AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಮಿಕ್ರಾನ್ ಪ್ರಕರಣಗಳ ಏರಿಕೆ: ದೆಹಲಿಯಲ್ಲಿ ಕ್ರಿಸ್ಮಸ್, ಹೊಸ ವರ್ಷದ ಕೂಟಗಳಿಗೆ ನಿಷೇಧ

ಎಲ್ಲಾ ಜಿಲ್ಲಾ ಮೆಜಿಸ್ಟ್ರೇಟ್ ಮತ್ತು ಜಿಲ್ಲಾ ಡಿಸಿಪಿಗಳು ದೆಹಲಿಯ ಎನ್‌ಸಿಟಿಯಲ್ಲಿ ಕ್ರಿಸ್‌ಮಸ್ ಅಥವಾ ಹೊಸ ವರ್ಷವನ್ನು ಆಚರಿಸಲು ಯಾವುದೇ ಸಾಂಸ್ಕೃತಿಕ ಕಾರ್ಯಕ್ರಮ / ಕೂಟಗಳು / ಸಭೆ / ನಡೆಯದಂತೆ ನೋಡಿಕೊಳ್ಳಬೇಕು" ಎಂದು ಆದೇಶದಲ್ಲಿ ಹೇಳಲಾಗಿದೆ.

ಒಮಿಕ್ರಾನ್ ಪ್ರಕರಣಗಳ ಏರಿಕೆ: ದೆಹಲಿಯಲ್ಲಿ ಕ್ರಿಸ್ಮಸ್, ಹೊಸ ವರ್ಷದ ಕೂಟಗಳಿಗೆ ನಿಷೇಧ
ಅರವಿಂದ ಕೇಜ್ರಿವಾಲ್
TV9 Web
| Edited By: ರಶ್ಮಿ ಕಲ್ಲಕಟ್ಟ|

Updated on:Dec 22, 2021 | 5:18 PM

Share

ದೆಹಲಿ: ದೆಹಲಿ ವಿಪತ್ತು ನಿರ್ವಹಣಾ ಪ್ರಾಧಿಕಾರವು (Delhi Disaster Management Authority) ದೆಹಲಿಯಲ್ಲಿ ಕ್ರಿಸ್‌ಮಸ್ (Christmas) ಮತ್ತು ಹೊಸ ವರ್ಷದ ಆಚರಣೆಗಳಿಗಾಗಿ (New Year celebrations)ಎಲ್ಲಾ ಸಾಂಸ್ಕೃತಿಕ ಕಾರ್ಯಕ್ರಮಗಳು ಮತ್ತು ಕೂಟಗಳನ್ನು ನಿಷೇಧಿಸಿ ಬುಧವಾರ ಆದೇಶ ಹೊರಡಿಸಿದೆ. ಒಮಿಕ್ರಾನ್ ರೂಪಾಂತರದ ಪ್ರಕರಣಗಳು ಹೆಚ್ಚುತ್ತಿವೆ. ಹರಡುವಿಕೆಯನ್ನು ನಿಯಂತ್ರಿಸಲು ಅಗತ್ಯವಿರುವ ಎಲ್ಲಾ ಕ್ರಮಗಳನ್ನು ತಮ್ಮ ವ್ಯಾಪ್ತಿಯಲ್ಲಿ ತೆಗೆದುಕೊಳ್ಳುವಂತೆ ಡಿಡಿಎಂಎ ಜಿಲ್ಲಾಧಿಕಾರಿಗಳಿಗೆ ಸೂಚಿಸಿದರು.  ಹೆಚ್ಚುತ್ತಿರುವ ಕೊವಿಡ್ ಪ್ರಕರಣಗಳು ಮತ್ತು ಒಮಿಕ್ರಾನ್‌ನ ರೂಪಾಂತರವನ್ನು ಗಮನದಲ್ಲಿಟ್ಟುಕೊಂಡು, ಹರಡುವಿಕೆಯನ್ನು ನಿಯಂತ್ರಿಸಲು ತಮ್ಮ ಅಧಿಕಾರ ವ್ಯಾಪ್ತಿಯಲ್ಲಿ ಅಗತ್ಯವಿರುವ ಎಲ್ಲಾ ಕ್ರಮಗಳನ್ನು ತೆಗೆದುಕೊಳ್ಳುವಂತೆ ಡಿಎಂಗಳಿಗೆ  ದೆಹಲಿ ವಿಪತ್ತು ನಿರ್ವಹಣಾ ಪ್ರಾಧಿಕಾರವು ಸೂಚನೆ ನೀಡಿದೆ. ಅಂಗಡಿಗಳು/ಕೆಲಸದ ಸ್ಥಳಗಳಲ್ಲಿ ಮಾಸ್ಕ್ ಧರಿಸದವರಿಗೆ ಪ್ರವೇಶ ನಿಷೇಧಿಸುವಂತೆ ಸೂಚನೆ ಹೇಳಿದೆ.

