AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತಕ್ಕಿಂದು ಹೆಮ್ಮೆಯ ದಿನ: ಮೊದಲ ಸ್ವದೇಶಿ ನಿರ್ಮಿತ ವಿಮಾನವಾಹಕ ಯುದ್ಧನೌಕೆ ವಿಕ್ರಾಂತ್ ಪರೀಕ್ಷಾರ್ಥ ಸಂಚಾರ ಆರಂಭ

Indian Navy: ದೇಶದಲ್ಲಿ ಈವರೆಗೆ ನಿರ್ಮಿಸಿರುವ ಯುದ್ಧನೌಕೆಗಳ ಪೈಕಿ ಇದು ಅತ್ಯಂತ ಸಂಕೀರ್ಣ ಮತ್ತು ಬೃಹತ್​ ನೌಕೆಯಾಗಿದೆ.

ಭಾರತಕ್ಕಿಂದು ಹೆಮ್ಮೆಯ ದಿನ: ಮೊದಲ ಸ್ವದೇಶಿ ನಿರ್ಮಿತ ವಿಮಾನವಾಹಕ ಯುದ್ಧನೌಕೆ ವಿಕ್ರಾಂತ್ ಪರೀಕ್ಷಾರ್ಥ ಸಂಚಾರ ಆರಂಭ
ಕೊಚಿನ್ ಶಿಪ್​ಯಾರ್ಡ್ ನಿರ್ಮಿಸಿರುವ ವಿಕ್ರಾಂತ್ ಯುದ್ಧನೌಕೆ ಬುಧವಾರ ಪರೀಕ್ಷಾರ್ಥ ಸಂಚಾರ ಆರಂಭಿಸಿತು.
TV9 Web
| Edited By: |

Updated on: Aug 04, 2021 | 11:18 PM

Share

ದೆಹಲಿ: ದೇಶದ ಮೊದಲ ಸ್ವದೇಶಿ ನಿರ್ಮಿತ ವಿಮಾನ ವಾಹಕ ಯುದ್ಧನೌಕೆ (Indigenous Aircraft Carrier – IAC) ವಿಕ್ರಾಂತ್​ ಪರೀಕ್ಷಾರ್ಥ ಸಂಚಾರ ಬುಧವಾರ ಆರಂಭವಾಯಿತು. ಕೊಚಿನ್ ಶಿಪ್​ಯಾರ್ಡ್ ನಿರ್ಮಿಸರುವ ಈ ಯುದ್ಧನೌಕೆಯು ದೇಶದಲ್ಲಿ ಈವರೆಗೆ ನಿರ್ಮಿಸಿರುವ ಯುದ್ಧನೌಕೆಗಳ ಪೈಕಿ ಇದು ಅತ್ಯಂತ ಸಂಕೀರ್ಣ ಮತ್ತು ಬೃಹತ್​ ಆದುದು.

ಇದು ದೇಶದ ಹೆಮ್ಮೆಯ, ಐತಿಹಾಸಿಕ ಕ್ಷಣ ಎಂದು ಭಾರತೀಯ ನೌಕಾಪಡೆಯು ಹೇಳಿದೆ. ಈ ಸಾಧನೆಯೊಂದಿಗೆ ವಿಮಾನ ವಾಹಕ ಯುದ್ಧನೌಕೆಯ ವಿನ್ಯಾಸ ಮತ್ತು ವಿವಿಧ ಸಂಕೀರ್ಣ ತಂತ್ರಜ್ಞಾನಗಳನ್ನು ಸಂಯೋಜಿಸಿ ಯುದ್ಧನೌಕೆಯನ್ನು ಕಾರ್ಯಾಚರಣೆ ಸ್ಥಿತಿಯ ಮಟ್ಟಕ್ಕೆ ನಿರ್ಮಿಸುವ ಸಾಮರ್ಥ್ಯ ಹೊಂದಿರುವ ವಿಶ್ವದ ಕೆಲವೇ ದೇಶಗಳ ಸಾಲಿಗೆ ಭಾರತವೂ ಸೇರಿದೆ.

