Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಂತ್ಯ ಸಂಸ್ಕಾರಕ್ಕೆ ಹಣ ಪಡೆಯಲು ಶವವನ್ನೇ ಬ್ಯಾಂಕ್​ಗೆ ಹೊತ್ತೊಯ್ದ ಗ್ರಾಮಸ್ಥರು!

ಗ್ರಾಮಸ್ಥರು ಮಹೇಶ್​ ಅಂತ್ಯಸಂಸ್ಕಾರಕ್ಕೆ ಮುಂದಾಗಿದ್ದರು. ಆದರೆ, ಯಾರೊಬ್ಬರೂ ಹಣ ನೀಡಲು ಸಿದ್ಧರಿರಲಿಲ್ಲ. ಹೀಗಾಗಿ ಮನೆಯಲ್ಲಿ ಏನಾದರೂ ಬೆಲೆ ಬಾಳುವ ವಸ್ತು ಇದೆಯೇ ಎನ್ನುವುದನ್ನು ಹುಡುಕಿದ್ದಾರೆ. ಈ ವೇಳೆ ಕಂಡಿದ್ದು ಪಾಸ್​ಬುಕ್​.

ಅಂತ್ಯ ಸಂಸ್ಕಾರಕ್ಕೆ ಹಣ ಪಡೆಯಲು ಶವವನ್ನೇ ಬ್ಯಾಂಕ್​ಗೆ ಹೊತ್ತೊಯ್ದ ಗ್ರಾಮಸ್ಥರು!
ಪ್ರಾತಿನಿಧಿಕ ಚಿತ್ರ
Follow us
ರಾಜೇಶ್ ದುಗ್ಗುಮನೆ
|

Updated on:Jan 07, 2021 | 6:41 PM

ಪಾಟ್ನಾ: ಅಂತ್ಯಸಂಸ್ಕಾರಕ್ಕೆ ಹಣ ನೀಡಲು ಆಗ್ರಹಿಸಿ ಊರಿನವರು ರೈತನ ಹೆಣವನ್ನು ಬ್ಯಾಂಕ್​ಗೆ ತೆಗೆದುಕೊಂಡು ಹೋದ ಘಟನೆ ಪಾಟ್ನಾದಲ್ಲಿ ನಡೆದಿದೆ.

ಮೃತ ರೈತನ ಹೆಸರು ಮಹೇಶ್​ ಯಾದವ್​. ವಯಸ್ಸು 55. ಮಹೇಶ್​ಗೆ ಕುಟುಂಬದವರು ಎಂದು ಯಾರೊಬ್ಬರೂ ಇರಲಿಲ್ಲ. ಅನೇಕ ವರ್ಷಗಳಿಂದ ಅನಾರೋಗ್ಯಕ್ಕೆ ತುತ್ತಾಗಿದ್ದರು. ಇವರು ಮಂಗಳವಾರ ಮೃತಪಟ್ಟಿದ್ದು, ಊರಿನವರಿಗೆ ತಡವಾಗಿ ವಿಚಾರ ಗೊತ್ತಾಗಿದೆ.

ಗ್ರಾಮಸ್ಥರು ಮಹೇಶ್​ ಅಂತ್ಯಸಂಸ್ಕಾರಕ್ಕೆ ಮುಂದಾಗಿದ್ದರು. ಆದರೆ, ಯಾರೊಬ್ಬರೂ ಹಣ ನೀಡಲು ಸಿದ್ಧರಿರಲಿಲ್ಲ. ಹೀಗಾಗಿ ಈ ರೈತನ ಮನೆಯಲ್ಲಿ ಏನಾದರೂ ಬೆಲೆ ಬಾಳುವ ವಸ್ತು ಇದೆಯೇ ಎನ್ನುವುದನ್ನು ಹುಡುಕಿದ್ದರು. ಆದರೆ, ಏನು ಸಿಕ್ಕಿಲ್ಲ. ಈ ವೇಳೆ ಬ್ಯಾಂಕ್​ ಪಾಸ್​ಬುಕ್​ ನೋಡಿದಾಗ ಮಹೇಶ್​ ಖಾತೆಯಲ್ಲಿ 1.17 ಲಕ್ಷ ರೂಪಾಯಿ ಇತ್ತು.

