AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಖಾಸಗಿಯಾಗಿ ಅಭಿವೃದ್ಧಿಗೊಂಡ ಭಾರತದ ಮೊದಲ ರಾಕೆಟ್ ‘ವಿಕ್ರಮ್-1’ ಇಂದು ಉಡಾವಣೆ: ಬಾಹ್ಯಾಕಾಶಕ್ಕೆ ಹಾರಲಿವೆ ಪ್ರಧಾನಿ ಮೋದಿ ಪೋಸ್ಟ್‌ಕಾರ್ಡ್‌

ಶ್ರೀಹರಿಕೋಟದಿಂದ ಸ್ಕೈರೂಟ್ ಏರೋಸ್ಪೇಸ್‌ನ 'ವಿಕ್ರಮ್-1' ರಾಕೆಟ್ ಉಡಾವಣೆ ಆಗಲಿದೆ. ಇದು ಭಾರತದಿಂದ ಬಾಹ್ಯಾಕಾಶ ಕಕ್ಷೆ ತಲುಪಲಿರುವ ಮೊದಲ ಸಂಪೂರ್ಣ ಖಾಸಗಿ ರಾಕೆಟ್ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. 'ಮಿಷನ್ ಆಗಮನ್' ಯೋಜನೆಯಡಿ ಈ ಉಡಾವಣೆ ನಡೆಯಲಿದೆ, ಭಾರತದ ಬಾಹ್ಯಾಕಾಶ ಇತಿಹಾಸದಲ್ಲಿ ಸುವರ್ಣ ಅಧ್ಯಾಯ ಬರೆಯಲಿದೆ. ಪ್ರಧಾನಿ ಮೋದಿ ಸೇರಿದಂತೆ ಹಲವರ ಭಾವನಾತ್ಮಕ ಪೋಸ್ಟ್‌ಕಾರ್ಡ್‌ಗಳನ್ನು ಇದು ಹೊತ್ತೊಯ್ಯಲಿದೆ.

ಖಾಸಗಿಯಾಗಿ ಅಭಿವೃದ್ಧಿಗೊಂಡ ಭಾರತದ ಮೊದಲ ರಾಕೆಟ್ 'ವಿಕ್ರಮ್-1' ಇಂದು ಉಡಾವಣೆ: ಬಾಹ್ಯಾಕಾಶಕ್ಕೆ ಹಾರಲಿವೆ ಪ್ರಧಾನಿ ಮೋದಿ ಪೋಸ್ಟ್‌ಕಾರ್ಡ್‌
ಸ್ಕೈರೂಟ್ ಏರೋಸ್ಪೇಸ್ ಮತ್ತು ಪ್ರಧಾನಿ ಮೋದಿ
ಅಕ್ಷಯ್​ ಪಲ್ಲಮಜಲು​​
|

Updated on:Jul 18, 2026 | 9:38 AM

Share

ಮುಖ್ಯಾಂಶಗಳು

  • ಭಾರತದ ಬಾಹ್ಯಾಕಾಶ ಇತಿಹಾಸದಲ್ಲೇ ಮತ್ತೊಂದು ಸುವರ್ಣ ಅಧ್ಯಾಯ
  • 'ಸ್ಕೈರೂಟ್ ಏರೋಸ್ಪೇಸ್' ಅಭಿವೃದ್ಧಿಪಡಿಸಿರುವ 'ವಿಕ್ರಮ್-1'
  • ಪ್ರಧಾನಿ ಮೋದಿ ಕೈಬರಹದಲ್ಲಿ ಬರೆದ ಪೋಸ್ಟ್‌ಕಾರ್ಡ್