ಎಲ್ಲಾ ಜಿಲ್ಲಾ ಮೆಜಿಸ್ಟ್ರೇಟ್ ಮತ್ತು ಜಿಲ್ಲಾ ಡಿಸಿಪಿಗಳು ದೆಹಲಿಯ ಎನ್‌ಸಿಟಿಯಲ್ಲಿ ಕ್ರಿಸ್‌ಮಸ್ ಅಥವಾ ಹೊಸ ವರ್ಷವನ್ನು ಆಚರಿಸಲು ಯಾವುದೇ ಸಾಂಸ್ಕೃತಿಕ ಕಾರ್ಯಕ್ರಮ / ಕೂಟಗಳು / ಸಭೆ / ನಡೆಯದಂತೆ ನೋಡಿಕೊಳ್ಳಬೇಕು” ಎಂದು ಆದೇಶದಲ್ಲಿ ಹೇಳಲಾಗಿದೆ.

ಸರ್ಕಾರದ ಅಂಕಿಅಂಶಗಳ ಪ್ರಕಾರ ದೆಹಲಿಯು 57 ಪ್ರಕರಣಗಳೊಂದಿಗೆ ಒಮಿಕ್ರಾನ್ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ.ಮಹಾರಾಷ್ಟ್ರ (54), ತೆಲಂಗಾಣ (24) ಮತ್ತು ಕರ್ನಾಟಕ (19) ನಂತರದ ಸ್ಥಾನದಲ್ಲಿದೆ.

ಹೊಸ ರೂಪಾಂತರದಿಂದ ಸೋಂಕುಗಳು  ಹೆಚ್ಚಾಗುವ ಸಾಧ್ಯತೆ ಇದ್ದು  ಕೇಂದ್ರ ಸರ್ಕಾರ “ವಾರ್ ರೂಂ” ಸಕ್ರಿಯಗೊಳಿಸಲು ಮತ್ತು ರಾತ್ರಿ ಕರ್ಫ್ಯೂ ಸೇರಿದಂತೆ ನಿರ್ಬಂಧಗಳನ್ನು ಮರಳಿ ತರಲು ರಾಜ್ಯಗಳನ್ನು ಕೇಳಿದೆ. ಇದು ವ್ಯಾಪಕವಾದ ಪರೀಕ್ಷೆ ಮತ್ತು ಕೂಟಗಳ ನಿಯಂತ್ರಣವನ್ನು ಒಳಗೊಂಡಿರುವ ತಡೆಗಟ್ಟುವಿಕೆ ಮತ್ತು ನಿಯಂತ್ರಣ ಕ್ರಮಗಳ ಸರಣಿಯನ್ನು ಪಟ್ಟಿಮಾಡಿದೆ.

ದೇಶವು 6,317 ಹೊಸ ಸೋಂಕುಗಳನ್ನು ವರದಿ ಮಾಡಿದ ನಂತರ ಭಾರತದ ಕೊರೊನಾವೈರಸ್ ಸಂಖ್ಯೆ ಇಂದು 3,47,58,481 ಕ್ಕೆ ತಲುಪಿದೆ, ಇದು ನಿನ್ನೆಯ 5,326 ಪ್ರಕರಣಗಳಿಂದ ಶೇಕಡಾ 18 ರಷ್ಟು ಹೆಚ್ಚಾಗಿದೆ. ಸಕ್ರಿಯ ಪ್ರಕರಣಗಳು 78,190 ಕ್ಕೆ ಇಳಿದಿವೆ, ಇದು 575 ದಿನಗಳಲ್ಲಿ ಕಡಿಮೆಯಾಗಿದೆ. ಕಳೆದ 24 ಗಂಟೆಗಳಲ್ಲಿ 318 ಸಾವುಗಳೊಂದಿಗೆ ಒಟ್ಟು ಸಾವಿನ ಸಂಖ್ಯೆ 4.78 ಲಕ್ಷಕ್ಕೆ ಏರಿದೆ.

ಒಮಿಕ್ರಾನ್ ರೂಪಾಂತರವು ಡೆಲ್ಟಾ ರೂಪಾಂತರಕ್ಕಿಂತ ವೇಗವಾಗಿ ಹರಡುತ್ತಿದೆ ಮತ್ತು ಈಗಾಗಲೇ ಲಸಿಕೆ ಹಾಕಿದ ಅಥವಾ ಕೋವಿಡ್‌ನಿಂದ ಚೇತರಿಸಿಕೊಂಡ ಜನರಲ್ಲಿ ಸೋಂಕನ್ನು ಉಂಟುಮಾಡುತ್ತಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆ ಹೇಳಿದೆ.

ಇದನ್ನೂ ಓದಿ: Uttar Pradesh Election 2022: ದೀವಾರ್ ಸಿನಿಮಾ ಡೈಲಾಗ್​​ನಂತೆ ಮೇರೆ ಪಾಸ್ ಬಹನೇ ಹೈ ಎಂದ ಪ್ರಿಯಾಂಕಾ ಗಾಂಧಿ

ಇದನ್ನೂ ಓದಿ: ಕೊವಿಡ್ ವಾರ್ ರೂಂ ಸಕ್ರಿಯಗೊಳಿಸಲು ಕೇಂದ್ರ ಆರೋಗ್ಯ ಕಾರ್ಯದರ್ಶಿ ರಾಜೇಶ್ ಭೂಷಣ್ ಸೂಚನೆ

Published On - 5:08 pm, Wed, 22 December 21

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