AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚುನಾವಣೆ ಭರವಸೆ ಘೋಷಣೆ ಮಾಡಿದ ವಿಜಯ್: ಮಹಿಳೆಯರಿಗೆ ಉಚಿತ ಬಸ್, ಮಗುವಿಗೆ ಚಿನ್ನದ ಉಂಗುರ

ನಟ ವಿಜಯ್ ಅವರ 'ತಮಿಳಗ ವೆಟ್ರಿ ಕಳಗಂ' ಪಕ್ಷ ತಮಿಳುನಾಡು ರಾಜಕೀಯದಲ್ಲಿ ಸಂಚಲನ ಮೂಡಿಸಿದೆ. ಮಹಿಳಾ ಸುರಕ್ಷತೆ, ಸಬಲೀಕರಣ ಮತ್ತು ಮಕ್ಕಳಿಗಾಗಿ ಮಹತ್ವಾಕಾಂಕ್ಷಿ ಯೋಜನೆಗಳನ್ನು ಘೋಷಿಸಿದೆ. ಮಹಿಳೆಯರಿಗೆ ಸರ್ಕಾರಿ ಬಸ್‌ಗಳಲ್ಲಿ ಉಚಿತ ಪ್ರಯಾಣ, ವಿಶೇಷ ಸುರಕ್ಷತಾ ಪಡೆ, ಬಡ್ಡಿರಹಿತ ಆರ್ಥಿಕ ನೆರವು, ಹಾಗೂ ಮಕ್ಕಳಿಗೆ ಚಿನ್ನದ ಉಂಗುರ, ಕಿಟ್ ನೀಡುವ 'ತಾಯಿ ಮಾಮನ್' ಯೋಜನೆ ಪ್ರಮುಖ ಭರವಸೆಗಳಾಗಿವೆ.

ಚುನಾವಣೆ ಭರವಸೆ ಘೋಷಣೆ ಮಾಡಿದ ವಿಜಯ್: ಮಹಿಳೆಯರಿಗೆ ಉಚಿತ ಬಸ್, ಮಗುವಿಗೆ ಚಿನ್ನದ ಉಂಗುರ
ವಿಜಯ್​​
ಅಕ್ಷಯ್​ ಪಲ್ಲಮಜಲು​​
|

Updated on: Mar 07, 2026 | 7:23 PM

Share

ಮಹಾಬಲಿಪುರಂ ಮಾ.7: ತಮಿಳುನಾಡು ರಾಜಕೀಯದಲ್ಲಿ ಹೊಸ ಸಂಚಲನ ಮೂಡಿಸಿರುವ ನಟ ವಿಜಯ್, ತಮ್ಮ ‘ತಮಿಳಗ ವೆಟ್ರಿ ಕಳಗಂ’ ( TVK ) ಪಕ್ಷದ ವತಿಯಿಂದ ಇಂದು (ಮಾ.7) ಚುನಾವಣೆ ಭರವಸೆಯನ್ನು ನೀಡಿದ್ದಾರೆ. ಮಹಿಳೆಯರ ಸುರಕ್ಷತೆ ಮತ್ತು ಸಬಲೀಕರಣಕ್ಕಾಗಿ ಅತ್ಯಂತ ಮಹತ್ವಾಕಾಂಕ್ಷೆಯ ಯೋಜನೆಗಳನ್ನು ಪ್ರಕಟಿಸಿದ್ದಾರೆ. “ವಿಜಯದ ಪಯಣ” (Vetri Payanam) ಎಂಬ ಹೆಸರಿನಡಿ ಮಹಿಳೆಯರಿಗೆ ಹಲವು ಕೊಡುಗೆಗಳನ್ನು ಅವರು ಘೋಷಿಸಿದ್ದಾರೆ. ರಾಜ್ಯದ ಎಲ್ಲಾ ಸರ್ಕಾರಿ ಬಸ್‌ಗಳಲ್ಲಿ ಮಹಿಳೆಯರಿಗೆ ಸಂಪೂರ್ಣ ಉಚಿತ ಪ್ರಯಾಣದ ಸೌಲಭ್ಯ.

