AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಂತ್ಯ ಸಂಸ್ಕಾರಕ್ಕೆ ಹಣ ಪಡೆಯಲು ಶವವನ್ನೇ ಬ್ಯಾಂಕ್​ಗೆ ಹೊತ್ತೊಯ್ದ ಗ್ರಾಮಸ್ಥರು!

ಗ್ರಾಮಸ್ಥರು ಮಹೇಶ್​ ಅಂತ್ಯಸಂಸ್ಕಾರಕ್ಕೆ ಮುಂದಾಗಿದ್ದರು. ಆದರೆ, ಯಾರೊಬ್ಬರೂ ಹಣ ನೀಡಲು ಸಿದ್ಧರಿರಲಿಲ್ಲ. ಹೀಗಾಗಿ ಮನೆಯಲ್ಲಿ ಏನಾದರೂ ಬೆಲೆ ಬಾಳುವ ವಸ್ತು ಇದೆಯೇ ಎನ್ನುವುದನ್ನು ಹುಡುಕಿದ್ದಾರೆ. ಈ ವೇಳೆ ಕಂಡಿದ್ದು ಪಾಸ್​ಬುಕ್​.

ಅಂತ್ಯ ಸಂಸ್ಕಾರಕ್ಕೆ ಹಣ ಪಡೆಯಲು ಶವವನ್ನೇ ಬ್ಯಾಂಕ್​ಗೆ ಹೊತ್ತೊಯ್ದ ಗ್ರಾಮಸ್ಥರು!
ಪ್ರಾತಿನಿಧಿಕ ಚಿತ್ರ
ರಾಜೇಶ್ ದುಗ್ಗುಮನೆ
|

Updated on:Jan 07, 2021 | 6:41 PM

Share

ಪಾಟ್ನಾ: ಅಂತ್ಯಸಂಸ್ಕಾರಕ್ಕೆ ಹಣ ನೀಡಲು ಆಗ್ರಹಿಸಿ ಊರಿನವರು ರೈತನ ಹೆಣವನ್ನು ಬ್ಯಾಂಕ್​ಗೆ ತೆಗೆದುಕೊಂಡು ಹೋದ ಘಟನೆ ಪಾಟ್ನಾದಲ್ಲಿ ನಡೆದಿದೆ.

ಮೃತ ರೈತನ ಹೆಸರು ಮಹೇಶ್​ ಯಾದವ್​. ವಯಸ್ಸು 55. ಮಹೇಶ್​ಗೆ ಕುಟುಂಬದವರು ಎಂದು ಯಾರೊಬ್ಬರೂ ಇರಲಿಲ್ಲ. ಅನೇಕ ವರ್ಷಗಳಿಂದ ಅನಾರೋಗ್ಯಕ್ಕೆ ತುತ್ತಾಗಿದ್ದರು. ಇವರು ಮಂಗಳವಾರ ಮೃತಪಟ್ಟಿದ್ದು, ಊರಿನವರಿಗೆ ತಡವಾಗಿ ವಿಚಾರ ಗೊತ್ತಾಗಿದೆ.

ಗ್ರಾಮಸ್ಥರು ಮಹೇಶ್​ ಅಂತ್ಯಸಂಸ್ಕಾರಕ್ಕೆ ಮುಂದಾಗಿದ್ದರು. ಆದರೆ, ಯಾರೊಬ್ಬರೂ ಹಣ ನೀಡಲು ಸಿದ್ಧರಿರಲಿಲ್ಲ. ಹೀಗಾಗಿ ಈ ರೈತನ ಮನೆಯಲ್ಲಿ ಏನಾದರೂ ಬೆಲೆ ಬಾಳುವ ವಸ್ತು ಇದೆಯೇ ಎನ್ನುವುದನ್ನು ಹುಡುಕಿದ್ದರು. ಆದರೆ, ಏನು ಸಿಕ್ಕಿಲ್ಲ. ಈ ವೇಳೆ ಬ್ಯಾಂಕ್​ ಪಾಸ್​ಬುಕ್​ ನೋಡಿದಾಗ ಮಹೇಶ್​ ಖಾತೆಯಲ್ಲಿ 1.17 ಲಕ್ಷ ರೂಪಾಯಿ ಇತ್ತು.

ಬ್ಯಾಂಕ್​ಗೆ ತೆರಳಿದಾಗ ಹಣ ನೀಡೋಕೆ ಬ್ಯಾಂಕ್​ ಮ್ಯಾನೆಜರ್​ ನಿರಾಕರಿಸಿದ್ದಾರೆ. ಇದರಿಂದ ಸಿಟ್ಟಾದ ಗ್ರಾಮಸ್ಥರು ಶವವವನ್ನೇ ತೆಗೆದುಕೊಂಡೇ ಬ್ಯಾಂಕ್​ಗೆ ತೆರಳಿದ್ದಾರೆ. ಅಂತ್ಯ ಸಂಸ್ಕಾರಕ್ಕೆ ಹಣ ನೀಡುವವರೆಗೆ ಸ್ಥಳ ಬಿಟ್ಟು ಕದಲುವುದಿಲ್ಲ ಎಂದು ಗ್ರಾಮಸ್ಥರು ಪಟ್ಟು ಹಿಡಿದಿದ್ದರು. ನಂತರ ಸ್ಥಳೀಯ ಪೊಲೀಸರ ಸೂಚನೆ ಮೇರೆಗೆ ಬ್ಯಾಂಕ್​ ಮ್ಯಾನೆಜರ್​ ಹಣ ನೀಡಿದ್ದಾರೆ ಎನ್ನಲಾಗಿದೆ.

ತಾಯಿಯ ಅಂತ್ಯ ಸಂಸ್ಕಾರಕ್ಕೆ ಕಾದುಕುಳಿತ ಪುತ್ರ.. ತಂದೆ ಕೊಡ್ತಿಲ್ಲ ಜಾಗ!

Published On - 6:36 pm, Thu, 7 January 21

Follow Us
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?