AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ವಿಕ್ಷಿತ್ ಭಾರತ್’ ಯುವ ನಾಯಕರ ಸಂವಾದ ಕಾರ್ಯಕ್ರಮದಲ್ಲಿ ಭಾಗಹಿಸುವ ಮುನ್ನ ಈ ರಸ ಪ್ರಶ್ನೆಗಳಿಗೆ ಉತ್ತರಿಸಿ: ಪ್ರಧಾನಿ ಮೋದಿ

ಭಾರತದಲ್ಲಿ ಯುವ ನಾಯಕರನ್ನು ಸೃಷ್ಟಿಸುವುದು ಅಗತ್ಯವಾಗಿದೆ. ಈ ಕಾರಣಕ್ಕೆ ಪ್ರಧಾನಿ ಮೋದಿ ಅವರು ತಮ್ಮ ಕುಟುಂಬದಲ್ಲಿ ರಾಜಕೀಯ ಹಿನ್ನಲೆ ಇಲ್ಲದ ಯುವಕರು ಈ ಕಾರ್ಯಕ್ರಮದಲ್ಲಿ ಭಾಗಹಿಸಬೇಕು. ಈ ಕಾರ್ಯಕ್ರಮದಲ್ಲಿ ಭಾಗವಹಿಸಿದಕ್ಕೂ ಮುನ್ನ ಈ ರಸ ಪ್ರಶ್ನೆಗಳಿಗೆ ಉತ್ತರಿಸಿ ಎಂದು ಪ್ರಧಾನಿ ಮೋದಿ ಅವರನ್ನು ಹೇಳಿದ್ದಾರೆ. ಜತೆಗೆ ಈ ಕಾರ್ಯಕ್ರಮದಲ್ಲಿ ಯುವಕರು ಭಾಗವಹಿಸಲು ಇರುವ ಮಾನದಂಡಗಳೇನು? ಎಂಬ ಬಗ್ಗೆ ಇಲ್ಲಿ ನೀಡಲಾಗಿದೆ.

'ವಿಕ್ಷಿತ್ ಭಾರತ್' ಯುವ ನಾಯಕರ ಸಂವಾದ ಕಾರ್ಯಕ್ರಮದಲ್ಲಿ ಭಾಗಹಿಸುವ ಮುನ್ನ ಈ ರಸ ಪ್ರಶ್ನೆಗಳಿಗೆ ಉತ್ತರಿಸಿ: ಪ್ರಧಾನಿ ಮೋದಿ
ನರೇಂದ್ರ ಮೋದಿ
ಅಕ್ಷಯ್​ ಪಲ್ಲಮಜಲು​​
|

Updated on:Nov 27, 2024 | 2:47 PM

Share

ಭಾರತದ ಯುವ ನಾಯಕರಿಗೆ ಒಂದು ಹೊಸ ವೇದಿಕೆಯನ್ನು ನೀಡಲಾಗುತ್ತಿದೆ. ಜನವರಿ 11-12 ರಂದು ದೆಹಲಿಯಲ್ಲಿ ” ವಿಕ್ಷಿತ್ ಭಾರತ್ ಯುವ ನಾಯಕರ ಸಂವಾದ ಕಾರ್ಯಕ್ರಮ ನಡೆಯಲಿದೆ. ರಾಜಕೀಯ ಹಿನ್ನೆಲೆಯಿಲ್ಲದ ಯುವಕರನ್ನು ರಾಜಕೀಯದೊಂದಿಗೆ ಸಂಪರ್ಕಿಸುವ ಪ್ರಯತ್ನದ ಭಾಗವಾಗಿದೆ. ಪ್ರಧಾನಿ ಮೋದಿ ಅವರ ಜನಪ್ರಿಯ ಕಾರ್ಯಕ್ರಮ ” ಮನ್ ಕಿ ಬಾತ್ ” ನಲ್ಲೂ ಈ ಬಗ್ಗೆ ಪ್ರಸ್ತಾಪಿಸಿದ್ದಾರೆ. ಜನವರಿ 12 ರಂದು ಸ್ವಾಮಿ ವಿವೇಕಾನಂದರ 162 ನೇ ಜಯಂತಿಯನ್ನು ಅತ್ಯಂತ ವಿಶೇಷ ರೀತಿಯಲ್ಲಿ ಆಚರಿಸಲಾಗುವುದು ಎಂದು ಹೇಳಿದರು.

