ವಿಕಸಿತ ಭಾರತ ಸಂಕಲ್ಪ ಯಾತ್ರೆಯಲ್ಲಿ 1 ಕೋಟಿಗೂ ಅಧಿಕ ಜನರು ಭಾಗಿ

ಪ್ರಧಾನಿ ನರೇಂದ್ರ ಮೋದಿ ಅವರು ನವೆಂಬರ್ 15 ರಂದು ಜಾರ್ಖಂಡ್​ನ ಖುಂಟಿಯಲ್ಲಿ ಉದ್ಘಾಟಿಸಿದರು. ಅಂದಿನಿಂದ ಶುರುವಾದ ವಿಕಸಿತ ಭಾರತ್ ಸಂಕಲ್ಪ ಯಾತ್ರೆಯು ರಾಷ್ಟ್ರವ್ಯಾಪಿ ನಾಗರಿಕರೊಂದಿಗೆ ಸಂಪರ್ಕವನ್ನು ಬೆಳೆಸುವ ಪರಿವರ್ತಕ ಯಾತ್ರೆಯಾಗಿ ಹೊರಹೊಮ್ಮಿದೆ.

ವಿಕಸಿತ ಭಾರತ ಸಂಕಲ್ಪ ಯಾತ್ರೆಯಲ್ಲಿ 1 ಕೋಟಿಗೂ ಅಧಿಕ ಜನರು ಭಾಗಿ
ವಿಕಸಿತ ಭಾರತ್ ಸಂಕಲ್ಪ ಯಾತ್ರೆ
Follow us
| Updated By: ಕಿರಣ್ ಹನುಮಂತ್​ ಮಾದಾರ್

Updated on: Dec 08, 2023 | 5:25 PM

ಕೇಂದ್ರ ಸರ್ಕಾರದ ಯೋಜನೆಗಳ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸುವ ವಿಕಸಿತ ಭಾರತ್ ಸಂಕಲ್ಪ ಯಾತ್ರೆ (Viksit Bharat Sankalp Yatra)ಯನ್ನು ಪ್ರಧಾನಿ ನರೇಂದ್ರ ಮೋದಿ(Narendra Modi) ಅವರು ನವೆಂಬರ್ 15 ರಂದು ಜಾರ್ಖಂಡ್​ನ ಖುಂಟಿಯಲ್ಲಿ ಉದ್ಘಾಟಿಸಿದರು. ಅಂದಿನಿಂದ ಶುರುವಾದ ವಿಕಸಿತ ಭಾರತ್ ಸಂಕಲ್ಪ ಯಾತ್ರೆಯು ರಾಷ್ಟ್ರವ್ಯಾಪಿ ನಾಗರಿಕರೊಂದಿಗೆ ಸಂಪರ್ಕವನ್ನು ಬೆಳೆಸುವ ಪರಿವರ್ತಕ ಯಾತ್ರೆಯಾಗಿ ಹೊರಹೊಮ್ಮಿದೆ.

ಡಿಸೆಂಬರ್ 7, 2023 ರವರೆಗೆ, ಈ ಯಾತ್ರೆಯು ದೇಶಾದ್ಯಂತ 36,000 ಕ್ಕೂ ಹೆಚ್ಚು ಗ್ರಾಮ ಪಂಚಾಯಿತಿಗಳನ್ನು ತಲುಪಿದ್ದು, ಮತ್ತು ಬರೊಬ್ಬರಿ 1 ಕೋಟಿಗೂ ಹೆಚ್ಚು ನಾಗರಿಕರು ಇದರಲ್ಲಿ ಭಾಗವಹಿಸಿದ್ದಾರೆ ಎಂದು ಎಂಇಐಟಿಐ ಅಭಿವೃದ್ಧಿಪಡಿಸಿದ ಕಸ್ಟಮೈಸ್ ಮಾಡಿದ ಪೋರ್ಟಲ್​ನಲ್ಲಿ ಸೆರೆಹಿಡಿಯಲಾದ ಅಂಕಿ-ಅಂಶ ತಿಳಿಸಿದೆ. 37 ಲಕ್ಷಕ್ಕೂ ಹೆಚ್ಚು ಜನರು ಭಾಗವಹಿಸುವ ಮೂಲಕ ಉತ್ತರ ಪ್ರದೇಶ ಅಗ್ರಸ್ಥಾನದಲ್ಲಿದ್ದರೆ, ಮಹಾರಾಷ್ಟ್ರ 12.07 ಲಕ್ಷ ಮತ್ತು ಗುಜರಾತ್​ನಲ್ಲಿ 11.58 ಲಕ್ಷ ಜನರು ಭಾಗವಹಿಸಿದ್ದಾರೆ. ಜೊತೆಗೆ ಜಮ್ಮು ಮತ್ತು ಕಾಶ್ಮೀರದಲ್ಲೂ ಪ್ರೋತ್ಸಾಹದಾಯಕ ಸ್ವಾಗತ ದೊರೆತಿದೆ. ಇಲ್ಲಿಯವರೆಗೆ 9 ಲಕ್ಷಕ್ಕೂ ಹೆಚ್ಚು ಜನರು ಭಾಗವಹಿಸಿದ್ದಾರೆ.

ಇದನ್ನೂ ಓದಿ:ಪ್ರಧಾನಿ ಮೋದಿ ಚಾಲ್ತಿ ನೀಡಿರುವ ವಿಕಸಿತ ಭಾರತ ಸಂಕಲ್ಪ ಯಾತ್ರೆ ವಿಶೇಷತೆಗಳು, ಅದರ ಪ್ರಯೋಜನಗಳು ಏನು?