ಶ್ರೀಹರಿಕೋಟ, ಜು.18: ಭಾರತದ ಬಾಹ್ಯಾಕಾಶ ಇತಿಹಾಸದಲ್ಲೇ ಮತ್ತೊಂದು ಸುವರ್ಣ ಅಧ್ಯಾಯ ಬರೆಯಲು ಸಕಲ ಸಿದ್ಧತೆಗಳು ನಡೆದಿವೆ. ದೇಶದ ಪ್ರಮುಖ ಖಾಸಗಿ ಬಾಹ್ಯಾಕಾಶ ತಂತ್ರಜ್ಞಾನ ಸಂಸ್ಥೆಯಾದ ‘ಸ್ಕೈರೂಟ್ ಏರೋಸ್ಪೇಸ್’ ಅಭಿವೃದ್ಧಿಪಡಿಸಿರುವ ‘ವಿಕ್ರಮ್-1’ (Vikram-1) ರಾಕೆಟ್ ಇಂದು ಬೆಳಗ್ಗೆ 11 ಗಂಟೆಗೆ ಆಂಧ್ರಪ್ರದೇಶದ ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಉಡಾವಣೆಯಾಗಲಿದೆ.

ಏನಿದು ‘ಮಿಷನ್ ಆಗಮನ್’ ಯೋಜನೆ?

ಭಾರತದ ಬಾಹ್ಯಾಕಾಶ ಕಾರ್ಯಕ್ರಮದ ಪಿತಾಮಹ ಎಂದು ಕರೆಯಲ್ಪಡುವ ವಿಕ್ರಮ ಸಾರಾಭಾಯ್ ಅವರ ನೆನಪಿಗಾಗಿ ಈ ರಾಕೆಟ್‌ಗೆ ‘ವಿಕ್ರಮ್-1’ ಎಂದು ಹೆಸರಿಡಲಾಗಿದೆ. ಭಾರತೀಯ ನೆಲದಿಂದ ಬಾಹ್ಯಾಕಾಶ ಕಕ್ಷೆಯನ್ನು ತಲುಪಲಿರುವ, ಸಂಪೂರ್ಣವಾಗಿ ಖಾಸಗಿಯಾಗಿ ಅಭಿವೃದ್ಧಿಪಡಿಸಿದ ಭಾರತದ ಮೊದಲ ರಾಕೆಟ್ ಎಂಬ ಹೆಗ್ಗಳಿಕೆಗೆ ಈ ವಿಕ್ರಮ್-1 ಪಾತ್ರವಾಗಿದೆ. ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತೀಯರ ಅದ್ಭುತ ಸಾಧನೆಗಳನ್ನು ಜಗತ್ತಿಗೆ ಸಾರುವ ನಿಟ್ಟಿನಲ್ಲಿ ಸ್ಕೈರೂಟ್ ಸಂಸ್ಥೆಯು ಈ ವಿಕ್ರಮ್-1 ರಾಕೆಟ್ ಅನ್ನು ಅತ್ಯಾಧುನಿಕವಾಗಿ ತಯಾರಿಸಿದೆ. ಈ ಉಡಾವಣೆಯನ್ನು ‘ಮಿಷನ್ ಆಗಮನ್’ ಯೋಜನೆಯಡಿ ಕೈಗೊಳ್ಳಲಾಗುತ್ತಿದ್ದು, ಇದು ಪ್ರಮುಖವಾಗಿ ತಂತ್ರಜ್ಞಾನ ಪ್ರದರ್ಶನದ ಪೇಲೋಡ್‌ಗಳನ್ನು ಬಾಹ್ಯಾಕಾಶ ಕಕ್ಷೆಗೆ ಹೊತ್ತೊಯ್ಯಲಿದೆ.

ಇಲ್ಲಿದೆ ನೋಡಿ ಎಕ್ಸ್​​ ಪೋಸ್ಟ್​:

ಪ್ರಧಾನಿ ಮೋದಿ ಹಾಗೂ ಇಸ್ರೋ ವಿಜ್ಞಾನಿಗಳ ಕೈಬರಹದ ಪೋಸ್ಟ್‌ಕಾರ್ಡ್:

