AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟಿಆರ್​ಪಿ ಹಗರಣ: ರಿಪಬ್ಲಿಕ್ ಟಿವಿ ಸಿಇಒ ವಿಕಾಸ್ ಖನ್​ಚಂದಾನಿ ಬಂಧನ

ಹಂಸಾ ಸಂಶೋಧನಾ ಅಧಿಕಾರಿ ನಿತಿನ್ ದೇವಕರ್ ಸಲ್ಲಿಸಿದ ದೂರಿನ ಹಿನ್ನೆಲೆಯಲ್ಲಿ ಅಕ್ಟೋಬರ್ 6 ರಂದು ಮುಂಬೈ ಪೊಲೀಸರು ಪ್ರಥಮ ತನಿಖೆ ಆರಂಭಿಸಿದ್ದರು.

ಟಿಆರ್​ಪಿ ಹಗರಣ: ರಿಪಬ್ಲಿಕ್ ಟಿವಿ ಸಿಇಒ ವಿಕಾಸ್ ಖನ್​ಚಂದಾನಿ ಬಂಧನ
ರಿಪಬ್ಲಿಕ್ ಟಿವಿ ಸಿಇಒ ವಿಕಾಸ್ ಖನ್​ಚಂದಾನಿ ಬಂಧನ.
sandhya thejappa
sandhya thejappa| Edited By: |

Updated on:Dec 29, 2020 | 10:58 AM

Share

ಮುಂಬೈ: ಟೆಲಿವಿಷನ್ ರೇಟಿಂಗ್ ಪಾಯಿಂಟ್ಸ್ (ಟಿಆರ್​ಪಿ) ಹಗರಣ  ಸಂಬಂಧಪಟ್ಟಂತೆ ರಿಪಬ್ಲಿಕ್ ಟಿವಿ ಸಿಇಒ ವಿಕಾಸ್​ ಖನ್​ಚಂದಾನಿಯನ್ನು ಮುಂಬೈ ಪೊಲೀಸರು ಇಂದು ಬಂಧಿಸಿದ್ದಾರೆ.

ನಕಲಿ ಟಿವಿ ರೇಟಿಂಗ್ ಹಗರಣ ಅಕ್ಟೋಬರ್​ ಪ್ರಾರಂಭದಲ್ಲಿ ಬೆಳಕಿಗೆ ಬಂದಿದೆ. ಹಂಸ ಸಂಶೋಧನಾಧಿಕಾರಿ ನಿತಿನ್​ ದೇವಕರ್​ ನೀಡಿದ್ದ ದೂರಿನ ಅನ್ವಯ ಅ.6ರಂದು ಎಫ್​ಐಆರ್ ದಾಖಲಿಸಿದ ಮುಂಬೈ ಪೊಲೀಸರು ತನಿಖೆ ನಡೆಸುತ್ತಿದ್ದು, ಖನ್​ಚಂದಾನಿ ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬಂಧಿತನಾದ 13ನೇ ವ್ಯಕ್ತಿ.

ಟಿಆರ್​ಪಿಯನ್ನು ನಿರ್ಣಯಿಸುವ ರೇಟಿಂಗ್ ಏಜೆನ್ಸಿ ಬ್ರಾಡ್​ಕಾಸ್ಟ್​ ಆಡಿಯನ್ಸ್​ ರಿಸರ್ಚ್​ ಕೌನ್ಸಿಲ್​ (BARC) ಕೆಲವು ಆಯ್ದ ಮನೆಗಳಲ್ಲಿ ಮಾತ್ರ ರೇಟಿಂಗ್​ ಪಾಯಿಂಟ್​ಗಳನ್ನು ಮೌಲ್ಯಮಾಪನ ಮಾಡುತ್ತಿದೆ. ಈ ಮೂಲಕ ಕೆಲವು ಚಾನಲ್​ಗಳು ನಕಲಿ ಟಿಆರ್​ಪಿ ನಂಬರ್ ತೋರಿಸುತ್ತಿವೆ ಎಂದು ನಿತಿನ್ ದೇವಕರ್ ದೂರಿನಲ್ಲಿ ಉಲ್ಲೇಖಿಸಿದ್ದರು.