ಬ್ಯಾಂಕ್​ಗೆ ತೆರಳಿದಾಗ ಹಣ ನೀಡೋಕೆ ಬ್ಯಾಂಕ್​ ಮ್ಯಾನೆಜರ್​ ನಿರಾಕರಿಸಿದ್ದಾರೆ. ಇದರಿಂದ ಸಿಟ್ಟಾದ ಗ್ರಾಮಸ್ಥರು ಶವವವನ್ನೇ ತೆಗೆದುಕೊಂಡೇ ಬ್ಯಾಂಕ್​ಗೆ ತೆರಳಿದ್ದಾರೆ. ಅಂತ್ಯ ಸಂಸ್ಕಾರಕ್ಕೆ ಹಣ ನೀಡುವವರೆಗೆ ಸ್ಥಳ ಬಿಟ್ಟು ಕದಲುವುದಿಲ್ಲ ಎಂದು ಗ್ರಾಮಸ್ಥರು ಪಟ್ಟು ಹಿಡಿದಿದ್ದರು. ನಂತರ ಸ್ಥಳೀಯ ಪೊಲೀಸರ ಸೂಚನೆ ಮೇರೆಗೆ ಬ್ಯಾಂಕ್​ ಮ್ಯಾನೆಜರ್​ ಹಣ ನೀಡಿದ್ದಾರೆ ಎನ್ನಲಾಗಿದೆ.

ತಾಯಿಯ ಅಂತ್ಯ ಸಂಸ್ಕಾರಕ್ಕೆ ಕಾದುಕುಳಿತ ಪುತ್ರ.. ತಂದೆ ಕೊಡ್ತಿಲ್ಲ ಜಾಗ!