ಈ ಬಾರಿಯ ವಿಕ್ರಮ್-1 ಉಡಾವಣೆ ಕೇವಲ ತಾಂತ್ರಿಕ ದೃಷ್ಟಿಯಿಂದಷ್ಟೇ ಅಲ್ಲದೆ, ಭಾವನಾತ್ಮಕವಾಗಿಯೂ ವಿಶೇಷತೆಗಳನ್ನು ಒಳಗೊಂಡಿದೆ. ಬಾಹ್ಯಾಕಾಶ ಕ್ಷೇತ್ರಕ್ಕೆ ಅಮೂಲ್ಯ ಕೊಡುಗೆ ನೀಡಿದ ಮಹನೀಯರನ್ನು ಗೌರವಿಸುವ ವಿಶೇಷ ಉದ್ದೇಶವನ್ನು ಈ ಮಿಷನ್ ಹೊಂದಿದೆ. ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಕೈಬರಹದಲ್ಲಿ ಬರೆದ ಹಾಗೂ ‘ವಂದೇ ಮಾತರಂ’ ಎಂಬ ದೇಶಭಕ್ತಿಯ ಪದಗಳನ್ನು ಒಳಗೊಂಡಿರುವ ವಿಶೇಷ ಪೋಸ್ಟ್‌ಕಾರ್ಡ್ ಅನ್ನು ಈ ಬಾಹ್ಯಾಕಾಶ ನೌಕೆಯು ಕೊಂಡೊಯ್ಯುತ್ತಿದೆ.

ಪ್ರಧಾನಿ ಮೋದಿಯವರ ಪೋಸ್ಟ್‌ಕಾರ್ಡ್ ಜೊತೆಗೆ, ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ ಹಾಲಿ ಅಧ್ಯಕ್ಷರು, ಮಾಜಿ ಅಧ್ಯಕ್ಷರುಗಳು ಹಾಗೂ ಭಾರತದ ಹೆಮ್ಮೆಯ ಗಗನಯಾತ್ರಿಗಳು ತಮ್ಮ ಕೈಬರಹದಲ್ಲಿ ಬರೆದಿರುವ ರಹಸ್ಯ ಪೋಸ್ಟ್‌ಕಾರ್ಡ್‌ಗಳನ್ನು ಸಹ ಈ ರಾಕೆಟ್ ತನ್ನೊಂದಿಗೆ ಬಾಹ್ಯಾಕಾಶಕ್ಕೆ ಹೊತ್ತೊಯ್ಯಲಿದೆ. ಭಾರತೀಯ ಬಾಹ್ಯಾಕಾಶ ಕ್ಷೇತ್ರದಲ್ಲಿ ಖಾಸಗಿ ಸಹಭಾಗಿತ್ವದ ಬಲವನ್ನು ಜಗತ್ತಿಗೆ ಸಾಬೀತುಪಡಿಸಲು ವಿಕ್ರಮ್-1 ಸಜ್ಜಾಗಿದ್ದು, ಇಡೀ ದೇಶವೇ ಇಂದಿನ ಉಡಾವಣೆಯನ್ನು ಅತ್ಯಂತ ಕುತೂಹಲದಿಂದ ವೀಕ್ಷಿಸುತ್ತಿದೆ.

ಇದನ್ನೂ ಓದಿ: ಇಸ್ರೋದಲ್ಲಿ ಪ್ರತಿಭಾ ಪಲಾಯನ: ಗಗನಯಾನದ ಹೊತ್ತಲ್ಲೇ 100ಕ್ಕೂ ಹೆಚ್ಚು ವಿಜ್ಞಾನಿಗಳ ರಾಜೀನಾಮೆ

“ಇದು ಭಾರತದ ಬಾಹ್ಯಾಕಾಶ ಪಯಣದ ಹೊಸ ಮೈಲಿಗಲ್ಲು”: ಪ್ರಧಾನಿ ಮೋದಿ ಟ್ವೀಟ್

ಪ್ರಧಾನಿ ಮೋದಿ ಅವರು ಈ ಬಗ್ಗೆ ಎಕ್ಸ್​​​ ಖಾತೆಯಲ್ಲಿ ಪೋಸ್ಟ್ ಹಂಚಿಕೊಂಡಿದ್ದು, ಭಾರತದ ಯುವಶಕ್ತಿ ಮತ್ತು ಬಾಹ್ಯಾಕಾಶ ಸುಧಾರಣೆಗಳನ್ನು ಶ್ಲಾಘಿಸಿದ್ದಾರೆ. “ಇದು ಭಾರತದ ಬಾಹ್ಯಾಕಾಶ ಪಯಣದ ಐತಿಹಾಸಿಕ ಹೊಸ ಗಡಿ! ಸ್ಕೈರೂಟ್ ಏರೋಸ್ಪೇಸ್ ಸಂಸ್ಥೆಯು ಭಾರತದ ಮೊದಲ ಖಾಸಗಿ ಉಡಾವಣಾ ನೌಕೆ ವಿಕ್ರಮ್-1 ರ ಚೊಚ್ಚಲ ಆರ್ಬಿಟಲ್ ಉಡಾವಣೆಯನ್ನು ಕೈಗೊಳ್ಳುತ್ತಿದೆ. ಈ ನಾಲ್ಕು ಹಂತದ ರಾಕೆಟ್ ಅತ್ಯಂತ ವೇಗದ ಮತ್ತು ಬೇಡಿಕೆಗೆ ತಕ್ಕ ಬಾಹ್ಯಾಕಾಶ ಸೇವೆಗಳನ್ನು ಒದಗಿಸಲು ವಿನ್ಯಾಸಗೊಳಿಸಲಾಗಿದೆ.” “ಈ ಮಿಷನ್ ನಮ್ಮ ಯುವಕರ ಪ್ರತಿಭೆ, ದೃಢಸಂಕಲ್ಪ ಮತ್ತು ಉದ್ಯಮಶೀಲತೆಯ ಮನೋಭಾವವನ್ನು ಎತ್ತಿ ತೋರಿಸುತ್ತದೆ. ನಮ್ಮ ಬಾಹ್ಯಾಕಾಶ ಕ್ಷೇತ್ರದ ಸುಧಾರಣೆಗಳು ಆವಿಷ್ಕಾರ ಮತ್ತು ಉದ್ಯಮಗಳಿಗೆ ಹೇಗೆ ಹೊಸ ಅವಕಾಶಗಳನ್ನು ಮುಕ್ತಗೊಳಿಸುತ್ತಿವೆ ಎಂಬುದನ್ನು ಇದು ತೋರಿಸುತ್ತದೆ” ಎಂದು ಮೋದಿ ಬರೆದಿದ್ದಾರೆ.

ದೇಶದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:33 am, Sat, 18 July 26

Follow Us
ಚೆನ್ನಮ್ಮ ಆರೋಗ್ಯ ಸ್ಥಿತಿ ಗಂಭೀರ: ಐಸಿಯುನಲ್ಲಿ ಚಿಕಿತ್ಸೆ ಮುಂದುವರಿಕೆ
ಚೆನ್ನಮ್ಮ ಆರೋಗ್ಯ ಸ್ಥಿತಿ ಗಂಭೀರ: ಐಸಿಯುನಲ್ಲಿ ಚಿಕಿತ್ಸೆ ಮುಂದುವರಿಕೆ
ಬಂಟ್ವಾಳ ಕೊಲೆ ಆರೋಪಿ ಬಗ್ಗೆ ತಪ್ಪು ಮಾಹಿತಿ ಹರಡಿದವರ ವಿರುದ್ಧ ಕೇಸ್
ಬಂಟ್ವಾಳ ಕೊಲೆ ಆರೋಪಿ ಬಗ್ಗೆ ತಪ್ಪು ಮಾಹಿತಿ ಹರಡಿದವರ ವಿರುದ್ಧ ಕೇಸ್
ಮೆಕ್ಸಿಕೋದಲ್ಲಿ 7.4 ತೀವ್ರತೆಯ ಭೂಕಂಪ; ಸುನಾಮಿಯ ಮುನ್ನೆಚ್ಚರಿಕೆ
ಮೆಕ್ಸಿಕೋದಲ್ಲಿ 7.4 ತೀವ್ರತೆಯ ಭೂಕಂಪ; ಸುನಾಮಿಯ ಮುನ್ನೆಚ್ಚರಿಕೆ
ದೇವೇಗೌಡರ ಪತ್ನಿ ಚೆನ್ನಮ್ಮ ಅವರ ಆರೋಗ್ಯ ವಿಚಾರಿಸಿದ ಆರ್. ಅಶೋಕ್
ದೇವೇಗೌಡರ ಪತ್ನಿ ಚೆನ್ನಮ್ಮ ಅವರ ಆರೋಗ್ಯ ವಿಚಾರಿಸಿದ ಆರ್. ಅಶೋಕ್
ನೀರಾವರಿ ಪೈಪ್‌ಲೈನ್ ಒಡೆದು ಆಕಾಶದೆತ್ತರಕ್ಕೆ ಚಿಮ್ಮಿದ ನೀರು
ನೀರಾವರಿ ಪೈಪ್‌ಲೈನ್ ಒಡೆದು ಆಕಾಶದೆತ್ತರಕ್ಕೆ ಚಿಮ್ಮಿದ ನೀರು
ಅಲೆಗಳ ಮಧ್ಯೆ ಮುಳುಗುತ್ತಿದ್ದ ಮಾನಸಿಕ ಅಸ್ವಸ್ಥನ ಪ್ರಾಣ ಉಳಿಸಿದ ಖಾಕಿ ಪಡೆ
ಅಲೆಗಳ ಮಧ್ಯೆ ಮುಳುಗುತ್ತಿದ್ದ ಮಾನಸಿಕ ಅಸ್ವಸ್ಥನ ಪ್ರಾಣ ಉಳಿಸಿದ ಖಾಕಿ ಪಡೆ
ಬಿಡದಿ ಟೌನ್‌ಶಿಪ್ ಯೋಜನೆ ಪರ ರೈತರಿಂದ ಭೂ ಪರಿಹಾರಕ್ಕೆ ಅರ್ಜಿ ಸಲ್ಲಿಕೆ
ಬಿಡದಿ ಟೌನ್‌ಶಿಪ್ ಯೋಜನೆ ಪರ ರೈತರಿಂದ ಭೂ ಪರಿಹಾರಕ್ಕೆ ಅರ್ಜಿ ಸಲ್ಲಿಕೆ
ಉಳ್ಳಾಲ ಕಡಲತೀರಕ್ಕೆ ಅಪ್ಪಳಿಸಿದ ಲಕ್ಷಾಂತರ ಬೂತಾಯಿ ಮೀನಿನ ರಾಶಿ
ಉಳ್ಳಾಲ ಕಡಲತೀರಕ್ಕೆ ಅಪ್ಪಳಿಸಿದ ಲಕ್ಷಾಂತರ ಬೂತಾಯಿ ಮೀನಿನ ರಾಶಿ
ಬೀದಿಬದಿ ವ್ಯಾಪಾರಿಗಳಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸುವುದು ಸರ್ಕಾರದ ಕರ್ತವ್ಯ
ಬೀದಿಬದಿ ವ್ಯಾಪಾರಿಗಳಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸುವುದು ಸರ್ಕಾರದ ಕರ್ತವ್ಯ
ದೇವೇಗೌಡರ ಪತ್ನಿ ಚೆನ್ನಮ್ಮ ಸ್ಥಿತಿ ಗಂಭೀರ: ಆಸ್ಪತ್ರೆಗೆ ಧಾವಿಸಿದ HDK
ದೇವೇಗೌಡರ ಪತ್ನಿ ಚೆನ್ನಮ್ಮ ಸ್ಥಿತಿ ಗಂಭೀರ: ಆಸ್ಪತ್ರೆಗೆ ಧಾವಿಸಿದ HDK