AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Covid Shocker ಕೊರೊನಾ ದೂರವಿಡಲು ಮಕ್ಕಳಿಗೆ ಸಾರಾಯಿ ಕುಡಿಸಿದರಯ್ಯಾ!

ಭುವನೇಶ್ವರ: ಜೀವನವನ್ನೇ ಬರಡು ಮಾಡಿರೋ ಕಿಲ್ಲರ್ ಕೊರೊನಾ ಹಿಮ್ಮೆಟ್ಟಿಸಲು ನಾನಾ ದೇಶಗಳು ತಲೆ ಕೆಡಿಸಿಕೊಂಡಿವೆ. ಈ ಮದ್ದು ಆ ಮದ್ದು ಅಂತ ಪ್ರಯೋಗಗಳನ್ನು ಮಾಡುತ್ತಿವೆ. ಆದರೆ ಇಲ್ಲೊಂದು ಊರಲ್ಲಿ ಕೊರೊನಾವನ್ನು ದೂರವಿಡಲು ಶಾಲಾ ಮಕ್ಕಳಿಗೆ ಮದ್ಯ ಮದ್ದು ನೀಡಲಾಗುತ್ತಿದೆ! ಈ ಘಟನೆ ಕಂಡುಬಂದಿರುವುದು ಒಡಿಶಾದ ಮಲ್ಕಂಗಿರಿ ಜಿಲ್ಲೆಯ ಹಳ್ಳಿಯೊಂದರಲ್ಲಿ. ಇಲ್ಲಿ 10 ರಿಂದ 12 ವರ್ಷ ವಯಸ್ಸಿನ 50 ಕ್ಕೂ ಹೆಚ್ಚು ಮಕ್ಕಳಿಗೆ ದೇಶೀಯ ಕಳ್ಳು ಮದ್ಯ (salapa) ಆಂದ್ರೆ ಲೋಕಲ್ ಸಾರಾಯಿ ಕುಡಿಸಲಾಗುತ್ತಿದೆ. ಪಾರ್ಸನಪಾಲಿ ಗ್ರಾಮದ […]

Covid Shocker ಕೊರೊನಾ ದೂರವಿಡಲು ಮಕ್ಕಳಿಗೆ ಸಾರಾಯಿ ಕುಡಿಸಿದರಯ್ಯಾ!
ಆಯೇಷಾ ಬಾನು
| Edited By: |

Updated on:Jul 23, 2020 | 1:20 PM

Share

ಭುವನೇಶ್ವರ: ಜೀವನವನ್ನೇ ಬರಡು ಮಾಡಿರೋ ಕಿಲ್ಲರ್ ಕೊರೊನಾ ಹಿಮ್ಮೆಟ್ಟಿಸಲು ನಾನಾ ದೇಶಗಳು ತಲೆ ಕೆಡಿಸಿಕೊಂಡಿವೆ. ಈ ಮದ್ದು ಆ ಮದ್ದು ಅಂತ ಪ್ರಯೋಗಗಳನ್ನು ಮಾಡುತ್ತಿವೆ. ಆದರೆ ಇಲ್ಲೊಂದು ಊರಲ್ಲಿ ಕೊರೊನಾವನ್ನು ದೂರವಿಡಲು ಶಾಲಾ ಮಕ್ಕಳಿಗೆ ಮದ್ಯ ಮದ್ದು ನೀಡಲಾಗುತ್ತಿದೆ!

ಈ ಘಟನೆ ಕಂಡುಬಂದಿರುವುದು ಒಡಿಶಾದ ಮಲ್ಕಂಗಿರಿ ಜಿಲ್ಲೆಯ ಹಳ್ಳಿಯೊಂದರಲ್ಲಿ. ಇಲ್ಲಿ 10 ರಿಂದ 12 ವರ್ಷ ವಯಸ್ಸಿನ 50 ಕ್ಕೂ ಹೆಚ್ಚು ಮಕ್ಕಳಿಗೆ ದೇಶೀಯ ಕಳ್ಳು ಮದ್ಯ (salapa) ಆಂದ್ರೆ ಲೋಕಲ್ ಸಾರಾಯಿ ಕುಡಿಸಲಾಗುತ್ತಿದೆ.

ಪಾರ್ಸನಪಾಲಿ ಗ್ರಾಮದ ಜನರ ಪ್ರಕಾರ ಕಳ್ಳು ಸೇವಿಸುವುದರಿಂದ ಮಕ್ಕಳಿಗೆ ಕೊರೊನಾ ವೈರಸ್ ತಗುಲುವುದಿಲ್ಲವಂತೆ! ಕಳ್ಳಿನಲ್ಲಿ ಮದ್ಯದ ಅಂಶಗಳಿರುತ್ತವೆ. ಅವು ಸೋಂಕಿನ ವಿರುದ್ಧ ಹೋರಾಡಲು ಸಹಾಯ ಮಾಡುತ್ತವೆ ಎಂದು ಇಲ್ಲಿನ ಜನ ನಂಬಿದ್ದಾರೆ. ಇನ್ನು ಮಕ್ಕಳು ಮದ್ಯ ಸೇವಿಸುತ್ತಿರುವ ವಿಡಿಯೋ ಫುಲ್ ವೈರಲ್ ಆಗಿದ್ದು ತೀವ್ರ ಟೀಕೆಗೆ ಗುರಿಯಾಗಿದೆ.

