AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Natural Farming Conclave ಗ್ರಾಮಗಳು ಬದಲಾವಣೆಗಳನ್ನು ಮುನ್ನಡೆಸಬಲ್ಲವು ಎಂದು ತೋರಿಸಿಕೊಟ್ಟಿವೆ: ಮೋದಿ

ಡಿಜಿಟಲ್ ಇಂಡಿಯಾ ಮಿಷನ್ ಬಗ್ಗೆ ಮಾತನಾಡಿದ ಮೋದಿ, ಡಿಜಿಟಲ್ ಇಂಡಿಯಾ ಮಿಷನ್​​ನ ಅಭೂತಪೂರ್ವ ಯಶಸ್ಸು ಗ್ರಾಮಗಳನ್ನು ಬದಲಿಸುವುದು ಅಷ್ಟು ಸುಲಭವಲ್ಲ ಎಂದು ಹೇಳುವವರಿಗೆ ತಕ್ಕ ಉತ್ತರವಾಗಿದೆ.

Natural Farming Conclave ಗ್ರಾಮಗಳು ಬದಲಾವಣೆಗಳನ್ನು ಮುನ್ನಡೆಸಬಲ್ಲವು ಎಂದು ತೋರಿಸಿಕೊಟ್ಟಿವೆ: ಮೋದಿ
ಪ್ರಧಾನಿ ಮೋದಿ
TV9 Web
| Updated By: ರಶ್ಮಿ ಕಲ್ಲಕಟ್ಟ|

Updated on: Jul 10, 2022 | 1:15 PM

Share

ನೈಸರ್ಗಿಕ ಕೃಷಿಕರ ಸಮಾವೇಶ (Natural Farming Conclave)ದಲ್ಲಿಂದು ವಿಡಿಯೊ ಸಂವಾದ ಮೂಲಕ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ(Narendra Modi) ಅವರು ಅಮೃತಕಾಲದಲ್ಲಿ ಭಾರತದ ಅಭಿವೃದ್ದಿಯ ವೇಗಕ್ಕೆ ಸಬ್ ಕಾ ಪ್ರಯಾಸ್ (ಎಲ್ಲರ ಪರಿಶ್ರಮ) ಅಡಿಪಾಯವಾಗಿರುತ್ತದೆ. ಗ್ರಾಮಗಳಿಗೆ (Villages) ಮತ್ತು ಬಡವರಿಗಾಗಿ ಮಾಡಬೇಕಾದ ಕಾರ್ಯಗಳ ಜವಾಬ್ದಾರಿಯನ್ನು ನಾಗರಿಕರಿಗೆ ಮತ್ತು ಗ್ರಾಮ ಪಂಚಾಯತ್​​ಗಳಿಗೆ ನೀಡಲಾಗಿದೆ ಎಂದು ಹೇಳಿದ್ದಾರೆ. ಭಾರತದ ಸ್ವಾತಂತ್ರ್ಯದ 75ನೇ ವರ್ಷಾಚರಣೆಯ ಈ ಸಂದರ್ಭದಲ್ಲಿ ದೇಶವು ವಿವಿಧ ಗುರಿಗಳ ಬಗ್ಗೆ ಕಾರ್ಯಪ್ರವೃತ್ತವಾಗಿದ್ದು, ಮುಂದಿನ ದಿನಗಳಲ್ಲಿ ದೊಡ್ಡ ಬದಲಾವಣೆಯಾಗಲಿದೆ ಎಂದು ಹೇಳಿದ್ದಾರೆ. ಮುಂದಿನ ದಿನಗಳಲ್ಲಿ ನಿಮ್ಮ ಪರಿಶ್ರಮ, ನಿಮ್ಮ ಅನುಭವದಿಂದ ದೇಶದಾದ್ಯಂತವಿರುವ ರೈತರು ಹಲವು ವಿಷಯಗಳನ್ನು ಕಲಿಯುತ್ತಾರೆ ಮತ್ತು ಅರ್ಥ ಮಾಡಿಕೊಳ್ಳುತ್ತಾರೆ. ಸೂರತ್​​ನಲ್ಲಿನ ನೈಸರ್ಗಿಕ ಕೃಷಿ ವಿಧಾನವು ಇಡೀ ಭಾರತಕ್ಕೆ ಮಾದರಿಯಾಗಲಿದೆ  ಎಂದು ಹೇಳಿದ್ದಾರೆ.