ಜನವರಿ 11-12 ರಂದು ದೆಹಲಿಯ ಭಾರತ್ ಮಂಟಪದಲ್ಲಿ ವಿಕ್ಷಿತ್ ಭಾರತ್ ಯುವ ನಾಯಕರ ಸಂವಾದ ನಡೆಯಲಿದೆ ಎಂದು ಹೇಳಿದ್ದಾರೆ. ಈ ಬಗ್ಗೆ ತಮ್ಮ ಎಕ್ಸ್​​​ ಖಾತೆಯಲ್ಲೂ ಹಂಚಿಕೊಂಡಿದ್ದಾರೆ. ಈ ಕಾರ್ಯಕ್ರಮದಲ್ಲಿ ಭಾಗವಹಿಸುವ ಯುವಕರು ಯಾವುದೇ ಕುಟುಂಬದಲ್ಲಿ ರಾಜಕೀಯ ಹಿನ್ನಲೆ ಇಲ್ಲದವರು ಭಾಗವಹಿಸಬೇಕು. ಈ ಹಿಂದೆ ನಾನು ಕೆಂಪುಕೋಟೆ ಭಾಷಣದಲ್ಲೂ ಈ ಬಗ್ಗೆ ಹೇಳಿದ್ದೇನೆ ಎಂದರು.

ಇದನ್ನೂ ಓದಿ: ಸಾಮಾಜಿಕ ಮಾಧ್ಯಮದಲ್ಲಿ ಅಸಭ್ಯ ವಿಷಯಗಳನ್ನು ತಡೆಯಲು ಕಠಿಣ ಕಾನೂನು ಅಗತ್ಯ: ಸಚಿವ ಅಶ್ವಿನಿ ವೈಷ್ಣವ್

ಇನ್ನು ಪ್ರಧಾನಿ ಮೋದಿ ಅವರು ಇಂದು ಹಂಚಿಕೊಂಡ ಎಕ್ಸ್​​ ಟ್ವೀಟ್​​​ನಲ್ಲಿ ಯುವ ಸಮೂಹಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸುವ ಮುನ್ನ, ಆಸಕ್ತಿದಾಯಕ ರಸಪ್ರಶ್ನೆ ಇದೆ, ಅದರಲ್ಲಿ ಭಾಗವಹಿಸಿ ಎಂದು ಕರೆ ನೀಡಿದ್ದಾರೆ. ಈ ವಿಕ್ಷಿತ್​​ ಭಾರತ್​​​​​ ಭಾರತದ ಮುಂದಿನ ಯುವ ಸಮೂಹಕ್ಕೆ ವಿಶೇಷ ಕೂಡುಗೆ ಆಗಿದೆ ಎಂದರು. ಈ ರಸ ಪ್ರಶ್ನೆಯಲ್ಲಿ ಭಾಗವಹಿಸಲು ನೀವು ಮಾಡಬೇಕಿರುವುದು ಇಷ್ಟೇ mybharat.gov ಗೆ ಭೇಟಿ ನೀಡಿ ಎಂದು ಎಕ್ಸ್​​​ನಲ್ಲಿ ಹಂಚಿಕೊಂಡಿದ್ದಾರೆ.

This is a very special opportunity for letting your innovative ideas be heard by the topmost…

— Narendra Modi (@narendramodi) November 27, 2024

ವಿಕ್ಷಿತ್ ಭಾರತ್ ಯಂಗ್ ಲೀಡರ್ಸ್ ಡೈಲಾಗ್ ರಸಪ್ರಶ್ನೆಯು ಯುಜಿಸಿ-ಮಾನ್ಯತೆ ಪಡೆದ ಕಾಲೇಜುಗಳು ಮತ್ತು ಸಂಸ್ಥೆಗಳಲ್ಲಿ ಓದುತ್ತಿರುವ ತಮ್ಮ ಎರಡನೇ ಮತ್ತು ಮೂರನೇ ವರ್ಷಗಳಲ್ಲಿ ಪದವಿಪೂರ್ವ ವಿದ್ಯಾರ್ಥಿಗಳಿಗೆ ಮುಕ್ತವಾಗಿದೆ ಎಂದು ಹೇಳಲಾಗಿದೆ. ವಿದ್ಯಾರ್ಥಿಗಳು/ವಿದ್ಯಾರ್ಥಿಗಳಲ್ಲದ ಅವರ ಪ್ರಾಯ 29 ವರ್ಷವಾಗಿರಬೇಕು ಎಂದು ಹೇಳಿದೆ. ಇನ್ನು ಉಳಿದ ಮಾನದಂಡಗಳನ್ನು ಪ್ರಧಾನಿ ಮೋದಿ ಅವರು ಹಂಚಿಕೊಂಡಿರುವ ಟ್ವೀಟ್​​​​​ನಲ್ಲಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 2:46 pm, Wed, 27 November 24

ಕಾಡು ಹಂದಿಗೆ ಹಾಕಿದ್ದ ಉರುಳಿಗೆ ಚಿರತೆ ಬಲಿ
ಕಾಡು ಹಂದಿಗೆ ಹಾಕಿದ್ದ ಉರುಳಿಗೆ ಚಿರತೆ ಬಲಿ
ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