AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟಿಆರ್​ಪಿ ಹಗರಣ: ರಿಪಬ್ಲಿಕ್ ಟಿವಿ ಸಿಇಒ ವಿಕಾಸ್ ಖನ್​ಚಂದಾನಿ ಬಂಧನ

ಹಂಸಾ ಸಂಶೋಧನಾ ಅಧಿಕಾರಿ ನಿತಿನ್ ದೇವಕರ್ ಸಲ್ಲಿಸಿದ ದೂರಿನ ಹಿನ್ನೆಲೆಯಲ್ಲಿ ಅಕ್ಟೋಬರ್ 6 ರಂದು ಮುಂಬೈ ಪೊಲೀಸರು ಪ್ರಥಮ ತನಿಖೆ ಆರಂಭಿಸಿದ್ದರು.

ಟಿಆರ್​ಪಿ ಹಗರಣ: ರಿಪಬ್ಲಿಕ್ ಟಿವಿ ಸಿಇಒ ವಿಕಾಸ್ ಖನ್​ಚಂದಾನಿ ಬಂಧನ
ರಿಪಬ್ಲಿಕ್ ಟಿವಿ ಸಿಇಒ ವಿಕಾಸ್ ಖನ್​ಚಂದಾನಿ ಬಂಧನ.
sandhya thejappa
| Edited By: |

Updated on:Dec 29, 2020 | 10:58 AM

Share

ಮುಂಬೈ: ಟೆಲಿವಿಷನ್ ರೇಟಿಂಗ್ ಪಾಯಿಂಟ್ಸ್ (ಟಿಆರ್​ಪಿ) ಹಗರಣ  ಸಂಬಂಧಪಟ್ಟಂತೆ ರಿಪಬ್ಲಿಕ್ ಟಿವಿ ಸಿಇಒ ವಿಕಾಸ್​ ಖನ್​ಚಂದಾನಿಯನ್ನು ಮುಂಬೈ ಪೊಲೀಸರು ಇಂದು ಬಂಧಿಸಿದ್ದಾರೆ.

ನಕಲಿ ಟಿವಿ ರೇಟಿಂಗ್ ಹಗರಣ ಅಕ್ಟೋಬರ್​ ಪ್ರಾರಂಭದಲ್ಲಿ ಬೆಳಕಿಗೆ ಬಂದಿದೆ. ಹಂಸ ಸಂಶೋಧನಾಧಿಕಾರಿ ನಿತಿನ್​ ದೇವಕರ್​ ನೀಡಿದ್ದ ದೂರಿನ ಅನ್ವಯ ಅ.6ರಂದು ಎಫ್​ಐಆರ್ ದಾಖಲಿಸಿದ ಮುಂಬೈ ಪೊಲೀಸರು ತನಿಖೆ ನಡೆಸುತ್ತಿದ್ದು, ಖನ್​ಚಂದಾನಿ ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬಂಧಿತನಾದ 13ನೇ ವ್ಯಕ್ತಿ.

ಟಿಆರ್​ಪಿಯನ್ನು ನಿರ್ಣಯಿಸುವ ರೇಟಿಂಗ್ ಏಜೆನ್ಸಿ ಬ್ರಾಡ್​ಕಾಸ್ಟ್​ ಆಡಿಯನ್ಸ್​ ರಿಸರ್ಚ್​ ಕೌನ್ಸಿಲ್​ (BARC) ಕೆಲವು ಆಯ್ದ ಮನೆಗಳಲ್ಲಿ ಮಾತ್ರ ರೇಟಿಂಗ್​ ಪಾಯಿಂಟ್​ಗಳನ್ನು ಮೌಲ್ಯಮಾಪನ ಮಾಡುತ್ತಿದೆ. ಈ ಮೂಲಕ ಕೆಲವು ಚಾನಲ್​ಗಳು ನಕಲಿ ಟಿಆರ್​ಪಿ ನಂಬರ್ ತೋರಿಸುತ್ತಿವೆ ಎಂದು ನಿತಿನ್ ದೇವಕರ್ ದೂರಿನಲ್ಲಿ ಉಲ್ಲೇಖಿಸಿದ್ದರು.

ರಿಪಬ್ಲಿಕ್ ಟಿವಿಯ ವಿತರಣಾ ಮುಖ್ಯಸ್ಥ ಬಂಧನ 

ಟಿಆರ್​ಪಿ ಹಗರಣದಲ್ಲಿ ಕಳೆದ ತಿಂಗಳು ರಿಪಬ್ಲಿಕ್ ಟಿವಿಯ ಡಿಸ್ಟ್ರಿಬ್ಯೂಶನ್ ಮುಖ್ಯಸ್ಥ ಘನ್​ಶ್ಯಾಮ್​ರನ್ನು ಬಂಧಿಸಲಾಗಿತ್ತು. ನಂತರ ಮುಂಬೈ ನ್ಯಾಯಾಲಯ ಜಾಮೀನು ನೀಡಿ ಬಿಡುಗಡೆಯಾಗಿದ್ದರು. ಘನ್​ಶ್ಯಾಮ್​ಗೆ ವಿಚಾರಣೆ ವೇಳೆ ಪೊಲೀಸರು ಹಿಂಸೆ ನೀಡಿದ್ದಾರೆ ಎಂದು ರಿಪಬ್ಲಿಕ್ ಟಿವಿ ಆರೋಪಿಸಿತ್ತು.

