲಾಘಿಸಿದರು ಮತ್ತು ಸ್ಥಳೀಯ ರೈತರ ಆದಾಯವನ್ನು ಹೆಚ್ಚಿಸಲು ಇತರ ಸಂಪನ್ಮೂಲಗಳನ್ನು ಬಳಸಬಹುದು ಎಂದು ಇದು ಸಾಬೀತುಪಡಿಸಿದೆ ಎಂದು ಹೇಳಿದರು.

“ಬಹುಶಃ ನನ್ನ ಜೀವನದಲ್ಲಿ ಮೊದಲ ಬಾರಿಗೆ, ಎರಡು ಲಕ್ಷಕ್ಕೂ ಹೆಚ್ಚು ತಾಯಂದಿರು ಮತ್ತು ಸಹೋದರಿಯರು ನನ್ನನ್ನು ಮತ್ತು ನಮ್ಮೆಲ್ಲರನ್ನು ಇಲ್ಲಿ ಆಶೀರ್ವದಿಸುತ್ತಿದ್ದಾರೆ. ತಾಯಂದಿರು ಮತ್ತು ಸಹೋದರಿಯರನ್ನು ಸಬಲೀಕರಣಗೊಳಿಸುವಾಗ ಗ್ರಾಮದ ಆರ್ಥಿಕತೆಯನ್ನು ಹೇಗೆ ಬಲಪಡಿಸುವುದು ಮತ್ತು ಸ್ವಾವಲಂಬಿ ಭಾರತವನ್ನು ಹೆಚ್ಚಿಸುವ ಸಹಕಾರಿ ಆಂದೋಲನಕ್ಕೆ ಈ ಡೈರಿ ಭಾರತಕ್ಕೆ ಉದಾಹರಣೆಯಾಗಿದೆ. ಅದನ್ನೆಲ್ಲ ಇಲ್ಲಿ ನೇರವಾಗಿ ಅನುಭವಿಸಬಹುದು” ಎಂದು ಪ್ರಧಾನಿ ಮೋದಿ ಹೇಳಿದರು.

“ಡೈರಿ ವಿಸ್ತರಣೆಗೆ ಬನಾಸ್ ಡೈರಿ ಸಂಕುಲ್, ಚೀಸ್ ಮತ್ತು ವೇ ಪ್ಲಾಂಟ್ ಪ್ರಮುಖವಾಗಿವೆ ಆದರೆ ಸ್ಥಳೀಯ ರೈತರ ಆದಾಯವನ್ನು ಹೆಚ್ಚಿಸಲು ಇತರ ಸಂಪನ್ಮೂಲಗಳನ್ನು ಬಳಸಬಹುದು ಎಂದು ಇದು ಸಾಬೀತುಪಡಿಸಿದೆ” ಎಂದು ಅವರು ಹೇಳಿದರು.

ಬನಾಸ್ ಡೈರಿಯ ಗೋಬರ್ ಗ್ಯಾಸ್ ಸ್ಥಾವರಗಳು ಸರ್ಕಾರದ ‘ಕಚ್​​ರೇ ಸೇ ಕಂಚನ್ (ಕಸದಿಂದ ರಸ)’ ಅಭಿಯಾನಕ್ಕೆ ಸಹಾಯ ಮಾಡುತ್ತವೆ ಎಂದು ಪ್ರಧಾನಿ ಮೋದಿ ಹೇಳಿದರು. ಇಂದು ಇಲ್ಲಿ ಬಯೋ-ಸಿಎನ್‌ಜಿ ಸ್ಥಾವರವನ್ನು ಲೋಕಾರ್ಪಣೆ ಮಾಡಲಾಗಿದ್ದು, ನಾಲ್ಕು ಗೋಬರ್ ಗ್ಯಾಸ್ ಪ್ಲಾಂಟ್‌ಗಳಿಗೆ ಶಂಕುಸ್ಥಾಪನೆ ಮಾಡಲಾಗಿದೆ. ಬನಾಸ್ ಡೈರಿ ದೇಶಾದ್ಯಂತ ಇಂತಹ ಹಲವು ಸ್ಥಾವರಗಳನ್ನು ಸ್ಥಾಪಿಸಲಿದೆ. ಇದು ಸರ್ಕಾರದ ‘ಕಚ್​​ರೇ ಸೆ ಕಂಚನ್’ ಅಭಿಯಾನಕ್ಕೆ ಸಹಾಯ ಮಾಡಲಿದೆ ಎಂದು ಪ್ರಧಾನಿ ಮೋದಿ ಹೇಳಿದರು. ಗೋಬರ್ಧನ್ ಮೂಲಕ ಹಲವು ಗುರಿಗಳನ್ನು ಏಕಕಾಲದಲ್ಲಿ ಸಾಧಿಸಲಾಗುತ್ತಿದೆ. ಇದು ಹಳ್ಳಿಗಳಲ್ಲಿ ಸ್ವಚ್ಛತೆಗೆ ಶಕ್ತಿ ನೀಡುತ್ತಿದೆ ಮತ್ತು ಎರಡನೆಯದಾಗಿ ರೈತರು ಹಸುವಿನ ಸಗಣಿ ಮಾರಿ ಹಣ ಪಡೆಯಬಹುದಾಗಿದೆ ಎಂದು ಮೋದಿ ಹೇಳಿದ್ದಾರೆ.

ಇದನ್ನೂ ಓದಿಪ್ರಧಾನಿ ಮೋದಿ, ಗೃಹ ಸಚಿವ ಅಮಿತ್ ಶಾ ಬಗ್ಗೆ ಅಪಹಾಸ್ಯ-ನಿಂದನೆ; ವಿಡಿಯೋ ವೈರಲ್ ಆಗುತ್ತಿದ್ದಂತೆ ವ್ಯಕ್ತಿಯನ್ನು ಅರೆಸ್ಟ್ ಮಾಡಿದ ಪೊಲೀಸ್​

ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?