AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚುನಾವಣೆ ಭರವಸೆ ಘೋಷಣೆ ಮಾಡಿದ ವಿಜಯ್: ಮಹಿಳೆಯರಿಗೆ ಉಚಿತ ಬಸ್, ಮಗುವಿಗೆ ಚಿನ್ನದ ಉಂಗುರ

ನಟ ವಿಜಯ್ ಅವರ 'ತಮಿಳಗ ವೆಟ್ರಿ ಕಳಗಂ' ಪಕ್ಷ ತಮಿಳುನಾಡು ರಾಜಕೀಯದಲ್ಲಿ ಸಂಚಲನ ಮೂಡಿಸಿದೆ. ಮಹಿಳಾ ಸುರಕ್ಷತೆ, ಸಬಲೀಕರಣ ಮತ್ತು ಮಕ್ಕಳಿಗಾಗಿ ಮಹತ್ವಾಕಾಂಕ್ಷಿ ಯೋಜನೆಗಳನ್ನು ಘೋಷಿಸಿದೆ. ಮಹಿಳೆಯರಿಗೆ ಸರ್ಕಾರಿ ಬಸ್‌ಗಳಲ್ಲಿ ಉಚಿತ ಪ್ರಯಾಣ, ವಿಶೇಷ ಸುರಕ್ಷತಾ ಪಡೆ, ಬಡ್ಡಿರಹಿತ ಆರ್ಥಿಕ ನೆರವು, ಹಾಗೂ ಮಕ್ಕಳಿಗೆ ಚಿನ್ನದ ಉಂಗುರ, ಕಿಟ್ ನೀಡುವ 'ತಾಯಿ ಮಾಮನ್' ಯೋಜನೆ ಪ್ರಮುಖ ಭರವಸೆಗಳಾಗಿವೆ.

ಚುನಾವಣೆ ಭರವಸೆ ಘೋಷಣೆ ಮಾಡಿದ ವಿಜಯ್: ಮಹಿಳೆಯರಿಗೆ ಉಚಿತ ಬಸ್, ಮಗುವಿಗೆ ಚಿನ್ನದ ಉಂಗುರ
ವಿಜಯ್​​
ಅಕ್ಷಯ್​ ಪಲ್ಲಮಜಲು​​
|

Updated on: Mar 07, 2026 | 7:23 PM

Share

ಮಹಾಬಲಿಪುರಂ ಮಾ.7: ತಮಿಳುನಾಡು ರಾಜಕೀಯದಲ್ಲಿ ಹೊಸ ಸಂಚಲನ ಮೂಡಿಸಿರುವ ನಟ ವಿಜಯ್, ತಮ್ಮ ‘ತಮಿಳಗ ವೆಟ್ರಿ ಕಳಗಂ’ ( TVK ) ಪಕ್ಷದ ವತಿಯಿಂದ ಇಂದು (ಮಾ.7) ಚುನಾವಣೆ ಭರವಸೆಯನ್ನು ನೀಡಿದ್ದಾರೆ. ಮಹಿಳೆಯರ ಸುರಕ್ಷತೆ ಮತ್ತು ಸಬಲೀಕರಣಕ್ಕಾಗಿ ಅತ್ಯಂತ ಮಹತ್ವಾಕಾಂಕ್ಷೆಯ ಯೋಜನೆಗಳನ್ನು ಪ್ರಕಟಿಸಿದ್ದಾರೆ. “ವಿಜಯದ ಪಯಣ” (Vetri Payanam) ಎಂಬ ಹೆಸರಿನಡಿ ಮಹಿಳೆಯರಿಗೆ ಹಲವು ಕೊಡುಗೆಗಳನ್ನು ಅವರು ಘೋಷಿಸಿದ್ದಾರೆ. ರಾಜ್ಯದ ಎಲ್ಲಾ ಸರ್ಕಾರಿ ಬಸ್‌ಗಳಲ್ಲಿ ಮಹಿಳೆಯರಿಗೆ ಸಂಪೂರ್ಣ ಉಚಿತ ಪ್ರಯಾಣದ ಸೌಲಭ್ಯ.

