AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Natural Farming Conclave ಗ್ರಾಮಗಳು ಬದಲಾವಣೆಗಳನ್ನು ಮುನ್ನಡೆಸಬಲ್ಲವು ಎಂದು ತೋರಿಸಿಕೊಟ್ಟಿವೆ: ಮೋದಿ

ಡಿಜಿಟಲ್ ಇಂಡಿಯಾ ಮಿಷನ್ ಬಗ್ಗೆ ಮಾತನಾಡಿದ ಮೋದಿ, ಡಿಜಿಟಲ್ ಇಂಡಿಯಾ ಮಿಷನ್​​ನ ಅಭೂತಪೂರ್ವ ಯಶಸ್ಸು ಗ್ರಾಮಗಳನ್ನು ಬದಲಿಸುವುದು ಅಷ್ಟು ಸುಲಭವಲ್ಲ ಎಂದು ಹೇಳುವವರಿಗೆ ತಕ್ಕ ಉತ್ತರವಾಗಿದೆ.

Natural Farming Conclave ಗ್ರಾಮಗಳು ಬದಲಾವಣೆಗಳನ್ನು ಮುನ್ನಡೆಸಬಲ್ಲವು ಎಂದು ತೋರಿಸಿಕೊಟ್ಟಿವೆ: ಮೋದಿ
ಪ್ರಧಾನಿ ಮೋದಿ
Follow us
TV9 Web
| Updated By: ರಶ್ಮಿ ಕಲ್ಲಕಟ್ಟ

Updated on: Jul 10, 2022 | 1:15 PM

ನೈಸರ್ಗಿಕ ಕೃಷಿಕರ ಸಮಾವೇಶ (Natural Farming Conclave)ದಲ್ಲಿಂದು ವಿಡಿಯೊ ಸಂವಾದ ಮೂಲಕ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ(Narendra Modi) ಅವರು ಅಮೃತಕಾಲದಲ್ಲಿ ಭಾರತದ ಅಭಿವೃದ್ದಿಯ ವೇಗಕ್ಕೆ ಸಬ್ ಕಾ ಪ್ರಯಾಸ್ (ಎಲ್ಲರ ಪರಿಶ್ರಮ) ಅಡಿಪಾಯವಾಗಿರುತ್ತದೆ. ಗ್ರಾಮಗಳಿಗೆ (Villages) ಮತ್ತು ಬಡವರಿಗಾಗಿ ಮಾಡಬೇಕಾದ ಕಾರ್ಯಗಳ ಜವಾಬ್ದಾರಿಯನ್ನು ನಾಗರಿಕರಿಗೆ ಮತ್ತು ಗ್ರಾಮ ಪಂಚಾಯತ್​​ಗಳಿಗೆ ನೀಡಲಾಗಿದೆ ಎಂದು ಹೇಳಿದ್ದಾರೆ. ಭಾರತದ ಸ್ವಾತಂತ್ರ್ಯದ 75ನೇ ವರ್ಷಾಚರಣೆಯ ಈ ಸಂದರ್ಭದಲ್ಲಿ ದೇಶವು ವಿವಿಧ ಗುರಿಗಳ ಬಗ್ಗೆ ಕಾರ್ಯಪ್ರವೃತ್ತವಾಗಿದ್ದು, ಮುಂದಿನ ದಿನಗಳಲ್ಲಿ ದೊಡ್ಡ ಬದಲಾವಣೆಯಾಗಲಿದೆ ಎಂದು ಹೇಳಿದ್ದಾರೆ. ಮುಂದಿನ ದಿನಗಳಲ್ಲಿ ನಿಮ್ಮ ಪರಿಶ್ರಮ, ನಿಮ್ಮ ಅನುಭವದಿಂದ ದೇಶದಾದ್ಯಂತವಿರುವ ರೈತರು ಹಲವು ವಿಷಯಗಳನ್ನು ಕಲಿಯುತ್ತಾರೆ ಮತ್ತು ಅರ್ಥ ಮಾಡಿಕೊಳ್ಳುತ್ತಾರೆ. ಸೂರತ್​​ನಲ್ಲಿನ ನೈಸರ್ಗಿಕ ಕೃಷಿ ವಿಧಾನವು ಇಡೀ ಭಾರತಕ್ಕೆ ಮಾದರಿಯಾಗಲಿದೆ  ಎಂದು ಹೇಳಿದ್ದಾರೆ.