ಐಎನ್​ಎಸ್​ ವಿಕ್ರಾಂತ್​ ಹೆಸರಿನ ಯುದ್ಧನೌಕೆ ಈ ಮೊದಲೂ ಭಾರತೀಯ ನೌಕಾಪಡೆಯ ಸೇವೆಯಲ್ಲಿತ್ತು. 50 ವರ್ಷಗಳ ಹಿಂದೆ, ಅಂದರೆ 1971ರ ಯುದ್ಧದಲ್ಲಿ ಐಎನ್​ಎಸ್ ವಿಕ್ರಾಂತ್ ಮಹತ್ವದ ಪಾತ್ರ ನಿರ್ವಹಿಸಿದ್ದ ದಿನದಂದೇ 40,000 ಟನ್ ತೂಕದ ಹೊಸ ಯುದ್ಧನೌಕೆಯು ನೀರಿನಲ್ಲಿ ತೇಲಲು ಆರಂಭಿಸಿರುವುದು ಮಹತ್ವದ ಸಂಗತಿ ಎನಿಸಿದೆ.

ಮುಂದಿನ ವರ್ಷ ದ್ವಿತೀಯಾರ್ಧದಲ್ಲಿ ಈ ನೌಕೆಯನ್ನು ಸೇವೆಗೆ ನಿಯೋಜಿಸಲು ಭಾರತೀಯ ನೌಕಾಪಡೆ ಉದ್ದೇಶಿಸಿದೆ. ಇದು ನಮ್ಮ ದೇಶಕ್ಕೆ ಮಹತ್ವದ ಮತ್ತು ಐತಿಹಾಸಿಕ ಕ್ಷಣ ಎಂದು ನೌಕಾಪಡೆಯ ವಕ್ತಾರ ಕಮೋಡರ್ ವಿವೇಕ್ ಮಧ್ವಾನ್ ಹೇಳಿದ್ದಾರೆ.

ಇದು ಭಾರತದಲ್ಲಿ ನಿರ್ಮಾಣವಾದ ಅತಿದೊಡ್ಡ ಮತ್ತು ಅತಿಸಂಕೀರ್ಣ ಯುದ್ಧನೌಕೆ. ಇದು ಆತ್ಮನಿರ್ಭರ್ ಭಾರತ್ ಮತ್ತು ಮೇಕ್​ ಇನ್​ ಇಂಡಿಯಾ ಉಪಕ್ರಮದ ಮಹತ್ವದ ಮುನ್ನಡೆ ಎಂದು ಅವರು ಹೇಳಿದರು.

ನೌಕಾಪಡೆಯ ಈ ಸಾಧನೆಯನ್ನು ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮೂಲಕ ಅಭಿನಂದಿಸಿದ್ದಾರೆ.

(Vikrant Indias first indigenous aircraft carrier begins sea trial)

ಇದನ್ನೂ ಓದಿ: Explainer: ಭೂಸೇನೆ, ವಾಯುಪಡೆ, ನೌಕಾಪಡೆಗಳ ಏಕೀಕೃತ ಕಮಾಂಡ್ ರಚನೆ ಪ್ರಸ್ತಾವಕ್ಕೆ ಹೊಸವೇಗ, ದೇಶದ ಭದ್ರತೆಗೆ ಇದೇಕೆ ಅತ್ಯಗತ್ಯ?

ಇದನ್ನೂ ಓದಿ: ಭಾರತ ನೌಕಾಪಡೆಗೆ ಎರಡು ಎಂಎಚ್​-60 ಮಲ್ಟಿ ರೋಲ್​ ಹೆಲಿಕಾಪ್ಟರ್​​ಗಳನ್ನು ಹಸ್ತಾಂತರ ಮಾಡಿದ ಯುಎಸ್​ ನೌಕಾಪಡೆ..

Follow Us
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್