ಟಿಆರ್​ಪಿ ವಂಚನೆ ಪ್ರಕರಣದ ತನಿಖೆ ನಡೆಸುತ್ತಿರುವ ಮೂರು ಚಾನೆಲ್​ಗಳಲ್ಲಿ ರಿಪಬ್ಲಿಕ್ ಟಿವಿಯೂ ಸೇರಿದೆ. ಒಂದಷ್ಟು ಮನೆಗಳಲ್ಲಿ ಸದಾ ರಿಪಬ್ಲಿಕ್ ಚಾನಲ್​ ಆನ್​ ಇರುವಂತೆ ಅವರಿಗೆ ತಿಂಗಳಿಗೆ ₹ 400-₹500 ಪಾವತಿಸಲಾಗುತ್ತಿದೆ ಎಂದು ಪ್ರಕರಣದ ತನಿಖೆ ನಡೆಸುತ್ತಿರುವ ಪೊಲೀಸ್ ಆಯುಕ್ತ ಪರಮ್ ಬಿರ್ ಸಿಂಗ್ ತಿಳಿಸಿದ್ದಾರೆ.

ಸಂಪಾದಕ ಅರ್ನಬ್ ಗೋಸ್ವಾಮಿಗೆ 14 ದಿನಗಳ ನ್ಯಾಯಾಂಗ ಬಂಧನ

Published On - 1:34 pm, Sun, 13 December 20

Follow Us
ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು
ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು
ರಾಯಚೂರಲ್ಲಿ ಪೊಲೀಸ್ ಶ್ವಾನಗಳಿಗೆ ಫ್ಯಾನ್, ಏರ್ ಕೂಲರ್​ ವ್ಯವಸ್ಥೆ
ರಾಯಚೂರಲ್ಲಿ ಪೊಲೀಸ್ ಶ್ವಾನಗಳಿಗೆ ಫ್ಯಾನ್, ಏರ್ ಕೂಲರ್​ ವ್ಯವಸ್ಥೆ
ಅನ್ನಭಾಗ್ಯ ಅಕ್ಕಿಯ ಅಕ್ರಮ ದಾಸ್ತಾನು: ದಂಧೆಕೋರರಿಗೆ ಬಿಗ್​​ ಶಾಕ್​​
ಅನ್ನಭಾಗ್ಯ ಅಕ್ಕಿಯ ಅಕ್ರಮ ದಾಸ್ತಾನು: ದಂಧೆಕೋರರಿಗೆ ಬಿಗ್​​ ಶಾಕ್​​
ಡಾ ರಾಜ್​ಕುಮಾರ್ ಗೀತ ನಮನ ಕಾರ್ಯಕ್ರಮದಲ್ಲಿ ಸಾಧು ಕೋಕಿಲ ಮಾತು
ಡಾ ರಾಜ್​ಕುಮಾರ್ ಗೀತ ನಮನ ಕಾರ್ಯಕ್ರಮದಲ್ಲಿ ಸಾಧು ಕೋಕಿಲ ಮಾತು
ಸಮಂತಾ ಸೆಟ್​​​ನಲ್ಲಿ ಹೇಗಿರ್ತಾರೆ? ವಿವರಿಸಿದ ದಿಗಂತ್
ಸಮಂತಾ ಸೆಟ್​​​ನಲ್ಲಿ ಹೇಗಿರ್ತಾರೆ? ವಿವರಿಸಿದ ದಿಗಂತ್
KSRTC ಬಸ್​ ಅಡ್ಡಗಟ್ಟಿ ಕುಡುಕರ ಕಿರಿಕ್​​: ಸೆಲ್ಫಿ ತೆಗೆದು ಹುಚ್ಚಾಟ
KSRTC ಬಸ್​ ಅಡ್ಡಗಟ್ಟಿ ಕುಡುಕರ ಕಿರಿಕ್​​: ಸೆಲ್ಫಿ ತೆಗೆದು ಹುಚ್ಚಾಟ
ಮಗುವನ್ನು ಸಾಕ್ಷಾತ್ ದೇವರಂತೆ ಬಂದು ರಕ್ಷಿಸಿದ ಪೊಲೀಸರು!
ಮಗುವನ್ನು ಸಾಕ್ಷಾತ್ ದೇವರಂತೆ ಬಂದು ರಕ್ಷಿಸಿದ ಪೊಲೀಸರು!
ಲಕ್ಷ್ಮೀಪುರ ಬಿಡಿಎ ಲೇಔಟಲ್ಲಿ ಚೀಲದಲ್ಲಿ ಅಪರಿಚಿತ ಶವ ಪತ್ತೆ, ಬೆಚ್ಚಿದ ಜನ
ಲಕ್ಷ್ಮೀಪುರ ಬಿಡಿಎ ಲೇಔಟಲ್ಲಿ ಚೀಲದಲ್ಲಿ ಅಪರಿಚಿತ ಶವ ಪತ್ತೆ, ಬೆಚ್ಚಿದ ಜನ
ಅಣ್ಣಾವ್ರ ಸಮಾಧಿಗೆ ಪೂಜೆ ಮಾಡಿದ ರಾಘಣ್ಣ ಮತ್ತು ಶಾಸಕ ಗೋಪಾಲಯ್ಯ
ಅಣ್ಣಾವ್ರ ಸಮಾಧಿಗೆ ಪೂಜೆ ಮಾಡಿದ ರಾಘಣ್ಣ ಮತ್ತು ಶಾಸಕ ಗೋಪಾಲಯ್ಯ
ಸಿಇಟಿ ಬರೆಯಲು ಬಂದ ವಿದ್ಯಾರ್ಥಿಯ ಜನಿವಾರ ತೆಗೆಸಿದ್ರಾ ಸಿಬ್ಬಂದಿ?
ಸಿಇಟಿ ಬರೆಯಲು ಬಂದ ವಿದ್ಯಾರ್ಥಿಯ ಜನಿವಾರ ತೆಗೆಸಿದ್ರಾ ಸಿಬ್ಬಂದಿ?