ಆದರೆ ವೈದ್ಯಕೀಯ ತಜ್ಞರು ಮದ್ಯ ಸೇವನೆ ಕೊರೊನಾ ವೈರಸ್ ವಿರುದ್ಧ ಹೋರಾಡಲು ಸಹಾಯ ಮಾಡುವುದಿಲ್ಲ ಎಂದು ಈಗಾಗಲೇ ಹೇಳಿದ್ದಾರೆ. ವೈರಲ್ ಆಗಿರುವ ವಿಡಿಯೋದಲ್ಲಿರುವ ಮಕ್ಕಳು ಯಾರೂ ಸಾಮಾಜಿಕ ಅಂತರವಾಗಲಿ, ಮಾಸ್ಕ್​ ಆಗಲಿ ಮುಂತಾದ ಯಾವುದೇ ಕೊರೊನಾ ನಿಗ್ರಹ ಮಾರ್ಗಸೂಚಿಗಳನ್ನು ಅನುಸರಿಸಿಲ್ಲ.

ಆಲ್ಕೋಹಾಲ್ ಸೇವಿಸುವುದರಿಂದ ಕೊರೊನಾವನ್ನು ಗುಣಪಡಿಸಲು ಹೋಗುವುದಿಲ್ಲ. ಏಕೆಂದರೆ ಅದು ನಿಮ್ಮ ಜಿಐ ಟ್ರಾಕ್ಟ್ ಮೂಲಕ ಹೋಗುವುದಿಲ್ಲ. ಅದು ಕಣ್ಣು, ಮೂಗು ಮತ್ತು ಬಾಯಿಯ ಮೂಲಕ ಹರಡುತ್ತದೆ. ಕೊರೊನಾ ಸೋಂಕಿಗೆ ಒಳಗಾದ ವ್ಯಕ್ತಿಯ ಉದಾಹರಣೆ ತೆಗೆದುಕೊಂಡರೆ ವೈರಸ್ ದೇಹವನ್ನು ಉಸಿರಾಟದ ಮೂಲಕ ಪ್ರವೇಶಿಸುತ್ತದೆ ಹೊರತು ಜಿಐ ಟ್ರಾಕ್ಟ್ ಮೂಲಕ ಅಲ್ಲ ಎಂದೂ ಪರಿಣತರು ಹೇಳುತ್ತಾರೆ.

ಅಲ್ಲದೆ, ಮಕ್ಕಳಿಗೆ ಮದ್ಯವನ್ನು ನೀಡುವುದು ಅಪರಾಧ. ಹೀಗಾಗಿ ಈ ಬಗ್ಗೆ ಅಬಕಾರಿ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ.

Published On - 10:33 am, Wed, 22 July 20

Follow Us
Ayesha Banu
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

Read More
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?
ಗುರು ಸಂಚಾರದಿಂದ ಮಿಥುನ ರಾಶಿಯವರಿಗೆ ಆರ್ಥಿಕ ವೃದ್ಧಿ ಮತ್ತು ಶುಭ ಯೋಗ ಶುರು
ಗುರು ಸಂಚಾರದಿಂದ ಮಿಥುನ ರಾಶಿಯವರಿಗೆ ಆರ್ಥಿಕ ವೃದ್ಧಿ ಮತ್ತು ಶುಭ ಯೋಗ ಶುರು
ಪ್ರವಾಸಿಗರ ಕ್ಯಾಮೆರಾಗೆ ಬಿಂದಾಸ್ ಪೋಸ್ ನೀಡಿದ ಜೋಡಿ ಹುಲಿಗಳು!
ಪ್ರವಾಸಿಗರ ಕ್ಯಾಮೆರಾಗೆ ಬಿಂದಾಸ್ ಪೋಸ್ ನೀಡಿದ ಜೋಡಿ ಹುಲಿಗಳು!
ವಸ್ತುಗಳನ್ನು ಮನೆಗೆ ಕೊಡಲು ಬಂದ ಡೆಲಿವರಿ ಬಾಯ್ ಮಾಡಿದ್ದೇನು ನೋಡಿ
ವಸ್ತುಗಳನ್ನು ಮನೆಗೆ ಕೊಡಲು ಬಂದ ಡೆಲಿವರಿ ಬಾಯ್ ಮಾಡಿದ್ದೇನು ನೋಡಿ