Published On - 6:36 pm, Thu, 7 January 21

ಪತಿಯೊಂದಿಗೆ ಜಗಳವಾಡಿ ವಿದ್ಯುತ್ ಟವರ್ ಹತ್ತಿ ಆತ್ಮಹತ್ಯೆಗೆ ಯತ್ನಿಸಿದ ಪತ್ನಿ
ಪತಿಯೊಂದಿಗೆ ಜಗಳವಾಡಿ ವಿದ್ಯುತ್ ಟವರ್ ಹತ್ತಿ ಆತ್ಮಹತ್ಯೆಗೆ ಯತ್ನಿಸಿದ ಪತ್ನಿ
ಕೋರ್ಟ್​ ಆದೇಶ ಹಾಗೂ ವ್ಯಕ್ತಿ ಪ್ರಾಣಕ್ಕೂ ಬೆಲೆ ಕೊಡದ KSRTC, ಬಸ್ ಜಪ್ತಿ!
ಕೋರ್ಟ್​ ಆದೇಶ ಹಾಗೂ ವ್ಯಕ್ತಿ ಪ್ರಾಣಕ್ಕೂ ಬೆಲೆ ಕೊಡದ KSRTC, ಬಸ್ ಜಪ್ತಿ!
ಚಂದನ್ ಶೆಟ್ಟಿ ಜೊತೆ ಮದುವೆ ಗಾಸಿಪ್, ಸ್ಪಷ್ಟನೆ ಕೊಟ್ಟ ಸಂಜನಾ
ಚಂದನ್ ಶೆಟ್ಟಿ ಜೊತೆ ಮದುವೆ ಗಾಸಿಪ್, ಸ್ಪಷ್ಟನೆ ಕೊಟ್ಟ ಸಂಜನಾ
ಕುಮಾರಸ್ವಾಮಿ ನನ್ನನ್ನು ಬಯ್ಯದೆ ಬೇರೆ ಯಾರನ್ನು ಬಯ್ಯಲು ಸಾಧ್ಯ? ಶಿವಕುಮಾರ್
ಕುಮಾರಸ್ವಾಮಿ ನನ್ನನ್ನು ಬಯ್ಯದೆ ಬೇರೆ ಯಾರನ್ನು ಬಯ್ಯಲು ಸಾಧ್ಯ? ಶಿವಕುಮಾರ್
ಜಾರ್ಖಂಡ್‌ನ ದಿಯೋಘರ್‌ನಲ್ಲಿ ಇಂಡಿಯನ್ ಆಯಿಲ್ ಸ್ಥಾವರದಲ್ಲಿ ಬೆಂಕಿ ಅವಘಡ
ಜಾರ್ಖಂಡ್‌ನ ದಿಯೋಘರ್‌ನಲ್ಲಿ ಇಂಡಿಯನ್ ಆಯಿಲ್ ಸ್ಥಾವರದಲ್ಲಿ ಬೆಂಕಿ ಅವಘಡ
ಕರ್ನಾಟಕ ಮೊದಲು ತಮಿಳುನಾಡು ಚರ್ಚೆ ಮಾಡಬೇಕಾದ ಅವಶ್ಯಕತೆ ಸ್ಪಷ್ಟವಾಗುತ್ತಿದೆ
ಕರ್ನಾಟಕ ಮೊದಲು ತಮಿಳುನಾಡು ಚರ್ಚೆ ಮಾಡಬೇಕಾದ ಅವಶ್ಯಕತೆ ಸ್ಪಷ್ಟವಾಗುತ್ತಿದೆ
ಶಿವಲಿಂಗೇಗೌಡರು ಕೋಪದಿಂದ ಕುದಿಯುತ್ತಿದ್ದರೆ ಸಭಾಧ್ಯಕ್ಷರಿಗೆ ನಗು!
ಶಿವಲಿಂಗೇಗೌಡರು ಕೋಪದಿಂದ ಕುದಿಯುತ್ತಿದ್ದರೆ ಸಭಾಧ್ಯಕ್ಷರಿಗೆ ನಗು!
ಕಂದಾಯ ಮತ್ತು ಸರ್ವೇ ಇಲಾಖೆ ಅಧಿಕಾರಿಗಳಿಂದ ಮಾರ್ಕಿಂಗ್ ಕೆಲಸ ಶುರುವಾಗಿದೆ
ಕಂದಾಯ ಮತ್ತು ಸರ್ವೇ ಇಲಾಖೆ ಅಧಿಕಾರಿಗಳಿಂದ ಮಾರ್ಕಿಂಗ್ ಕೆಲಸ ಶುರುವಾಗಿದೆ
ತೆರವು ಕಾರ್ಯಾಚರಣೆ ಆರಂಭಿಸುವ ಮೊದಲು ನೋಟೀಸ್ ನೀಡಿಲ್ಲ: ಕುಮಾರಸ್ವಾಮಿ
ತೆರವು ಕಾರ್ಯಾಚರಣೆ ಆರಂಭಿಸುವ ಮೊದಲು ನೋಟೀಸ್ ನೀಡಿಲ್ಲ: ಕುಮಾರಸ್ವಾಮಿ
ನಮಗಾದರೋ ಕುಮಾರಸ್ವಾಮಿ ಎಲ್ಲದಕ್ಕೂ ರಾಜೀನಾಮೆ ಕೇಳುತ್ತಿದ್ದರಲ್ಲ? ಸಚಿವ
ನಮಗಾದರೋ ಕುಮಾರಸ್ವಾಮಿ ಎಲ್ಲದಕ್ಕೂ ರಾಜೀನಾಮೆ ಕೇಳುತ್ತಿದ್ದರಲ್ಲ? ಸಚಿವ