ರಿಪಬ್ಲಿಕ್ ಟಿವಿಯ ವಿತರಣಾ ಮುಖ್ಯಸ್ಥ ಬಂಧನ 

ಟಿಆರ್​ಪಿ ಹಗರಣದಲ್ಲಿ ಕಳೆದ ತಿಂಗಳು ರಿಪಬ್ಲಿಕ್ ಟಿವಿಯ ಡಿಸ್ಟ್ರಿಬ್ಯೂಶನ್ ಮುಖ್ಯಸ್ಥ ಘನ್​ಶ್ಯಾಮ್​ರನ್ನು ಬಂಧಿಸಲಾಗಿತ್ತು. ನಂತರ ಮುಂಬೈ ನ್ಯಾಯಾಲಯ ಜಾಮೀನು ನೀಡಿ ಬಿಡುಗಡೆಯಾಗಿದ್ದರು. ಘನ್​ಶ್ಯಾಮ್​ಗೆ ವಿಚಾರಣೆ ವೇಳೆ ಪೊಲೀಸರು ಹಿಂಸೆ ನೀಡಿದ್ದಾರೆ ಎಂದು ರಿಪಬ್ಲಿಕ್ ಟಿವಿ ಆರೋಪಿಸಿತ್ತು.

ಟಿಆರ್​ಪಿ ವಂಚನೆ ಪ್ರಕರಣದ ತನಿಖೆ ನಡೆಸುತ್ತಿರುವ ಮೂರು ಚಾನೆಲ್​ಗಳಲ್ಲಿ ರಿಪಬ್ಲಿಕ್ ಟಿವಿಯೂ ಸೇರಿದೆ. ಒಂದಷ್ಟು ಮನೆಗಳಲ್ಲಿ ಸದಾ ರಿಪಬ್ಲಿಕ್ ಚಾನಲ್​ ಆನ್​ ಇರುವಂತೆ ಅವರಿಗೆ ತಿಂಗಳಿಗೆ ₹ 400-₹500 ಪಾವತಿಸಲಾಗುತ್ತಿದೆ ಎಂದು ಪ್ರಕರಣದ ತನಿಖೆ ನಡೆಸುತ್ತಿರುವ ಪೊಲೀಸ್ ಆಯುಕ್ತ ಪರಮ್ ಬಿರ್ ಸಿಂಗ್ ತಿಳಿಸಿದ್ದಾರೆ.