ಡಿಜಿಟಲ್ ಇಂಡಿಯಾ ಮಿಷನ್ ಬಗ್ಗೆ ಮಾತನಾಡಿದ ಮೋದಿ, ಡಿಜಿಟಲ್ ಇಂಡಿಯಾ ಮಿಷನ್​​ನ ಅಭೂತಪೂರ್ವ ಯಶಸ್ಸು ಗ್ರಾಮಗಳನ್ನು ಬದಲಿಸುವುದು ಅಷ್ಟು ಸುಲಭವಲ್ಲ ಎಂದು ಹೇಳುವವರಿಗೆ ತಕ್ಕ ಉತ್ತರವಾಗಿದೆ. ನಮ್ಮ ಗ್ರಾಮಗಳು ಕೇವಲ ಬದಲಾವಣೆ ಆಗುವುದು ಮಾತ್ರವಲ್ಲದೆ ಬದಲಾವಣೆಯನ್ನು ಮುನ್ನಡೆಸಬಲ್ಲವು ಎಂಬುದನ್ನೂ ತೋರಿಸಿಕೊಟ್ಟಿವೆ ಎಂದು ಮೋದಿ ಹೇಳಿದ್ದಾರೆ.

ಗುಜರಾತ್ ಮುಖ್ಯಮಂತ್ರಿ ಭುಪೇಂದ್ರ ಪಟೇಲ್ ಮತ್ತು ಗವರ್ನರ್ ಆಚಾರ್ಯ ದೇವ್ರತ್ ಕೂಡಾ ಈ ಸಮಾರಂಭದಲ್ಲಿ ಭಾಗಿಯಾಗಿದ್ದರು.  ಗುಜರಾತ್​​ನ ಸೂರತ್​​ನಲ್ಲಿ ನಡೆದ ಸಮಾವೇಶದಲ್ಲಿ ಸಾವಿರಾರು ರೈತರು ಮತ್ತು ಕೃಷಿ ಚಟುವಟಿಕೆಗಳಲ್ಲಿ ತೊಡಗಿರುವ ಇತರ ಉದ್ಯಮಿಗಳು, ವ್ಯಾಪಾರಿಗಳು, ಆಸಕ್ತರು ಪಾಲ್ಗೊಂಡಿದ್ದಾರೆ.

