AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟಿಆರ್​ಪಿ ಹಗರಣ: ರಿಪಬ್ಲಿಕ್ ಟಿವಿ ಸಿಇಒ ವಿಕಾಸ್ ಖನ್​ಚಂದಾನಿ ಬಂಧನ

ಹಂಸಾ ಸಂಶೋಧನಾ ಅಧಿಕಾರಿ ನಿತಿನ್ ದೇವಕರ್ ಸಲ್ಲಿಸಿದ ದೂರಿನ ಹಿನ್ನೆಲೆಯಲ್ಲಿ ಅಕ್ಟೋಬರ್ 6 ರಂದು ಮುಂಬೈ ಪೊಲೀಸರು ಪ್ರಥಮ ತನಿಖೆ ಆರಂಭಿಸಿದ್ದರು.

ಟಿಆರ್​ಪಿ ಹಗರಣ: ರಿಪಬ್ಲಿಕ್ ಟಿವಿ ಸಿಇಒ ವಿಕಾಸ್ ಖನ್​ಚಂದಾನಿ ಬಂಧನ
ರಿಪಬ್ಲಿಕ್ ಟಿವಿ ಸಿಇಒ ವಿಕಾಸ್ ಖನ್​ಚಂದಾನಿ ಬಂಧನ.
sandhya thejappa
| Edited By: |

Updated on:Dec 29, 2020 | 10:58 AM

Share

ಮುಂಬೈ: ಟೆಲಿವಿಷನ್ ರೇಟಿಂಗ್ ಪಾಯಿಂಟ್ಸ್ (ಟಿಆರ್​ಪಿ) ಹಗರಣ  ಸಂಬಂಧಪಟ್ಟಂತೆ ರಿಪಬ್ಲಿಕ್ ಟಿವಿ ಸಿಇಒ ವಿಕಾಸ್​ ಖನ್​ಚಂದಾನಿಯನ್ನು ಮುಂಬೈ ಪೊಲೀಸರು ಇಂದು ಬಂಧಿಸಿದ್ದಾರೆ.

ನಕಲಿ ಟಿವಿ ರೇಟಿಂಗ್ ಹಗರಣ ಅಕ್ಟೋಬರ್​ ಪ್ರಾರಂಭದಲ್ಲಿ ಬೆಳಕಿಗೆ ಬಂದಿದೆ. ಹಂಸ ಸಂಶೋಧನಾಧಿಕಾರಿ ನಿತಿನ್​ ದೇವಕರ್​ ನೀಡಿದ್ದ ದೂರಿನ ಅನ್ವಯ ಅ.6ರಂದು ಎಫ್​ಐಆರ್ ದಾಖಲಿಸಿದ ಮುಂಬೈ ಪೊಲೀಸರು ತನಿಖೆ ನಡೆಸುತ್ತಿದ್ದು, ಖನ್​ಚಂದಾನಿ ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬಂಧಿತನಾದ 13ನೇ ವ್ಯಕ್ತಿ.

ಟಿಆರ್​ಪಿಯನ್ನು ನಿರ್ಣಯಿಸುವ ರೇಟಿಂಗ್ ಏಜೆನ್ಸಿ ಬ್ರಾಡ್​ಕಾಸ್ಟ್​ ಆಡಿಯನ್ಸ್​ ರಿಸರ್ಚ್​ ಕೌನ್ಸಿಲ್​ (BARC) ಕೆಲವು ಆಯ್ದ ಮನೆಗಳಲ್ಲಿ ಮಾತ್ರ ರೇಟಿಂಗ್​ ಪಾಯಿಂಟ್​ಗಳನ್ನು ಮೌಲ್ಯಮಾಪನ ಮಾಡುತ್ತಿದೆ. ಈ ಮೂಲಕ ಕೆಲವು ಚಾನಲ್​ಗಳು ನಕಲಿ ಟಿಆರ್​ಪಿ ನಂಬರ್ ತೋರಿಸುತ್ತಿವೆ ಎಂದು ನಿತಿನ್ ದೇವಕರ್ ದೂರಿನಲ್ಲಿ ಉಲ್ಲೇಖಿಸಿದ್ದರು.

ರಿಪಬ್ಲಿಕ್ ಟಿವಿಯ ವಿತರಣಾ ಮುಖ್ಯಸ್ಥ ಬಂಧನ 

ಟಿಆರ್​ಪಿ ಹಗರಣದಲ್ಲಿ ಕಳೆದ ತಿಂಗಳು ರಿಪಬ್ಲಿಕ್ ಟಿವಿಯ ಡಿಸ್ಟ್ರಿಬ್ಯೂಶನ್ ಮುಖ್ಯಸ್ಥ ಘನ್​ಶ್ಯಾಮ್​ರನ್ನು ಬಂಧಿಸಲಾಗಿತ್ತು. ನಂತರ ಮುಂಬೈ ನ್ಯಾಯಾಲಯ ಜಾಮೀನು ನೀಡಿ ಬಿಡುಗಡೆಯಾಗಿದ್ದರು. ಘನ್​ಶ್ಯಾಮ್​ಗೆ ವಿಚಾರಣೆ ವೇಳೆ ಪೊಲೀಸರು ಹಿಂಸೆ ನೀಡಿದ್ದಾರೆ ಎಂದು ರಿಪಬ್ಲಿಕ್ ಟಿವಿ ಆರೋಪಿಸಿತ್ತು.

ಟಿಆರ್​ಪಿ ವಂಚನೆ ಪ್ರಕರಣದ ತನಿಖೆ ನಡೆಸುತ್ತಿರುವ ಮೂರು ಚಾನೆಲ್​ಗಳಲ್ಲಿ ರಿಪಬ್ಲಿಕ್ ಟಿವಿಯೂ ಸೇರಿದೆ. ಒಂದಷ್ಟು ಮನೆಗಳಲ್ಲಿ ಸದಾ ರಿಪಬ್ಲಿಕ್ ಚಾನಲ್​ ಆನ್​ ಇರುವಂತೆ ಅವರಿಗೆ ತಿಂಗಳಿಗೆ ₹ 400-₹500 ಪಾವತಿಸಲಾಗುತ್ತಿದೆ ಎಂದು ಪ್ರಕರಣದ ತನಿಖೆ ನಡೆಸುತ್ತಿರುವ ಪೊಲೀಸ್ ಆಯುಕ್ತ ಪರಮ್ ಬಿರ್ ಸಿಂಗ್ ತಿಳಿಸಿದ್ದಾರೆ.

ಸಂಪಾದಕ ಅರ್ನಬ್ ಗೋಸ್ವಾಮಿಗೆ 14 ದಿನಗಳ ನ್ಯಾಯಾಂಗ ಬಂಧನ

Published On - 1:34 pm, Sun, 13 December 20

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