AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Covid Shocker ಕೊರೊನಾ ದೂರವಿಡಲು ಮಕ್ಕಳಿಗೆ ಸಾರಾಯಿ ಕುಡಿಸಿದರಯ್ಯಾ!

ಭುವನೇಶ್ವರ: ಜೀವನವನ್ನೇ ಬರಡು ಮಾಡಿರೋ ಕಿಲ್ಲರ್ ಕೊರೊನಾ ಹಿಮ್ಮೆಟ್ಟಿಸಲು ನಾನಾ ದೇಶಗಳು ತಲೆ ಕೆಡಿಸಿಕೊಂಡಿವೆ. ಈ ಮದ್ದು ಆ ಮದ್ದು ಅಂತ ಪ್ರಯೋಗಗಳನ್ನು ಮಾಡುತ್ತಿವೆ. ಆದರೆ ಇಲ್ಲೊಂದು ಊರಲ್ಲಿ ಕೊರೊನಾವನ್ನು ದೂರವಿಡಲು ಶಾಲಾ ಮಕ್ಕಳಿಗೆ ಮದ್ಯ ಮದ್ದು ನೀಡಲಾಗುತ್ತಿದೆ! ಈ ಘಟನೆ ಕಂಡುಬಂದಿರುವುದು ಒಡಿಶಾದ ಮಲ್ಕಂಗಿರಿ ಜಿಲ್ಲೆಯ ಹಳ್ಳಿಯೊಂದರಲ್ಲಿ. ಇಲ್ಲಿ 10 ರಿಂದ 12 ವರ್ಷ ವಯಸ್ಸಿನ 50 ಕ್ಕೂ ಹೆಚ್ಚು ಮಕ್ಕಳಿಗೆ ದೇಶೀಯ ಕಳ್ಳು ಮದ್ಯ (salapa) ಆಂದ್ರೆ ಲೋಕಲ್ ಸಾರಾಯಿ ಕುಡಿಸಲಾಗುತ್ತಿದೆ. ಪಾರ್ಸನಪಾಲಿ ಗ್ರಾಮದ […]

Covid Shocker ಕೊರೊನಾ ದೂರವಿಡಲು ಮಕ್ಕಳಿಗೆ ಸಾರಾಯಿ ಕುಡಿಸಿದರಯ್ಯಾ!
ಆಯೇಷಾ ಬಾನು
| Edited By: |

Updated on:Jul 23, 2020 | 1:20 PM

Share

ಭುವನೇಶ್ವರ: ಜೀವನವನ್ನೇ ಬರಡು ಮಾಡಿರೋ ಕಿಲ್ಲರ್ ಕೊರೊನಾ ಹಿಮ್ಮೆಟ್ಟಿಸಲು ನಾನಾ ದೇಶಗಳು ತಲೆ ಕೆಡಿಸಿಕೊಂಡಿವೆ. ಈ ಮದ್ದು ಆ ಮದ್ದು ಅಂತ ಪ್ರಯೋಗಗಳನ್ನು ಮಾಡುತ್ತಿವೆ. ಆದರೆ ಇಲ್ಲೊಂದು ಊರಲ್ಲಿ ಕೊರೊನಾವನ್ನು ದೂರವಿಡಲು ಶಾಲಾ ಮಕ್ಕಳಿಗೆ ಮದ್ಯ ಮದ್ದು ನೀಡಲಾಗುತ್ತಿದೆ!

ಈ ಘಟನೆ ಕಂಡುಬಂದಿರುವುದು ಒಡಿಶಾದ ಮಲ್ಕಂಗಿರಿ ಜಿಲ್ಲೆಯ ಹಳ್ಳಿಯೊಂದರಲ್ಲಿ. ಇಲ್ಲಿ 10 ರಿಂದ 12 ವರ್ಷ ವಯಸ್ಸಿನ 50 ಕ್ಕೂ ಹೆಚ್ಚು ಮಕ್ಕಳಿಗೆ ದೇಶೀಯ ಕಳ್ಳು ಮದ್ಯ (salapa) ಆಂದ್ರೆ ಲೋಕಲ್ ಸಾರಾಯಿ ಕುಡಿಸಲಾಗುತ್ತಿದೆ.

