AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉತ್ತರ ಪ್ರದೇಶ: ಹುಡುಗಿಯರು ಜೀನ್ಸ್, ಸ್ಕರ್ಟ್ ಧರಿಸಿದರೆ, ಚುನಾವಣಾ ಅಭ್ಯರ್ಥಿ ಮದ್ಯ ಹಂಚಿದರೆ ಬಹಿಷ್ಕಾರದ ಎಚ್ಚರಿಕೆ

ಹುಡುಗಿಯರು ಜೀನ್ಸ್ ಮತ್ತು ಸ್ಕರ್ಟ್​ಗಳನ್ನು ಧರಿಸುವುದು ನಮ್ಮ ಸಂಸ್ಕೃತಿ ಅಲ್ಲ. ಹುಡುಗರು ಸಹ ತಮ್ಮ ದಿರಿಸಿನ ವಿಷಯದಲ್ಲಿ ಸಂಪ್ರದಾಯ ಪಾಲಿಸಬೇಕು. ತರುಣ ತರುಣಿಯರು ಸಂಸ್ಕೃತಿಗೆ ಅನೂಚಾನವಾಗಿ ವಸ್ತ್ರ ಧರಿಸದಿದ್ದರೆ ಗ್ರಾಮದಿಂದ ಅವರನ್ನು ಬಹಿಷ್ಕರಿಸುವುದಾಗಿ ಗ್ರಾಮದ ಭಾರತೀಯ ಕಿಸಾನ್ ಸಂಘಟನೆಯ ಆಧ್ಯಕ್ಷ ಠಾಕೂರ್ ಪುರಾನ್ ಸಿಂಗ್ ತಿಳಿಸಿದ್ದಾರೆ.

ಉತ್ತರ ಪ್ರದೇಶ: ಹುಡುಗಿಯರು ಜೀನ್ಸ್, ಸ್ಕರ್ಟ್ ಧರಿಸಿದರೆ, ಚುನಾವಣಾ ಅಭ್ಯರ್ಥಿ ಮದ್ಯ ಹಂಚಿದರೆ ಬಹಿಷ್ಕಾರದ ಎಚ್ಚರಿಕೆ
ಜೀನ್ಸ್ ಮತ್ತು ಸ್ಕರ್ಟ್ ಧರಿಸಿದರೆ ಬಹಿಷ್ಕಾರದ ಎಚ್ಚರಿಕೆ..ಎಲ್ಲಿ? (ಸಾಂದರ್ಭಿಕ ಚಿತ್ರ)
guruganesh bhat
|

Updated on:Mar 11, 2021 | 2:56 PM

Share

ಲಖನೋ: ಕಾಲ ಎಷ್ಟೇ ಬದಲಾದರೂ ಮನುಷ್ಯನ ಮಾನಸಿಕ ಚಿಂತನೆಗಳು ಬದಲಾಗದೇ ಸಮಾಜ ಬದಲಾಗದು ಎಂಬ ಮಾತಿದೆ. ಈ ಮಾತನ್ನು ಉತ್ತರ ಪ್ರದೇಶದ ಮುಜಾಫರ್​ನಗರದ ಪಿಪಲ್ಶಾಹ್ ಎಂಬ ಗ್ರಾಮದ ಪಂಚಾಯತ್ ಸಾಬೀತುಪಡಿಸಿದೆ. ಹುಡುಗಿಯರು ಪ್ಯಾಂಟ್ ಮತ್ತು ಸ್ಕರ್ಟ್ ಧರಿಸುವುದು ಮತ್ತು ಹುಡುಗರು ಚಿಕ್ಕ ಪ್ಯಾಂಟ್ ಧರಿಸುವುದನ್ನು ಈ ಗ್ರಾಮ ಪಂಚಾಯತ್​ನ ವಕ್ತಾರರು ಬಹಿಷ್ಕರಿಸಿದ್ದಾರೆ. ಈ ರೀತಿಯ ಬಟ್ಟೆಗಳು ಸಮಾಜದ ಮೇಲೆ ದುಷ್ಪರಿಣಾಮ ಬೀರುತ್ತವೆ ಎಂಬ ಕಾರಣ ನೀಡಿ ಈ ನಿರ್ಣಯ ಕೈಗೊಂಡಿದ್ದಾರೆ ಪಿಪಲ್ಶಾಹ್ ಗ್ರಾಮದ ಧುರಿಣರು.