ಮಹಿಳಾ ಸುರಕ್ಷತೆಗಾಗಿ ವಿಶೇಷ ಪಡೆ ರಚನೆ. ಈ ಪಡೆಯ ಮಹಿಳಾ ಅಧಿಕಾರಿಗಳು ಬಾಡಿ ಕ್ಯಾಮೆರಾಗಳೊಂದಿಗೆ ಸಾರ್ವಜನಿಕ ಸ್ಥಳಗಳಲ್ಲಿ ಭದ್ರತಾ ಕಾರ್ಯ ನಿರ್ವಹಿಸಲಿದ್ದಾರೆ. ಖಾಸಗಿ ಶೇರ್ ಆಟೋಗಳೂ ಸೇರಿದಂತೆ ಎಲ್ಲಾ ಸಾರ್ವಜನಿಕ ವಾಹನಗಳಲ್ಲಿ ಪ್ಯಾನಿಕ್ ಬಟನ್ ಅಳವಡಿಕೆ. ತುರ್ತು ಸಂದರ್ಭದಲ್ಲಿ 5 ನಿಮಿಷಗಳಲ್ಲಿ ಸಹಾಯ ಲಭ್ಯವಾಗುವಂತೆ ಕ್ರಮ.

ಇಲ್ಲಿದೆ ನೋಡಿ ಎಕ್ಸ್​​​ ಪೋಸ್ಟ್:

ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳ ತ್ವರಿತ ವಿಚಾರಣೆಗಾಗಿ ವಿಶೇಷ ನ್ಯಾಯಾಲಯಗಳ ಸ್ಥಾಪನೆ. ಸಿಸಿಟಿವಿ ಮತ್ತು ಸರಿಯಾದ ಬೀದಿ ದೀಪಗಳ ಮೂಲಕ ಕತ್ತಲೆ ಪ್ರದೇಶಗಳನ್ನು ಇಲ್ಲದಂತೆ ಮಾಡುವುದು. ರೇಷನ್ ಅಂಗಡಿಗಳು, ಶಾಲೆ ಮತ್ತು ಕಾಲೇಜುಗಳ ಮೂಲಕ ಉಚಿತ ಸ್ಯಾನಿಟರಿ ಪ್ಯಾಡ್ ವಿತರಣೆ. ಮಹಿಳಾ ಸ್ವಸಹಾಯ ಸಂಘಗಳಿಗೆ 5 ಲಕ್ಷದವರೆಗೆ ಬಡ್ಡಿರಹಿತ ಹಣಕಾಸು ನೆರವು.ನೋಂದಾಯಿತ ಸಣ್ಣ ಉದ್ದಿಮೆಗಳಾಗಿ ಬದಲಾಗುವ ಸಂಘಗಳಿಗೆ ವಾರ್ಷಿಕ ₹5 ಲಕ್ಷದವರೆಗೆ 100% ಅನುದಾನ.

ಇದನ್ನೂ ಓದಿ: ತ್ರಿಷಾ, ವಿಜಯ್ ಖುಲ್ಲಂ ಖುಲ್ಲಾ ತಿರುಗಾಡಿದ್ದು ಸರಿಯೇ? ಖಾರವಾಗಿ ಪ್ರತಿಕ್ರಿಯಿಸಿದ ಫ್ಯಾನ್ಸ್

ಮಕ್ಕಳಿಗಾಗಿ ‘ತಾಯಿ ಮಾಮನ್’ ಯೋಜನೆ:

ತಮಿಳುನಾಡಿನಲ್ಲಿ ಜನಿಸುವ ಪ್ರತಿಯೊಂದು ಮಗುವಿಗೆ ಸರ್ಕಾರದ ವತಿಯಿಂದ ಚಿನ್ನದ ಉಂಗುರ ಉಡುಗೊರೆ. ಮಗುವಿಗೆ ಬೇಕಾದ ಬಟ್ಟೆ, ಸಾಬೂನು, ಆಟಿಕೆಗಳು, ಸೊಳ್ಳೆ ಪರದೆ ಮತ್ತು ನ್ಯಾಪ್ಕಿನ್ ಒಳಗೊಂಡ ಸಂಪೂರ್ಣ ಕಿಟ್ ವಿತರಣೆ.

ದೇಶದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು