ಅಂತ್ಯ ಸಂಸ್ಕಾರಕ್ಕೆ ಹಣ ಪಡೆಯಲು ಶವವನ್ನೇ ಬ್ಯಾಂಕ್​ಗೆ ಹೊತ್ತೊಯ್ದ ಗ್ರಾಮಸ್ಥರು!

ಗ್ರಾಮಸ್ಥರು ಮಹೇಶ್​ ಅಂತ್ಯಸಂಸ್ಕಾರಕ್ಕೆ ಮುಂದಾಗಿದ್ದರು. ಆದರೆ, ಯಾರೊಬ್ಬರೂ ಹಣ ನೀಡಲು ಸಿದ್ಧರಿರಲಿಲ್ಲ. ಹೀಗಾಗಿ ಮನೆಯಲ್ಲಿ ಏನಾದರೂ ಬೆಲೆ ಬಾಳುವ ವಸ್ತು ಇದೆಯೇ ಎನ್ನುವುದನ್ನು ಹುಡುಕಿದ್ದಾರೆ. ಈ ವೇಳೆ ಕಂಡಿದ್ದು ಪಾಸ್​ಬುಕ್​.

ಅಂತ್ಯ ಸಂಸ್ಕಾರಕ್ಕೆ ಹಣ ಪಡೆಯಲು ಶವವನ್ನೇ ಬ್ಯಾಂಕ್​ಗೆ ಹೊತ್ತೊಯ್ದ ಗ್ರಾಮಸ್ಥರು!
ಪ್ರಾತಿನಿಧಿಕ ಚಿತ್ರ
Follow us
|

Updated on:Jan 07, 2021 | 6:41 PM

ಪಾಟ್ನಾ: ಅಂತ್ಯಸಂಸ್ಕಾರಕ್ಕೆ ಹಣ ನೀಡಲು ಆಗ್ರಹಿಸಿ ಊರಿನವರು ರೈತನ ಹೆಣವನ್ನು ಬ್ಯಾಂಕ್​ಗೆ ತೆಗೆದುಕೊಂಡು ಹೋದ ಘಟನೆ ಪಾಟ್ನಾದಲ್ಲಿ ನಡೆದಿದೆ.

ಮೃತ ರೈತನ ಹೆಸರು ಮಹೇಶ್​ ಯಾದವ್​. ವಯಸ್ಸು 55. ಮಹೇಶ್​ಗೆ ಕುಟುಂಬದವರು ಎಂದು ಯಾರೊಬ್ಬರೂ ಇರಲಿಲ್ಲ. ಅನೇಕ ವರ್ಷಗಳಿಂದ ಅನಾರೋಗ್ಯಕ್ಕೆ ತುತ್ತಾಗಿದ್ದರು. ಇವರು ಮಂಗಳವಾರ ಮೃತಪಟ್ಟಿದ್ದು, ಊರಿನವರಿಗೆ ತಡವಾಗಿ ವಿಚಾರ ಗೊತ್ತಾಗಿದೆ.

ಗ್ರಾಮಸ್ಥರು ಮಹೇಶ್​ ಅಂತ್ಯಸಂಸ್ಕಾರಕ್ಕೆ ಮುಂದಾಗಿದ್ದರು. ಆದರೆ, ಯಾರೊಬ್ಬರೂ ಹಣ ನೀಡಲು ಸಿದ್ಧರಿರಲಿಲ್ಲ. ಹೀಗಾಗಿ ಈ ರೈತನ ಮನೆಯಲ್ಲಿ ಏನಾದರೂ ಬೆಲೆ ಬಾಳುವ ವಸ್ತು ಇದೆಯೇ ಎನ್ನುವುದನ್ನು ಹುಡುಕಿದ್ದರು. ಆದರೆ, ಏನು ಸಿಕ್ಕಿಲ್ಲ. ಈ ವೇಳೆ ಬ್ಯಾಂಕ್​ ಪಾಸ್​ಬುಕ್​ ನೋಡಿದಾಗ ಮಹೇಶ್​ ಖಾತೆಯಲ್ಲಿ 1.17 ಲಕ್ಷ ರೂಪಾಯಿ ಇತ್ತು.

ಬ್ಯಾಂಕ್​ಗೆ ತೆರಳಿದಾಗ ಹಣ ನೀಡೋಕೆ ಬ್ಯಾಂಕ್​ ಮ್ಯಾನೆಜರ್​ ನಿರಾಕರಿಸಿದ್ದಾರೆ. ಇದರಿಂದ ಸಿಟ್ಟಾದ ಗ್ರಾಮಸ್ಥರು ಶವವವನ್ನೇ ತೆಗೆದುಕೊಂಡೇ ಬ್ಯಾಂಕ್​ಗೆ ತೆರಳಿದ್ದಾರೆ. ಅಂತ್ಯ ಸಂಸ್ಕಾರಕ್ಕೆ ಹಣ ನೀಡುವವರೆಗೆ ಸ್ಥಳ ಬಿಟ್ಟು ಕದಲುವುದಿಲ್ಲ ಎಂದು ಗ್ರಾಮಸ್ಥರು ಪಟ್ಟು ಹಿಡಿದಿದ್ದರು. ನಂತರ ಸ್ಥಳೀಯ ಪೊಲೀಸರ ಸೂಚನೆ ಮೇರೆಗೆ ಬ್ಯಾಂಕ್​ ಮ್ಯಾನೆಜರ್​ ಹಣ ನೀಡಿದ್ದಾರೆ ಎನ್ನಲಾಗಿದೆ.

ತಾಯಿಯ ಅಂತ್ಯ ಸಂಸ್ಕಾರಕ್ಕೆ ಕಾದುಕುಳಿತ ಪುತ್ರ.. ತಂದೆ ಕೊಡ್ತಿಲ್ಲ ಜಾಗ!

Published On - 6:36 pm, Thu, 7 January 21

‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