AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟಿಆರ್​ಪಿ ಹಗರಣ: ರಿಪಬ್ಲಿಕ್ ಟಿವಿ ಸಿಇಒ ವಿಕಾಸ್ ಖನ್​ಚಂದಾನಿ ಬಂಧನ

ಹಂಸಾ ಸಂಶೋಧನಾ ಅಧಿಕಾರಿ ನಿತಿನ್ ದೇವಕರ್ ಸಲ್ಲಿಸಿದ ದೂರಿನ ಹಿನ್ನೆಲೆಯಲ್ಲಿ ಅಕ್ಟೋಬರ್ 6 ರಂದು ಮುಂಬೈ ಪೊಲೀಸರು ಪ್ರಥಮ ತನಿಖೆ ಆರಂಭಿಸಿದ್ದರು.

ಟಿಆರ್​ಪಿ ಹಗರಣ: ರಿಪಬ್ಲಿಕ್ ಟಿವಿ ಸಿಇಒ ವಿಕಾಸ್ ಖನ್​ಚಂದಾನಿ ಬಂಧನ
ರಿಪಬ್ಲಿಕ್ ಟಿವಿ ಸಿಇಒ ವಿಕಾಸ್ ಖನ್​ಚಂದಾನಿ ಬಂಧನ.
sandhya thejappa
sandhya thejappa| Edited By: |

Updated on:Dec 29, 2020 | 10:58 AM

Share

ಮುಂಬೈ: ಟೆಲಿವಿಷನ್ ರೇಟಿಂಗ್ ಪಾಯಿಂಟ್ಸ್ (ಟಿಆರ್​ಪಿ) ಹಗರಣ  ಸಂಬಂಧಪಟ್ಟಂತೆ ರಿಪಬ್ಲಿಕ್ ಟಿವಿ ಸಿಇಒ ವಿಕಾಸ್​ ಖನ್​ಚಂದಾನಿಯನ್ನು ಮುಂಬೈ ಪೊಲೀಸರು ಇಂದು ಬಂಧಿಸಿದ್ದಾರೆ.

ನಕಲಿ ಟಿವಿ ರೇಟಿಂಗ್ ಹಗರಣ ಅಕ್ಟೋಬರ್​ ಪ್ರಾರಂಭದಲ್ಲಿ ಬೆಳಕಿಗೆ ಬಂದಿದೆ. ಹಂಸ ಸಂಶೋಧನಾಧಿಕಾರಿ ನಿತಿನ್​ ದೇವಕರ್​ ನೀಡಿದ್ದ ದೂರಿನ ಅನ್ವಯ ಅ.6ರಂದು ಎಫ್​ಐಆರ್ ದಾಖಲಿಸಿದ ಮುಂಬೈ ಪೊಲೀಸರು ತನಿಖೆ ನಡೆಸುತ್ತಿದ್ದು, ಖನ್​ಚಂದಾನಿ ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬಂಧಿತನಾದ 13ನೇ ವ್ಯಕ್ತಿ.

ಟಿಆರ್​ಪಿಯನ್ನು ನಿರ್ಣಯಿಸುವ ರೇಟಿಂಗ್ ಏಜೆನ್ಸಿ ಬ್ರಾಡ್​ಕಾಸ್ಟ್​ ಆಡಿಯನ್ಸ್​ ರಿಸರ್ಚ್​ ಕೌನ್ಸಿಲ್​ (BARC) ಕೆಲವು ಆಯ್ದ ಮನೆಗಳಲ್ಲಿ ಮಾತ್ರ ರೇಟಿಂಗ್​ ಪಾಯಿಂಟ್​ಗಳನ್ನು ಮೌಲ್ಯಮಾಪನ ಮಾಡುತ್ತಿದೆ. ಈ ಮೂಲಕ ಕೆಲವು ಚಾನಲ್​ಗಳು ನಕಲಿ ಟಿಆರ್​ಪಿ ನಂಬರ್ ತೋರಿಸುತ್ತಿವೆ ಎಂದು ನಿತಿನ್ ದೇವಕರ್ ದೂರಿನಲ್ಲಿ ಉಲ್ಲೇಖಿಸಿದ್ದರು.