ಕುಮಾರಸ್ವಾಮಿಯವರು ಚೆನ್ನಾಗಿರಲಿ, ಆರೋಗ್ಯವಾಗಿರಲಿ: ಶಿವಕುಮಾರ್
ಕುಮಾರಸ್ವಾಮಿಯವರು ಚೆನ್ನಾಗಿರಲಿ, ಆರೋಗ್ಯವಾಗಿರಲಿ: ಶಿವಕುಮಾರ್
6,6,6,6,6:: ಬಿರುಗಾಳಿ ಬ್ಯಾಟಿಂಗ್​ನೊಂದಿಗೆ ಪಂದ್ಯ ಗೆಲ್ಲಿಸಿದ ಬೌಲರ್..!
6,6,6,6,6:: ಬಿರುಗಾಳಿ ಬ್ಯಾಟಿಂಗ್​ನೊಂದಿಗೆ ಪಂದ್ಯ ಗೆಲ್ಲಿಸಿದ ಬೌಲರ್..!
‘ಎಸ್​ಪಿಬಿ ರೀತಿಯೇ ಮತ್ತೋರ್ವ ಗಾಯಕನಿದ್ದಾನೆ ಎಂದರು..’; ಜಗ್ಗೇಶ್
‘ಎಸ್​ಪಿಬಿ ರೀತಿಯೇ ಮತ್ತೋರ್ವ ಗಾಯಕನಿದ್ದಾನೆ ಎಂದರು..’; ಜಗ್ಗೇಶ್
ಅಕ್ರಮ ಕಟ್ಟಡಗಳ ವಿರುದ್ಧ ಬಿಬಿಎಂಪಿ ಸಮರ: ಹಲವೆಡೆ ಕಟ್ಟಡಗಳ ತೆರವು
ಅಕ್ರಮ ಕಟ್ಟಡಗಳ ವಿರುದ್ಧ ಬಿಬಿಎಂಪಿ ಸಮರ: ಹಲವೆಡೆ ಕಟ್ಟಡಗಳ ತೆರವು
ವೆಸ್ಟ್​ ವ್ಯಾಲಿ ಸಿಟಿಯಲ್ಲಿ ನಡೆಯುತ್ತಿದ್ದ ಕಾರ್ಯಕ್ರಮದಲ್ಲಿ ಗುಂಡಿನ ದಾಳಿ
ವೆಸ್ಟ್​ ವ್ಯಾಲಿ ಸಿಟಿಯಲ್ಲಿ ನಡೆಯುತ್ತಿದ್ದ ಕಾರ್ಯಕ್ರಮದಲ್ಲಿ ಗುಂಡಿನ ದಾಳಿ
ಈ ಸಲ ಮೊದಲ ಬಾರಿಗೆ ಜನಗಣತಿಯ ಜಾತಿಗಣತಿ: ಗೃಹ ಸಚಿವಾಲಯ
ಈ ಸಲ ಮೊದಲ ಬಾರಿಗೆ ಜನಗಣತಿಯ ಜಾತಿಗಣತಿ: ಗೃಹ ಸಚಿವಾಲಯ
ಮೈಸೂರಿಗೆ 5 ರೂ. ಕೆಲಸ ಮಾಡಿಲ್ಲ ಸಿದ್ದರಾಮಯ್ಯ: ಪ್ರತಾಪ್ ಸಿಂಹ ವಾಗ್ದಾಳಿ
ಮೈಸೂರಿಗೆ 5 ರೂ. ಕೆಲಸ ಮಾಡಿಲ್ಲ ಸಿದ್ದರಾಮಯ್ಯ: ಪ್ರತಾಪ್ ಸಿಂಹ ವಾಗ್ದಾಳಿ
‘ಹುಡುಗಿ ಇದ್ದಾಗ ಒಂತರ, ಇಲ್ಲದಿದ್ದಾಗ ಒಂತರ’; ರಕ್ಷಕ್ ಬಗ್ಗೆ ರಮೋಲಾ ಮಾತು
‘ಹುಡುಗಿ ಇದ್ದಾಗ ಒಂತರ, ಇಲ್ಲದಿದ್ದಾಗ ಒಂತರ’; ರಕ್ಷಕ್ ಬಗ್ಗೆ ರಮೋಲಾ ಮಾತು
ಲಕ್ನೋ: ಸೌದಿ ಏರ್​ಲೈನ್ಸ್​ ವಿಮಾನದ ಚಕ್ರದಲ್ಲಿ ಕಾಣಿಸಿಕೊಂಡ ಬೆಂಕಿ
ಲಕ್ನೋ: ಸೌದಿ ಏರ್​ಲೈನ್ಸ್​ ವಿಮಾನದ ಚಕ್ರದಲ್ಲಿ ಕಾಣಿಸಿಕೊಂಡ ಬೆಂಕಿ
ಸ್ಫೋಟಕ ಬ್ಯಾಟಿಂಗ್​... ಮತ್ತೊಂದು ಟಿ20 ಟ್ರೋಫಿ ಗೆದ್ದ ಜಿತೇಶ್ ಶರ್ಮಾ
ಸ್ಫೋಟಕ ಬ್ಯಾಟಿಂಗ್​... ಮತ್ತೊಂದು ಟಿ20 ಟ್ರೋಫಿ ಗೆದ್ದ ಜಿತೇಶ್ ಶರ್ಮಾ