ಸಂಪಾದಕ ಅರ್ನಬ್ ಗೋಸ್ವಾಮಿಗೆ 14 ದಿನಗಳ ನ್ಯಾಯಾಂಗ ಬಂಧನ

Published On - 1:34 pm, Sun, 13 December 20

Follow Us
‘ಕಂದಮ್ಮ’ ಹಾಡಿನ ವಿಚಾರದಲ್ಲಿ ಮಗಳ ಜತೆ ದುನಿಯಾ ವಿಜಯ್ ಪ್ರೀತಿಯ ಗಲಾಟೆ
‘ಕಂದಮ್ಮ’ ಹಾಡಿನ ವಿಚಾರದಲ್ಲಿ ಮಗಳ ಜತೆ ದುನಿಯಾ ವಿಜಯ್ ಪ್ರೀತಿಯ ಗಲಾಟೆ
ಶಾಸ್ತ್ರದ ಪ್ರಕಾರ ಪತ್ನಿ ಚೆನ್ನಮ್ಮನನ್ನು ಕಳಿಸಿಕೊಟ್ಟ ದೇವೇಗೌಡ್ರು
ಶಾಸ್ತ್ರದ ಪ್ರಕಾರ ಪತ್ನಿ ಚೆನ್ನಮ್ಮನನ್ನು ಕಳಿಸಿಕೊಟ್ಟ ದೇವೇಗೌಡ್ರು
ತಾಯಿ ಚೆನ್ನಮ್ಮ ಅಂತಿಮ ಸಂಸ್ಕಾರದ ಬಳಿಕ ಕುಮಾರಸ್ವಾಮಿ ಭಾವುಕ ಮಾತು
ತಾಯಿ ಚೆನ್ನಮ್ಮ ಅಂತಿಮ ಸಂಸ್ಕಾರದ ಬಳಿಕ ಕುಮಾರಸ್ವಾಮಿ ಭಾವುಕ ಮಾತು
ಮಣ್ಣಲ್ಲಿ ಮಣ್ಣಾದ ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ‘ಚೆನ್ನಮ್ಮ‘
ಮಣ್ಣಲ್ಲಿ ಮಣ್ಣಾದ ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ‘ಚೆನ್ನಮ್ಮ‘
ಅಂತ್ಯಕ್ರಿಯೆಗೂ ಮುನ್ನ ಚೆನ್ನಮ್ಮನ ಬಗ್ಗೆ ಹೆಚ್​​​​ಡಿಡಿ ಭಾವುಕ ಮಾತು
ಅಂತ್ಯಕ್ರಿಯೆಗೂ ಮುನ್ನ ಚೆನ್ನಮ್ಮನ ಬಗ್ಗೆ ಹೆಚ್​​​​ಡಿಡಿ ಭಾವುಕ ಮಾತು
ಪ್ರೀತಿಯ ಚುಂಬನ: ಪುತ್ರ ರೇವಣ್ಣರಿಂದ ತಾಯಿಗೆ ಅಂತಿನ ನಮನ
ಪ್ರೀತಿಯ ಚುಂಬನ: ಪುತ್ರ ರೇವಣ್ಣರಿಂದ ತಾಯಿಗೆ ಅಂತಿನ ನಮನ
ತಾಯಿ ಹಣೆಗೆ ಮುತ್ತಿಟ್ಟು ಕಣ್ಣೀರು ಹಾಕಿದ ಹೆಚ್​​​​.ಡಿ ಕುಮಾರಸ್ವಾಮಿ
ತಾಯಿ ಹಣೆಗೆ ಮುತ್ತಿಟ್ಟು ಕಣ್ಣೀರು ಹಾಕಿದ ಹೆಚ್​​​​.ಡಿ ಕುಮಾರಸ್ವಾಮಿ
ಚೆನ್ನಮ್ಮರ ಅಂತಿಮ ವಿಧಿವಿಧಾನ ಕಾರ್ಯ ನೆರವೇರಿಸುವವರು ಇವರೇ
ಚೆನ್ನಮ್ಮರ ಅಂತಿಮ ವಿಧಿವಿಧಾನ ಕಾರ್ಯ ನೆರವೇರಿಸುವವರು ಇವರೇ
ಚನ್ನಮ್ಮ ಪಾರ್ಥಿವ ಶರೀರ ಹೊತ್ತು ತರಲು ಹೂವಿನ ಪಲ್ಲಕಿ ಹೇಗಿದೆ ನೋಡಿ
ಚನ್ನಮ್ಮ ಪಾರ್ಥಿವ ಶರೀರ ಹೊತ್ತು ತರಲು ಹೂವಿನ ಪಲ್ಲಕಿ ಹೇಗಿದೆ ನೋಡಿ
ಸೇತುವೆ ಸರಳು ಕಟ್: ರಾಯಚೂರು-ಮಂತ್ರಾಲಯ ಮಾರ್ಗದಲ್ಲಿ ಟ್ರಾಫಿಕ್‌ ಜಾಮ್‌
ಸೇತುವೆ ಸರಳು ಕಟ್: ರಾಯಚೂರು-ಮಂತ್ರಾಲಯ ಮಾರ್ಗದಲ್ಲಿ ಟ್ರಾಫಿಕ್‌ ಜಾಮ್‌