AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Natural Farming Conclave ಗ್ರಾಮಗಳು ಬದಲಾವಣೆಗಳನ್ನು ಮುನ್ನಡೆಸಬಲ್ಲವು ಎಂದು ತೋರಿಸಿಕೊಟ್ಟಿವೆ: ಮೋದಿ

ಡಿಜಿಟಲ್ ಇಂಡಿಯಾ ಮಿಷನ್ ಬಗ್ಗೆ ಮಾತನಾಡಿದ ಮೋದಿ, ಡಿಜಿಟಲ್ ಇಂಡಿಯಾ ಮಿಷನ್​​ನ ಅಭೂತಪೂರ್ವ ಯಶಸ್ಸು ಗ್ರಾಮಗಳನ್ನು ಬದಲಿಸುವುದು ಅಷ್ಟು ಸುಲಭವಲ್ಲ ಎಂದು ಹೇಳುವವರಿಗೆ ತಕ್ಕ ಉತ್ತರವಾಗಿದೆ.

Natural Farming Conclave ಗ್ರಾಮಗಳು ಬದಲಾವಣೆಗಳನ್ನು ಮುನ್ನಡೆಸಬಲ್ಲವು ಎಂದು ತೋರಿಸಿಕೊಟ್ಟಿವೆ: ಮೋದಿ
ಪ್ರಧಾನಿ ಮೋದಿ
TV9 Web
| Edited By: ರಶ್ಮಿ ಕಲ್ಲಕಟ್ಟ|

Updated on: Jul 10, 2022 | 1:15 PM

Share

ನೈಸರ್ಗಿಕ ಕೃಷಿಕರ ಸಮಾವೇಶ (Natural Farming Conclave)ದಲ್ಲಿಂದು ವಿಡಿಯೊ ಸಂವಾದ ಮೂಲಕ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ(Narendra Modi) ಅವರು ಅಮೃತಕಾಲದಲ್ಲಿ ಭಾರತದ ಅಭಿವೃದ್ದಿಯ ವೇಗಕ್ಕೆ ಸಬ್ ಕಾ ಪ್ರಯಾಸ್ (ಎಲ್ಲರ ಪರಿಶ್ರಮ) ಅಡಿಪಾಯವಾಗಿರುತ್ತದೆ. ಗ್ರಾಮಗಳಿಗೆ (Villages) ಮತ್ತು ಬಡವರಿಗಾಗಿ ಮಾಡಬೇಕಾದ ಕಾರ್ಯಗಳ ಜವಾಬ್ದಾರಿಯನ್ನು ನಾಗರಿಕರಿಗೆ ಮತ್ತು ಗ್ರಾಮ ಪಂಚಾಯತ್​​ಗಳಿಗೆ ನೀಡಲಾಗಿದೆ ಎಂದು ಹೇಳಿದ್ದಾರೆ. ಭಾರತದ ಸ್ವಾತಂತ್ರ್ಯದ 75ನೇ ವರ್ಷಾಚರಣೆಯ ಈ ಸಂದರ್ಭದಲ್ಲಿ ದೇಶವು ವಿವಿಧ ಗುರಿಗಳ ಬಗ್ಗೆ ಕಾರ್ಯಪ್ರವೃತ್ತವಾಗಿದ್ದು, ಮುಂದಿನ ದಿನಗಳಲ್ಲಿ ದೊಡ್ಡ ಬದಲಾವಣೆಯಾಗಲಿದೆ ಎಂದು ಹೇಳಿದ್ದಾರೆ. ಮುಂದಿನ ದಿನಗಳಲ್ಲಿ ನಿಮ್ಮ ಪರಿಶ್ರಮ, ನಿಮ್ಮ ಅನುಭವದಿಂದ ದೇಶದಾದ್ಯಂತವಿರುವ ರೈತರು ಹಲವು ವಿಷಯಗಳನ್ನು ಕಲಿಯುತ್ತಾರೆ ಮತ್ತು ಅರ್ಥ ಮಾಡಿಕೊಳ್ಳುತ್ತಾರೆ. ಸೂರತ್​​ನಲ್ಲಿನ ನೈಸರ್ಗಿಕ ಕೃಷಿ ವಿಧಾನವು ಇಡೀ ಭಾರತಕ್ಕೆ ಮಾದರಿಯಾಗಲಿದೆ  ಎಂದು ಹೇಳಿದ್ದಾರೆ.