ಹುಡುಗಿಯರು ಜೀನ್ಸ್ ಮತ್ತು ಸ್ಕರ್ಟ್​ಗಳನ್ನು ಧರಿಸುವುದು ನಮ್ಮ ಸಂಸ್ಕೃತಿ ಅಲ್ಲ. ಹುಡುಗರು ಸಹ ತಮ್ಮ ದಿರಿಸಿನ ವಿಷಯದಲ್ಲಿ ಸಂಪ್ರದಾಯ ಪಾಲಿಸಬೇಕು. ತರುಣ ತರುಣಿಯರು ಸಂಸ್ಕೃತಿಗೆ ಅನೂಚಾನವಾಗಿ ವಸ್ತ್ರ ಧರಿಸದಿದ್ದರೆ ಗ್ರಾಮದಿಂದ ಅವರನ್ನು ಬಹಿಷ್ಕರಿಸುವುದಾಗಿ ಗ್ರಾಮದ ಭಾರತೀಯ ಕಿಸಾನ್ ಸಂಘಟನೆಯ ಆಧ್ಯಕ್ಷ ಠಾಕೂರ್ ಪುರಾನ್ ಸಿಂಗ್ ತಿಳಿಸಿದ್ದಾರೆ.

ಶಾಲಾ ಮಕ್ಕಳ ಸಮವಸ್ತ್ರದ ಕುರಿತು ಪ್ರಶ್ನಿಸಿದ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರು, ಶಾಲಾಮಕ್ಕಳಿಗೆ ಈ ನಿಯಮ ಅನ್ವಯವಾಗದು. ಆದರೆ ಮೊಣಕಾಲಿಗಿಂತ ಮೇಲೆ ವಸ್ತ್ರ ಧರಿಸುವುದು ಉತ್ತಮ ಅಭ್ಯಾಸವಲ್ಲ. ಅಂತಹ ಸಮವಸ್ತ್ರಗಳನ್ನು ಹೊಂದಿರುವ ಶಾಖೆಯ ಆಡಳಿತ ಮಂಡಳಿ ಜತೆಗೆ ನಾವು ಮಾತುಕತೆ ನಡೆಸಲಿದ್ದೇವೆ ಎಂದು ತಿಳಿಸಿದ್ದಾರೆ. ಅಲ್ಲದೇ ಉತ್ತರ ಪ್ರದೇಶ ಸರ್ಕಾರ ಮುಂದಿಟ್ಟಿರುವ ಗ್ರಾಮ ಪಂಚಾಯತ್ ಅಧ್ಯಕ್ಷ ಸ್ಥಾನವನ್ನು ಎಸ್​ ಎಸ್​ಟಿ ಸಮುದಾಯ ಅಭ್ಯರ್ಥಿಗಳಿಗೆ ಮೀಸಲಿಡುವ ಪ್ರಸ್ತಾವನೆಯನ್ನು ಸಹ ಈ ಸಂಘಟನೆ ವಿರೋಧಿಸಿದೆ.

jeans boycot panchayat

ಮುಜಾಫರ್​ನಗರದ ಪಂಚಾಯತ್​ ಸಭೆ ಈ ವಿವಾದಿತ ನಿರ್ಣಯ ಅಂಗೀಕರಿಸಿದೆ.

ಯಾವುದೇ ಒಂದು ಸಮುದಾಯಕ್ಕೆ ಹುದ್ದೆಗಳನ್ನು ಮೀಸಲಿಡುವುದು ತಪ್ಪು ನಿರ್ಧಾರ. ಇದು ಇತರ ಸಮುದಾಯಗಳು ಚುನಾವಣೆಯಲ್ಲಿ ಸ್ಪರ್ಧಿಸದಂತೆ ತಡೆಯಲಿದೆ ಎಂದು ಭಾರತೀಯ ಕಿಸಾನ್ ಸಂಘಟನೆಯ ಅಧ್ಯಕ್ಷ ಠಾಕೂರ್ ಪುರಾನ್ ಸಿಂಗ್ ತಿಳಿಸಿದ್ದಾರೆ. ಅಲ್ಲದೇ ಅವರು ಚುನಾವಣೆಯ ಸಂದರ್ಭಗಳಲ್ಲಿ ಮದ್ಯ ಹಂಚುವುದನ್ನು ಸಹ ವಿರೋಧಿಸಿದ್ದಾರೆ. ಮುಂದಿನ ಚುನಾವಣೆಗಳಲ್ಲಿ ಯಾವುದೇ ಅಭ್ಯರ್ಥಿ ಮದ್ಯ ಹಂಚುವುದು ಕಂಡುಬಂದರೆ ಅವರಿಗೆ ಬಹಿಷ್ಕಾರ ಹಾಕುವುದಾಗಿ ಠಾಕೂರ್ ಪುರಾನ್ ಸಿಂಗ್ ತಿಳಿಸಿದ್ದಾರೆ.

ಗ್ರಾಮ ಪಂಚಾಯತ್​ನ ವಕ್ತಾರರ ಈ ನಿರ್ಣಯಕ್ಕೆ ಯುವ ಸಮುದಾಯದ ಪ್ರತಿಕ್ರಿಯೆಯನ್ನು ಕಾದುನೋಡಬೇಕಿದೆ.

