ಅಂತ್ಯ ಸಂಸ್ಕಾರಕ್ಕೆ ಹಣ ಪಡೆಯಲು ಶವವನ್ನೇ ಬ್ಯಾಂಕ್​ಗೆ ಹೊತ್ತೊಯ್ದ ಗ್ರಾಮಸ್ಥರು!

|

Updated on: Jan 07, 2021 | 6:41 PM

ಗ್ರಾಮಸ್ಥರು ಮಹೇಶ್​ ಅಂತ್ಯಸಂಸ್ಕಾರಕ್ಕೆ ಮುಂದಾಗಿದ್ದರು. ಆದರೆ, ಯಾರೊಬ್ಬರೂ ಹಣ ನೀಡಲು ಸಿದ್ಧರಿರಲಿಲ್ಲ. ಹೀಗಾಗಿ ಮನೆಯಲ್ಲಿ ಏನಾದರೂ ಬೆಲೆ ಬಾಳುವ ವಸ್ತು ಇದೆಯೇ ಎನ್ನುವುದನ್ನು ಹುಡುಕಿದ್ದಾರೆ. ಈ ವೇಳೆ ಕಂಡಿದ್ದು ಪಾಸ್​ಬುಕ್​.

ಅಂತ್ಯ ಸಂಸ್ಕಾರಕ್ಕೆ ಹಣ ಪಡೆಯಲು ಶವವನ್ನೇ ಬ್ಯಾಂಕ್​ಗೆ ಹೊತ್ತೊಯ್ದ ಗ್ರಾಮಸ್ಥರು!
ಪ್ರಾತಿನಿಧಿಕ ಚಿತ್ರ
Follow us on

ಪಾಟ್ನಾ: ಅಂತ್ಯಸಂಸ್ಕಾರಕ್ಕೆ ಹಣ ನೀಡಲು ಆಗ್ರಹಿಸಿ ಊರಿನವರು ರೈತನ ಹೆಣವನ್ನು ಬ್ಯಾಂಕ್​ಗೆ ತೆಗೆದುಕೊಂಡು ಹೋದ ಘಟನೆ ಪಾಟ್ನಾದಲ್ಲಿ ನಡೆದಿದೆ.

ಮೃತ ರೈತನ ಹೆಸರು ಮಹೇಶ್​ ಯಾದವ್​. ವಯಸ್ಸು 55. ಮಹೇಶ್​ಗೆ ಕುಟುಂಬದವರು ಎಂದು ಯಾರೊಬ್ಬರೂ ಇರಲಿಲ್ಲ. ಅನೇಕ ವರ್ಷಗಳಿಂದ ಅನಾರೋಗ್ಯಕ್ಕೆ ತುತ್ತಾಗಿದ್ದರು. ಇವರು ಮಂಗಳವಾರ ಮೃತಪಟ್ಟಿದ್ದು, ಊರಿನವರಿಗೆ ತಡವಾಗಿ ವಿಚಾರ ಗೊತ್ತಾಗಿದೆ.

ಗ್ರಾಮಸ್ಥರು ಮಹೇಶ್​ ಅಂತ್ಯಸಂಸ್ಕಾರಕ್ಕೆ ಮುಂದಾಗಿದ್ದರು. ಆದರೆ, ಯಾರೊಬ್ಬರೂ ಹಣ ನೀಡಲು ಸಿದ್ಧರಿರಲಿಲ್ಲ. ಹೀಗಾಗಿ ಈ ರೈತನ ಮನೆಯಲ್ಲಿ ಏನಾದರೂ ಬೆಲೆ ಬಾಳುವ ವಸ್ತು ಇದೆಯೇ ಎನ್ನುವುದನ್ನು ಹುಡುಕಿದ್ದರು. ಆದರೆ, ಏನು ಸಿಕ್ಕಿಲ್ಲ. ಈ ವೇಳೆ ಬ್ಯಾಂಕ್​ ಪಾಸ್​ಬುಕ್​ ನೋಡಿದಾಗ ಮಹೇಶ್​ ಖಾತೆಯಲ್ಲಿ 1.17 ಲಕ್ಷ ರೂಪಾಯಿ ಇತ್ತು.

ಬ್ಯಾಂಕ್​ಗೆ ತೆರಳಿದಾಗ ಹಣ ನೀಡೋಕೆ ಬ್ಯಾಂಕ್​ ಮ್ಯಾನೆಜರ್​ ನಿರಾಕರಿಸಿದ್ದಾರೆ. ಇದರಿಂದ ಸಿಟ್ಟಾದ ಗ್ರಾಮಸ್ಥರು ಶವವವನ್ನೇ ತೆಗೆದುಕೊಂಡೇ ಬ್ಯಾಂಕ್​ಗೆ ತೆರಳಿದ್ದಾರೆ. ಅಂತ್ಯ ಸಂಸ್ಕಾರಕ್ಕೆ ಹಣ ನೀಡುವವರೆಗೆ ಸ್ಥಳ ಬಿಟ್ಟು ಕದಲುವುದಿಲ್ಲ ಎಂದು ಗ್ರಾಮಸ್ಥರು ಪಟ್ಟು ಹಿಡಿದಿದ್ದರು. ನಂತರ ಸ್ಥಳೀಯ ಪೊಲೀಸರ ಸೂಚನೆ ಮೇರೆಗೆ ಬ್ಯಾಂಕ್​ ಮ್ಯಾನೆಜರ್​ ಹಣ ನೀಡಿದ್ದಾರೆ ಎನ್ನಲಾಗಿದೆ.

ತಾಯಿಯ ಅಂತ್ಯ ಸಂಸ್ಕಾರಕ್ಕೆ ಕಾದುಕುಳಿತ ಪುತ್ರ.. ತಂದೆ ಕೊಡ್ತಿಲ್ಲ ಜಾಗ!

Published On - 6:36 pm, Thu, 7 January 21