AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಂತ್ಯ ಸಂಸ್ಕಾರಕ್ಕೆ ಹಣ ಪಡೆಯಲು ಶವವನ್ನೇ ಬ್ಯಾಂಕ್​ಗೆ ಹೊತ್ತೊಯ್ದ ಗ್ರಾಮಸ್ಥರು!

ಗ್ರಾಮಸ್ಥರು ಮಹೇಶ್​ ಅಂತ್ಯಸಂಸ್ಕಾರಕ್ಕೆ ಮುಂದಾಗಿದ್ದರು. ಆದರೆ, ಯಾರೊಬ್ಬರೂ ಹಣ ನೀಡಲು ಸಿದ್ಧರಿರಲಿಲ್ಲ. ಹೀಗಾಗಿ ಮನೆಯಲ್ಲಿ ಏನಾದರೂ ಬೆಲೆ ಬಾಳುವ ವಸ್ತು ಇದೆಯೇ ಎನ್ನುವುದನ್ನು ಹುಡುಕಿದ್ದಾರೆ. ಈ ವೇಳೆ ಕಂಡಿದ್ದು ಪಾಸ್​ಬುಕ್​.

ಅಂತ್ಯ ಸಂಸ್ಕಾರಕ್ಕೆ ಹಣ ಪಡೆಯಲು ಶವವನ್ನೇ ಬ್ಯಾಂಕ್​ಗೆ ಹೊತ್ತೊಯ್ದ ಗ್ರಾಮಸ್ಥರು!
ಪ್ರಾತಿನಿಧಿಕ ಚಿತ್ರ
ರಾಜೇಶ್ ದುಗ್ಗುಮನೆ
|

Updated on:Jan 07, 2021 | 6:41 PM

Share

ಪಾಟ್ನಾ: ಅಂತ್ಯಸಂಸ್ಕಾರಕ್ಕೆ ಹಣ ನೀಡಲು ಆಗ್ರಹಿಸಿ ಊರಿನವರು ರೈತನ ಹೆಣವನ್ನು ಬ್ಯಾಂಕ್​ಗೆ ತೆಗೆದುಕೊಂಡು ಹೋದ ಘಟನೆ ಪಾಟ್ನಾದಲ್ಲಿ ನಡೆದಿದೆ.

ಮೃತ ರೈತನ ಹೆಸರು ಮಹೇಶ್​ ಯಾದವ್​. ವಯಸ್ಸು 55. ಮಹೇಶ್​ಗೆ ಕುಟುಂಬದವರು ಎಂದು ಯಾರೊಬ್ಬರೂ ಇರಲಿಲ್ಲ. ಅನೇಕ ವರ್ಷಗಳಿಂದ ಅನಾರೋಗ್ಯಕ್ಕೆ ತುತ್ತಾಗಿದ್ದರು. ಇವರು ಮಂಗಳವಾರ ಮೃತಪಟ್ಟಿದ್ದು, ಊರಿನವರಿಗೆ ತಡವಾಗಿ ವಿಚಾರ ಗೊತ್ತಾಗಿದೆ.

ಗ್ರಾಮಸ್ಥರು ಮಹೇಶ್​ ಅಂತ್ಯಸಂಸ್ಕಾರಕ್ಕೆ ಮುಂದಾಗಿದ್ದರು. ಆದರೆ, ಯಾರೊಬ್ಬರೂ ಹಣ ನೀಡಲು ಸಿದ್ಧರಿರಲಿಲ್ಲ. ಹೀಗಾಗಿ ಈ ರೈತನ ಮನೆಯಲ್ಲಿ ಏನಾದರೂ ಬೆಲೆ ಬಾಳುವ ವಸ್ತು ಇದೆಯೇ ಎನ್ನುವುದನ್ನು ಹುಡುಕಿದ್ದರು. ಆದರೆ, ಏನು ಸಿಕ್ಕಿಲ್ಲ. ಈ ವೇಳೆ ಬ್ಯಾಂಕ್​ ಪಾಸ್​ಬುಕ್​ ನೋಡಿದಾಗ ಮಹೇಶ್​ ಖಾತೆಯಲ್ಲಿ 1.17 ಲಕ್ಷ ರೂಪಾಯಿ ಇತ್ತು.

ಬ್ಯಾಂಕ್​ಗೆ ತೆರಳಿದಾಗ ಹಣ ನೀಡೋಕೆ ಬ್ಯಾಂಕ್​ ಮ್ಯಾನೆಜರ್​ ನಿರಾಕರಿಸಿದ್ದಾರೆ. ಇದರಿಂದ ಸಿಟ್ಟಾದ ಗ್ರಾಮಸ್ಥರು ಶವವವನ್ನೇ ತೆಗೆದುಕೊಂಡೇ ಬ್ಯಾಂಕ್​ಗೆ ತೆರಳಿದ್ದಾರೆ. ಅಂತ್ಯ ಸಂಸ್ಕಾರಕ್ಕೆ ಹಣ ನೀಡುವವರೆಗೆ ಸ್ಥಳ ಬಿಟ್ಟು ಕದಲುವುದಿಲ್ಲ ಎಂದು ಗ್ರಾಮಸ್ಥರು ಪಟ್ಟು ಹಿಡಿದಿದ್ದರು. ನಂತರ ಸ್ಥಳೀಯ ಪೊಲೀಸರ ಸೂಚನೆ ಮೇರೆಗೆ ಬ್ಯಾಂಕ್​ ಮ್ಯಾನೆಜರ್​ ಹಣ ನೀಡಿದ್ದಾರೆ ಎನ್ನಲಾಗಿದೆ.

ತಾಯಿಯ ಅಂತ್ಯ ಸಂಸ್ಕಾರಕ್ಕೆ ಕಾದುಕುಳಿತ ಪುತ್ರ.. ತಂದೆ ಕೊಡ್ತಿಲ್ಲ ಜಾಗ!

Published On - 6:36 pm, Thu, 7 January 21

Follow Us
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
ಸ್ವಿಮ್ಮಿಂಗ್ ಪೂಲ್​​ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ
ಸ್ವಿಮ್ಮಿಂಗ್ ಪೂಲ್​​ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ
‘ಹಯಗ್ರೀವ’ ಸಿನಿಮಾಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ಸಂಜನಾ ಫುಲ್ ಖುಷ್
‘ಹಯಗ್ರೀವ’ ಸಿನಿಮಾಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ಸಂಜನಾ ಫುಲ್ ಖುಷ್
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್