ರಿಪಬ್ಲಿಕ್ ಟಿವಿಯ ವಿತರಣಾ ಮುಖ್ಯಸ್ಥ ಬಂಧನ 

ಟಿಆರ್​ಪಿ ಹಗರಣದಲ್ಲಿ ಕಳೆದ ತಿಂಗಳು ರಿಪಬ್ಲಿಕ್ ಟಿವಿಯ ಡಿಸ್ಟ್ರಿಬ್ಯೂಶನ್ ಮುಖ್ಯಸ್ಥ ಘನ್​ಶ್ಯಾಮ್​ರನ್ನು ಬಂಧಿಸಲಾಗಿತ್ತು. ನಂತರ ಮುಂಬೈ ನ್ಯಾಯಾಲಯ ಜಾಮೀನು ನೀಡಿ ಬಿಡುಗಡೆಯಾಗಿದ್ದರು. ಘನ್​ಶ್ಯಾಮ್​ಗೆ ವಿಚಾರಣೆ ವೇಳೆ ಪೊಲೀಸರು ಹಿಂಸೆ ನೀಡಿದ್ದಾರೆ ಎಂದು ರಿಪಬ್ಲಿಕ್ ಟಿವಿ ಆರೋಪಿಸಿತ್ತು.

ಟಿಆರ್​ಪಿ ವಂಚನೆ ಪ್ರಕರಣದ ತನಿಖೆ ನಡೆಸುತ್ತಿರುವ ಮೂರು ಚಾನೆಲ್​ಗಳಲ್ಲಿ ರಿಪಬ್ಲಿಕ್ ಟಿವಿಯೂ ಸೇರಿದೆ. ಒಂದಷ್ಟು ಮನೆಗಳಲ್ಲಿ ಸದಾ ರಿಪಬ್ಲಿಕ್ ಚಾನಲ್​ ಆನ್​ ಇರುವಂತೆ ಅವರಿಗೆ ತಿಂಗಳಿಗೆ ₹ 400-₹500 ಪಾವತಿಸಲಾಗುತ್ತಿದೆ ಎಂದು ಪ್ರಕರಣದ ತನಿಖೆ ನಡೆಸುತ್ತಿರುವ ಪೊಲೀಸ್ ಆಯುಕ್ತ ಪರಮ್ ಬಿರ್ ಸಿಂಗ್ ತಿಳಿಸಿದ್ದಾರೆ.

ಸಂಪಾದಕ ಅರ್ನಬ್ ಗೋಸ್ವಾಮಿಗೆ 14 ದಿನಗಳ ನ್ಯಾಯಾಂಗ ಬಂಧನ

Published On - 1:34 pm, Sun, 13 December 20

Follow Us
sandhya thejappa
sandhya thejappa
ಪೆದ್ದಿ ರಿಲೀಸ್​​ಗೂ ಮೊದಲು ಕಾಲ್ನಡಿಗೆಯಲ್ಲಿ ತಿರುಪತಿಗೆ ಬಂದ ಜಾನ್ವಿ
ಪೆದ್ದಿ ರಿಲೀಸ್​​ಗೂ ಮೊದಲು ಕಾಲ್ನಡಿಗೆಯಲ್ಲಿ ತಿರುಪತಿಗೆ ಬಂದ ಜಾನ್ವಿ
ವಿದ್ಯಾರ್ಥಿ ಜೀವನದಲ್ಲಿ ಇವುಗಳಿದ್ದರೆ ಉದ್ಧಾರ ಗ್ಯಾರಂಟಿ
ವಿದ್ಯಾರ್ಥಿ ಜೀವನದಲ್ಲಿ ಇವುಗಳಿದ್ದರೆ ಉದ್ಧಾರ ಗ್ಯಾರಂಟಿ
ಸಾಯಿಬಾಬಾ ನೆನೆದರೆ ಕಷ್ಟಗಳೆಲ್ಲಾ ನಿವಾರಣೆ
ಸಾಯಿಬಾಬಾ ನೆನೆದರೆ ಕಷ್ಟಗಳೆಲ್ಲಾ ನಿವಾರಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