ಮಹಿಳಾ ಸುರಕ್ಷತೆಗಾಗಿ ವಿಶೇಷ ಪಡೆ ರಚನೆ. ಈ ಪಡೆಯ ಮಹಿಳಾ ಅಧಿಕಾರಿಗಳು ಬಾಡಿ ಕ್ಯಾಮೆರಾಗಳೊಂದಿಗೆ ಸಾರ್ವಜನಿಕ ಸ್ಥಳಗಳಲ್ಲಿ ಭದ್ರತಾ ಕಾರ್ಯ ನಿರ್ವಹಿಸಲಿದ್ದಾರೆ. ಖಾಸಗಿ ಶೇರ್ ಆಟೋಗಳೂ ಸೇರಿದಂತೆ ಎಲ್ಲಾ ಸಾರ್ವಜನಿಕ ವಾಹನಗಳಲ್ಲಿ ಪ್ಯಾನಿಕ್ ಬಟನ್ ಅಳವಡಿಕೆ. ತುರ್ತು ಸಂದರ್ಭದಲ್ಲಿ 5 ನಿಮಿಷಗಳಲ್ಲಿ ಸಹಾಯ ಲಭ್ಯವಾಗುವಂತೆ ಕ್ರಮ.

ಇಲ್ಲಿದೆ ನೋಡಿ ಎಕ್ಸ್​​​ ಪೋಸ್ಟ್:

ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳ ತ್ವರಿತ ವಿಚಾರಣೆಗಾಗಿ ವಿಶೇಷ ನ್ಯಾಯಾಲಯಗಳ ಸ್ಥಾಪನೆ. ಸಿಸಿಟಿವಿ ಮತ್ತು ಸರಿಯಾದ ಬೀದಿ ದೀಪಗಳ ಮೂಲಕ ಕತ್ತಲೆ ಪ್ರದೇಶಗಳನ್ನು ಇಲ್ಲದಂತೆ ಮಾಡುವುದು. ರೇಷನ್ ಅಂಗಡಿಗಳು, ಶಾಲೆ ಮತ್ತು ಕಾಲೇಜುಗಳ ಮೂಲಕ ಉಚಿತ ಸ್ಯಾನಿಟರಿ ಪ್ಯಾಡ್ ವಿತರಣೆ. ಮಹಿಳಾ ಸ್ವಸಹಾಯ ಸಂಘಗಳಿಗೆ 5 ಲಕ್ಷದವರೆಗೆ ಬಡ್ಡಿರಹಿತ ಹಣಕಾಸು ನೆರವು.ನೋಂದಾಯಿತ ಸಣ್ಣ ಉದ್ದಿಮೆಗಳಾಗಿ ಬದಲಾಗುವ ಸಂಘಗಳಿಗೆ ವಾರ್ಷಿಕ ₹5 ಲಕ್ಷದವರೆಗೆ 100% ಅನುದಾನ.

ಇದನ್ನೂ ಓದಿ: ತ್ರಿಷಾ, ವಿಜಯ್ ಖುಲ್ಲಂ ಖುಲ್ಲಾ ತಿರುಗಾಡಿದ್ದು ಸರಿಯೇ? ಖಾರವಾಗಿ ಪ್ರತಿಕ್ರಿಯಿಸಿದ ಫ್ಯಾನ್ಸ್

ಮಕ್ಕಳಿಗಾಗಿ ‘ತಾಯಿ ಮಾಮನ್’ ಯೋಜನೆ:

ತಮಿಳುನಾಡಿನಲ್ಲಿ ಜನಿಸುವ ಪ್ರತಿಯೊಂದು ಮಗುವಿಗೆ ಸರ್ಕಾರದ ವತಿಯಿಂದ ಚಿನ್ನದ ಉಂಗುರ ಉಡುಗೊರೆ. ಮಗುವಿಗೆ ಬೇಕಾದ ಬಟ್ಟೆ, ಸಾಬೂನು, ಆಟಿಕೆಗಳು, ಸೊಳ್ಳೆ ಪರದೆ ಮತ್ತು ನ್ಯಾಪ್ಕಿನ್ ಒಳಗೊಂಡ ಸಂಪೂರ್ಣ ಕಿಟ್ ವಿತರಣೆ.

ದೇಶದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಯುಗಾದಿ ವರ್ಷ ಭವಿಷ್ಯ; ಮಿಥುನ ರಾಶಿಗೆ ಈ ವರ್ಷ ಹೇಗಿರಲಿದೆ ಗೊತ್ತಾ?
ಯುಗಾದಿ ವರ್ಷ ಭವಿಷ್ಯ; ಮಿಥುನ ರಾಶಿಗೆ ಈ ವರ್ಷ ಹೇಗಿರಲಿದೆ ಗೊತ್ತಾ?
ಲೋಕಸಭೆ ಸ್ಪೀಕರ್ ವಿರುದ್ಧ ಅವಿಶ್ವಾಸ ನಿರ್ಣಯಕ್ಕೆ ಸಿದ್ಧತೆ
ಲೋಕಸಭೆ ಸ್ಪೀಕರ್ ವಿರುದ್ಧ ಅವಿಶ್ವಾಸ ನಿರ್ಣಯಕ್ಕೆ ಸಿದ್ಧತೆ
ಹುಟ್ಟುಹಬ್ಬದಂದು ಅಭಿಮಾನಿಗಳ ಭೇಟಿ ಮಾಡಿದ ರಾಧಿಕಾ ಪಂಡಿತ್: ವಿಡಿಯೋ
ಹುಟ್ಟುಹಬ್ಬದಂದು ಅಭಿಮಾನಿಗಳ ಭೇಟಿ ಮಾಡಿದ ರಾಧಿಕಾ ಪಂಡಿತ್: ವಿಡಿಯೋ
ಟ್ರೋಫಿಗಾಗಿ ಕೆಲವರ ಹೃದಯ ಛಿದ್ರಗೊಳಿಸುವುದರಲ್ಲಿ ತಪ್ಪಿಲ್ಲ; ಸ್ಯಾಂಟ್ನರ್
ಟ್ರೋಫಿಗಾಗಿ ಕೆಲವರ ಹೃದಯ ಛಿದ್ರಗೊಳಿಸುವುದರಲ್ಲಿ ತಪ್ಪಿಲ್ಲ; ಸ್ಯಾಂಟ್ನರ್
ಯುಗಾದಿ ವರ್ಷ ಭವಿಷ್ಯ; ವೃಷಭ ರಾಶಿಗೆ ಈ ವರ್ಷ ಹೇಗಿರಲಿದೆ ಗೊತ್ತಾ?
ಯುಗಾದಿ ವರ್ಷ ಭವಿಷ್ಯ; ವೃಷಭ ರಾಶಿಗೆ ಈ ವರ್ಷ ಹೇಗಿರಲಿದೆ ಗೊತ್ತಾ?
ಯುಗಾದಿ ವರ್ಷ ಭವಿಷ್ಯ; ಮೇಷ ರಾಶಿಯ ಶುಭ -ಅಶುಭ ಫಲಗಳ ಮಾಹಿತಿ ಇಲ್ಲಿದೆ
ಯುಗಾದಿ ವರ್ಷ ಭವಿಷ್ಯ; ಮೇಷ ರಾಶಿಯ ಶುಭ -ಅಶುಭ ಫಲಗಳ ಮಾಹಿತಿ ಇಲ್ಲಿದೆ
ಬಜೆಟ್ ಬೆನ್ನಲ್ಲೇ ಅಧಿಕಾರ ಹಂಚಿಕೆ ಬಗ್ಗೆ ಸಿಎಂ ಸಿದ್ದರಾಮಯ್ಯ ಶಾಕಿಂಗ್ ಮಾತು
ಬಜೆಟ್ ಬೆನ್ನಲ್ಲೇ ಅಧಿಕಾರ ಹಂಚಿಕೆ ಬಗ್ಗೆ ಸಿಎಂ ಸಿದ್ದರಾಮಯ್ಯ ಶಾಕಿಂಗ್ ಮಾತು
ಸಿನಿಮಾ ಜರ್ನಿಗೆ ಬೆಂಬಲವಾಗಿ ನಿಂತ ಶಿವಣ್ಣನಿಗೆ ಧನ್ಯವಾದ ಹೇಳಿದ ವಿಜಯ್
ಸಿನಿಮಾ ಜರ್ನಿಗೆ ಬೆಂಬಲವಾಗಿ ನಿಂತ ಶಿವಣ್ಣನಿಗೆ ಧನ್ಯವಾದ ಹೇಳಿದ ವಿಜಯ್
ಕೋಲಾರದ ರೈತನ ಮಗ ಯುಪಿಎಸ್​ಸಿ ಪಾಸ್​ ಮಾಡಿದ್ದು ಹೇಗೆ ಗೊತ್ತಾ?
ಕೋಲಾರದ ರೈತನ ಮಗ ಯುಪಿಎಸ್​ಸಿ ಪಾಸ್​ ಮಾಡಿದ್ದು ಹೇಗೆ ಗೊತ್ತಾ?
ಬೆಂಗಳೂರು ಹೋಟೆಲ್​ಗಳಲ್ಲಿ ಕಾಫಿ, ತಿಂಡಿ ದರ ಹೆಚ್ಚಳ ಸಾಧ್ಯತೆ
ಬೆಂಗಳೂರು ಹೋಟೆಲ್​ಗಳಲ್ಲಿ ಕಾಫಿ, ತಿಂಡಿ ದರ ಹೆಚ್ಚಳ ಸಾಧ್ಯತೆ