ಡಿಜಿಟಲ್ ಇಂಡಿಯಾ ಮಿಷನ್ ಬಗ್ಗೆ ಮಾತನಾಡಿದ ಮೋದಿ, ಡಿಜಿಟಲ್ ಇಂಡಿಯಾ ಮಿಷನ್​​ನ ಅಭೂತಪೂರ್ವ ಯಶಸ್ಸು ಗ್ರಾಮಗಳನ್ನು ಬದಲಿಸುವುದು ಅಷ್ಟು ಸುಲಭವಲ್ಲ ಎಂದು ಹೇಳುವವರಿಗೆ ತಕ್ಕ ಉತ್ತರವಾಗಿದೆ. ನಮ್ಮ ಗ್ರಾಮಗಳು ಕೇವಲ ಬದಲಾವಣೆ ಆಗುವುದು ಮಾತ್ರವಲ್ಲದೆ ಬದಲಾವಣೆಯನ್ನು ಮುನ್ನಡೆಸಬಲ್ಲವು ಎಂಬುದನ್ನೂ ತೋರಿಸಿಕೊಟ್ಟಿವೆ ಎಂದು ಮೋದಿ ಹೇಳಿದ್ದಾರೆ.

ಗುಜರಾತ್ ಮುಖ್ಯಮಂತ್ರಿ ಭುಪೇಂದ್ರ ಪಟೇಲ್ ಮತ್ತು ಗವರ್ನರ್ ಆಚಾರ್ಯ ದೇವ್ರತ್ ಕೂಡಾ ಈ ಸಮಾರಂಭದಲ್ಲಿ ಭಾಗಿಯಾಗಿದ್ದರು.  ಗುಜರಾತ್​​ನ ಸೂರತ್​​ನಲ್ಲಿ ನಡೆದ ಸಮಾವೇಶದಲ್ಲಿ ಸಾವಿರಾರು ರೈತರು ಮತ್ತು ಕೃಷಿ ಚಟುವಟಿಕೆಗಳಲ್ಲಿ ತೊಡಗಿರುವ ಇತರ ಉದ್ಯಮಿಗಳು, ವ್ಯಾಪಾರಿಗಳು, ಆಸಕ್ತರು ಪಾಲ್ಗೊಂಡಿದ್ದಾರೆ.

Follow Us
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು
ಪರಿಷತ್​​ ಚುನಾವಣೆ: ಜೆಡಿಎಸ್​​ ಶಾಸಕರ ಅಡ್ಡ ಮತದಾನದ ಹಿಂದಿದೆ ಹಲವು ಕಾರಣ
ಪರಿಷತ್​​ ಚುನಾವಣೆ: ಜೆಡಿಎಸ್​​ ಶಾಸಕರ ಅಡ್ಡ ಮತದಾನದ ಹಿಂದಿದೆ ಹಲವು ಕಾರಣ
ಮೈತ್ರಿ ಕುಸ್ತಿ? ರೇವಣ್ಣಗೆ ಮಾತಾಡೋ ಅಧಿಕಾರವಿಲ್ಲ: ಅಶೋಕ್ ತಿರುಗೇಟು
ಮೈತ್ರಿ ಕುಸ್ತಿ? ರೇವಣ್ಣಗೆ ಮಾತಾಡೋ ಅಧಿಕಾರವಿಲ್ಲ: ಅಶೋಕ್ ತಿರುಗೇಟು
ಪತ್ನಿ ಸಮೇತ ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಸಿಎಂ ಡಿ.ಕೆ. ಶಿವಕುಮಾರ್
ಪತ್ನಿ ಸಮೇತ ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಸಿಎಂ ಡಿ.ಕೆ. ಶಿವಕುಮಾರ್
ದಲಿತರ ಮೇಲೆ ದಬ್ಬಾಳಿಕೆ ಆರೋಪ: ಗ್ರಾಮದ ರಸ್ತೆ ಬಂದ್​​ ಮಾಡಿ ಪ್ರತಿಭಟನೆ
ದಲಿತರ ಮೇಲೆ ದಬ್ಬಾಳಿಕೆ ಆರೋಪ: ಗ್ರಾಮದ ರಸ್ತೆ ಬಂದ್​​ ಮಾಡಿ ಪ್ರತಿಭಟನೆ