ಪಾರ್ಸನಪಾಲಿ ಗ್ರಾಮದ ಜನರ ಪ್ರಕಾರ ಕಳ್ಳು ಸೇವಿಸುವುದರಿಂದ ಮಕ್ಕಳಿಗೆ ಕೊರೊನಾ ವೈರಸ್ ತಗುಲುವುದಿಲ್ಲವಂತೆ! ಕಳ್ಳಿನಲ್ಲಿ ಮದ್ಯದ ಅಂಶಗಳಿರುತ್ತವೆ. ಅವು ಸೋಂಕಿನ ವಿರುದ್ಧ ಹೋರಾಡಲು ಸಹಾಯ ಮಾಡುತ್ತವೆ ಎಂದು ಇಲ್ಲಿನ ಜನ ನಂಬಿದ್ದಾರೆ. ಇನ್ನು ಮಕ್ಕಳು ಮದ್ಯ ಸೇವಿಸುತ್ತಿರುವ ವಿಡಿಯೋ ಫುಲ್ ವೈರಲ್ ಆಗಿದ್ದು ತೀವ್ರ ಟೀಕೆಗೆ ಗುರಿಯಾಗಿದೆ.

ಆದರೆ ವೈದ್ಯಕೀಯ ತಜ್ಞರು ಮದ್ಯ ಸೇವನೆ ಕೊರೊನಾ ವೈರಸ್ ವಿರುದ್ಧ ಹೋರಾಡಲು ಸಹಾಯ ಮಾಡುವುದಿಲ್ಲ ಎಂದು ಈಗಾಗಲೇ ಹೇಳಿದ್ದಾರೆ. ವೈರಲ್ ಆಗಿರುವ ವಿಡಿಯೋದಲ್ಲಿರುವ ಮಕ್ಕಳು ಯಾರೂ ಸಾಮಾಜಿಕ ಅಂತರವಾಗಲಿ, ಮಾಸ್ಕ್​ ಆಗಲಿ ಮುಂತಾದ ಯಾವುದೇ ಕೊರೊನಾ ನಿಗ್ರಹ ಮಾರ್ಗಸೂಚಿಗಳನ್ನು ಅನುಸರಿಸಿಲ್ಲ.

ಆಲ್ಕೋಹಾಲ್ ಸೇವಿಸುವುದರಿಂದ ಕೊರೊನಾವನ್ನು ಗುಣಪಡಿಸಲು ಹೋಗುವುದಿಲ್ಲ. ಏಕೆಂದರೆ ಅದು ನಿಮ್ಮ ಜಿಐ ಟ್ರಾಕ್ಟ್ ಮೂಲಕ ಹೋಗುವುದಿಲ್ಲ. ಅದು ಕಣ್ಣು, ಮೂಗು ಮತ್ತು ಬಾಯಿಯ ಮೂಲಕ ಹರಡುತ್ತದೆ. ಕೊರೊನಾ ಸೋಂಕಿಗೆ ಒಳಗಾದ ವ್ಯಕ್ತಿಯ ಉದಾಹರಣೆ ತೆಗೆದುಕೊಂಡರೆ ವೈರಸ್ ದೇಹವನ್ನು ಉಸಿರಾಟದ ಮೂಲಕ ಪ್ರವೇಶಿಸುತ್ತದೆ ಹೊರತು ಜಿಐ ಟ್ರಾಕ್ಟ್ ಮೂಲಕ ಅಲ್ಲ ಎಂದೂ ಪರಿಣತರು ಹೇಳುತ್ತಾರೆ.

ಅಲ್ಲದೆ, ಮಕ್ಕಳಿಗೆ ಮದ್ಯವನ್ನು ನೀಡುವುದು ಅಪರಾಧ. ಹೀಗಾಗಿ ಈ ಬಗ್ಗೆ ಅಬಕಾರಿ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ.

Published On - 10:33 am, Wed, 22 July 20

Follow Us
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ಚಿನ್ನದ ಬ್ಯಾಗ್ ಇದ್ದ ಬಸ್ಸನ್ನು ಫಾಲೋ ಮಾಡಿ ದೋಚಿದ್ದು ಹೇಗೆ ಗೊತ್ತಾ?
ಚಿನ್ನದ ಬ್ಯಾಗ್ ಇದ್ದ ಬಸ್ಸನ್ನು ಫಾಲೋ ಮಾಡಿ ದೋಚಿದ್ದು ಹೇಗೆ ಗೊತ್ತಾ?
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