ದಿನ ಕಳೆದಂತೆ ಹೆಚ್ಚು ಹೆಚ್ಚು ಜನರು ಭಾಗವಹಿಸುತ್ತಿದ್ದಾರೆ. ಈ ಸಂಕಲ್ಪ ಯಾತ್ರೆಯ ಮೊದಲ ವಾರದಲ್ಲಿ 5 ಲಕ್ಷ ನಾಗರಿಕರು ಭಾಗವಹಿಸಿದ್ದರೆ, ಕಳೆದ 10 ದಿನಗಳಲ್ಲಿ ದೇಶಾದ್ಯಂತ 77 ಲಕ್ಷಕ್ಕೂ ಹೆಚ್ಚು ಜನರು ಯಾತ್ರೆಯಲ್ಲಿ ಭಾಗವಹಿಸಿದ್ದರು. ಕಡಿಮೆ ಅವಧಿಯಲ್ಲಿ, 700 ಕ್ಕೂ ಹೆಚ್ಚು ಸ್ಥಳಗಳನ್ನು ತಲುಪಿದೆ ಮತ್ತು ಒಟ್ಟು 79 ಲಕ್ಷ ವ್ಯಕ್ತಿಗಳು 2047 ರ ವೇಳೆಗೆ ಭಾರತವನ್ನು ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನಾಗಿ ಮಾಡಲು ಶ್ರಮಿಸುವ ಪ್ರತಿಜ್ಞೆಯನ್ನು ತೆಗೆದುಕೊಂಡಿದ್ದಾರೆ. ಈ ಅಭೂತಪೂರ್ವ ಪ್ರಯತ್ನದಲ್ಲಿ, ವ್ಯಾನ್​ಗಳನ್ನು ಬಳಸಿಕೊಂಡು 2.60 ಲಕ್ಷಕ್ಕೂ ಹೆಚ್ಚು ಗ್ರಾಮ ಪಂಚಾಯಿತಿಗಳು ಮತ್ತು 3600 ಕ್ಕೂ ಅಧಿಕ ನಗರ, ಸ್ಥಳೀಯ ಸಂಸ್ಥೆಗಳನ್ನು ತಲುಪಿ, ಸರ್ಕಾರದ ಯೋಜನೆಗಳನ್ನು ತಮ್ಮ ಅನುಕೂಲಕ್ಕಾಗಿ ಬಳಸಿಕೊಳ್ಳಲು ಜನರಿಗೆ ಕರೆ ನೀಡುತ್ತದೆ.

ಮಹಿಳಾ ಕೇಂದ್ರಿತ ಯೋಜನೆಗಳ ಬಗ್ಗೆ ಜಾಗೃತಿ ಮೂಡಿಸುವುದು ಯಾತ್ರೆಯ ಕೇಂದ್ರ ಬಿಂದುವಾಗಿದ್ದು, 46,000 ಕ್ಕೂ ಹೆಚ್ಚು ಫಲಾನುಭವಿಗಳು ಪಿಎಂ ಉಜ್ವಲ ಯೋಜನೆಗೆ ನೋಂದಾಯಿಸಿಕೊಂಡಿದ್ದಾರೆ. ಆರೋಗ್ಯ ಶಿಬಿರಗಳು ಸಹ ದೊಡ್ಡ ಆಕರ್ಷಣೆ ಎಂದು ಸಾಬೀತಾಗಿದೆ ಮತ್ತು ಇಲ್ಲಿಯವರೆಗೆ 22 ಲಕ್ಷ ವ್ಯಕ್ತಿಗಳನ್ನು ಪರೀಕ್ಷಿಸಲಾಗಿದೆ. ವಿಕಸಿತ ಭಾರತ ಸಂಕಲ್ಪ ಯಾತ್ರೆಯ ಭಾಗವಾಗಿ ಪ್ರದರ್ಶಿಸಲಾದ ರೈತರಿಗಾಗಿ ಡ್ರೋನ್ ಪ್ರದರ್ಶನವು ಹೆಚ್ಚಿನ ಕುತೂಹಲವನ್ನು ಕೆರಳಿಸಿದೆ. 15,000 ಮಹಿಳಾ ಸ್ವಸಹಾಯ ಗುಂಪುಗಳಿಗೆ ಡ್ರೋನ್​ಗಳನ್ನು ಒದಗಿಸುವ ಮತ್ತು ಇಬ್ಬರು ಮಹಿಳಾ ಸದಸ್ಯರಿಗೆ ಅಗತ್ಯ ತರಬೇತಿ ನೀಡುವ ‘ಡ್ರೋನ್ ದೀದಿ ಯೋಜನೆ’ ಪ್ರಾರಂಭಿಸುವುದರೊಂದಿಗೆ, ಹೆಚ್ಚಿನ ಸಂಖ್ಯೆಯ ಮಹಿಳೆಯರು ಡ್ರೋನ್ ಹಾರಾಟವನ್ನು ವೀಕ್ಷಿಸಲು ಮುಂದೆ ಬರುತ್ತಿದ್ದಾರೆ. SHG ಗಳು ಡ್ರೋನ್ ಸೇವೆಗಳನ್ನು ಶುಲ್ಕಕ್ಕೆ ಬಾಡಿಗೆಗೆ ನೀಡುತ್ತವೆ, ಇದು ಸ್ವಸಹಾಯ ಗುಂಪಿನ ಸದಸ್ಯರಿಗೆ ಮತ್ತೊಂದು ಆದಾಯದ ಹೊಳೆಯಾಗಿ ಕಾರ್ಯನಿರ್ವಹಿಸುತ್ತದೆ.

ದೇಶದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು