AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Farmers Protest: ಗಡಿಗಳಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತರ ವಿರುದ್ಧ ಸ್ಥಳೀಯ ಹಳ್ಳಿಗಳ ಜನರ ಆಕ್ರೋಶ; 10 ದಿನ ಗಡುವು ಕೊಟ್ಟ ಗ್ರಾಮಸ್ಥರು

ಸಿಂಘು ಗಡಿಯ ಅಕ್ಕಪಕ್ಕದ ಹಳ್ಳಿಗಳ ಜನರೇ ಇದೀಗ ಒಂದಾಗಿ ಮಹಾಪಂಚಾಯತ್​ ನಡೆಸಿದ್ದು, ಇಲ್ಲಿ ಮಾಡಲಾದ ರಸ್ತೆ ತಡೆಯನ್ನು ಕೂಡಲೇ ತೆರವುಗೊಳ್ಳಿಸಬೇಕು. ಸ್ಥಳೀಯ ಆಡಳಿತಗಳು ಕ್ರಮ ಕೈಗೊಳ್ಳಬೇಕು ಎಂದೂ ಬೇಡಿಕೆ ಮುಂದಿಟ್ಟಿದ್ದಾರೆ.

Farmers Protest: ಗಡಿಗಳಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತರ ವಿರುದ್ಧ ಸ್ಥಳೀಯ ಹಳ್ಳಿಗಳ ಜನರ ಆಕ್ರೋಶ; 10 ದಿನ ಗಡುವು ಕೊಟ್ಟ ಗ್ರಾಮಸ್ಥರು
ಪ್ರತಿಭಟನೆ ನಿರತ ರೈತರು (ಸಂಗ್ರಹ ಚಿತ್ರ)
TV9 Web
| Edited By: |

Updated on: Jun 20, 2021 | 3:38 PM

Share

ಚಂಡೀಗಢ್​: ಕೇಂದ್ರ ಸರ್ಕಾರದ ವಿರುದ್ಧ ಕಳೆದ 7 ತಿಂಗಳುಗಳಿಂದಲೂ ದೆಹಲಿಯ ಗಡಿಭಾಗದ ಹಳ್ಳಿಗಳಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತರ ವಿರುದ್ಧ ದೆಹಲಿ, ಹರ್ಯಾಣಗಳ ಹಳ್ಳಿಗಳ ಜನರು ತಿರುಗಿಬಿದ್ದಿದ್ದಾರೆ. ಸಿರ್ಸಾ, ಸೋನಿಪತ್​​ಗಳಲ್ಲಿ ರೈತರ ವಿರುದ್ಧ ಮಹಾಪಂಚಾಯತ್​​ ನಡೆಸುತ್ತಿದ್ದಾರೆ. ಈ ಮಹಾಪಂಚಾಯತ್​​ನಲ್ಲಿ ದೆಹಲಿಯ 15 ಮತ್ತು ಹರ್ಯಾಣದ 12 ಹಳ್ಳಿಗಳ ಜನರಿದ್ದಾರೆ. ಸಿಂಘು ಗಡಿಯಲ್ಲಿ ರಸ್ತೆ ದಿಗ್ಬಂಧನವನ್ನು ತೆಗೆಯುವಂತೆ ರೈತರನ್ನು ಆಗ್ರಹಿಸಿದ್ದಾರೆ.

ಕೇಂದ್ರ ಸರ್ಕಾರದ ಮೂರು ಕೃಷಿ ಕಾಯ್ದೆಗಳ ವಿರುದ್ಧ ಸಾವಿರಾರು ರೈತರು ದೆಹಲಿಯ ಗಡಿಗಳಲ್ಲಿ ಇವತ್ತಿಗೂ ಪ್ರತಿಭಟನೆ ನಡೆಸುತ್ತಲೇ ಇದ್ದಾರೆ. ಆದರೆ ಇದರಿಂದಾಗಿ ನಮಗೆ ತುಂಬ ಕಷ್ಟವಾಗುತ್ತಿದೆ ಎಂದು ಹಳ್ಳಿಗರು ಈಗ ಸಿಡಿದೆದ್ದಿದ್ದಾರೆ. ರೈತರ ಆಂದೋಲನದ ಹೆಸರಲ್ಲಿ ಅನೇಕ ಕ್ರಿಮಿನಲ್​ ಚಟುವಟಿಕೆಗಳು ನಡೆಯುತ್ತಿವೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಟಿಕ್ರಿಯಲ್ಲಿ ನಡೆದ ಅತ್ಯಾಚಾರ, ಬಹದ್ದೂರ್​​ನಗರದಲ್ಲಿ ವ್ಯಕ್ತಿಯೊಬ್ಬನನ್ನು ಜೀವಂತವಾಗಿ ಸುಟ್ಟಿರುವ ಪ್ರಕರಣವನ್ನು ಉಲ್ಲೇಖಿಸಿರುವ ಗ್ರಾಮಸ್ಥರು ಇದಕ್ಕೆಲ್ಲ ಶೀಘ್ರವೇ ಒಂದು ಅಂತ್ಯಬೇಕು ಎಂದಿದ್ದಾರೆ.

ಸಿಂಘು ಗಡಿಯ ಅಕ್ಕಪಕ್ಕದ ಹಳ್ಳಿಗಳ ಜನರೇ ಇದೀಗ ಒಂದಾಗಿ ಮಹಾಪಂಚಾಯತ್​ ನಡೆಸಿದ್ದು, ಇಲ್ಲಿ ಮಾಡಲಾದ ರಸ್ತೆ ತಡೆಯನ್ನು ಕೂಡಲೇ ತೆರವುಗೊಳ್ಳಿಸಬೇಕು. ಸ್ಥಳೀಯ ಆಡಳಿತಗಳು ಕ್ರಮ ಕೈಗೊಳ್ಳಬೇಕು ಎಂದೂ ಬೇಡಿಕೆ ಮುಂದಿಟ್ಟಿದ್ದಾರೆ. ಹಾಗೇ ರೈತರ ಪ್ರತಿಭಟನೆ ಹಿನ್ನೆಲೆಯಲ್ಲಿ ಸ್ಥಳದಲ್ಲಿ ನಿರ್ಮಾಣವಾದ ಕಾನೂನು ಮತ್ತು ಸುವ್ಯವಸ್ಥೆ ಪರಿಸ್ಥಿತಿಯ ಬಗ್ಗೆಯೂ ಮಹಾಪಂಚಾಯತ್​ನಲ್ಲಿ ಚರ್ಚಿಸಿದ್ದಾರೆ.

ಇನ್ನು 10 ದಿನಗಳಲ್ಲಿ ರೈತರು ರಸ್ತೆ ತೆರವು ಮಾಡದೆ ಇದ್ದರೆ ನಾವೂ ಮುಂದಿನ ಹೆಜ್ಜೆ ಇಡುತ್ತೇವೆ. ಇನ್ನಷ್ಟು ದೊಡ್ಡ ಮಟ್ಟದಲ್ಲಿ ರೈತರ ವಿರುದ್ಧ ಮಹಾಪಂಚಾಯತ್​ ಹಮ್ಮಿಕೊಂಡು ಕಾರ್ಯತಂತ್ರ ರೂಪಿಸುತ್ತೇವೆ ಎಂದೂ ಎಚ್ಚರಿಕೆ ನೀಡಿದ್ದಾರೆ. ರೈತ ಸಂಘಟನೆಗಳಂತೂ ತಮ್ಮ ಬೇಡಿಕೆಯನ್ನು ಸರ್ಕಾರ ಈಡೇರಿಸುವವರೆಗೂ ಪ್ರತಿಭಟನೆ ಕೈಬಿಡುವುದಿಲ್ಲ ಎಂದು ಹೇಳಿವೆ.

ಇದನ್ನೂ ಓದಿ: Father’s Day 2021: ತಂದೆ ನೆನೆದು ಭಾವುಕರಾದ ಸಚಿನ್; ವಿಶೇಷ ದಿನದಂದು ಕ್ರಿಕೆಟ್ ದೇವರು ಹಂಚಿಕೊಂಡ್ರು ಭಾವನಾತ್ಮಕ ವಿಡಿಯೋ

ನನಗೆ ಅಶ್ವಿನಿ ಗೌಡ ಇಷ್ಟ, ಅವರೇ ಬಿಗ್ ಬಾಸ್ ಗೆಲ್ಲಬೇಕು: ಮಾಜಿ ಸ್ಪರ್ಧಿ
ನನಗೆ ಅಶ್ವಿನಿ ಗೌಡ ಇಷ್ಟ, ಅವರೇ ಬಿಗ್ ಬಾಸ್ ಗೆಲ್ಲಬೇಕು: ಮಾಜಿ ಸ್ಪರ್ಧಿ
ಮೈಲಾರಿಗೆ 14 ನ್ಯಾಯಾಂಗ ಬಂಧನ: ಜೈಲಿಗೆ ಹೋಗುವ ಮುನ್ನ ಸಿಂಗರ್ ಹೇಳಿದ್ದೇನು?
ಮೈಲಾರಿಗೆ 14 ನ್ಯಾಯಾಂಗ ಬಂಧನ: ಜೈಲಿಗೆ ಹೋಗುವ ಮುನ್ನ ಸಿಂಗರ್ ಹೇಳಿದ್ದೇನು?
ಬಿಗ್ ಬಾಸ್: ಸುದೀಪ್ ನಿರೂಪಣೆ ಟೀಕಿಸಿದವರಿಗೆ ವಿನಯ್ ಗೌಡ ಖಡಕ್ ತಿರುಗೇಟು
ಬಿಗ್ ಬಾಸ್: ಸುದೀಪ್ ನಿರೂಪಣೆ ಟೀಕಿಸಿದವರಿಗೆ ವಿನಯ್ ಗೌಡ ಖಡಕ್ ತಿರುಗೇಟು
ಬೆಂಗಳೂರಿನಲ್ಲಿ ಐಪಿಎಲ್ ಉದ್ಘಾಟನಾ ಪಂದ್ಯ ನಡೆಸಲು ಬಿಸಿಸಿಐ ಗ್ರೀನ್ ಸಿಗ್ನಲ್
ಬೆಂಗಳೂರಿನಲ್ಲಿ ಐಪಿಎಲ್ ಉದ್ಘಾಟನಾ ಪಂದ್ಯ ನಡೆಸಲು ಬಿಸಿಸಿಐ ಗ್ರೀನ್ ಸಿಗ್ನಲ್
ತನ್ನ ಪತ್ನಿ ಜತೆ ಸಹೋದರ ಲವ್ವಿಡವ್ವಿ: ತಮ್ಮನನ್ನು ಕೊಂದ ಅಣ್ಣ,
ತನ್ನ ಪತ್ನಿ ಜತೆ ಸಹೋದರ ಲವ್ವಿಡವ್ವಿ: ತಮ್ಮನನ್ನು ಕೊಂದ ಅಣ್ಣ,
ಯಾರು ಗೆಲ್ಲಬಹುದು, ಯಾರು ಚೆನ್ನಾಗಿ ಆಡ್ತಿದ್ದಾರೆ: ವಿನಯ್ ಹೇಳಿದ್ದೇನು?
ಯಾರು ಗೆಲ್ಲಬಹುದು, ಯಾರು ಚೆನ್ನಾಗಿ ಆಡ್ತಿದ್ದಾರೆ: ವಿನಯ್ ಹೇಳಿದ್ದೇನು?
ಸಚಿವ ನಿತಿನ್ ಗಡ್ಕರಿ ಕಿವಿಯಲ್ಲಿ ಟಿಎಂಸಿ ಸಂಸದ ಗುಟ್ಟಾಗಿ ಹೇಳಿದ್ದೇನು?
ಸಚಿವ ನಿತಿನ್ ಗಡ್ಕರಿ ಕಿವಿಯಲ್ಲಿ ಟಿಎಂಸಿ ಸಂಸದ ಗುಟ್ಟಾಗಿ ಹೇಳಿದ್ದೇನು?
ತಮ್ಮದೇ ಕಾರಿನಲ್ಲಿ ಮೋದಿಯನ್ನು ಬೀಳ್ಕೊಟ್ಟ ಇಥಿಯೋಪಿಯನ್ ಪ್ರಧಾನಿ
ತಮ್ಮದೇ ಕಾರಿನಲ್ಲಿ ಮೋದಿಯನ್ನು ಬೀಳ್ಕೊಟ್ಟ ಇಥಿಯೋಪಿಯನ್ ಪ್ರಧಾನಿ
ತನ್ನ ಪ್ರಾಣವನ್ನೂ ಲೆಕ್ಕಿಸದೆ ಸೈಕಲ್​ನಿಂದ ಬಿದ್ದ ತಮ್ಮನನ್ನು ಕಾಪಾಡಿದ ಅಣ್ಣ
ತನ್ನ ಪ್ರಾಣವನ್ನೂ ಲೆಕ್ಕಿಸದೆ ಸೈಕಲ್​ನಿಂದ ಬಿದ್ದ ತಮ್ಮನನ್ನು ಕಾಪಾಡಿದ ಅಣ್ಣ
ಚೈತ್ರಾಗೆ ಕೀ ಕೊಟ್ಟ ಗಿಲ್ಲಿ: ನಕ್ಕು ಸುಸ್ತಾದ ರಜತ್-ರಘು
ಚೈತ್ರಾಗೆ ಕೀ ಕೊಟ್ಟ ಗಿಲ್ಲಿ: ನಕ್ಕು ಸುಸ್ತಾದ ರಜತ್-ರಘು