ಡಿಜಿಟಲ್ ಇಂಡಿಯಾ ಮಿಷನ್ ಬಗ್ಗೆ ಮಾತನಾಡಿದ ಮೋದಿ, ಡಿಜಿಟಲ್ ಇಂಡಿಯಾ ಮಿಷನ್​​ನ ಅಭೂತಪೂರ್ವ ಯಶಸ್ಸು ಗ್ರಾಮಗಳನ್ನು ಬದಲಿಸುವುದು ಅಷ್ಟು ಸುಲಭವಲ್ಲ ಎಂದು ಹೇಳುವವರಿಗೆ ತಕ್ಕ ಉತ್ತರವಾಗಿದೆ. ನಮ್ಮ ಗ್ರಾಮಗಳು ಕೇವಲ ಬದಲಾವಣೆ ಆಗುವುದು ಮಾತ್ರವಲ್ಲದೆ ಬದಲಾವಣೆಯನ್ನು ಮುನ್ನಡೆಸಬಲ್ಲವು ಎಂಬುದನ್ನೂ ತೋರಿಸಿಕೊಟ್ಟಿವೆ ಎಂದು ಮೋದಿ ಹೇಳಿದ್ದಾರೆ.

ಗುಜರಾತ್ ಮುಖ್ಯಮಂತ್ರಿ ಭುಪೇಂದ್ರ ಪಟೇಲ್ ಮತ್ತು ಗವರ್ನರ್ ಆಚಾರ್ಯ ದೇವ್ರತ್ ಕೂಡಾ ಈ ಸಮಾರಂಭದಲ್ಲಿ ಭಾಗಿಯಾಗಿದ್ದರು.  ಗುಜರಾತ್​​ನ ಸೂರತ್​​ನಲ್ಲಿ ನಡೆದ ಸಮಾವೇಶದಲ್ಲಿ ಸಾವಿರಾರು ರೈತರು ಮತ್ತು ಕೃಷಿ ಚಟುವಟಿಕೆಗಳಲ್ಲಿ ತೊಡಗಿರುವ ಇತರ ಉದ್ಯಮಿಗಳು, ವ್ಯಾಪಾರಿಗಳು, ಆಸಕ್ತರು ಪಾಲ್ಗೊಂಡಿದ್ದಾರೆ.