ಇದನ್ನೂ ಓದಿ: ಗಂಡ ಝೂಮ್ ಮೀಟಿಂಗ್​ನಲ್ಲಿದ್ದಾಗಲೇ ಜುಮ್ಮನೆ ಮುತ್ತಿಕ್ಕಲು ಬಂದ ಪತ್ನಿ! ನಂತರ ಆಗಿದ್ದು ಮಾತ್ರ…

ರೈತರ ಹೋರಾಟದ ಪರಿಣಾಮ: ಅವಿಶ್ವಾಸ ಮತ ಎದುರಿಸುತ್ತಿರುವ ಹರ್ಯಾಣ ಬಿಜೆಪಿ ಸರ್ಕಾರ!

Published On - 2:54 pm, Thu, 11 March 21

Follow Us
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ನೆಲಮಂಗಲದಲ್ಲಿ ಹೊತ್ತಿ ಉರಿದ ಫ್ಲೈವುಡ್ ಗೋದಾಮು
ನೆಲಮಂಗಲದಲ್ಲಿ ಹೊತ್ತಿ ಉರಿದ ಫ್ಲೈವುಡ್ ಗೋದಾಮು
ಬಿರುಗಾಳಿ ಮಳೆಗೆ ಧರೆಗುರುಳಿದ ಬೃಹತ್​​ ಮರ: 15ಕ್ಕೂ ಹೆಚ್ಚು ಬೈಕ್​ಗಳು ಜಖಂ
ಬಿರುಗಾಳಿ ಮಳೆಗೆ ಧರೆಗುರುಳಿದ ಬೃಹತ್​​ ಮರ: 15ಕ್ಕೂ ಹೆಚ್ಚು ಬೈಕ್​ಗಳು ಜಖಂ
ಹುಬ್ಬಳ್ಳಿಯಲ್ಲಿ ಮತ್ತೊಮ್ಮೆ ಪ್ರಯಾಣಿಕರ ಎದೆ ನಡುಗಿಸಿದ 'ಫ್ಲೈ 91' ವಿಮಾನ
ಹುಬ್ಬಳ್ಳಿಯಲ್ಲಿ ಮತ್ತೊಮ್ಮೆ ಪ್ರಯಾಣಿಕರ ಎದೆ ನಡುಗಿಸಿದ 'ಫ್ಲೈ 91' ವಿಮಾನ
ಬೆಳಗಾವಿ, ಬೀದರ್​​ನಲ್ಲಿ ಬಿಸಿಲಿಗೆ ಸಾವಾಗಿಲ್ಲ: ಅಸಲಿ ಸತ್ಯ ರಿವೀಲ್​
ಬೆಳಗಾವಿ, ಬೀದರ್​​ನಲ್ಲಿ ಬಿಸಿಲಿಗೆ ಸಾವಾಗಿಲ್ಲ: ಅಸಲಿ ಸತ್ಯ ರಿವೀಲ್​
ಅತ್ತಿಕೋಣೆಯಲ್ಲಿಕುಡಿಯುವ ನೀರಿಗಾಗಿ ಅಪಾಯಕಾರಿ ದೋಣಿ ಯಾನದ ಸಾಹಸ!
ಅತ್ತಿಕೋಣೆಯಲ್ಲಿಕುಡಿಯುವ ನೀರಿಗಾಗಿ ಅಪಾಯಕಾರಿ ದೋಣಿ ಯಾನದ ಸಾಹಸ!
ಸ್ನೇಹಿತನ ಹೊಸ ಕಾರು ಓಡಿಸಿದ ಸಚಿವ ಪರಮೇಶ್ವರ್!
ಸ್ನೇಹಿತನ ಹೊಸ ಕಾರು ಓಡಿಸಿದ ಸಚಿವ ಪರಮೇಶ್ವರ್!
‘ಎಲ್ರ ಕಾಲೆಳಿತದೆ ಕಾಲ’ ಕನ್ನಡ ಸಿನಿಮಾ ಬಗ್ಗೆ ಅನುರಾಗ್ ಕಶ್ಯಪ್ ಮಾತು
‘ಎಲ್ರ ಕಾಲೆಳಿತದೆ ಕಾಲ’ ಕನ್ನಡ ಸಿನಿಮಾ ಬಗ್ಗೆ ಅನುರಾಗ್ ಕಶ್ಯಪ್ ಮಾತು
ಪತಿಗೆ ನಿದ್ದೆ ಮಾತ್ರೆ ನೀಡಿ ಪ್ರಿಯಕರನೊಂದಿಗೆ ವಿವಾಹಿತೆ ಎಸ್ಕೇಪ್​?
ಪತಿಗೆ ನಿದ್ದೆ ಮಾತ್ರೆ ನೀಡಿ ಪ್ರಿಯಕರನೊಂದಿಗೆ ವಿವಾಹಿತೆ ಎಸ್ಕೇಪ್​?