ಟೀಮ್ ಇಂಡಿಯಾ ಆಟಗಾರರ ಶತಕ ತಪ್ಪಿಸಲು ಮುಂದಾಗಿದ್ದ ಸ್ಟೋಕ್ಸ್
ಟೀಮ್ ಇಂಡಿಯಾ ಆಟಗಾರರ ಶತಕ ತಪ್ಪಿಸಲು ಮುಂದಾಗಿದ್ದ ಸ್ಟೋಕ್ಸ್
ವರಮಹಾಲಕ್ಷ್ಮೀ ಹಬ್ಬ ಆಚರಣೆ ದಿನಾಂಕ ಯಾವಾಗ? ಆಚರಣೆ ಹೇಗೆ , ಫಲಗಳೇನು?
ವರಮಹಾಲಕ್ಷ್ಮೀ ಹಬ್ಬ ಆಚರಣೆ ದಿನಾಂಕ ಯಾವಾಗ? ಆಚರಣೆ ಹೇಗೆ , ಫಲಗಳೇನು?
ಇಂದು ವಿನಾಯಕಿ ಚತುರ್ಥಿ: ದ್ವಾದಶ ರಾಶಿ ಭವಿಷ್ಯ ಹೇಗಿದೆ ನೋಡಿ
ಇಂದು ವಿನಾಯಕಿ ಚತುರ್ಥಿ: ದ್ವಾದಶ ರಾಶಿ ಭವಿಷ್ಯ ಹೇಗಿದೆ ನೋಡಿ
ಪ್ರಥಮ್​ ಮೇಲೆ ಅಟ್ಯಾಕ್: ಅಲ್ಲೇ ಇದ್ದರು ರಕ್ಷಕ್ ಸುಮ್ಮನಿದ್ದಿದ್ದು ಏಕೆ?
ಪ್ರಥಮ್​ ಮೇಲೆ ಅಟ್ಯಾಕ್: ಅಲ್ಲೇ ಇದ್ದರು ರಕ್ಷಕ್ ಸುಮ್ಮನಿದ್ದಿದ್ದು ಏಕೆ?
ರೌಡಿಗಳ ಜೊತೆಗೆ ರಕ್ಷಕ್​ಗೆ ಏನು ಕೆಲಸ: ಪ್ರಥಮ್ ಆಕ್ರೋಶ
ರೌಡಿಗಳ ಜೊತೆಗೆ ರಕ್ಷಕ್​ಗೆ ಏನು ಕೆಲಸ: ಪ್ರಥಮ್ ಆಕ್ರೋಶ
ಚಡ್ಡಿಯಲ್ಲಿ ಬಂದು ಒಣಗಲು ಹಾಕಿದ್ದ ಬಟ್ಟೆಗಳನ್ನು ಕದ್ದು ಓಡಿದ ಭೂಪ
ಚಡ್ಡಿಯಲ್ಲಿ ಬಂದು ಒಣಗಲು ಹಾಕಿದ್ದ ಬಟ್ಟೆಗಳನ್ನು ಕದ್ದು ಓಡಿದ ಭೂಪ
‘ಸು ಫ್ರಮ್ ಸೋ’ ನಿರ್ದೇಶಕರಿಗೆ ತಾಯಿಯಿಂದ ಸಿಕ್ತು ಬೆಸ್ಟ್ ಪ್ರತಿಕ್ರಿಯೆ
‘ಸು ಫ್ರಮ್ ಸೋ’ ನಿರ್ದೇಶಕರಿಗೆ ತಾಯಿಯಿಂದ ಸಿಕ್ತು ಬೆಸ್ಟ್ ಪ್ರತಿಕ್ರಿಯೆ
ಮೈಸೂರಿನಲ್ಲೇ ಡ್ರಗ್ಸ್​ ತಯಾರಿಕಾ ಘಟಕ: ಸ್ಫೋಟಕ ಅಂಶ ಬಾಯ್ಬಿಟ್ಟ ಪೆಡ್ಲರ್
ಮೈಸೂರಿನಲ್ಲೇ ಡ್ರಗ್ಸ್​ ತಯಾರಿಕಾ ಘಟಕ: ಸ್ಫೋಟಕ ಅಂಶ ಬಾಯ್ಬಿಟ್ಟ ಪೆಡ್ಲರ್
ಆರಂಭಿಕನಾಗಿ ಕಣಕ್ಕಿಳಿದು 6 ಸಿಕ್ಸ್ ಸಿಡಿಸಿದ ಗ್ಲೆನ್ ಮ್ಯಾಕ್ಸ್​ವೆಲ್
ಆರಂಭಿಕನಾಗಿ ಕಣಕ್ಕಿಳಿದು 6 ಸಿಕ್ಸ್ ಸಿಡಿಸಿದ ಗ್ಲೆನ್ ಮ್ಯಾಕ್ಸ್​ವೆಲ್
7 ರನ್​ಗಳ ಅವಶ್ಯಕತೆ: ಪಂದ್ಯದ ಫಲಿತಾಂಶ ಬದಲಿಸಿದ 2 ಅದ್ಭುತ ಕ್ಯಾಚ್​ಗಳು
7 ರನ್​ಗಳ ಅವಶ್ಯಕತೆ: ಪಂದ್ಯದ ಫಲಿತಾಂಶ ಬದಲಿಸಿದ 2 ಅದ್ಭುತ ಕ್ಯಾಚ್​ಗಳು